ETV Bharat / entertainment

ಗಂಧದ ಗುಡಿ ವೀಕ್ಷಿಸಿ ಅಶ್ವಿನಿ ಅವರನ್ನು ಅಪ್ಪಿಕೊಂಡು ಭಾವುಕರಾದ ಮಕ್ಕಳು

author img

By

Published : Nov 4, 2022, 7:39 PM IST

270ಕ್ಕೂ ಹೆಚ್ಚು ಸರ್ಕಾರಿ ಶಾಲೆ ಮಕ್ಕಳು ಬೆಂಗಳೂರಿನ ಮಾಲ್ ಒಂದರ​ಲ್ಲಿ ಗಂಧದ ಗುಡಿ ಚಿತ್ರವನ್ನು ವೀಕ್ಷಿಸಿದರು.

school children watched Gandhadagudi movie in Bangalore
ಗಂಧದ ಗುಡಿ ವೀಕ್ಷಿಸಿದ ಶಾಲಾ ಮಕ್ಕಳು

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಕರುನಾಡಿನ ಶ್ರೀಮಂತಿಕೆಯನ್ನು ಗಂಧದ ಗುಡಿಯಲ್ಲಿ ಅತ್ಯದ್ಭುತವಾಗಿ ಕಟ್ಟಿಕೊಡಲಾಗಿದೆ. ವೈಲ್ಡ್ ಲೈಫ್​​​ ಫೋಟೋಗ್ರಾಫರ್ ಅಮೋಘ ವರ್ಷ ನಿರ್ದೇಶನದ ಗಂಧದ ಗುಡಿ ಚಿತ್ರವನ್ನು ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರ ತನಕ ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಕನ್ನಡ ಚಿತ್ರರಂಗದ ಬಹುತೇಕ ತಾರೆಯರು ಈ ಚಿತ್ರವನ್ನು ನೋಡಿ ಫಿದಾ ಆಗಿದ್ದಾರೆ.

ಗಂಧದ ಗುಡಿ ವೀಕ್ಷಿಸಿದ ಶಾಲಾ ಮಕ್ಕಳು

ಸುಮಾರು ಒಂದೂವರೆ ಗಂಟೆಯ ಈ ಚಿತ್ರದಲ್ಲಿ ಪುನೀತ್ ರಾಜ್​ಕುಮಾರ್ ಒಬ್ಬ ಸ್ಟಾರ್ ಆಗಿ ಕಾಣಿಸಿಕೊಂಡಿಲ್ಲ. ಒಬ್ಬ ಸಾಮಾನ್ಯ ವ್ಯಕ್ತಿಯಾಗಿ ನಮ್ಮ ನಾಡಿನ ಪ್ರಾಣಿ ಸಂಕುಲ, ಜಲಚರ, ಬೆಟ್ಟ ಗುಡ್ಡ, ನದಿ, ಸಮುದ್ರಗಳ ಸೌಂದರ್ಯದ ಬಗ್ಗೆ ವರ್ಣಿಸಿದ್ದಾರೆ. ಹೀಗಾಗಿ ಪುನೀತ್ ರಾಜ್​ಕುಮಾರ್ ಬದುಕಿದ್ದಾಗ ಈ ಚಿತ್ರವನ್ನು ಪ್ರತಿಯೊಬ್ಬ ಮಕ್ಕಳು ನೋಡಬೇಕು ಅಂದುಕೊಂಡಿದ್ದರು. ಅದರಂತೆ ಗಂಧದ ಗುಡಿ ಚಿತ್ರವನ್ನು ರಾಜ್ಯಾದ್ಯಂತ ಮಕ್ಕಳು ನೋಡುತ್ತಿದ್ದಾರೆ.

ಇತ್ತೀಚೆಗೆ 270ಕ್ಕೂ ಹೆಚ್ಚು ಸರ್ಕಾರಿ ಶಾಲೆ ಮಕ್ಕಳು ಬೆಂಗಳೂರಿನ ಮಾಲ್ ಒಂದರ​ಲ್ಲಿ ಈ ಗಂಧದ ಗುಡಿ ಚಿತ್ರವನ್ನು ವೀಕ್ಷಿಸಿದ್ದಾರೆ. ಯುವ ಬೆಂಗಳೂರು ಟ್ರಸ್ಟ್‌ನ ಸದಸ್ಯೆಯಾಗಿರುವ ನಟಿ ಹಾಗೂ ನಿರೂಪಕಿ ಅನುಶ್ರೀ ಈ ಶೋ ಅನ್ನು ಮಕ್ಕಳಿಗಾಗಿ ಹಮ್ಮಿಕೊಂಡಿದ್ದರು. ಮಕ್ಕಳೊಂದಿಗೆ ಅನುಶ್ರೀ, ಶ್ರೀದೇವಿ, ಯಶಸ್ವಿನಿ, ಮಾಸ್ಟರ್ ಆನಂದ್ ಮತ್ತು ಬೇಬಿ ವಂಶಿಕಾ ಆನಂದ್ ಈ ಚಿತ್ರವನ್ನು ವೀಕ್ಷಿಸಿ ಭಾವುಕರಾದರು.

