ETV Bharat / entertainment

'ಜವಾನ್'​ ಮೂಲಕ ಶಾರುಖ್​ ಖಾನ್​ ವಿರುದ್ಧ ಸೇಡು ತೀರಿಸಿಕೊಂಡ ವಿಜಯ್​ ಸೇತುಪತಿ.. ಏನದು ಹಳೆ ಘಟನೆ?

Vijay Sethupathi says his childhood crush loved Khan: ಶಾಲಾ ದಿನಗಳನ್ನು ನೆನಪಿಸಿಕೊಂಡ ನಟ ವಿಜಯ್​ ಸೇತುಪತಿ 'ಜವಾನ್' ಸಿನಿಮಾ​ ಮೂಲಕ ಶಾರುಖ್​ ಖಾನ್​ ವಿರುದ್ಧ ಸೇಡು ತೀರಿಸಿಕೊಂಡಿರುವುದಾಗಿ ಹೇಳಿದರು.

author img

By ETV Bharat Karnataka Team

Published : Aug 31, 2023, 12:18 PM IST

jawan
'ಜವಾನ್'​

ಬಾಲಿವುಡ್​ ಸೂಪರ್​ಸ್ಟಾರ್​ ಶಾರುಖ್​ ಖಾನ್​ ಅವರ ಮುಂಬರುವ ಬಹುನಿರೀಕ್ಷಿತ ಚಿತ್ರ 'ಜವಾನ್​'. ಈ ಸಿನಿಮಾದ ಪ್ರೀ ರಿಲೀಸ್​ ಈವೆಂಟ್​ ನಿನ್ನೆ ತಮಿಳುನಾಡಿನಲ್ಲಿ ನಡೆಯಿತು. ಚೆನ್ನೈನ ಶ್ರೀ ಸಾಯಿರಾಮ್​ ಇಂಜಿನಿಯರಿಂಗ್​ ಕಾಲೇಜಿನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ನಿರ್ದೇಶಕ ಅಟ್ಲಿ, ಕಿಂಗ್​ ಖಾನ್​, ಪ್ರಿಯಾಮಣಿ, ವಿಜಯ್​ ಸೇತುಪತಿ, ಗಾಯಕ ಅನಿರುದ್ಧ್​ ರವಿಚಂದರ್​ ಸೇರಿದಂತೆ ಗಣ್ಯಾತಿಗಣ್ಯರು ಭಾಗಿಯಾಗಿದ್ದರು. ಈ ವೇಳೆ ಸೆಲೆಬ್ರಿಟಿಗಳು ತಮ್ಮ ವೈಯಕ್ತಿಕ ವಿಚಾರಗಳು ಹಾಗೂ ಅನುಭವಗಳನ್ನು ಹಂಚಿಕೊಂಡರು.

'ಜವಾನ್'​ನಲ್ಲಿ ಶಾರುಖ್​ ಖಾನ್​ ಮತ್ತು ವಿಜಯ್​ ಸೇತುಪತಿ ವಿರುದ್ಧ ರೋಲ್​ಗಳನ್ನು ಪ್ಲೇ ಮಾಡಲಿದ್ದಾರೆ. ಬಾದ್​ ಶಾ ನಾಯಕನಾಗಿ ನಟಿಸಿದರೆ, ವಿಜಯ್​ ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಪ್ರೀ ರಿಲೀಸ್​ ಈವೆಂಟ್​ನಲ್ಲಿ ಮಾತನಾಡಿದ ವಿಜಯ್​ ಸೇತುಪತಿ, ತಮ್ಮ ಶಾಲೆಯ ದಿನಗಳನ್ನು ನೆನಪಿಸಿಕೊಂಡರು. ಅಂದಿನ ಒಂದು ಘಟನೆಯನ್ನು ಉಲ್ಲೇಖಿಸಿದ ಅವರು 'ಜವಾನ್'​ ಮೂಲಕ ಶಾರುಖ್​ ಖಾನ್​ ವಿರುದ್ಧ ಸೇಡು ತೀರಿಸಿಕೊಂಡಿರುವುದಾಗಿ ಹೇಳಿದರು.

