ETV Bharat / entertainment

ಬ್ರಿಟಿಷರನ್ನು ಗುಂಡಿಟ್ಟು ಕೊಂದ 'ಶಾನುಭೋಗರ ಮಗಳು' ರಾಗಿಣಿ ಪ್ರಜ್ವಲ್

author img

By

Published : Jun 29, 2023, 4:43 PM IST

ನಟ ಪ್ರಜ್ವಲ್ ದೇವರಾಜ್ ಅವರ ಪತ್ನಿ ರಾಗಿಣಿ ಚಂದ್ರನ್ ನಟನೆಯ 'ಶಾನುಭೋಗರ ಮಗಳು' ಚಿತ್ರದ ಶೂಟಿಂಗ್​ ಭರದಿಂದ ಸಾಗುತ್ತಿದೆ.

Shanubhogara magalu movie shooting
ಶಾನುಭೋಗರ ಮಗಳು

ವಿಭಿನ್ನ ಸಿನಿಮಾಗಳನ್ನು ಮಾಡುವ ಮೂಲಕ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ಪ್ರಜ್ವಲ್ ದೇವರಾಜ್. ಇವರ ಪತ್ನಿ ರಾಗಿಣಿ ಚಂದ್ರನ್ ಯೋಗ ಟ್ರೈನರ್​ ಹಾಗು ಅದ್ಭುತ ಡ್ಯಾನ್ಸರ್ ಕೂಡಾ ಹೌದು. ಲಾ ಸಿನಿಮಾ ಮೂಲಕ ಪೂರ್ಣಪ್ರಮಾಣದ ನಾಯಕಿಯಾಗಿ ಗಮನ ಸೆಳೆದ ರಾಗಿಣಿ ಚಂದ್ರನ್​ ಈ ಬಾರಿ ಒಂದು ಚಾಲೆಂಜಿಂಗ್ ಪಾತ್ರದ ಮೂಲಕ ಸಿನಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ.

ಈ ಹಿಂದೆ ಪ್ರಜ್ವಲ್ ದೇವರಾಜ್‌ ನಟನೆಯ ಇನ್ಸ್‌ಪೆಕ್ಟರ್ ವಿಕ್ರಂ ಸಿನಿಮಾದಲ್ಲಿ ಅತಿಥಿ ಪಾತ್ರ ನಿರ್ವಹಿಸಿದ್ದರು. ಇದೀಗ 'ಶಾನುಭೋಗರ ಮಗಳು' ಎಂಬ ಹೊಸ ಚಿತ್ರ ಮಾಡುತ್ತಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಹಲವು ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಕೋಡ್ಲು ರಾಮಕೃಷ್ಣ ಅವರು ಶಾನುಭೋಗರ ಮಗಳು ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಹಿಂದೆ ಮಿ. ಡೂಪ್ಲಿಕೇಟ್‌ ಸಿನಿಮಾವನ್ನು ಕೋಡ್ಲು ರಾಮಕೃಷ್ಣ ನಿರ್ದೇಶನ ಮಾಡಿದ್ದರು. ಅದರಲ್ಲಿ ಪ್ರಜ್ವಲ್ ದೇವರಾಜ್ ನಟಿಸಿದ್ದರು. ಇದೀಗ ರಾಗಿಣಿ ನಾಯಕಿಯಾಗಿರುವ ಸಿನಿಮಾಗೆ ಕೋಡ್ಲು ರಾಮಕೃಷ್ಣ ನಿರ್ದೇಶನ ಮಾಡುತ್ತಿರುವುದು ವಿಶೇಷ.

