ETV Bharat / entertainment

'ನಮಾಮಿ' ಹಾಡಿನಲ್ಲಿ ಶ್ರೀಯಾ ಶರಣ್ ಮಿಂಚು: ಸ್ಯಾಂಡಲ್​ವುಡ್​ನಲ್ಲಿ ಮತ್ತೊಂದು ಗೆಲುವಿನ ಮುನ್ನುಡಿ

ಬಹು ನಿರೀಕ್ಷಿತ ಕಬ್ಜ ಸಿನಿಮಾದ ನಮಾಮಿ ಹಾಡು ಬಿಡುಗಡೆ ಆಗಿದೆ.

author img

By

Published : Feb 17, 2023, 1:41 PM IST

Namaami song of Kabzaa movie
'ನಮಾಮಿ' ಹಾಡಿನಲ್ಲಿ ಶ್ರೀಯಾ ಶರಣ್

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಭರ್ಜರಿ ಯಶಸ್ಸು ತಂದುಕೊಡಲು ಸಜ್ಜಾಗಿರುವ ಬಹುನಿರೀಕ್ಷಿತ ಚಿತ್ರ 'ಕಬ್ಜ'. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಸುದೀಪ್ ಅಭಿನಯದ, ನಿರ್ದೇಶಕ ಆರ್ ಚಂದ್ರು ನಿರ್ದೇಶನದ 'ಕಬ್ಜ' ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಸಖತ್​ ಸದ್ದು ಮಾಡುತ್ತಿದೆ. ಸ್ಟಾರ್​ ನಟರು, ಅದ್ಧೂರಿ ಮೇಕಿಂಗ್, ಟೀಸರ್, ಹಾಡಿನಿಂದಲೇ ಹವಾ ಸೃಷ್ಟಿಸಿರೋ ಕಬ್ಜ ಸಿನಿಮಾದ ಎರಡನೇ ಹಾಡು ಅನಾವರಣಗೊಂಡಿದೆ.

ಅದ್ಧೂರಿ ಮೇಕಿಂಗ್ ವಿಚಾರಕ್ಕೆ ದಕ್ಷಿಣ ಭಾರತ ಚಿತ್ರರಂಗದಲ್ಲಿ ಟಾಕ್​​ ಆಗುತ್ತಿರುವ ಕಬ್ಜ ಸಿನಿಮಾ ಎಷ್ಟು ಶ್ರೀಮಂತವಾಗಿ ಮೂಡಿ ಬಂದಿರಬಹುದು ಎಂಬುದಕ್ಕೆ ಸಾಕ್ಷಿ ಟ್ರೆಡಿಷನಲ್ ಲುಕ್​ನಲ್ಲಿ ನಟಿ ಶ್ರೀಯಾ ಶರಣ್ ಮಿಂಚಿರುವ ನಮಾಮಿ ಹಾಡು ಸಾಕು. ಹೌದು, ಈ ಹಾಡಿಗಾಗಿ ನಿರ್ದೇಶಕ ಆರ್ ಚಂದ್ರು ಅದ್ಧೂರಿ ಸೆಟ್​ ಹಾಕಿ ಚಿತ್ರೀಕರಣ ಮಾಡಿದ್ದಾರೆ.