"ನಾನು ಶಾಲೆಯಲ್ಲಿ ಕಲಿಯುತ್ತಿರುವಾಗ ನನಗೆ ಒಂದು ಹುಡುಗಿಯ ಮೇಲೆ ಕ್ರಶ್​ ಇತ್ತು. ಆದರೆ ಅವಳು ಶಾರುಖ್​ ಖಾನ್​ ಅವರನ್ನು ಹುಚ್ಚಿಯಂತೆ ಪ್ರೀತಿಸುತ್ತಿದ್ದಳು. ಇದೀಗ 'ಜವಾನ್'​ ಸಿನಿಮಾ ಮೂಲಕ ಶಾರುಖ್​ ಖಾನ್​ ಪ್ರತಿಸ್ಪರ್ಧಿಯಾಗಿ ಅವರ ಮೇಲಿನ ಸೇಡನ್ನು ತೀರಿಸಿಕೊಂಡಿದ್ದೇನೆ ಎಂದು ನಾನು ಭಾವಿಸುತ್ತೇನೆ" ಎಂದು ಹಾಸ್ಯಾಸ್ಪದವಾಗಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕಿಂಗ್​ ಖಾನ್​, "ನೀವು ನನ್ನ ವಿರುದ್ಧ ಸೇಡು ತೀರಿಸಿಕೊಳ್ಳಬಹುದು. ಆದರೆ ನನ್ನ ಹುಡುಗಿಯರನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಸದ್ಯ ಈ ಸಂಭಾಷಣೆ ಸೋಷಿಯಲ್​ ಮೀಡಿಯಾದಲ್ಲಿ ಟ್ರೆಂಡಿಂಗ್​ ಆಗುತ್ತಿದೆ.

ವೈಷ್ಣೋದೇವಿ ಸನ್ನಿಧಿಗೆ ಎಸ್​ಆರ್​ಕೆ ಭೇಟಿ: ಜವಾನ್​ ಪ್ರೀ ರಿಲೀಸ್​ ಈವೆಂಟ್​ಗೂ ಮುನ್ನ ಪ್ರಸಿದ್ಧ ನಟ ಎಸ್​ಆರ್​ಕೆ ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳ ಮೇಲಿರುವ ಮಾತಾ ವೈಷ್ಣೋದೇವಿ ಸನ್ನಿಧಿಗೆ ಭೇಟಿ ಕೊಟ್ಟಿದ್ದರು. ಜವಾನ್​ ಬಿಡುಗಡೆಗೂ ಮುನ್ನ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ಕೊಟ್ಟ ನಟ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದರು. ಅಧಿಕಾರಿಯೊಬ್ಬರ ಪ್ರಕಾರ 58ರ ಹರೆಯದ ನಟ ಮಂಗಳವಾರ ತಡರಾತ್ರಿ ವೈಷ್ಣೋದೇವಿ ಸನ್ನಿಧಿಗೆ ಭೇಟಿ ಕೊಟ್ಟಿದ್ದರು. ಧಾರ್ಮಿಕ ಕ್ಷೇತ್ರಕ್ಕೆ ಶಾರುಖ್​​ ಖಾನ್​ ಭೇಟಿಯ ವಿಡಿಯೋಗಳು ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿತ್ತು.

ಸೆಪ್ಟೆಂಬರ್​ 7ರಂದು ರಿಲೀಸ್​: ತಮಿಳು ನಿರ್ದೇಶಕ ಅಟ್ಲಿ ಅವರ ನಿರ್ದೇಶನ 'ಜವಾನ್'​ ಈಗಾಗಲೇ ಭಾರತದಲ್ಲೆಡೆ ಹವಾ ಸೃಷ್ಟಿಸಿದೆ. ಶಾರುಖ್​ ಖಾನ್​ ವಿಭಿನ್ನವಾಗಿ ಈ ಚಿತ್ರದಲ್ಲಿ ಕಂಗೊಳಿಸಿದ್ದು, ದಕ್ಷಿಣ ಭಾರತದ ಪ್ರಮುಖ ನಟ ನಟಿಯರಾಗಿರುವ ನಯನತಾರ, ವಿಜಯ್​​ ಸೇತುಪತಿ ಇದೇ ಮೊದಲ ಬಾರಿಗೆ ಬಾಲಿವುಡ್​ನಲ್ಲಿ ಮಿಂಚು ಹರಿಸಿದ್ದಾರೆ. ಇದರ ಜೊತೆಗೆ ಪ್ರಿಯಾ ಮಣಿ, ಸಾನ್ಯಾ ಮಲ್ಹೋತ್ರಾ, ರಿದ್ದಿ ಡೊಗ್ರಾ ಕೂಡ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಗೌರವ ಪಾತ್ರದಲ್ಲಿ ದೀಪಿಕಾ ಪಡುಕೋಣೆ, ಸಂಜಯ್​ ದತ್​​ ಮತ್ತು ವಿಜಯ್​ ನಟನೆ ಚಿತ್ರದ ಮತ್ತೊಂದು ಹೈಲೈಟ್​ ಆಗಿದೆ. ಈ ಚಿತ್ರ ಸೆಪ್ಟೆಂಬರ್​ 7ರಂದು ಪ್ರಪಂಚದಾದ್ಯಂತ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ನಾನು ನಿಮ್ಮ ಪ್ರೀತಿಗೆ ವಿನಮ್ರನಾಗಿದ್ದೇನೆ.. ತಮಿಳುನಾಡಿನ ಆಹಾರ ಹೊಗಳಿದ ಶಾರುಖ್​ ಖಾನ್​.. ಕಿಂಗ್​ ಖಾನ್​​​ ಡ್ಯಾನ್ಸ್​ಗೆ ಫ್ಯಾನ್ಸ್​ ಫಿದಾ