Shanubhogara magalu movie shooting
ಶಾನುಭೋಗರ ಮಗಳು ಚಿತ್ರೀಕರಣದ ಚಿತ್ರಗಳು

ಭಾಗ್ಯ ಕೃಷ್ಣಮೂರ್ತಿ ಬರೆದಿರುವ ಕಾದಂಬರಿ ಆಧರಿಸಿ ಶಾನುಭೋಗರ ಮಗಳು ಸಿನಿಮಾ ಮಾಡಲಾಗುತ್ತಿದೆ. ಸ್ವಾತಂತ್ರ್ಯ ಪೂರ್ವದ ಕಥೆಯನ್ನು ಸಿನಿಮಾ ಒಳಗೊಂಡಿದೆ. ಕನ್ನಡದಲ್ಲಿ ಅತಿ ಹೆಚ್ಚು ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕರಲ್ಲಿ ಒಬ್ಬರಾದ ಕೋಡ್ಲು ರಾಮಕೃಷ್ಣ ಮತ್ತೊಮ್ಮೆ ಕಾದಂಬರಿ ಆಧಾರಿತ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ. ಶಾನುಭೋಗರ ಮಗಳ ಪಾತ್ರದಲ್ಲಿ ರಾಗಿಣಿ ಚಂದ್ರನ್ ಅಭಿಯಿಸುತ್ತಿದ್ದು, ಬ್ರಿಟಿಷರನ್ನು ಗುಂಡಿಟ್ಟು ಸಾಯಿಸುವ ದೃಶ್ಯವನ್ನು ಇತ್ತೀಚಿಗೆ ಶ್ರೀರಂಗಪಟ್ಟಣ, ಮೇಲುಕೋಟೆ, ಕುಂತಿ ಬೆಟ್ಟದ ಸುತ್ತಮುತ್ತ ಚಿತ್ರೀಕರಿಸಲಾಯಿತು.

ಇದನ್ನೂ ಓದಿ: Kaun Banega Crorepati: ಮತ್ತೆ ಬಂತು ಕೌನ್ ಬನೇಗಾ ಕರೋಡ್ಪತಿ! ಸೀಸನ್​ 15 ಶೀಘ್ರದಲ್ಲೇ ಆರಂಭ

ಟಿಪ್ಪು ಸುಲ್ತಾನ್ ಪಾತ್ರದಲ್ಲಿ ಕಿಶೋರ್ ಅಭಿನಯಿಸುತ್ತಿದ್ದು, ರಮೇಶ್‍ ಭಟ್, ಸುಧಾ ಬೆಳವಾಡಿ, ಪದ್ಮಾ ವಾಸಂತಿ, ವಾಣಿಶ್ರೀ, ಭಾಗ್ಯಶ್ರೀ, ಕುಮಾರಿ ಅನನ್ಯ, ಟಿ.ಎನ್. ಶ್ರೀನಿವಾಸ ಮೂರ್ತಿ, ನಿರಂಜನ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಬಿ.ಎ. ಮಧು ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಜೈ ಆನಂದ್ ಛಾಯಾಗ್ರಹಣವಿದೆ. ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಕಲಾ ನಿರ್ದೇಶನದ ಜವಾಬ್ದಾರಿ ವಸಂತ್ ರಾವ್ ಕುಲಕರ್ಣಿ ಅವರದ್ದು. ಭುವನ್ ಫಿಲ್ಮ್ಸ್‌ ಲಾಂಛನದಲ್ಲಿ ಶಾನುಭೋಗರ ಮಗಳು ಸಿನಿಮಾ ನಿರ್ಮಾಣ ಆಗುತ್ತಿದೆ. ಶೀಘ್ರದಲ್ಲೇ ಟೀಸರ್ ಬಿಡುಗಡೆಗೆ ಚಿತ್ರತಂಡ ಪ್ಲ್ಯಾನ್​ ಹಾಕಿಕೊಂಡಿದೆ.

ಇದನ್ನೂ ಓದಿ: Animal: ರಗಡ್​ ಲುಕ್​ನಲ್ಲಿ ರಣ್​ಬೀರ್​ ಕಪೂರ್​ - ಅನಿಮಲ್​​ ಸೆಟ್​ನಿಂದ ನಟನ ಫೋಟೋ ವೈರಲ್​​

ಪ್ರಜ್ವಲ್ ದೇವರಾಜ್ ನಟಿಸುತ್ತಿರುವ ಸಿನಿಮಾಗಳ ಪೈಕಿ ಗಣ ಕೂಡ ಒಂದು. ಟೀಸರ್​ ಜುಲೈ 3ಕ್ಕೆ ಅನಾವರಣಗೊಳ್ಳಲಿದೆ. ಇದಲ್ಲದೇ ಜಾತರೆ ಎಂಬ ಸಿನಿಮಾದಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರೆಡಿಯಾಗುವ ಈ ಸಿನಿಮಾ ಶೀಘ್ರವೇ ಸೆಟ್ಟೇರಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಸೇರಿ 5 ಭಾಷೆಗಳಲ್ಲಿ ಜಾತರೆ ಸಿನಿಮಾ ಮೂಡಿ ಬರಲಿದೆ.

