ETV Bharat / entertainment

''ಸುದೀಪ್ ಹೇಳಿಕೆಯಿಂದ ಆಘಾತವಾಗಿದೆ'': ನಟ ಪ್ರಕಾಶ್ ರಾಜ್

author img

By

Published : Apr 6, 2023, 1:16 PM IST

ಸಿಎಂ ಬೊಮ್ಮಾಯಿ ಪರ ಪ್ರಚಾರ ಮಾಡುತ್ತೇನೆಂದ ಅಭಿನಯ ಚಕ್ರವರ್ತಿ ಸುದೀಪ್​ ಬಗ್ಗೆ ನಟ ಪ್ರಕಾಶ್ ರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

prakash raj speaks about sudeep
ಸುದೀಪ್​ ಬಗ್ಗೆ ಪ್ರಕಾಶ್ ರಾಜ್ ಹೇಳಿಕೆ

ಸ್ಯಾಂಡಲ್​​ವುಡ್​ನ ಅಭಿನಯ ಚಕ್ರವರ್ತಿ ಸುದೀಪ್​ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುತ್ತೇನೆಂದು ಸ್ಪಷ್ಟಪಡಿಸಿದ್ದಾರೆ. ಅವರ ಈ ಹೇಳಿಕೆ ಬೆನ್ನಲ್ಲೇ ನಟ ಪ್ರಕಾಶ್​ ರಾಜ್​​ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ಕಿಚ್ಚ ಸುದೀಪ್ ಹೇಳಿಕೆಯಿಂದ ನನಗೆ ಆಘಾತವಾಗಿದೆ ಮತ್ತು ನೋವಾಗಿದೆ" ಎಂದು ನಟ ಪ್ರಕಾಶ್ ರಾಜ್ ತಿಳಿಸಿದ್ದಾರೆ.

ಪ್ರಕಾಶ್​ ರಾಜ್​​ ಅಸಮಾಧಾನ.. ಅಭಿನಯ ಚಕ್ರವರ್ತಿ ಸುದೀಪ್ ಮತ್ತು ಪ್ರಕಾಶ್​ ರಾಜ್​ ಇಬ್ಬರೂ ಹಲವು ವರ್ಷಗಳಿಂದ ಸಿನಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಇಬ್ಬರ ನಡುವೆ ಉತ್ತಮ ಸಂಬಂಧವಿದೆ. ಸಿನಿಮಾ ಸಾಧನೆ ಕೂಡ ಅಪಾರ. ಆದ್ರೆ ರಾಜಕೀಯ ನಿಲುವುಗಳು ವಿಭಿನ್ನ. ಈವರೆಗೆ ಕಿಚ್ಚ ಸುದೀಪ್​​ ರಾಜಕೀಯದತ್ತ ಮುಖ ಮಾಡಿರಲಿಲ್ಲ. ಆದ್ರೆ ನಿನ್ನೆ ಬಿಜೆಪಿ ಸೇರಲ್ಲ, ಬಸವರಾಜ ಬೊಮ್ಮಾಯಿ ಪರ ನಿಲ್ಲುತ್ತೇನೆಂದು ಸ್ಪಷ್ಟಪಡಿಸಿದ್ದರು. ಇದು ಪರ ವಿರೋಧ ಚರ್ಚೆಗೆ ವೇದಿಕೆ ಸೃಷ್ಟಿಸಿದೆ. ನಟ ಪ್ರಕಾಶ್​ ರಾಜ್​ ಕೂಡ ನಿಮ್ಮ ಹೇಳಿಕೆ ನೋವುಂಟುಮಾಡಿದೆ ಎಂದು ತಿಳಿಸಿದ್ದಾರೆ.

