ETV Bharat / entertainment

ಪ್ರೇಕ್ಷಕರ ನಡುವೆ ಪ್ರಜ್ವಲ್​ ದೇವರಾಜ್​ ಅಭಿನಯದ ವೀರಂ ಚಿತ್ರದ ಟ್ರೈಲರ್​ ಬಿಡುಗಡೆ

ನಟ ಪ್ರಜ್ವಲ್​ ದೇವರಾಜ್​ ಅಭಿನಯದ ಆಕ್ಷ್ಯನ್​ ಥ್ರಿಲ್ಲರ್​ ಸಿನಿಮವಾದ ವೀರಂ ಚಿತ್ರದ ಟ್ರೈಲರ್​ ಸಾವಿರಾರು ಪ್ರೇಕ್ಷಕರ ನಡುವೆ ಅದ್ಧೂರಿಯಾಗಿ ತೆರೆಕಂಡಿದೆ.

author img

By

Published : Mar 24, 2023, 5:31 PM IST

prajwal Devaraj starrer Veeram Film was released in Prasann theater
prajwal Devaraj starrer Veeram Film was released in Prasann theater

ಬೆಂಗಳೂರು: ಪ್ರಿನ್ಸ್​ ಪ್ರಜ್ವಲ್​​ ದೇವರಾಜ್​ ಅಭಿನಯದ ವೀರಂ ಸಿನಿಮಾದ ಟ್ರೈಲರ್​ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಪ್ರಸನ್ನ ಥಿಯೇಟರ್​ನಲ್ಲಿ ಸಾವಿರಾರು ಪ್ರೇಕ್ಷಕರ ನಡುವೆ ಚಿತ್ರತಂಡ ಟ್ರೈಲರ್​ ಅನ್ನು ಡೈನಾಮಿಕ್​ ಸ್ಟಾರ್​ ದೇವರಾಜ್​ ರಿಲೀಸ್​ ಮಾಡಿದ್ದಾರೆ. ಈ ಚಿತ್ರ ಇದೇ ಏಪ್ರಿಲ್​ 7 ರಂದು ಥಿಯೇಟರ್​ನಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ನಿರ್ಮಾಪಕ ಕೆ.ಎಂ. ಶಶಿಧರ್ ಅವರು ತಮ್ಮ ಶಶಿಧರ್ ಸ್ಟುಡಿಯೋಸ್ ಪ್ರೊಡಕ್ಷನ್‌ನ ಮೂಲಕ ನಿರ್ಮಿಸಿದ್ದಾರೆ. ಖದರ್​ ಕುಮಾರ್​ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

  • " class="align-text-top noRightClick twitterSection" data="">

ವೀರಂ ವಿಶೇಷತೆ: ವೀರಂ ಚಿತ್ರದಲ್ಲಿ ಪ್ರಿನ್ಸ್​ ಪ್ರಜ್ವಲ್​ ದೇವರಾಜ್​ಗೆ ಅಕ್ಕನಾಗಿ ಇದೇ ಮೊದಲ ಬಾರಿಗೆ ನಟಿ ಶೃತಿ ಕಾಣಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಸಾಹಸ ಸಿಂಹನ ಅಭಿಮಾನಿಯಾಗಿ ಪ್ರಜ್ವಲ್ ಕಂಡಿರುವುದು ವಿಶೇಷ. ಈ ಚಿತ್ರಕ್ಕಾಗಿ ಪ್ರಜ್ವಲ್​ ವಿಷ್ಣುವರ್ಧನ್​ ಅವರ ಹಚ್ಚೆಯನ್ನು ಹಾಕಿಸಿಕೊಂಡಿರುವುದು ವಿಶೇಷ. ಇನ್ನು ನಟಿ ರಚಿತಾ ರಾಮ್​ ಚಿತ್ರದ ನಾಯಕಿಯಾಗಿದ್ದಾರೆ. ಇದು ಅಕ್ಕ- ತಮ್ಮನ ಭಾವನಾತ್ಮಕ ಸಿನಿಮಾ ಎನ್ನಲಾಗಿದೆ.