ಈ ಸಿನಿಮಾ ಮುಗಿಯುವ ಸಮಯಕ್ಕೆ ಬಂದ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರಿಗೆ ಶಾಲಾ ಮಕ್ಕಳು ರೋಸ್​ ನೀಡಿ, ಅವರನ್ನು ಅಪ್ಪಿಕೊಂಡು ಭಾವುಕರಾದರು. ಮಕ್ಕಳ ಅಪ್ಪುಗೆಗೆ ಮನಸೋತ ಅಶ್ವಿನಿ ಪುನೀತ್ ರಾಜ್​ಕುಮಾರ್ ಕೂಡ ಭಾವುಕರಾದರು. ಈ ಸಂದರ್ಭದಲ್ಲಿ ಯುವ ರಾಜ್‌ಕುಮಾರ್ ಉಪಸ್ಥಿತರಿದ್ದರು.

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಕರುನಾಡಿನ ಶ್ರೀಮಂತಿಕೆಯನ್ನು ಗಂಧದ ಗುಡಿಯಲ್ಲಿ ಅತ್ಯದ್ಭುತವಾಗಿ ಕಟ್ಟಿಕೊಡಲಾಗಿದೆ. ವೈಲ್ಡ್ ಲೈಫ್​​​ ಫೋಟೋಗ್ರಾಫರ್ ಅಮೋಘ ವರ್ಷ ನಿರ್ದೇಶನದ ಗಂಧದ ಗುಡಿ ಚಿತ್ರವನ್ನು ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರ ತನಕ ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಕನ್ನಡ ಚಿತ್ರರಂಗದ ಬಹುತೇಕ ತಾರೆಯರು ಈ ಚಿತ್ರವನ್ನು ನೋಡಿ ಫಿದಾ ಆಗಿದ್ದಾರೆ.

ಗಂಧದ ಗುಡಿ ವೀಕ್ಷಿಸಿದ ಶಾಲಾ ಮಕ್ಕಳು

ಸುಮಾರು ಒಂದೂವರೆ ಗಂಟೆಯ ಈ ಚಿತ್ರದಲ್ಲಿ ಪುನೀತ್ ರಾಜ್​ಕುಮಾರ್ ಒಬ್ಬ ಸ್ಟಾರ್ ಆಗಿ ಕಾಣಿಸಿಕೊಂಡಿಲ್ಲ. ಒಬ್ಬ ಸಾಮಾನ್ಯ ವ್ಯಕ್ತಿಯಾಗಿ ನಮ್ಮ ನಾಡಿನ ಪ್ರಾಣಿ ಸಂಕುಲ, ಜಲಚರ, ಬೆಟ್ಟ ಗುಡ್ಡ, ನದಿ, ಸಮುದ್ರಗಳ ಸೌಂದರ್ಯದ ಬಗ್ಗೆ ವರ್ಣಿಸಿದ್ದಾರೆ. ಹೀಗಾಗಿ ಪುನೀತ್ ರಾಜ್​ಕುಮಾರ್ ಬದುಕಿದ್ದಾಗ ಈ ಚಿತ್ರವನ್ನು ಪ್ರತಿಯೊಬ್ಬ ಮಕ್ಕಳು ನೋಡಬೇಕು ಅಂದುಕೊಂಡಿದ್ದರು. ಅದರಂತೆ ಗಂಧದ ಗುಡಿ ಚಿತ್ರವನ್ನು ರಾಜ್ಯಾದ್ಯಂತ ಮಕ್ಕಳು ನೋಡುತ್ತಿದ್ದಾರೆ.

ಇತ್ತೀಚೆಗೆ 270ಕ್ಕೂ ಹೆಚ್ಚು ಸರ್ಕಾರಿ ಶಾಲೆ ಮಕ್ಕಳು ಬೆಂಗಳೂರಿನ ಮಾಲ್ ಒಂದರ​ಲ್ಲಿ ಈ ಗಂಧದ ಗುಡಿ ಚಿತ್ರವನ್ನು ವೀಕ್ಷಿಸಿದ್ದಾರೆ. ಯುವ ಬೆಂಗಳೂರು ಟ್ರಸ್ಟ್‌ನ ಸದಸ್ಯೆಯಾಗಿರುವ ನಟಿ ಹಾಗೂ ನಿರೂಪಕಿ ಅನುಶ್ರೀ ಈ ಶೋ ಅನ್ನು ಮಕ್ಕಳಿಗಾಗಿ ಹಮ್ಮಿಕೊಂಡಿದ್ದರು. ಮಕ್ಕಳೊಂದಿಗೆ ಅನುಶ್ರೀ, ಶ್ರೀದೇವಿ, ಯಶಸ್ವಿನಿ, ಮಾಸ್ಟರ್ ಆನಂದ್ ಮತ್ತು ಬೇಬಿ ವಂಶಿಕಾ ಆನಂದ್ ಈ ಚಿತ್ರವನ್ನು ವೀಕ್ಷಿಸಿ ಭಾವುಕರಾದರು.

ಈ ಸಿನಿಮಾ ಮುಗಿಯುವ ಸಮಯಕ್ಕೆ ಬಂದ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರಿಗೆ ಶಾಲಾ ಮಕ್ಕಳು ರೋಸ್​ ನೀಡಿ, ಅವರನ್ನು ಅಪ್ಪಿಕೊಂಡು ಭಾವುಕರಾದರು. ಮಕ್ಕಳ ಅಪ್ಪುಗೆಗೆ ಮನಸೋತ ಅಶ್ವಿನಿ ಪುನೀತ್ ರಾಜ್​ಕುಮಾರ್ ಕೂಡ ಭಾವುಕರಾದರು. ಈ ಸಂದರ್ಭದಲ್ಲಿ ಯುವ ರಾಜ್‌ಕುಮಾರ್ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.