ಚೆನ್ನೈ: ಜಿಎಸ್ಟಿ ಪಾವತಿ ಸಂಬಂಧ ಖ್ಯಾತ ಸಂಗೀತ ಸಂಯೋಜಕರಾಗಿರುವ ಎಆರ್ ರೆಹಮಾನ್ ಮತ್ತು ಜಿವಿ ಪ್ರಕಾಶ್ ಕುಮಾರ್ ಮತ್ತು ಸಿಆರ್ ಸಂತೋಷ್ ನಾರಾಯಣನ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಮಾಡಿದೆ. 2013 ರಿಂದ 2017ರವರೆಗೆ ಎ ಆರ್ ರೆಹಮಾಸ್ ಜಿಎಸ್ಟಿ ತೆರಿಗೆ ಪಾವತಿ ಮಾಡಿಲ್ಲ ಎಂದು ಆರೋಪಿಸಿ ಜಿಎಸ್ಟಿ ಆಯುಕ್ತರು, ಸಂಗೀತ ಮಾಂತ್ರಿಕನಿಗೆ ನೋಟಿಸ್ ಜಾರಿ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಎಆರ್ ರಹಮಾನ್ ಸೇರಿದಂತೆ ಇತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ವಜಾಗೊಳಿಸಿದೆ.
ನ್ಯಾಯಮೂರ್ತಿ ಅನಿತಾ ಸುಮಂತ್ ಅವರು, ದಂಡದೊಂದಿಗೆ ತೆರಿಗೆಯ ಬೇಡಿಕೆಯನ್ನು ಪ್ರಶ್ನಿಸಿ ನಾಲ್ಕು ವಾರಗಳಲ್ಲಿ ಸ್ಟಟ್ಯೂಟರಿ ಮನವಿಯನ್ನು ಸಲ್ಲಿಸಬಹುದು ಎಂಬ ಅವಕಾಶವನ್ನು ನೀಡಲಾಗಿದೆ ಎಂದಿದ್ದಾರೆ.
ಏನಿದು ಪ್ರಕರಣ: ಸಂಗೀತ ಸಂಯೋಜಕರಾಗಿರುವ ಎಆರ್ ರೆಹಮಾನ್ ಅವರು 2013ರಿಂದ 2017ರವರೆಗೆ ತಮ್ಮ ಸಂಗೀತ ಕಾರ್ಯಕ್ಕೆ ಮೂರು ಕಂಪನಿಗಳೊಂದಿಗೆ ಸಹಿ ಹಾಕಿದ್ದು, ಈ ಸಂಬಂಧ ಸೇವಾ ತೆರಿಗೆಯನ್ನು ಪಾವತಿಸಿಲ್ಲ ಎಂದು ಜಿಎಸ್ಟಿ ಆಯುಕ್ತರು ನೋಟಿಸ್ ಜಾರಿ ಮಾಡಿದ್ದರು. ಈ ಸಂಬಂಧ ಮದ್ರಾಸ್ ಹೈ ಕೋರ್ಟ್ಗೆ ಜಿಎಸ್ಟಿ ಆಯುಕ್ತರು ಮನವಿ ಅರ್ಜಿಯನ್ನು ಸಲ್ಲಿಸಿದ್ದರು. ಅಲ್ಲದೇ, ಈ ವೇಳೆ ತೆರಿಗೆ ವಂಚನೆ ಮಾಡಿರುವ ಪುರಾವೆಗಳ ಆಧಾರದ ಮೇಲೆ ಎಆರ್ ರೆಹಮಾನ್ ಅವರಿಗೆ ನೋಟಿಸ್ ನೀಡಲಾಗಿದ್ದು, ಮಾನಹಾನಿ ಮಾಡುವ ಉದ್ದೇಶ ಇಲ್ಲ ಎಂದು ತಿಳಿಸಿದ್ದರು. ಇನ್ನು ಇದೇ ವೇಳೆ, ಸಂಗೀತ ನಿರ್ದೇಶಕ ಜಿವಿ ಪ್ರಕಾಶ್ ಕುಮಾರ್ ಕೂಡ 1 ಕೋಟಿ 84 ಲಕ್ಷ ಸೇವಾ ತೆರಿಗೆ ಕಟ್ಟುವ ಸಂಬಂಧ ಜಿಎಸ್ಟಿ ಆಯುಕ್ತರು ನೀಡಿದ್ದ ನೋಟಿಸ್ ವಿರುದ್ಧ ಅರ್ಜಿಯನ್ನು ಸಲ್ಲಿಸಿದ್ದರು.