ಚಿತ್ರದ ವಿಶೇಷತೆ: ಯಂಗ್​ ಸ್ಟರ್ಸ್​ಗಳಿಂದಲೇ ತುಂಬಿರುವ ಈ ಚಿತ್ರ ಪಕ್ಕಾ ಮಾಸ್​ ಚಿತ್ರವಾಗಿದೆ. ಶಿಶ್ಯ ದೀಪಕ್ ಅವರು ನೆಗೆಟಿವ್​ ಪಾತ್ರದಲ್ಲಿ ಮಿಂಚಿದ್ದು, ವಿಶೇಷ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ಕೂಡ ಮಿಂಚಿದ್ದಾರೆ. ಚಿತ್ರಕ್ಕೆ ಅನೂಪ ಸೀಳನ್ ಅವರ ಸಂಗೀತ ಸಂಯೋಜನೆ, ಲವಿತ್ ಅವರ ಛಾಯಗ್ರಹಣ ಇದೆ. ಚಿತ್ರದಲ್ಲಿ ಬಲ ರಾಜವಾಡಿ, ಅಚ್ಯುತ್‌ಕುಮಾರ್, ಸ್ವಾತಿ, ಮೈಕೋ ನಾಗರಾಜ್, ಪ್ರಶಾಂತ್ ನಟನಾ, ಹನುಮಂತೇಗೌಡ ಅಲ್ಲದೆ ನಿರ್ದೇಶಕರಾದ ಜೋಸೈಮನ್, ವಿ.ನಾಗೇಂದ್ರಪ್ರಸಾದ್ ಹೀಗೆ ಬಹುದೊಡ್ಡ ತಾರಾಗಣವೇ ಇದೆ.

ಚಿತ್ರದ ಟ್ರೈಲರ್​ ಬಿಡುಗಡೆ ಮಾಡಿ ಮಾತನಾಡಿದ ದೇವರಾಜ್​ ಅವರು, ವೀರಾವೇಶದೊಂದಿಗೆ ಭಾವನಾತ್ಮಕತೆ ಇರುವ ಸಿನಿಮಾ ಇದಾಗಿದೆ. ಥಿಯೇಟರ್​ನಲ್ಲಿ ಟ್ರೈಲರ್ ನೋಡಿದ್ದು ನನಗೆ ಮೊದಲ ಅನುಭವ, ಜನರ ಕೂಗಾಟ, ಚಪ್ಪಾಳೆ ಕೇಳಿ ತುಂಬಾ ಖುಷಿಯಾಯ್ತು ಎಂದು ಹೇಳಿದರು. ನಟ ಶೃತಿ ಮಾತನಾಡಿ, ಈ ಸಿನಿಮಾ ನನಗೆ ತುಂಬಾ ವಿಶೇಷ, ಏಕೆಂದರೆ ನಾನು ವಿಷ್ಣು ಸರ್ ಅಭಿಮಾನಿಯಾಗಿಯೇ ಬಂದವಳು, ಇದರಲ್ಲೂ ಅದೇಥರದ ಪಾತ್ರವಿದೆ, ಫಸ್ಟ್ ಟೈಮ್ ಪ್ರಜ್ವಲ್ ಅವರ ಅಭಿನಯ ನೋಡಿ ಕಣ್ಣಲ್ಲಿ ನೀರುಬಂತು ಎಂದರು.

ಶ್ರೀನಗರಕಿಟ್ಟಿ ಮಾತನಾಡಿ ವಿಷ್ಣು ದಾದಾ ಅವರ ಸವಿನೆನಪಿನಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದೆ. ಒಂದು ಸಿನಿಮಾ ತೆರೆ ಮೇಲೆ ತಂದು ನಿಲ್ಲಿಸುವುದರ ಕಷ್ಟ ಆ ನಿರ್ಮಾಪಕನಿಗಷ್ಟೇ ಗೊತ್ತು ಎಂದು ನಿರ್ಮಾಪಕರ ಶ್ರಮ ಹೊಗಳಿದರು.