ವಿಭಿನ್ನ ಸಿನಿಮಾಗಳನ್ನು ಮಾಡುವ ಮೂಲಕ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ಪ್ರಜ್ವಲ್ ದೇವರಾಜ್. ಇವರ ಪತ್ನಿ ರಾಗಿಣಿ ಚಂದ್ರನ್ ಯೋಗ ಟ್ರೈನರ್​ ಹಾಗು ಅದ್ಭುತ ಡ್ಯಾನ್ಸರ್ ಕೂಡಾ ಹೌದು. ಲಾ ಸಿನಿಮಾ ಮೂಲಕ ಪೂರ್ಣಪ್ರಮಾಣದ ನಾಯಕಿಯಾಗಿ ಗಮನ ಸೆಳೆದ ರಾಗಿಣಿ ಚಂದ್ರನ್​ ಈ ಬಾರಿ ಒಂದು ಚಾಲೆಂಜಿಂಗ್ ಪಾತ್ರದ ಮೂಲಕ ಸಿನಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ.

ಈ ಹಿಂದೆ ಪ್ರಜ್ವಲ್ ದೇವರಾಜ್‌ ನಟನೆಯ ಇನ್ಸ್‌ಪೆಕ್ಟರ್ ವಿಕ್ರಂ ಸಿನಿಮಾದಲ್ಲಿ ಅತಿಥಿ ಪಾತ್ರ ನಿರ್ವಹಿಸಿದ್ದರು. ಇದೀಗ 'ಶಾನುಭೋಗರ ಮಗಳು' ಎಂಬ ಹೊಸ ಚಿತ್ರ ಮಾಡುತ್ತಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಹಲವು ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಕೋಡ್ಲು ರಾಮಕೃಷ್ಣ ಅವರು ಶಾನುಭೋಗರ ಮಗಳು ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಹಿಂದೆ ಮಿ. ಡೂಪ್ಲಿಕೇಟ್‌ ಸಿನಿಮಾವನ್ನು ಕೋಡ್ಲು ರಾಮಕೃಷ್ಣ ನಿರ್ದೇಶನ ಮಾಡಿದ್ದರು. ಅದರಲ್ಲಿ ಪ್ರಜ್ವಲ್ ದೇವರಾಜ್ ನಟಿಸಿದ್ದರು. ಇದೀಗ ರಾಗಿಣಿ ನಾಯಕಿಯಾಗಿರುವ ಸಿನಿಮಾಗೆ ಕೋಡ್ಲು ರಾಮಕೃಷ್ಣ ನಿರ್ದೇಶನ ಮಾಡುತ್ತಿರುವುದು ವಿಶೇಷ.

