ETV Bharat / entertainment

ಜೈಲರ್ ಚಿತ್ರದಲ್ಲಿ ಅಭಿನಯಿಸಿದ್ದ ಖ್ಯಾತ ತಮಿಳು ನಟ, ನಿರ್ದೇಶಕ ಜಿ.ಮಾರಿಮುತ್ತು ಹೃದಯಾಘಾತದಿಂದ ನಿಧನ

author img

By ETV Bharat Karnataka Team

Published : Sep 8, 2023, 11:01 AM IST

Updated : Sep 8, 2023, 12:19 PM IST

Tamil Actor Marimuthu passes away: ತಮಿಳು ನಟ ಮತ್ತು ನಿರ್ದೇಶಕ ಜಿ.ಮಾರಿಮುತ್ತು ಇಂದು ಹೃದಯಾಘಾತದಿಂದ ನಿಧನರಾದರು.

Tamil Actor and director Marimuthu passes away
ಜಿ.ಮಾರಿಮುತ್ತು

'ಜೈಲರ್​' ಸಿನಿಮಾ ಖ್ಯಾತಿಯ ತಮಿಳು ನಟ ಮತ್ತು ನಿರ್ದೇಶಕ ಜಿ.ಮಾರಿಮುತ್ತು ಇಂದು ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ಧಾರಾವಾಹಿಯ ಡಬ್ಬಿಂಗ್​ ವೇಳೆ ಕುಸಿದು ಬಿದ್ದ ನಟ ಹೃದಯಾಘಾತದಿಂದ ಸಾವನ್ನಪ್ಪಿದರು ಎಂದು ವರದಿಯಾಗಿದೆ. ನಟನ ಹಠಾತ್​ ಸಾವು ತಮಿಳು ಚಿತ್ರರಂಗ ಮತ್ತು ಅವರ ಅಭಿಮಾನಿಗಳಿಗೆ ಆಘಾತ ಉಂಟುಮಾಡಿದೆ.

ಧಾರಾವಾಹಿಯೊಂದರ ಡಬ್ಬಿಂಗ್​ ವೇಳೆ ಮಾರಿಮುತ್ತು ಪ್ರಜ್ಞೆ ತಪ್ಪಿ ಕೆಳಗೆ ಬಿದ್ದರು. ಕೂಡಲೇ ಅವರ ಸಹೋದ್ಯೋಗಿಗಳು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅದಾಗಲೇ ಮಾರಿಮುತ್ತು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಖಾಸಗಿ ದೂರದರ್ಶನದಲ್ಲಿ ಮಾರಿಮುತ್ತು ನಟಿಸುತ್ತಿದ್ದ ಧಾರಾವಾಹಿ ಜನಪ್ರಿಯವಾಗಿತ್ತು.

ಖಾಸಗಿ ಆಸ್ಪತ್ರೆಯಲ್ಲಿರುವ ಪಾರ್ಥಿವ ಶರೀರಕ್ಕೆ ಸಿನಿಮಾ ತಾರೆಯರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಮೃತದೇಹವನ್ನು ಹುಟ್ಟೂರು ತೇಣಿ ಜಿಲ್ಲೆಯ ವಾರಸನಾಡು ಪಕ್ಕದ ಗ್ರಾಮಕ್ಕೆ ಕೊಂಡೊಯ್ಯಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಚಲನಚಿತ್ರ ನಿರ್ಮಾಪಕ ವಿಜಯ್ ಆನಂದ್ ಪತ್ನಿ ಸುಷ್ಮಾ ಹೃದಯಾಘಾತದಿಂದ ನಿಧನ