ನಿರ್ಮಾಪಕ ಶಶಿಧರ್ ಮಾತನಾಡಿ, ಎಮೋಷನಲ್ ಥ್ರಿಲ್ಲರ್ ಡ್ರಾಮಾ ಜೊತೆಗೆ ಕಂಪ್ಲೀಟ್ ಪ್ಯಾಕೇಜ್​​ ಚಿತ್ರ ಇದಾಗಿದ್ದು, ಸೆಕೆಂಡ್ ಹಾಫ್‌ನಲ್ಲಿ ಥ್ರಿಲ್ಲರ್ ಕಥೆಯಿದೆ. ಸಾಹಸಸಿಂಹ ವಿಷ್ಣುವರ್ಧನ್ ಅವರ ಪಾತ್ರವನ್ನಿಟ್ಟುಕೊಂಡು ಕಥೆ ಹೇಳಿದ್ದೇವೆ, ವಿಷ್ಣು ಅಭಿಮಾನಿಗಳಿಗೆ ಚಿತ್ರ ತುಂಬಾನೇ ಇಷ್ಟವಾಗುತ್ತದೆ, ಚಿತ್ರವನ್ನು ವಿಷ್ಣು ಅವರಿಗೇ ಅರ್ಪಣೆ ಮಾಡಿದ್ದೇವೆ ಎಂದು ತಿಳಿಸಿದರು.

ನಾನು ಹೋದ ಜನ್ಮದಲ್ಲಿ ತುಂಬಾ ಪುಣ್ಯ ಮಾಡಿದ್ದೆ ಅಂತ ಕಾಣಿಸುತ್ತೆ, ಇಂಥ ತಂದೆ ತಾಯಿ ಪಡೆದ ನಾನೇ ಧನ್ಯ. ಆರಂಭದಲ್ಲಿ ನಿರ್ಮಾಪಕ, ನಿರ್ದೇಶಕರು ನನ್ನ ಬಳಿ ಬಂದಾಗ ಅವರ ಕಣ್ಣಲ್ಲಿ ಒಂದು ಕನಸಿತ್ತು. ಕಿಟ್ಟಣ್ಣ ಕೂಡ ನನ್ನ ಜೊತೆ ಅಂದಕೂಡಲೇ ಕಥೆಕೇಳದೆ ಒಪ್ಪಿಕೊಂಡೆ. ದಾದಾ ಅವರ ಹಚ್ಚೆ ಕೈಮೇಲೆ ಹಾಕಿಕೊಂಡು ಆಕ್ಟ್ ಮಾಡಲು ತುಂಬಾ ಖುಷಿಯಾಗಿತ್ತು. ನನ್ನ ದೊಡ್ಡ ಪವರ್ ಅಂದ್ರೆ ನನ್ನ ಅಭಿಮಾನಿಗಳು, ಮತ್ತೊಂದು ಕಡೆ ನನ್ನ ಕುಟುಂಬ ಎಂದು ನಟ ಪ್ರಜ್ವಲ್​ ದೇವರಾಜ್​ ಭಾವುಕರಾದರು.

ಇದನ್ನೂ ಓದಿ: 'ದಸರಾ' ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ: ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಮತ್ತೊಬ್ಬ ಕನ್ನಡ ನಟ

ಬೆಂಗಳೂರು: ಪ್ರಿನ್ಸ್​ ಪ್ರಜ್ವಲ್​​ ದೇವರಾಜ್​ ಅಭಿನಯದ ವೀರಂ ಸಿನಿಮಾದ ಟ್ರೈಲರ್​ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಪ್ರಸನ್ನ ಥಿಯೇಟರ್​ನಲ್ಲಿ ಸಾವಿರಾರು ಪ್ರೇಕ್ಷಕರ ನಡುವೆ ಚಿತ್ರತಂಡ ಟ್ರೈಲರ್​ ಅನ್ನು ಡೈನಾಮಿಕ್​ ಸ್ಟಾರ್​ ದೇವರಾಜ್​ ರಿಲೀಸ್​ ಮಾಡಿದ್ದಾರೆ. ಈ ಚಿತ್ರ ಇದೇ ಏಪ್ರಿಲ್​ 7 ರಂದು ಥಿಯೇಟರ್​ನಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ನಿರ್ಮಾಪಕ ಕೆ.ಎಂ. ಶಶಿಧರ್ ಅವರು ತಮ್ಮ ಶಶಿಧರ್ ಸ್ಟುಡಿಯೋಸ್ ಪ್ರೊಡಕ್ಷನ್‌ನ ಮೂಲಕ ನಿರ್ಮಿಸಿದ್ದಾರೆ. ಖದರ್​ ಕುಮಾರ್​ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