ಬಾಲಿವುಡ್​ ಸೂಪರ್​ಸ್ಟಾರ್​ ಶಾರುಖ್​ ಖಾನ್​ ಅವರ ಮುಂಬರುವ ಬಹುನಿರೀಕ್ಷಿತ ಚಿತ್ರ 'ಜವಾನ್​'. ಈ ಸಿನಿಮಾದ ಪ್ರೀ ರಿಲೀಸ್​ ಈವೆಂಟ್​ ನಿನ್ನೆ ತಮಿಳುನಾಡಿನಲ್ಲಿ ನಡೆಯಿತು. ಚೆನ್ನೈನ ಶ್ರೀ ಸಾಯಿರಾಮ್​ ಇಂಜಿನಿಯರಿಂಗ್​ ಕಾಲೇಜಿನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ನಿರ್ದೇಶಕ ಅಟ್ಲಿ, ಕಿಂಗ್​ ಖಾನ್​, ಪ್ರಿಯಾಮಣಿ, ವಿಜಯ್​ ಸೇತುಪತಿ, ಗಾಯಕ ಅನಿರುದ್ಧ್​ ರವಿಚಂದರ್​ ಸೇರಿದಂತೆ ಗಣ್ಯಾತಿಗಣ್ಯರು ಭಾಗಿಯಾಗಿದ್ದರು. ಈ ವೇಳೆ ಸೆಲೆಬ್ರಿಟಿಗಳು ತಮ್ಮ ವೈಯಕ್ತಿಕ ವಿಚಾರಗಳು ಹಾಗೂ ಅನುಭವಗಳನ್ನು ಹಂಚಿಕೊಂಡರು.

'ಜವಾನ್'​ನಲ್ಲಿ ಶಾರುಖ್​ ಖಾನ್​ ಮತ್ತು ವಿಜಯ್​ ಸೇತುಪತಿ ವಿರುದ್ಧ ರೋಲ್​ಗಳನ್ನು ಪ್ಲೇ ಮಾಡಲಿದ್ದಾರೆ. ಬಾದ್​ ಶಾ ನಾಯಕನಾಗಿ ನಟಿಸಿದರೆ, ವಿಜಯ್​ ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಪ್ರೀ ರಿಲೀಸ್​ ಈವೆಂಟ್​ನಲ್ಲಿ ಮಾತನಾಡಿದ ವಿಜಯ್​ ಸೇತುಪತಿ, ತಮ್ಮ ಶಾಲೆಯ ದಿನಗಳನ್ನು ನೆನಪಿಸಿಕೊಂಡರು. ಅಂದಿನ ಒಂದು ಘಟನೆಯನ್ನು ಉಲ್ಲೇಖಿಸಿದ ಅವರು 'ಜವಾನ್'​ ಮೂಲಕ ಶಾರುಖ್​ ಖಾನ್​ ವಿರುದ್ಧ ಸೇಡು ತೀರಿಸಿಕೊಂಡಿರುವುದಾಗಿ ಹೇಳಿದರು.

"ನಾನು ಶಾಲೆಯಲ್ಲಿ ಕಲಿಯುತ್ತಿರುವಾಗ ನನಗೆ ಒಂದು ಹುಡುಗಿಯ ಮೇಲೆ ಕ್ರಶ್​ ಇತ್ತು. ಆದರೆ ಅವಳು ಶಾರುಖ್​ ಖಾನ್​ ಅವರನ್ನು ಹುಚ್ಚಿಯಂತೆ ಪ್ರೀತಿಸುತ್ತಿದ್ದಳು. ಇದೀಗ 'ಜವಾನ್'​ ಸಿನಿಮಾ ಮೂಲಕ ಶಾರುಖ್​ ಖಾನ್​ ಪ್ರತಿಸ್ಪರ್ಧಿಯಾಗಿ ಅವರ ಮೇಲಿನ ಸೇಡನ್ನು ತೀರಿಸಿಕೊಂಡಿದ್ದೇನೆ ಎಂದು ನಾನು ಭಾವಿಸುತ್ತೇನೆ" ಎಂದು ಹಾಸ್ಯಾಸ್ಪದವಾಗಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕಿಂಗ್​ ಖಾನ್​, "ನೀವು ನನ್ನ ವಿರುದ್ಧ ಸೇಡು ತೀರಿಸಿಕೊಳ್ಳಬಹುದು. ಆದರೆ ನನ್ನ ಹುಡುಗಿಯರನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಸದ್ಯ ಈ ಸಂಭಾಷಣೆ ಸೋಷಿಯಲ್​ ಮೀಡಿಯಾದಲ್ಲಿ ಟ್ರೆಂಡಿಂಗ್​ ಆಗುತ್ತಿದೆ.