ಸುದೀಪ್​ ಮತ್ತು ಸಿಎಂ ಬೊಮ್ಮಾಯಿ ಅವರ ಮಾಧ್ಯಮಗೋಷ್ಟಿಗೂ ಮೊದಲು ಕೂಡ ಪ್ರಕಾಶ್​ ರಾಜ್​​ ಟ್ವೀಟ್​ ಮಾಡಿದ್ದರು. ಸದ್ಯ ಪ್ರಕಾಶ್​​ ರಾಜ್​ ಹೇಳಿಕೆಗಳು ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿವೆ. ಪರ ವಿರೋಧ ಅಭಿಪ್ರಾಯಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗುತ್ತಿವೆ. ಯಾವ ಪಾರ್ಟಿಯನ್ನು ಅಥವಾ ಯಾರನ್ನು ಬೆಂಬಲಿಸಬೇಕೆಂಬುದು ಅವರವರಿಗೆ ಬಿಟ್ಟ ವಿಷಯ ಎಂದು ಹಲವರು ತಿಳಿಸಿದ್ದಾರೆ.

ಪ್ರಕಾಶ್ ರಾಜ್ ಟ್ವೀಟ್ ಹೀಗಿತ್ತು: ಕಳೆದ ಕೆಲ ದಿನಗಳಿಂದ ನಟ ಸುದೀಪ್​ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆಂಬ ಸುದ್ದಿ ಬಹಳ ಸದ್ದು ಮಾಡಿತ್ತು. ಇತ್ತೀಚೆಗೆ ಬಿಜೆಪಿ ಸೇರ್ಪಡೆ ಆಗಲಿದ್ದಾರೆಂದು ಹೇಳಲಾಗಿತ್ತು. ಬುಧವಾರ ಸಿಎಂ ಬೊಮ್ಮಾಯಿ ಈ ಬಗ್ಗೆ ಮಾಧ್ಯಮಗೋಷ್ಟಿ ಸಹ ಕರೆದಿದ್ದರು. ಈ ಎಲ್ಲಾ ಬೆಳವಣಿಗೆಗಳ ನಡುವೆ, ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದರು. ಹತಾಶ ಮನೋಭಾವದಿಂದ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ. ಇದು ಖಂಡಿತ ಸುಳ್ಳು ಸುದ್ದಿ. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಕೂಡ ಹಲವರ ಟೀಕೆಗೆ ಗುರಿಯಾಯಿತು.

ಸಿಎಂ ಪರ ಸುದೀಪ್​: ಬಳಿಕ ಬಿಜೆಪಿ ಸೇರಲ್ಲ, ಬೊಮ್ಮಾಯಿ ಪರ ಪ್ರಚಾರ ಮಾಡುತ್ತೇನೆಂದು ಸುದೀಪ್​ ತಿಳಿಸಿದರು. ಈ ಹೇಳಿಕೆಯಿಂದ ಅಸಮಧಾನಗೊಂಡ ನಟ ಪ್ರಕಾಶ್ ರಾಜ್ ''ಸುದೀಪ್ ಹೇಳಿಕೆಯಿಂದ ನನಗೆ ಆಘಾತವಾಗಿದೆ ಮತ್ತು ನೋವಾಗಿದೆ" ಎಂದು ತಿಳಿಸಿದ್ದಾರೆ. ಸದ್ಯ ಪ್ರಕಾಸ್​ ರಾಜ್​ ಹೇಳಿಕೆ ಮತ್ತು ಸುದೀಪ್​ ನಡೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಇದನ್ನೂ ಓದಿ: ರಾಕಿಂಗ್​ ಸ್ಟಾರ್ ಯಶ್​​ ಸಿನಿಮಾ ನಿರ್ಮಿಸಲಿದ್ದಾರೆ ತೆಲುಗಿನ ದಿಲ್​ ರಾಜು

ನಟ ಪ್ರಕಾಶ್​ ರಾಜ್​ ಬಿಜೆಪಿ ಸರ್ಕಾರವನ್ನು ಟೀಕಿಸುತ್ತಲೇ ಬಂದಿದ್ದಾರೆ. ಇದೀಗ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಕಿಚ್ಚ ಸುದೀಪ್​ ಅವರು ಸಿಎಂ ಬೊಮ್ಮಾಯಿ ಪರ ನಿಂತಿರುವುದು ಸಹಜವಾಗಿ ಅವರ ಬೇಸರಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಸುದೀಪ್​ ಪಕ್ಷ ಸೇರ್ಪಡೆ ಬಗ್ಗೆ ಬಿಜೆಪಿ ಹರಡುತ್ತಿರುವುದು ಸುಳ್ಳು ಸುದ್ದಿ.. ಪ್ರಕಾಶ್​ ರಾಜ್ ಟ್ವೀಟ್​​