  • " class="align-text-top noRightClick twitterSection" data="">

ವೀರಂ ವಿಶೇಷತೆ: ವೀರಂ ಚಿತ್ರದಲ್ಲಿ ಪ್ರಿನ್ಸ್​ ಪ್ರಜ್ವಲ್​ ದೇವರಾಜ್​ಗೆ ಅಕ್ಕನಾಗಿ ಇದೇ ಮೊದಲ ಬಾರಿಗೆ ನಟಿ ಶೃತಿ ಕಾಣಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಸಾಹಸ ಸಿಂಹನ ಅಭಿಮಾನಿಯಾಗಿ ಪ್ರಜ್ವಲ್ ಕಂಡಿರುವುದು ವಿಶೇಷ. ಈ ಚಿತ್ರಕ್ಕಾಗಿ ಪ್ರಜ್ವಲ್​ ವಿಷ್ಣುವರ್ಧನ್​ ಅವರ ಹಚ್ಚೆಯನ್ನು ಹಾಕಿಸಿಕೊಂಡಿರುವುದು ವಿಶೇಷ. ಇನ್ನು ನಟಿ ರಚಿತಾ ರಾಮ್​ ಚಿತ್ರದ ನಾಯಕಿಯಾಗಿದ್ದಾರೆ. ಇದು ಅಕ್ಕ- ತಮ್ಮನ ಭಾವನಾತ್ಮಕ ಸಿನಿಮಾ ಎನ್ನಲಾಗಿದೆ.

ಚಿತ್ರದ ವಿಶೇಷತೆ: ಯಂಗ್​ ಸ್ಟರ್ಸ್​ಗಳಿಂದಲೇ ತುಂಬಿರುವ ಈ ಚಿತ್ರ ಪಕ್ಕಾ ಮಾಸ್​ ಚಿತ್ರವಾಗಿದೆ. ಶಿಶ್ಯ ದೀಪಕ್ ಅವರು ನೆಗೆಟಿವ್​ ಪಾತ್ರದಲ್ಲಿ ಮಿಂಚಿದ್ದು, ವಿಶೇಷ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ಕೂಡ ಮಿಂಚಿದ್ದಾರೆ. ಚಿತ್ರಕ್ಕೆ ಅನೂಪ ಸೀಳನ್ ಅವರ ಸಂಗೀತ ಸಂಯೋಜನೆ, ಲವಿತ್ ಅವರ ಛಾಯಗ್ರಹಣ ಇದೆ. ಚಿತ್ರದಲ್ಲಿ ಬಲ ರಾಜವಾಡಿ, ಅಚ್ಯುತ್‌ಕುಮಾರ್, ಸ್ವಾತಿ, ಮೈಕೋ ನಾಗರಾಜ್, ಪ್ರಶಾಂತ್ ನಟನಾ, ಹನುಮಂತೇಗೌಡ ಅಲ್ಲದೆ ನಿರ್ದೇಶಕರಾದ ಜೋಸೈಮನ್, ವಿ.ನಾಗೇಂದ್ರಪ್ರಸಾದ್ ಹೀಗೆ ಬಹುದೊಡ್ಡ ತಾರಾಗಣವೇ ಇದೆ.

ಚಿತ್ರದ ಟ್ರೈಲರ್​ ಬಿಡುಗಡೆ ಮಾಡಿ ಮಾತನಾಡಿದ ದೇವರಾಜ್​ ಅವರು, ವೀರಾವೇಶದೊಂದಿಗೆ ಭಾವನಾತ್ಮಕತೆ ಇರುವ ಸಿನಿಮಾ ಇದಾಗಿದೆ. ಥಿಯೇಟರ್​ನಲ್ಲಿ ಟ್ರೈಲರ್ ನೋಡಿದ್ದು ನನಗೆ ಮೊದಲ ಅನುಭವ, ಜನರ ಕೂಗಾಟ, ಚಪ್ಪಾಳೆ ಕೇಳಿ ತುಂಬಾ ಖುಷಿಯಾಯ್ತು ಎಂದು ಹೇಳಿದರು. ನಟ ಶೃತಿ ಮಾತನಾಡಿ, ಈ ಸಿನಿಮಾ ನನಗೆ ತುಂಬಾ ವಿಶೇಷ, ಏಕೆಂದರೆ ನಾನು ವಿಷ್ಣು ಸರ್ ಅಭಿಮಾನಿಯಾಗಿಯೇ ಬಂದವಳು, ಇದರಲ್ಲೂ ಅದೇಥರದ ಪಾತ್ರವಿದೆ, ಫಸ್ಟ್ ಟೈಮ್ ಪ್ರಜ್ವಲ್ ಅವರ ಅಭಿನಯ ನೋಡಿ ಕಣ್ಣಲ್ಲಿ ನೀರುಬಂತು ಎಂದರು.