ಈ ಕುರಿತು ನ್ಯಾಯಾಲಯಕ್ಕೆ ಅಫಿಡೇವಿಟ್ ಸಲ್ಲಿಸಿದ್ದ ಎಆರ್ ರೆಹಮಾನ್, ಜಿಎಸ್ಟಿ ಆಯುಕ್ತರು ಮತ್ತು ಕೇಂದ್ರ ಅಬಕಾರಿ ತಮ್ಮ ವಿರುದ್ಧ ತಪ್ಪಾಗಿ ವಿಚಾರಣೆ ಆರಂಭಿಸಿದ್ದಾರೆ. ತಮ್ಮ ಸಂಗೀತ ಕಾರ್ಯದ ಹಕ್ಕು ಸ್ವಾಮ್ಯ ಹೊಂದಿರುವ ಏಕೈಕ ಮಾಲೀಕರು ತಾನು ಆಗಿದ್ದೇನೆ. ತಮ್ಮ ಈ ಹಕ್ಕುಸ್ವಾಮ್ಯದ ವರ್ಗಾವಣೆ ಸೇವಾ ತೆರಿಗೆ ಹೊಣೆಗಾರರು ಎಂದು ಪರಿಗಣಿಸಲಾಗುವುದಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದರು. ಇದಕ್ಕೆ ಪ್ರತಿಯಾಗಿ ವಾದ ಮಂಡಿಸಿರುವ ಆಯುಕ್ತರು, ರೆಹಮಾನ್ ಅವರು ತಮ್ಮ ಕೆಲಸದ ಸಂಪೂರ್ಣ ಹಕ್ಕು ಸ್ವಾಮ್ಯವನ್ನು ವರ್ಗಾವಣೆ ಮಾಡಿಲ್ಲ. ಆದರೆ, ಕೆಲವು ಹಕ್ಕುಗಳನ್ನು ಉಳಿಸಿಕೊಂಡಿದ್ದಾರೆ. ಇದು ಕೇವಲ ತಾತ್ಕಾಲಿಕ ವರ್ಗಾವಣೆ ಎಂದಿತ್ತು
ಅರ್ಜಿ ವಜಾಗೊಳಿಸಿದ ನ್ಯಾಯಾಲಯ: ಈ ಅರ್ಜಿಗಳ ವಿಚಾರಣೆ ಆಲಿಸಿದ ನ್ಯಾ. ಅನಿತಾ ಸುಮಂತ್, ಎಆರ್ ರೆಹಮಾನ್ ಅವರ ಅರ್ಜಿ ವಿಚಾರಣೆಗೆ ಸೂಕ್ತವಲ್ಲ ಎಂದಿದ್ದಾರೆ. 2013 ಮತ್ತು 2017 ರ ನಡುವೆ ಕಂಪನಿಗಳೊಂದಿಗೆೆ ಮಾಡಲಾದ ಸಹಿ ಒಪ್ಪಂದಗಳು ಸೇರಿದಂತೆ ಬೃಹತ್ ದಾಖಲೆಗಳ ಪರಿಶೀಲನೆ ಅಗತ್ಯವಿದೆ. ಇದನ್ನು ರಿಟ್ ಪ್ರಕ್ರಿಯೆಯಲ್ಲಿ ಪರಿಹರಿಸಲಾಗುವುದಿಲ್ಲ ಎಂದು ಕೋರ್ಟ್ ತಿಳಿಸಿದೆ. ಇದೇ ವೇಳೆ, ತೆರಿಗೆ ವಿಧಿಸಿರುವ ಕುರಿತು ವಿವರಣೆ ಕೇಳಿರುವ ಆಯುಕ್ತರ ನೋಟಿಸ್ ವಿರುದ್ಧ ಸಂಗೀತ ಸಂಯೋಜಕ ಜಿವಿ ಪ್ರಕಾಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಇದನ್ನೂ ಓದಿ: 74ನೇ ವಯಸ್ಸಿನಲ್ಲೂ ಯುವಕರನ್ನೂ ನಾಚಿಸುವ ಸಾಧನೆ.. ಇಲ್ಲಿದೆ ವಾಹ್ಲಾಂಗ್ ಯಶಸ್ಸಿನ ಗುಟ್ಟು!