ಸ್ಯಾಂಡಲ್​​ವುಡ್​ನ ಅಭಿನಯ ಚಕ್ರವರ್ತಿ ಸುದೀಪ್​ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುತ್ತೇನೆಂದು ಸ್ಪಷ್ಟಪಡಿಸಿದ್ದಾರೆ. ಅವರ ಈ ಹೇಳಿಕೆ ಬೆನ್ನಲ್ಲೇ ನಟ ಪ್ರಕಾಶ್​ ರಾಜ್​​ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ಕಿಚ್ಚ ಸುದೀಪ್ ಹೇಳಿಕೆಯಿಂದ ನನಗೆ ಆಘಾತವಾಗಿದೆ ಮತ್ತು ನೋವಾಗಿದೆ" ಎಂದು ನಟ ಪ್ರಕಾಶ್ ರಾಜ್ ತಿಳಿಸಿದ್ದಾರೆ.

ಪ್ರಕಾಶ್​ ರಾಜ್​​ ಅಸಮಾಧಾನ.. ಅಭಿನಯ ಚಕ್ರವರ್ತಿ ಸುದೀಪ್ ಮತ್ತು ಪ್ರಕಾಶ್​ ರಾಜ್​ ಇಬ್ಬರೂ ಹಲವು ವರ್ಷಗಳಿಂದ ಸಿನಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಇಬ್ಬರ ನಡುವೆ ಉತ್ತಮ ಸಂಬಂಧವಿದೆ. ಸಿನಿಮಾ ಸಾಧನೆ ಕೂಡ ಅಪಾರ. ಆದ್ರೆ ರಾಜಕೀಯ ನಿಲುವುಗಳು ವಿಭಿನ್ನ. ಈವರೆಗೆ ಕಿಚ್ಚ ಸುದೀಪ್​​ ರಾಜಕೀಯದತ್ತ ಮುಖ ಮಾಡಿರಲಿಲ್ಲ. ಆದ್ರೆ ನಿನ್ನೆ ಬಿಜೆಪಿ ಸೇರಲ್ಲ, ಬಸವರಾಜ ಬೊಮ್ಮಾಯಿ ಪರ ನಿಲ್ಲುತ್ತೇನೆಂದು ಸ್ಪಷ್ಟಪಡಿಸಿದ್ದರು. ಇದು ಪರ ವಿರೋಧ ಚರ್ಚೆಗೆ ವೇದಿಕೆ ಸೃಷ್ಟಿಸಿದೆ. ನಟ ಪ್ರಕಾಶ್​ ರಾಜ್​ ಕೂಡ ನಿಮ್ಮ ಹೇಳಿಕೆ ನೋವುಂಟುಮಾಡಿದೆ ಎಂದು ತಿಳಿಸಿದ್ದಾರೆ.

ಸುದೀಪ್​ ಮತ್ತು ಸಿಎಂ ಬೊಮ್ಮಾಯಿ ಅವರ ಮಾಧ್ಯಮಗೋಷ್ಟಿಗೂ ಮೊದಲು ಕೂಡ ಪ್ರಕಾಶ್​ ರಾಜ್​​ ಟ್ವೀಟ್​ ಮಾಡಿದ್ದರು. ಸದ್ಯ ಪ್ರಕಾಶ್​​ ರಾಜ್​ ಹೇಳಿಕೆಗಳು ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿವೆ. ಪರ ವಿರೋಧ ಅಭಿಪ್ರಾಯಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗುತ್ತಿವೆ. ಯಾವ ಪಾರ್ಟಿಯನ್ನು ಅಥವಾ ಯಾರನ್ನು ಬೆಂಬಲಿಸಬೇಕೆಂಬುದು ಅವರವರಿಗೆ ಬಿಟ್ಟ ವಿಷಯ ಎಂದು ಹಲವರು ತಿಳಿಸಿದ್ದಾರೆ.