ಶ್ರೀನಗರಕಿಟ್ಟಿ ಮಾತನಾಡಿ ವಿಷ್ಣು ದಾದಾ ಅವರ ಸವಿನೆನಪಿನಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದೆ. ಒಂದು ಸಿನಿಮಾ ತೆರೆ ಮೇಲೆ ತಂದು ನಿಲ್ಲಿಸುವುದರ ಕಷ್ಟ ಆ ನಿರ್ಮಾಪಕನಿಗಷ್ಟೇ ಗೊತ್ತು ಎಂದು ನಿರ್ಮಾಪಕರ ಶ್ರಮ ಹೊಗಳಿದರು.

ನಿರ್ಮಾಪಕ ಶಶಿಧರ್ ಮಾತನಾಡಿ, ಎಮೋಷನಲ್ ಥ್ರಿಲ್ಲರ್ ಡ್ರಾಮಾ ಜೊತೆಗೆ ಕಂಪ್ಲೀಟ್ ಪ್ಯಾಕೇಜ್​​ ಚಿತ್ರ ಇದಾಗಿದ್ದು, ಸೆಕೆಂಡ್ ಹಾಫ್‌ನಲ್ಲಿ ಥ್ರಿಲ್ಲರ್ ಕಥೆಯಿದೆ. ಸಾಹಸಸಿಂಹ ವಿಷ್ಣುವರ್ಧನ್ ಅವರ ಪಾತ್ರವನ್ನಿಟ್ಟುಕೊಂಡು ಕಥೆ ಹೇಳಿದ್ದೇವೆ, ವಿಷ್ಣು ಅಭಿಮಾನಿಗಳಿಗೆ ಚಿತ್ರ ತುಂಬಾನೇ ಇಷ್ಟವಾಗುತ್ತದೆ, ಚಿತ್ರವನ್ನು ವಿಷ್ಣು ಅವರಿಗೇ ಅರ್ಪಣೆ ಮಾಡಿದ್ದೇವೆ ಎಂದು ತಿಳಿಸಿದರು.

ನಾನು ಹೋದ ಜನ್ಮದಲ್ಲಿ ತುಂಬಾ ಪುಣ್ಯ ಮಾಡಿದ್ದೆ ಅಂತ ಕಾಣಿಸುತ್ತೆ, ಇಂಥ ತಂದೆ ತಾಯಿ ಪಡೆದ ನಾನೇ ಧನ್ಯ. ಆರಂಭದಲ್ಲಿ ನಿರ್ಮಾಪಕ, ನಿರ್ದೇಶಕರು ನನ್ನ ಬಳಿ ಬಂದಾಗ ಅವರ ಕಣ್ಣಲ್ಲಿ ಒಂದು ಕನಸಿತ್ತು. ಕಿಟ್ಟಣ್ಣ ಕೂಡ ನನ್ನ ಜೊತೆ ಅಂದಕೂಡಲೇ ಕಥೆಕೇಳದೆ ಒಪ್ಪಿಕೊಂಡೆ. ದಾದಾ ಅವರ ಹಚ್ಚೆ ಕೈಮೇಲೆ ಹಾಕಿಕೊಂಡು ಆಕ್ಟ್ ಮಾಡಲು ತುಂಬಾ ಖುಷಿಯಾಗಿತ್ತು. ನನ್ನ ದೊಡ್ಡ ಪವರ್ ಅಂದ್ರೆ ನನ್ನ ಅಭಿಮಾನಿಗಳು, ಮತ್ತೊಂದು ಕಡೆ ನನ್ನ ಕುಟುಂಬ ಎಂದು ನಟ ಪ್ರಜ್ವಲ್​ ದೇವರಾಜ್​ ಭಾವುಕರಾದರು.

ಇದನ್ನೂ ಓದಿ: 'ದಸರಾ' ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ: ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಮತ್ತೊಬ್ಬ ಕನ್ನಡ ನಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.