ಜಿ.ಮಾರಿಮುತ್ತು ಬಗ್ಗೆ..: 1990ರಲ್ಲಿ ಜಿ.ಮಾರಿಮುತ್ತು ತಮ್ಮ ಹುಟ್ಟೂರಾದ ತೇಣಿಯಿಂದ ಸಿನಿಮಾ ನಿರ್ದೇಶಕನಾಗುವ ಕನಸಿನೊಂದಿಗೆ ಚೆನ್ನೈಗೆ ಆಗಮಿಸಿದ್ದರು. 'ಅರಣ್ಮನೈ ಕಿಲಿ' (1993) ಮತ್ತು 'ಎಲ್ಲಾಮೆ ಎನ್​ ರಸತಾನ್​' (1995) ನಂತಹ ಚಲನಚಿತ್ರಗಳಲ್ಲಿ ರಾಜ್ಕಿರಣ್​ ಅವರೊಂದಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಬಳಿಕ ಸಹಾಯಕ ನಿರ್ದೇಶಕರಾಗಿಯೇ ತಮ್ಮ ವೃತ್ತಿಜೀವನದಲ್ಲಿ ಮುಂದುವರೆದರು. ಹೆಸರಾಂತ ಚಲನಚಿತ್ರ ನಿರ್ಮಾಪಕರಾದ ಮಣಿರತ್ನಂ, ವಸಂತ್​, ಸೀಮಾನ್​ ಮತ್ತು ಎಸ್​ಜೆ ಸೂರ್ಯ ಅವರೊಂದಿಗೆ ಕೆಲಸ ಮಾಡಿದ್ದಾರೆ. ಸಿಲಂಬಸರನ್​ ಅವರ 'ಮನ್ಮಧನ್' ಸಿನಿಮಾದಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.

2008ರಲ್ಲಿ ಪ್ರಸನ್ನ ಮತ್ತು ಉದಯತಾರಾ ಅಭಿನಯದ 'ಕಣ್ಣುಂ ಕಣ್ಣುಂ' ಚಿತ್ರದ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದರು. ಈ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಸೋಲು ಕಂಡಿತು. ಆದರೆ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆಯಿತು. ನಂತರದಲ್ಲಿ, ಮಲಯಾಳಂ ಚಿತ್ರ 'ಚಪ್ಪಾ ಕುರಿಶು' (2011) ನಿಂದ ಸ್ಫೂರ್ತಿ ಪಡೆದು 'ಪುಲಿವಾಲ್​' (2014) ಸಿನಿಮಾ ಮಾಡಿದರು.

2010ರಿಂದ ಮಾರಿಮುತ್ತು ನಟನೆಯತ್ತ ಒಲವು ತೋರಿದರು. ವಿವಿಧ ತಮಿಳು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡರು. ಮಿಸ್ಕಿನ್​ ಅವರ 'ಯುದ್ಧಮ್ ಸೇ' (2011) ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. ಇದರಲ್ಲಿ ಭ್ರಷ್ಟ ಪೊಲೀಸ್​ ಅಧಿಕಾರಿಯ ಪಾತ್ರ ನಿರ್ವಹಿಸಿದ್ದಾರೆ. ಈ ಚಿತ್ರದ ಯಶಸ್ಸಿನ ಬಳಿಕ ಆರೋಹಣಂ (2012), ನಿಮಿರಂದು ನಿಲ್​ (2014), ಕೊಂಬನ್​ (2015)ನಂತಹ ಸೂಪರ್​ಹಿಟ್​ ಸಿನಿಮಾಗಳಲ್ಲಿ ಪೊಲೀಸ್​ ಅಧಿಕಾರಿಯಾಗಿ ನಟಿಸಿದ್ದರು.

ಮರುದು (2016) ಚಿತ್ರದಲ್ಲಿ ಮಾರಿಮುತ್ತು ಅಭಿನಯವು ನಟ ವಿಶಾಲ್​ ಅವರ ಗಮನ ಸೆಳೆಯಿತು. ಹಾಗಾಗಿ ಅವರು ಕತ್ತಿ ಸಂದೈ (2016) ಚಿತ್ರದಲ್ಲಿ ನಟಿಸಿದರು. ಬಳಿಕ ಕಿರುತೆರೆ ಧಾರಾವಾಹಿಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡರು. ಎಥಿರ್ನೀಚಲ್​ನಲ್ಲಿನ ಪಾತ್ರಕ್ಕಾಗಿ ಮಾರಿಮುತ್ತು ಅಪಾರ ಅಭಿಮಾನಿಗಳನ್ನು ಸಂಪಾದಿಸಿದರು.