ಪ್ರಕಾಶ್ ರಾಜ್ ಟ್ವೀಟ್ ಹೀಗಿತ್ತು: ಕಳೆದ ಕೆಲ ದಿನಗಳಿಂದ ನಟ ಸುದೀಪ್​ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆಂಬ ಸುದ್ದಿ ಬಹಳ ಸದ್ದು ಮಾಡಿತ್ತು. ಇತ್ತೀಚೆಗೆ ಬಿಜೆಪಿ ಸೇರ್ಪಡೆ ಆಗಲಿದ್ದಾರೆಂದು ಹೇಳಲಾಗಿತ್ತು. ಬುಧವಾರ ಸಿಎಂ ಬೊಮ್ಮಾಯಿ ಈ ಬಗ್ಗೆ ಮಾಧ್ಯಮಗೋಷ್ಟಿ ಸಹ ಕರೆದಿದ್ದರು. ಈ ಎಲ್ಲಾ ಬೆಳವಣಿಗೆಗಳ ನಡುವೆ, ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದರು. ಹತಾಶ ಮನೋಭಾವದಿಂದ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ. ಇದು ಖಂಡಿತ ಸುಳ್ಳು ಸುದ್ದಿ. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಕೂಡ ಹಲವರ ಟೀಕೆಗೆ ಗುರಿಯಾಯಿತು.

ಸಿಎಂ ಪರ ಸುದೀಪ್​: ಬಳಿಕ ಬಿಜೆಪಿ ಸೇರಲ್ಲ, ಬೊಮ್ಮಾಯಿ ಪರ ಪ್ರಚಾರ ಮಾಡುತ್ತೇನೆಂದು ಸುದೀಪ್​ ತಿಳಿಸಿದರು. ಈ ಹೇಳಿಕೆಯಿಂದ ಅಸಮಧಾನಗೊಂಡ ನಟ ಪ್ರಕಾಶ್ ರಾಜ್ ''ಸುದೀಪ್ ಹೇಳಿಕೆಯಿಂದ ನನಗೆ ಆಘಾತವಾಗಿದೆ ಮತ್ತು ನೋವಾಗಿದೆ" ಎಂದು ತಿಳಿಸಿದ್ದಾರೆ. ಸದ್ಯ ಪ್ರಕಾಸ್​ ರಾಜ್​ ಹೇಳಿಕೆ ಮತ್ತು ಸುದೀಪ್​ ನಡೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಇದನ್ನೂ ಓದಿ: ರಾಕಿಂಗ್​ ಸ್ಟಾರ್ ಯಶ್​​ ಸಿನಿಮಾ ನಿರ್ಮಿಸಲಿದ್ದಾರೆ ತೆಲುಗಿನ ದಿಲ್​ ರಾಜು

ನಟ ಪ್ರಕಾಶ್​ ರಾಜ್​ ಬಿಜೆಪಿ ಸರ್ಕಾರವನ್ನು ಟೀಕಿಸುತ್ತಲೇ ಬಂದಿದ್ದಾರೆ. ಇದೀಗ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಕಿಚ್ಚ ಸುದೀಪ್​ ಅವರು ಸಿಎಂ ಬೊಮ್ಮಾಯಿ ಪರ ನಿಂತಿರುವುದು ಸಹಜವಾಗಿ ಅವರ ಬೇಸರಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಸುದೀಪ್​ ಪಕ್ಷ ಸೇರ್ಪಡೆ ಬಗ್ಗೆ ಬಿಜೆಪಿ ಹರಡುತ್ತಿರುವುದು ಸುಳ್ಳು ಸುದ್ದಿ.. ಪ್ರಕಾಶ್​ ರಾಜ್ ಟ್ವೀಟ್​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.