  • " class="align-text-top noRightClick twitterSection" data="">

ಚಂದ್ರ ಸಿನಿಮಾ ನಂತರ ಬಹಳ ವರ್ಷಗಳ ಬಳಿಕ ಕನ್ನಡ ಚಿತ್ರರಂಗದ ಕಡೆ ಮುಖ ಮಾಡಿರುವ ಸೌತ್ ನಟಿ ಶ್ರೀಯಾ ಶರಣ್ ಕಬ್ಜ ಸಿನಿಮಾದಲ್ಲಿ ಬಹುಮುಖ್ಯ ಪಾತ್ರದಲ್ಲಿ ನಟನೆ ಮಾಡಿದ್ದಾರೆ. ಶ್ರೀಯಾ ಶರಣ್ ಲುಕ್ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ನಮಾಮಿ ಹಾಡು ಕನ್ನಡ ಅಲ್ಲದೇ ಬಹು ಭಾಷೆಯಲ್ಲಿ ಬಿಡುಗಡೆ ಆಗಿದೆ. ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದಿರುವ ನಮಾಮಿ ಹಾಡು ಕೇಳುಗರ ಮನಸೂರೆಗೊಳ್ಳುತ್ತಿದೆ. ಗೀತ ರಚನೆಕಾರ ಕಿನ್ನಾಲ್ ರಾಜ್ ಬರೆದಿರುವ ಸಾಹಿತ್ಯಕ್ಕೆ ಖ್ಯಾತ ಗಾಯಕಿ ಐಶ್ವರ್ಯಾ ರಂಗರಾಜನ್ ಅಷ್ಟೇ ಸೊಗಸಾಗಿ ಹಾಡಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಅಮರೇಶ್ವರನ ಮಗ ಅರ್ಕೇಶ್ವರ 1960-1984ರ ಅವಧಿಯಲ್ಲಿ ಭಾರತದಲ್ಲಿ ಭೂಗತ ಜಗತ್ತಿನ ರಾಜನಾಗುತ್ತಾನೆ. ಭಾರತೀಯ ಇತಿಹಾಸದಲ್ಲಿ ಸದ್ದು ಮಾಡುತ್ತಾನೆ. ಈ ಕಥಾಹಂದರವುಳ್ಳ ಕಬ್ಜ ಚಿತ್ರ ಕನ್ನಡವಷ್ಟೇ ಅಲ್ಲ, ಇಡೀ ಭಾರತೀಯ ಚಿತ್ರರಂಗದಲ್ಲೇ ಸಾಕಷ್ಟು ಕುತೂಹಲ ಮೂಡಿಸಿ ಮತ್ತು ಸಿನಿಪ್ರಿಯರ ನಿರೀಕ್ಷೆ ಹೆಚ್ಚಿಸಿದೆ.

ಇದನ್ನೂ ಓದಿ: ಶೆಹಜಾದಾ ಸಿನಿಮಾ ಬಿಡುಗಡೆ: ಬಾಲಿವುಡ್​ ಸಕ್ಸಸ್ ಮುಂದುವರಿಯುತ್ತಾ?!

ಈ ಸಿನಿಮಾದಲ್ಲಿ ಉಪೇಂದ್ರ, ಸುದೀಪ್, ಶ್ರೀಯಾ ಶರಣ್ ಅಲ್ಲದೇ ಕಬೀರ್​ ಸಿಂಗ್​ ದುಹಾನ್​, ಪ್ರಮೋದ್​ ಶೆಟ್ಟಿ, ಮುರಳಿ ಶರ್ಮಾ, ನವಾಬ್ ಷಾ, ತೆಲುಗಿನ ಬೇಡಿಕೆಯ ನಟರಾದ ಪೊಸನಿ ಕೃಷ್ಣ ಮುರಳಿ ಹೀಗೆ ಬಿಗ್ ಸ್ಟಾರ್ ಕಾಸ್ಟ್ ಇದೆ. ಎಂ.ಟಿ.ಬಿ ನಾಗರಾಜ್ ಅರ್ಪಿಸುವ, ಶ್ರೀ ಸಿದ್ದೇಶ್ವರ ಎಂಟರ್​ಪ್ರೈಸಸ್ ಲಾಂಛನದಲ್ಲಿ ಆರ್.ಚಂದ್ರು ಅವರೇ ನಿರ್ಮಿಸುತ್ತಿರುವ ಕಬ್ಜ ಚಿತ್ರಕ್ಕೆ ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ, ರವಿವರ್ಮ, ವಿಕ್ರಂಮೋರ್, ವಿಜಯ್​ ಅವರ ಸಾಹಸ ನಿರ್ದೇಶನ ಇದೆ.

ಇದನ್ನೂ ಓದಿ: ಎಲ್ಲೆಡೆ 'ಕಬ್ಜ' ಟೈಟಲ್​​ ಸಾಂಗ್​​ನದ್ದೇ​ ಸೌಂಡ್​: ಮೇಕಿಂಗ್​ ವಿಡಿಯೋ ರಿವೀಲ್​​

ಕನ್ನಡ ಅಲ್ಲದೇ ತೆಲುಗು, ತಮಿಳು, ಮಲಯಾಳಂ, ಹಿಂದಿ, ಮರಾಠಿ, ಒಡಿಯಾ ಭಾಷೆಗಳಿಗೆ ಡಬ್​ ಆಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿರುವ ಕಬ್ಜ ಸಿನಿಮಾ ಸ್ಯಾಂಡಲ್​ವುಡ್​​ನ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಪ್ರಮುಖವಾದದ್ದು. ನಿರ್ದೇಶಕ ಆರ್ ಚಂದ್ರು ಕಬ್ಜ ಸಿನಿಮಾದ ಒಂದೊಂದೇ ಅಪ್​ಡೇಟ್ ನೀಡುತ್ತಾ ಪ್ರೇಕ್ಷಕರ ನಿರೀಕ್ಷೆಯನ್ನು ದುಪ್ಪಟ್ಟು ಮಾಡುತ್ತಿದ್ದಾರೆ. ಒಟ್ಟಿನಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಕ್ರೇಜ್ ದಿನೇ ದಿನೇ ಹೆಚ್ಚಾಗುತ್ತಿರೋ ಚಿತ್ರತಂಡದ ವಿಶ್ವಾಸವನ್ನು ಹೆಚ್ಚಿಸಿದೆ.