ಇದನ್ನೂ ಓದಿ: ಹಾಸ್ಯನಟ ಶಿವರಾಜ್ ಕೆ.ಆರ್.ಪೇಟೆ ಅವರ ತಂದೆ ರಾಮೇಗೌಡ ವಿಧಿವಶ

'ಜೈಲರ್​' ಸಿನಿಮಾ ಖ್ಯಾತಿಯ ತಮಿಳು ನಟ ಮತ್ತು ನಿರ್ದೇಶಕ ಜಿ.ಮಾರಿಮುತ್ತು ಇಂದು ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ಧಾರಾವಾಹಿಯ ಡಬ್ಬಿಂಗ್​ ವೇಳೆ ಕುಸಿದು ಬಿದ್ದ ನಟ ಹೃದಯಾಘಾತದಿಂದ ಸಾವನ್ನಪ್ಪಿದರು ಎಂದು ವರದಿಯಾಗಿದೆ. ನಟನ ಹಠಾತ್​ ಸಾವು ತಮಿಳು ಚಿತ್ರರಂಗ ಮತ್ತು ಅವರ ಅಭಿಮಾನಿಗಳಿಗೆ ಆಘಾತ ಉಂಟುಮಾಡಿದೆ.

ಧಾರಾವಾಹಿಯೊಂದರ ಡಬ್ಬಿಂಗ್​ ವೇಳೆ ಮಾರಿಮುತ್ತು ಪ್ರಜ್ಞೆ ತಪ್ಪಿ ಕೆಳಗೆ ಬಿದ್ದರು. ಕೂಡಲೇ ಅವರ ಸಹೋದ್ಯೋಗಿಗಳು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅದಾಗಲೇ ಮಾರಿಮುತ್ತು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಖಾಸಗಿ ದೂರದರ್ಶನದಲ್ಲಿ ಮಾರಿಮುತ್ತು ನಟಿಸುತ್ತಿದ್ದ ಧಾರಾವಾಹಿ ಜನಪ್ರಿಯವಾಗಿತ್ತು.

ಖಾಸಗಿ ಆಸ್ಪತ್ರೆಯಲ್ಲಿರುವ ಪಾರ್ಥಿವ ಶರೀರಕ್ಕೆ ಸಿನಿಮಾ ತಾರೆಯರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಮೃತದೇಹವನ್ನು ಹುಟ್ಟೂರು ತೇಣಿ ಜಿಲ್ಲೆಯ ವಾರಸನಾಡು ಪಕ್ಕದ ಗ್ರಾಮಕ್ಕೆ ಕೊಂಡೊಯ್ಯಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಚಲನಚಿತ್ರ ನಿರ್ಮಾಪಕ ವಿಜಯ್ ಆನಂದ್ ಪತ್ನಿ ಸುಷ್ಮಾ ಹೃದಯಾಘಾತದಿಂದ ನಿಧನ

ಜಿ.ಮಾರಿಮುತ್ತು ಬಗ್ಗೆ..: 1990ರಲ್ಲಿ ಜಿ.ಮಾರಿಮುತ್ತು ತಮ್ಮ ಹುಟ್ಟೂರಾದ ತೇಣಿಯಿಂದ ಸಿನಿಮಾ ನಿರ್ದೇಶಕನಾಗುವ ಕನಸಿನೊಂದಿಗೆ ಚೆನ್ನೈಗೆ ಆಗಮಿಸಿದ್ದರು. 'ಅರಣ್ಮನೈ ಕಿಲಿ' (1993) ಮತ್ತು 'ಎಲ್ಲಾಮೆ ಎನ್​ ರಸತಾನ್​' (1995) ನಂತಹ ಚಲನಚಿತ್ರಗಳಲ್ಲಿ ರಾಜ್ಕಿರಣ್​ ಅವರೊಂದಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಬಳಿಕ ಸಹಾಯಕ ನಿರ್ದೇಶಕರಾಗಿಯೇ ತಮ್ಮ ವೃತ್ತಿಜೀವನದಲ್ಲಿ ಮುಂದುವರೆದರು. ಹೆಸರಾಂತ ಚಲನಚಿತ್ರ ನಿರ್ಮಾಪಕರಾದ ಮಣಿರತ್ನಂ, ವಸಂತ್​, ಸೀಮಾನ್​ ಮತ್ತು ಎಸ್​ಜೆ ಸೂರ್ಯ ಅವರೊಂದಿಗೆ ಕೆಲಸ ಮಾಡಿದ್ದಾರೆ. ಸಿಲಂಬಸರನ್​ ಅವರ 'ಮನ್ಮಧನ್' ಸಿನಿಮಾದಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.