ವೈಷ್ಣೋದೇವಿ ಸನ್ನಿಧಿಗೆ ಎಸ್​ಆರ್​ಕೆ ಭೇಟಿ: ಜವಾನ್​ ಪ್ರೀ ರಿಲೀಸ್​ ಈವೆಂಟ್​ಗೂ ಮುನ್ನ ಪ್ರಸಿದ್ಧ ನಟ ಎಸ್​ಆರ್​ಕೆ ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳ ಮೇಲಿರುವ ಮಾತಾ ವೈಷ್ಣೋದೇವಿ ಸನ್ನಿಧಿಗೆ ಭೇಟಿ ಕೊಟ್ಟಿದ್ದರು. ಜವಾನ್​ ಬಿಡುಗಡೆಗೂ ಮುನ್ನ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ಕೊಟ್ಟ ನಟ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದರು. ಅಧಿಕಾರಿಯೊಬ್ಬರ ಪ್ರಕಾರ 58ರ ಹರೆಯದ ನಟ ಮಂಗಳವಾರ ತಡರಾತ್ರಿ ವೈಷ್ಣೋದೇವಿ ಸನ್ನಿಧಿಗೆ ಭೇಟಿ ಕೊಟ್ಟಿದ್ದರು. ಧಾರ್ಮಿಕ ಕ್ಷೇತ್ರಕ್ಕೆ ಶಾರುಖ್​​ ಖಾನ್​ ಭೇಟಿಯ ವಿಡಿಯೋಗಳು ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿತ್ತು.

ಸೆಪ್ಟೆಂಬರ್​ 7ರಂದು ರಿಲೀಸ್​: ತಮಿಳು ನಿರ್ದೇಶಕ ಅಟ್ಲಿ ಅವರ ನಿರ್ದೇಶನ 'ಜವಾನ್'​ ಈಗಾಗಲೇ ಭಾರತದಲ್ಲೆಡೆ ಹವಾ ಸೃಷ್ಟಿಸಿದೆ. ಶಾರುಖ್​ ಖಾನ್​ ವಿಭಿನ್ನವಾಗಿ ಈ ಚಿತ್ರದಲ್ಲಿ ಕಂಗೊಳಿಸಿದ್ದು, ದಕ್ಷಿಣ ಭಾರತದ ಪ್ರಮುಖ ನಟ ನಟಿಯರಾಗಿರುವ ನಯನತಾರ, ವಿಜಯ್​​ ಸೇತುಪತಿ ಇದೇ ಮೊದಲ ಬಾರಿಗೆ ಬಾಲಿವುಡ್​ನಲ್ಲಿ ಮಿಂಚು ಹರಿಸಿದ್ದಾರೆ. ಇದರ ಜೊತೆಗೆ ಪ್ರಿಯಾ ಮಣಿ, ಸಾನ್ಯಾ ಮಲ್ಹೋತ್ರಾ, ರಿದ್ದಿ ಡೊಗ್ರಾ ಕೂಡ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಗೌರವ ಪಾತ್ರದಲ್ಲಿ ದೀಪಿಕಾ ಪಡುಕೋಣೆ, ಸಂಜಯ್​ ದತ್​​ ಮತ್ತು ವಿಜಯ್​ ನಟನೆ ಚಿತ್ರದ ಮತ್ತೊಂದು ಹೈಲೈಟ್​ ಆಗಿದೆ. ಈ ಚಿತ್ರ ಸೆಪ್ಟೆಂಬರ್​ 7ರಂದು ಪ್ರಪಂಚದಾದ್ಯಂತ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ನಾನು ನಿಮ್ಮ ಪ್ರೀತಿಗೆ ವಿನಮ್ರನಾಗಿದ್ದೇನೆ.. ತಮಿಳುನಾಡಿನ ಆಹಾರ ಹೊಗಳಿದ ಶಾರುಖ್​ ಖಾನ್​.. ಕಿಂಗ್​ ಖಾನ್​​​ ಡ್ಯಾನ್ಸ್​ಗೆ ಫ್ಯಾನ್ಸ್​ ಫಿದಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.