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಭರ್ಜರಿ ಯಶಸ್ಸು ತಂದುಕೊಡಲು ಸಜ್ಜಾಗಿರುವ ಬಹುನಿರೀಕ್ಷಿತ ಚಿತ್ರ 'ಕಬ್ಜ'. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಸುದೀಪ್ ಅಭಿನಯದ, ನಿರ್ದೇಶಕ ಆರ್ ಚಂದ್ರು ನಿರ್ದೇಶನದ 'ಕಬ್ಜ' ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಸಖತ್​ ಸದ್ದು ಮಾಡುತ್ತಿದೆ. ಸ್ಟಾರ್​ ನಟರು, ಅದ್ಧೂರಿ ಮೇಕಿಂಗ್, ಟೀಸರ್, ಹಾಡಿನಿಂದಲೇ ಹವಾ ಸೃಷ್ಟಿಸಿರೋ ಕಬ್ಜ ಸಿನಿಮಾದ ಎರಡನೇ ಹಾಡು ಅನಾವರಣಗೊಂಡಿದೆ.

ಅದ್ಧೂರಿ ಮೇಕಿಂಗ್ ವಿಚಾರಕ್ಕೆ ದಕ್ಷಿಣ ಭಾರತ ಚಿತ್ರರಂಗದಲ್ಲಿ ಟಾಕ್​​ ಆಗುತ್ತಿರುವ ಕಬ್ಜ ಸಿನಿಮಾ ಎಷ್ಟು ಶ್ರೀಮಂತವಾಗಿ ಮೂಡಿ ಬಂದಿರಬಹುದು ಎಂಬುದಕ್ಕೆ ಸಾಕ್ಷಿ ಟ್ರೆಡಿಷನಲ್ ಲುಕ್​ನಲ್ಲಿ ನಟಿ ಶ್ರೀಯಾ ಶರಣ್ ಮಿಂಚಿರುವ ನಮಾಮಿ ಹಾಡು ಸಾಕು. ಹೌದು, ಈ ಹಾಡಿಗಾಗಿ ನಿರ್ದೇಶಕ ಆರ್ ಚಂದ್ರು ಅದ್ಧೂರಿ ಸೆಟ್​ ಹಾಕಿ ಚಿತ್ರೀಕರಣ ಮಾಡಿದ್ದಾರೆ.

  • " class="align-text-top noRightClick twitterSection" data="">

ಚಂದ್ರ ಸಿನಿಮಾ ನಂತರ ಬಹಳ ವರ್ಷಗಳ ಬಳಿಕ ಕನ್ನಡ ಚಿತ್ರರಂಗದ ಕಡೆ ಮುಖ ಮಾಡಿರುವ ಸೌತ್ ನಟಿ ಶ್ರೀಯಾ ಶರಣ್ ಕಬ್ಜ ಸಿನಿಮಾದಲ್ಲಿ ಬಹುಮುಖ್ಯ ಪಾತ್ರದಲ್ಲಿ ನಟನೆ ಮಾಡಿದ್ದಾರೆ. ಶ್ರೀಯಾ ಶರಣ್ ಲುಕ್ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ನಮಾಮಿ ಹಾಡು ಕನ್ನಡ ಅಲ್ಲದೇ ಬಹು ಭಾಷೆಯಲ್ಲಿ ಬಿಡುಗಡೆ ಆಗಿದೆ. ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದಿರುವ ನಮಾಮಿ ಹಾಡು ಕೇಳುಗರ ಮನಸೂರೆಗೊಳ್ಳುತ್ತಿದೆ. ಗೀತ ರಚನೆಕಾರ ಕಿನ್ನಾಲ್ ರಾಜ್ ಬರೆದಿರುವ ಸಾಹಿತ್ಯಕ್ಕೆ ಖ್ಯಾತ ಗಾಯಕಿ ಐಶ್ವರ್ಯಾ ರಂಗರಾಜನ್ ಅಷ್ಟೇ ಸೊಗಸಾಗಿ ಹಾಡಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಅಮರೇಶ್ವರನ ಮಗ ಅರ್ಕೇಶ್ವರ 1960-1984ರ ಅವಧಿಯಲ್ಲಿ ಭಾರತದಲ್ಲಿ ಭೂಗತ ಜಗತ್ತಿನ ರಾಜನಾಗುತ್ತಾನೆ. ಭಾರತೀಯ ಇತಿಹಾಸದಲ್ಲಿ ಸದ್ದು ಮಾಡುತ್ತಾನೆ. ಈ ಕಥಾಹಂದರವುಳ್ಳ ಕಬ್ಜ ಚಿತ್ರ ಕನ್ನಡವಷ್ಟೇ ಅಲ್ಲ, ಇಡೀ ಭಾರತೀಯ ಚಿತ್ರರಂಗದಲ್ಲೇ ಸಾಕಷ್ಟು ಕುತೂಹಲ ಮೂಡಿಸಿ ಮತ್ತು ಸಿನಿಪ್ರಿಯರ ನಿರೀಕ್ಷೆ ಹೆಚ್ಚಿಸಿದೆ.