Shanubhogara magalu movie shooting
ಶಾನುಭೋಗರ ಮಗಳು ಚಿತ್ರೀಕರಣದ ಚಿತ್ರಗಳು

ಭಾಗ್ಯ ಕೃಷ್ಣಮೂರ್ತಿ ಬರೆದಿರುವ ಕಾದಂಬರಿ ಆಧರಿಸಿ ಶಾನುಭೋಗರ ಮಗಳು ಸಿನಿಮಾ ಮಾಡಲಾಗುತ್ತಿದೆ. ಸ್ವಾತಂತ್ರ್ಯ ಪೂರ್ವದ ಕಥೆಯನ್ನು ಸಿನಿಮಾ ಒಳಗೊಂಡಿದೆ. ಕನ್ನಡದಲ್ಲಿ ಅತಿ ಹೆಚ್ಚು ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕರಲ್ಲಿ ಒಬ್ಬರಾದ ಕೋಡ್ಲು ರಾಮಕೃಷ್ಣ ಮತ್ತೊಮ್ಮೆ ಕಾದಂಬರಿ ಆಧಾರಿತ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ. ಶಾನುಭೋಗರ ಮಗಳ ಪಾತ್ರದಲ್ಲಿ ರಾಗಿಣಿ ಚಂದ್ರನ್ ಅಭಿಯಿಸುತ್ತಿದ್ದು, ಬ್ರಿಟಿಷರನ್ನು ಗುಂಡಿಟ್ಟು ಸಾಯಿಸುವ ದೃಶ್ಯವನ್ನು ಇತ್ತೀಚಿಗೆ ಶ್ರೀರಂಗಪಟ್ಟಣ, ಮೇಲುಕೋಟೆ, ಕುಂತಿ ಬೆಟ್ಟದ ಸುತ್ತಮುತ್ತ ಚಿತ್ರೀಕರಿಸಲಾಯಿತು.

ಇದನ್ನೂ ಓದಿ: Kaun Banega Crorepati: ಮತ್ತೆ ಬಂತು ಕೌನ್ ಬನೇಗಾ ಕರೋಡ್ಪತಿ! ಸೀಸನ್​ 15 ಶೀಘ್ರದಲ್ಲೇ ಆರಂಭ

ಟಿಪ್ಪು ಸುಲ್ತಾನ್ ಪಾತ್ರದಲ್ಲಿ ಕಿಶೋರ್ ಅಭಿನಯಿಸುತ್ತಿದ್ದು, ರಮೇಶ್‍ ಭಟ್, ಸುಧಾ ಬೆಳವಾಡಿ, ಪದ್ಮಾ ವಾಸಂತಿ, ವಾಣಿಶ್ರೀ, ಭಾಗ್ಯಶ್ರೀ, ಕುಮಾರಿ ಅನನ್ಯ, ಟಿ.ಎನ್. ಶ್ರೀನಿವಾಸ ಮೂರ್ತಿ, ನಿರಂಜನ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಬಿ.ಎ. ಮಧು ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಜೈ ಆನಂದ್ ಛಾಯಾಗ್ರಹಣವಿದೆ. ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಕಲಾ ನಿರ್ದೇಶನದ ಜವಾಬ್ದಾರಿ ವಸಂತ್ ರಾವ್ ಕುಲಕರ್ಣಿ ಅವರದ್ದು. ಭುವನ್ ಫಿಲ್ಮ್ಸ್‌ ಲಾಂಛನದಲ್ಲಿ ಶಾನುಭೋಗರ ಮಗಳು ಸಿನಿಮಾ ನಿರ್ಮಾಣ ಆಗುತ್ತಿದೆ. ಶೀಘ್ರದಲ್ಲೇ ಟೀಸರ್ ಬಿಡುಗಡೆಗೆ ಚಿತ್ರತಂಡ ಪ್ಲ್ಯಾನ್​ ಹಾಕಿಕೊಂಡಿದೆ.

ಇದನ್ನೂ ಓದಿ: Animal: ರಗಡ್​ ಲುಕ್​ನಲ್ಲಿ ರಣ್​ಬೀರ್​ ಕಪೂರ್​ - ಅನಿಮಲ್​​ ಸೆಟ್​ನಿಂದ ನಟನ ಫೋಟೋ ವೈರಲ್​​

ಪ್ರಜ್ವಲ್ ದೇವರಾಜ್ ನಟಿಸುತ್ತಿರುವ ಸಿನಿಮಾಗಳ ಪೈಕಿ ಗಣ ಕೂಡ ಒಂದು. ಟೀಸರ್​ ಜುಲೈ 3ಕ್ಕೆ ಅನಾವರಣಗೊಳ್ಳಲಿದೆ. ಇದಲ್ಲದೇ ಜಾತರೆ ಎಂಬ ಸಿನಿಮಾದಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರೆಡಿಯಾಗುವ ಈ ಸಿನಿಮಾ ಶೀಘ್ರವೇ ಸೆಟ್ಟೇರಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಸೇರಿ 5 ಭಾಷೆಗಳಲ್ಲಿ ಜಾತರೆ ಸಿನಿಮಾ ಮೂಡಿ ಬರಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.