ETV Bharat / entertainment

ಮನೆಯೊಳಗಿರಲು ಕನ್ವಿನ್ಸ್ ಆಗ್ತಿಲ್ಲ ವರ್ತೂರು ಸಂತೋಷ್; ಬಿಗ್‌ಬಾಸ್​ಗೆ ಸುಷ್ಮಾ ಕೆ ರಾವ್ ಎಂಟ್ರಿ

ಎಲಿಮಿನೇಷನ್​ಯಿಂದ ಸೇಫ್​ ಆಗಿರುವ ವರ್ತೂರು ಸಂತೋಷ್ ಅವರನ್ನು ಮನೆಯೊಳಗೆ ಉಳಿಸಿಕೊಳ್ಳಲು ಬಿಗ್​ಬಾಸ್ ಮನೆ ಸದಸ್ಯರೆಲ್ಲರೂ ಪ್ರಯತ್ನಿಸುತ್ತಿದ್ದಾರೆ.

author img

By ETV Bharat Karnataka Team

Published : Nov 13, 2023, 11:43 AM IST

ವರ್ತೂರ್ ಸಂತೋಷ್
ವರ್ತೂರ್ ಸಂತೋಷ್

ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 10 ಹೊಸ ತಿರುವು ಪಡೆದುಕೊಳ್ಳುವ ಲಕ್ಷಣಗಳು ಎದ್ದು ಕಾಣಿಸುತ್ತಿವೆ. ಕಳೆದ ವಾರದ ವೀಕೆಂಡ್ ಎಪಿಸೋಡ್‌ನ ಎಲಿಮಿನೇಷನ್ ಟೈಮಲ್ಲಿ ಸೇಫ್ ಆದರೂ ವರ್ತೂರ್ ಸಂತೋಷ್ ಮನೆಯಿಂದ ಹೊರ ನಡೆಯುವ ತೀರ್ಮಾನ ಮಾಡಿದ್ದರು. ಈ ಮೂಲಕ ವರ್ತೂರು ಸಂತೋಷ್ ಸುದೀಪ್‌ ಅವರಿಗೆ, ಬಿಗ್‌ಬಾಸ್‌ ಮನೆಯ ಸದಸ್ಯರಿಗೆ, ತಮಗೆ ವೋಟ್ ಹಾಕಿದ 34 ಲಕ್ಷಕ್ಕಿಂತ ಅಧಿಕ ಜನರಿಗೆ ಒಂದು ಬಿಗ್ ಶಾಕ್ ನೀಡಿದ್ದರು.

"ನನಗೆ ಹೊರಗೆ ನಡೆದ ಘಟನೆಯನ್ನು ಮರೆತು ಆಡಬೇಕು ಎಂದು ಇಲ್ಲಿಗೆ ಬಂದೆ. ಆದರೆ ನನಗೆ ಅದರಿಂದ ಹೊರಗೆ ಬರಲು ಸಾಧ್ಯಾಗುತ್ತಿಲ್ಲ. ಹಾಗಾಗಿ ನಾನು ಶೋ ಯಿಂದ ಹೊರಗೆ ಹೋಗಲು ಬಯಸುತ್ತೇನೆ" ಎಂದು ಹೇಳಿದರು. ಇದರಿಂದ ಎಲ್ಲರಿಗೂ ಶಾಕ್ ಆಯಿತು. ಈ ಸಂದರ್ಭದಲ್ಲಿ ನಿರೂಪಕ ಸುದೀಪ್​ ಕೂಡ ‘ನೀವು ಜನರ ಪ್ರೀತಿಯ ವಿರುದ್ಧ ಹೋಗ್ತಿದ್ದೀರಾ’ ಎಚ್ಚರಿಸಿದರು. ಕೊನೆಯಲ್ಲಿ, ‘ಮನೆಯೊಳಗೆ ಇರ್ತೀರೋ ಬಿಡ್ತೀರೋ ನಿಮಗೆ ಬಿಟ್ಟಿದ್ದು. ಆದರೆ ನನಗಂತೂ ಡಿಸಪಾಯಿಂಟ್ ಆಗಿದೆ’ ಎಂದು ಹೇಳಿ ಬೇಸರದಿಂದಲೇ ವೇದಿಕೆ ಬಿಟ್ಟು ಹೊರ ನಡೆದರು.