2008ರಲ್ಲಿ ಪ್ರಸನ್ನ ಮತ್ತು ಉದಯತಾರಾ ಅಭಿನಯದ 'ಕಣ್ಣುಂ ಕಣ್ಣುಂ' ಚಿತ್ರದ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದರು. ಈ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಸೋಲು ಕಂಡಿತು. ಆದರೆ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆಯಿತು. ನಂತರದಲ್ಲಿ, ಮಲಯಾಳಂ ಚಿತ್ರ 'ಚಪ್ಪಾ ಕುರಿಶು' (2011) ನಿಂದ ಸ್ಫೂರ್ತಿ ಪಡೆದು 'ಪುಲಿವಾಲ್​' (2014) ಸಿನಿಮಾ ಮಾಡಿದರು.

2010ರಿಂದ ಮಾರಿಮುತ್ತು ನಟನೆಯತ್ತ ಒಲವು ತೋರಿದರು. ವಿವಿಧ ತಮಿಳು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡರು. ಮಿಸ್ಕಿನ್​ ಅವರ 'ಯುದ್ಧಮ್ ಸೇ' (2011) ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. ಇದರಲ್ಲಿ ಭ್ರಷ್ಟ ಪೊಲೀಸ್​ ಅಧಿಕಾರಿಯ ಪಾತ್ರ ನಿರ್ವಹಿಸಿದ್ದಾರೆ. ಈ ಚಿತ್ರದ ಯಶಸ್ಸಿನ ಬಳಿಕ ಆರೋಹಣಂ (2012), ನಿಮಿರಂದು ನಿಲ್​ (2014), ಕೊಂಬನ್​ (2015)ನಂತಹ ಸೂಪರ್​ಹಿಟ್​ ಸಿನಿಮಾಗಳಲ್ಲಿ ಪೊಲೀಸ್​ ಅಧಿಕಾರಿಯಾಗಿ ನಟಿಸಿದ್ದರು.

ಮರುದು (2016) ಚಿತ್ರದಲ್ಲಿ ಮಾರಿಮುತ್ತು ಅಭಿನಯವು ನಟ ವಿಶಾಲ್​ ಅವರ ಗಮನ ಸೆಳೆಯಿತು. ಹಾಗಾಗಿ ಅವರು ಕತ್ತಿ ಸಂದೈ (2016) ಚಿತ್ರದಲ್ಲಿ ನಟಿಸಿದರು. ಬಳಿಕ ಕಿರುತೆರೆ ಧಾರಾವಾಹಿಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡರು. ಎಥಿರ್ನೀಚಲ್​ನಲ್ಲಿನ ಪಾತ್ರಕ್ಕಾಗಿ ಮಾರಿಮುತ್ತು ಅಪಾರ ಅಭಿಮಾನಿಗಳನ್ನು ಸಂಪಾದಿಸಿದರು.

ಇದನ್ನೂ ಓದಿ: ಹಾಸ್ಯನಟ ಶಿವರಾಜ್ ಕೆ.ಆರ್.ಪೇಟೆ ಅವರ ತಂದೆ ರಾಮೇಗೌಡ ವಿಧಿವಶ

Last Updated : Sep 8, 2023, 12:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.