ಇದನ್ನೂ ಓದಿ: ಶೆಹಜಾದಾ ಸಿನಿಮಾ ಬಿಡುಗಡೆ: ಬಾಲಿವುಡ್​ ಸಕ್ಸಸ್ ಮುಂದುವರಿಯುತ್ತಾ?!

ಈ ಸಿನಿಮಾದಲ್ಲಿ ಉಪೇಂದ್ರ, ಸುದೀಪ್, ಶ್ರೀಯಾ ಶರಣ್ ಅಲ್ಲದೇ ಕಬೀರ್​ ಸಿಂಗ್​ ದುಹಾನ್​, ಪ್ರಮೋದ್​ ಶೆಟ್ಟಿ, ಮುರಳಿ ಶರ್ಮಾ, ನವಾಬ್ ಷಾ, ತೆಲುಗಿನ ಬೇಡಿಕೆಯ ನಟರಾದ ಪೊಸನಿ ಕೃಷ್ಣ ಮುರಳಿ ಹೀಗೆ ಬಿಗ್ ಸ್ಟಾರ್ ಕಾಸ್ಟ್ ಇದೆ. ಎಂ.ಟಿ.ಬಿ ನಾಗರಾಜ್ ಅರ್ಪಿಸುವ, ಶ್ರೀ ಸಿದ್ದೇಶ್ವರ ಎಂಟರ್​ಪ್ರೈಸಸ್ ಲಾಂಛನದಲ್ಲಿ ಆರ್.ಚಂದ್ರು ಅವರೇ ನಿರ್ಮಿಸುತ್ತಿರುವ ಕಬ್ಜ ಚಿತ್ರಕ್ಕೆ ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ, ರವಿವರ್ಮ, ವಿಕ್ರಂಮೋರ್, ವಿಜಯ್​ ಅವರ ಸಾಹಸ ನಿರ್ದೇಶನ ಇದೆ.

ಇದನ್ನೂ ಓದಿ: ಎಲ್ಲೆಡೆ 'ಕಬ್ಜ' ಟೈಟಲ್​​ ಸಾಂಗ್​​ನದ್ದೇ​ ಸೌಂಡ್​: ಮೇಕಿಂಗ್​ ವಿಡಿಯೋ ರಿವೀಲ್​​

ಕನ್ನಡ ಅಲ್ಲದೇ ತೆಲುಗು, ತಮಿಳು, ಮಲಯಾಳಂ, ಹಿಂದಿ, ಮರಾಠಿ, ಒಡಿಯಾ ಭಾಷೆಗಳಿಗೆ ಡಬ್​ ಆಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿರುವ ಕಬ್ಜ ಸಿನಿಮಾ ಸ್ಯಾಂಡಲ್​ವುಡ್​​ನ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಪ್ರಮುಖವಾದದ್ದು. ನಿರ್ದೇಶಕ ಆರ್ ಚಂದ್ರು ಕಬ್ಜ ಸಿನಿಮಾದ ಒಂದೊಂದೇ ಅಪ್​ಡೇಟ್ ನೀಡುತ್ತಾ ಪ್ರೇಕ್ಷಕರ ನಿರೀಕ್ಷೆಯನ್ನು ದುಪ್ಪಟ್ಟು ಮಾಡುತ್ತಿದ್ದಾರೆ. ಒಟ್ಟಿನಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಕ್ರೇಜ್ ದಿನೇ ದಿನೇ ಹೆಚ್ಚಾಗುತ್ತಿರೋ ಚಿತ್ರತಂಡದ ವಿಶ್ವಾಸವನ್ನು ಹೆಚ್ಚಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.