ETV Bharat / entertainment

ಲಾಲ್​ಬಾಗ್​ನ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ.. ಡಾ. ರಾಜ್​ಕುಮಾರ್, ಅಪ್ಪುಗೆ ಗೌರವ

author img

By

Published : Jul 21, 2022, 1:32 PM IST

ಈ ಬಾರಿಯ ಲಾಲ್​ಬಾಗ್​ನ ಫಲಪುಷ್ಪ ಪ್ರದರ್ಶನದಲ್ಲಿ ದಿ. ರಾಜ್​​ಕುಮಾರ್, ಪುನೀತ್ ರಾಜ್​ಕುಮಾರ್ ಅವರ ವಿಷಯ ಆಧಾರಿತ ವಿಶೇಷ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗುತ್ತಿದೆ.

tribute to rajkumar and puneet in Lalbagh Flower Show
ಲಾಲ್​ಬಾಗ್​ನ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನದಲ್ಲಿ ರಾಜ್​ಕುಮಾರ್, ಅಪ್ಪುಗೆ ಗೌರವ

ಪ್ರತಿ ವರ್ಷ ಲಾಲ್​ಬಾಗ್​ನಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ಎಂದಿನಂತೆ ಈ ಬಾರಿಯೂ ವಿಶೇಷವಾಗಿ ಆಚರಿಸಲು ಲಾಲ್​ಬಾಗ್ ತೋಟಗಾರಿಕೆ ಇಲಾಖೆ ಸಜ್ಜಾಗಿದೆ. ಲಕ್ಷಾಂತರ ಜನರು ಆಗಮಿಸಲಿರುವ ಈ ಫಲಪುಷ್ಪ ಪ್ರದರ್ಶನದಲ್ಲಿ ದಿ. ರಾಜ್​​ಕುಮಾರ್, ಪುನೀತ್ ರಾಜಕುಮಾರ್ ಅವರ ವಿಷಯ ಆಧಾರಿತ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗುವುದು.

tribute to rajkumar and puneet in Lalbagh Flower Show
ರಾಜ್​ ಕುಟುಂಬಸ್ಥರನ್ನು ಭೇಟಿಯಾದ ಅಧಿಕಾರಿಗಳು

ಆಗಸ್ಟ್ 5ರಂದು ಫಲಪುಷ್ಪ ಪ್ರದರ್ಶನ ಉದ್ಘಾಟನೆಗೊಳ್ಳಲಿದ್ದು, 15ರ ವರೆಗೂ ನಡೆಯಲಿದೆ. ಖ್ಯಾತ ಚಿತ್ರ ನಟರಾದ, ಶಿವರಾಜ್​​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಹಾಗೂ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರಿಂದ ಫಲಪುಷ್ಪ ಪ್ರದರ್ಶನಕ್ಕೆ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ಪಡೆಯಲು ಇಂದು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಆತ್ಮೀಯವಾಗಿ ವಿನಂತಿಸಲಾಯಿತು. ರಾಜ್​ ಕುಟುಂಬಸ್ಥರಿಂದ ಕೆಲ ಸೂಕ್ತ ಸಲಹೆ ಕೂಡ ಪಡೆಯಲಾಗಿದೆ.

ಈ ಸಂದರ್ಭದಲ್ಲಿ ಉದ್ಯಾನ ಕಲಾಸಂಘದ ಉಪಾಧ್ಯಕ್ಷರಾದ ಶ್ರೀ ವಾಸುದೇವ್, ತೋಟಗಾರಿಕೆ ಜಂಟಿ ನಿರ್ದೇಶಕರಾದ ಡಾ. ಎಂ ಜಗದೀಶ್ ಹಾಗೂ ಲಾಲ್ ಬಾಗ್ ತೋಟಗಾರಿಕೆ ಉಪನಿರ್ದೇಶಕರಾದ ಶ್ರೀಮತಿ ಜಿ ಕುಸುಮ ಹಾಗೂ ದಿನಿ ಸಿನಿ ಕ್ರಿಯೇಷನ್ಸ್ ನ ದಿನೇಶ್ ಅವರು ಉಪಸ್ಥಿತರಿದ್ದರು.

ಇದನ್ನೂ ಓದಿ: ನಟಿ ಅಮೀಷಾ ಪಟೇಲ್ ವಿರುದ್ಧ ಬಂಧನ ವಾರಂಟ್​​ ಜಾರಿ

ಪ್ರತಿ ವರ್ಷ ಲಾಲ್​ಬಾಗ್​ನಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ಎಂದಿನಂತೆ ಈ ಬಾರಿಯೂ ವಿಶೇಷವಾಗಿ ಆಚರಿಸಲು ಲಾಲ್​ಬಾಗ್ ತೋಟಗಾರಿಕೆ ಇಲಾಖೆ ಸಜ್ಜಾಗಿದೆ. ಲಕ್ಷಾಂತರ ಜನರು ಆಗಮಿಸಲಿರುವ ಈ ಫಲಪುಷ್ಪ ಪ್ರದರ್ಶನದಲ್ಲಿ ದಿ. ರಾಜ್​​ಕುಮಾರ್, ಪುನೀತ್ ರಾಜಕುಮಾರ್ ಅವರ ವಿಷಯ ಆಧಾರಿತ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗುವುದು.

tribute to rajkumar and puneet in Lalbagh Flower Show
ರಾಜ್​ ಕುಟುಂಬಸ್ಥರನ್ನು ಭೇಟಿಯಾದ ಅಧಿಕಾರಿಗಳು

ಆಗಸ್ಟ್ 5ರಂದು ಫಲಪುಷ್ಪ ಪ್ರದರ್ಶನ ಉದ್ಘಾಟನೆಗೊಳ್ಳಲಿದ್ದು, 15ರ ವರೆಗೂ ನಡೆಯಲಿದೆ. ಖ್ಯಾತ ಚಿತ್ರ ನಟರಾದ, ಶಿವರಾಜ್​​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಹಾಗೂ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರಿಂದ ಫಲಪುಷ್ಪ ಪ್ರದರ್ಶನಕ್ಕೆ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ಪಡೆಯಲು ಇಂದು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಆತ್ಮೀಯವಾಗಿ ವಿನಂತಿಸಲಾಯಿತು. ರಾಜ್​ ಕುಟುಂಬಸ್ಥರಿಂದ ಕೆಲ ಸೂಕ್ತ ಸಲಹೆ ಕೂಡ ಪಡೆಯಲಾಗಿದೆ.

ಈ ಸಂದರ್ಭದಲ್ಲಿ ಉದ್ಯಾನ ಕಲಾಸಂಘದ ಉಪಾಧ್ಯಕ್ಷರಾದ ಶ್ರೀ ವಾಸುದೇವ್, ತೋಟಗಾರಿಕೆ ಜಂಟಿ ನಿರ್ದೇಶಕರಾದ ಡಾ. ಎಂ ಜಗದೀಶ್ ಹಾಗೂ ಲಾಲ್ ಬಾಗ್ ತೋಟಗಾರಿಕೆ ಉಪನಿರ್ದೇಶಕರಾದ ಶ್ರೀಮತಿ ಜಿ ಕುಸುಮ ಹಾಗೂ ದಿನಿ ಸಿನಿ ಕ್ರಿಯೇಷನ್ಸ್ ನ ದಿನೇಶ್ ಅವರು ಉಪಸ್ಥಿತರಿದ್ದರು.

ಇದನ್ನೂ ಓದಿ: ನಟಿ ಅಮೀಷಾ ಪಟೇಲ್ ವಿರುದ್ಧ ಬಂಧನ ವಾರಂಟ್​​ ಜಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.