ಇದೀಗ ವರ್ತೂರು ಸಂತೋಷ್ ಅವರನ್ನು ಮನೆಯೊಳಗೆ ಉಳಿದುಕೊಳ್ಳುವಂತೆ ಮನವೊಲಿಸಲು ಇಡೀ ಮನೆಯ ಸದಸ್ಯರೆಲ್ಲರೂ ಪ್ರಯತ್ನಿಸುತ್ತಿದ್ದಾರೆ. ಇದೇ ಹೊತ್ತಿನಲ್ಲಿ ಬಿಗ್‌ಬಾಸ್‌ ಮನೆಗೆ ಮತ್ತೊಬ್ಬರು ಗೆಸ್ಟ್ ಎಂಟ್ರಿ ಕೊಟ್ಟಿದ್ದಾರೆ! ಬಿಗ್‌ಬಾಸ್ ಮನೆಯ ಬಾಗಿಲು ತೆರೆಯುತ್ತಿದ್ದ ಹಾಗೆಯೇ ಜನಪ್ರಿಯ ಧಾರಾವಾಹಿ ನಟಿ, ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುತ್ತಿರುವ, ‘ಭಾಗ್ಯಲಕ್ಷ್ಮಿ’ಯ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ಸುಷ್ಮಾ ಕೆ ರಾವ್ ಬಿಗ್‌ಬಾಸ್ ಮನೆಯೊಳಗೆ ಪ್ರವೇಶಿಸಿದ್ದಾರೆ.

ಹಾಗಾದರೆ ಈ ಎಂಟ್ರಿ ದೀಪಾವಳಿ ಸಂಭ್ರಮದ ಭಾಗವೇ? ಸುಷ್ಮಾ ದಿರಿಸೇನೋ ಹಬ್ಬದ ಸಂಭ್ರಮವನ್ನು ಪ್ರತಿನಿಧಿಸುವ ಹಾಗೆಯೇ ಇದೆ. ಆದರೆ ಅವರು ಮನೆಯೊಳಗೆ ತೆರಳಿ ಹೋಗಿದ್ದು ನೇರವಾಗಿ ವರ್ತೂರು ಸಂತೋಷ್ ಬಳಿಗೆ. ‘ನಾನು ನಿಮ್ಮ ಅಕ್ಕ ಆಗಿ ಹೇಳ್ತಿದೀನಿ. ನನ್ನಿಂದ ಆಗಲ್ಲ ಅನ್ನೋದನ್ನು ಮನಸಿಂದ ತೆಗೆದುಬಿಡಿ’ ಎಂದು ಪಕ್ಕಕೂತು ಕನ್ವಿನ್ಸ್ ಮಾಡುತ್ತಿದ್ದಾರೆ.

ಹಾಗಾದ್ರೆ ಸುಷ್ಮಾ ವಿವೇಕದ ಮಾತುಗಳಿಗೆ ವರ್ತೂರು ತಲೆಬಾಗುತ್ತಾರಾ? ಮನೆಯೊಳಗೇ ಉಳಿದುಕೊಳ್ಳಲು ನಿರ್ಧರಿಸುತ್ತಾರಾ? ತಮಗೆ ವೋಟ್ ಮಾಡಿದ 34 ಲಕ್ಷಕ್ಕಿಂತ ಅಧಿಕ ಜನರ ಮನಸ್ಸಿಗೆ ನೆಮ್ಮದಿ ತರುತ್ತಾರಾ? ಎಂಬ ಈ ಎಲ್ಲಾ ಯಕ್ಷ ಪ್ರಶ್ನೆಗಳಿಗೆ ಇವತ್ತಿನ ಸಂಚಿಕೆಯಲ್ಲಿ ಪ್ರೇಕ್ಷಕರಿಗೆ ಉತ್ತರ ಸಿಗಬಹುದು.

ಇದನ್ನೂ ಓದಿ : 34 ಲಕ್ಷ ಮತ ಪಡೆದು ಸೇಫ್​ ಆದ್ರೂ ಹೊರಹೋಗುತ್ತೇನೆಂದ ವರ್ತೂರು ಸಂತೋಷ್: ಕುತೂಹಲ ಮೂಡಿಸಿದ ಕಿಚ್ಚನ ವಾರದ ಕಥೆ!

ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 10 ಹೊಸ ತಿರುವು ಪಡೆದುಕೊಳ್ಳುವ ಲಕ್ಷಣಗಳು ಎದ್ದು ಕಾಣಿಸುತ್ತಿವೆ. ಕಳೆದ ವಾರದ ವೀಕೆಂಡ್ ಎಪಿಸೋಡ್‌ನ ಎಲಿಮಿನೇಷನ್ ಟೈಮಲ್ಲಿ ಸೇಫ್ ಆದರೂ ವರ್ತೂರ್ ಸಂತೋಷ್ ಮನೆಯಿಂದ ಹೊರ ನಡೆಯುವ ತೀರ್ಮಾನ ಮಾಡಿದ್ದರು. ಈ ಮೂಲಕ ವರ್ತೂರು ಸಂತೋಷ್ ಸುದೀಪ್‌ ಅವರಿಗೆ, ಬಿಗ್‌ಬಾಸ್‌ ಮನೆಯ ಸದಸ್ಯರಿಗೆ, ತಮಗೆ ವೋಟ್ ಹಾಕಿದ 34 ಲಕ್ಷಕ್ಕಿಂತ ಅಧಿಕ ಜನರಿಗೆ ಒಂದು ಬಿಗ್ ಶಾಕ್ ನೀಡಿದ್ದರು.

"ನನಗೆ ಹೊರಗೆ ನಡೆದ ಘಟನೆಯನ್ನು ಮರೆತು ಆಡಬೇಕು ಎಂದು ಇಲ್ಲಿಗೆ ಬಂದೆ. ಆದರೆ ನನಗೆ ಅದರಿಂದ ಹೊರಗೆ ಬರಲು ಸಾಧ್ಯಾಗುತ್ತಿಲ್ಲ. ಹಾಗಾಗಿ ನಾನು ಶೋ ಯಿಂದ ಹೊರಗೆ ಹೋಗಲು ಬಯಸುತ್ತೇನೆ" ಎಂದು ಹೇಳಿದರು. ಇದರಿಂದ ಎಲ್ಲರಿಗೂ ಶಾಕ್ ಆಯಿತು. ಈ ಸಂದರ್ಭದಲ್ಲಿ ನಿರೂಪಕ ಸುದೀಪ್​ ಕೂಡ ‘ನೀವು ಜನರ ಪ್ರೀತಿಯ ವಿರುದ್ಧ ಹೋಗ್ತಿದ್ದೀರಾ’ ಎಚ್ಚರಿಸಿದರು. ಕೊನೆಯಲ್ಲಿ, ‘ಮನೆಯೊಳಗೆ ಇರ್ತೀರೋ ಬಿಡ್ತೀರೋ ನಿಮಗೆ ಬಿಟ್ಟಿದ್ದು. ಆದರೆ ನನಗಂತೂ ಡಿಸಪಾಯಿಂಟ್ ಆಗಿದೆ’ ಎಂದು ಹೇಳಿ ಬೇಸರದಿಂದಲೇ ವೇದಿಕೆ ಬಿಟ್ಟು ಹೊರ ನಡೆದರು.

ಇದೀಗ ವರ್ತೂರು ಸಂತೋಷ್ ಅವರನ್ನು ಮನೆಯೊಳಗೆ ಉಳಿದುಕೊಳ್ಳುವಂತೆ ಮನವೊಲಿಸಲು ಇಡೀ ಮನೆಯ ಸದಸ್ಯರೆಲ್ಲರೂ ಪ್ರಯತ್ನಿಸುತ್ತಿದ್ದಾರೆ. ಇದೇ ಹೊತ್ತಿನಲ್ಲಿ ಬಿಗ್‌ಬಾಸ್‌ ಮನೆಗೆ ಮತ್ತೊಬ್ಬರು ಗೆಸ್ಟ್ ಎಂಟ್ರಿ ಕೊಟ್ಟಿದ್ದಾರೆ! ಬಿಗ್‌ಬಾಸ್ ಮನೆಯ ಬಾಗಿಲು ತೆರೆಯುತ್ತಿದ್ದ ಹಾಗೆಯೇ ಜನಪ್ರಿಯ ಧಾರಾವಾಹಿ ನಟಿ, ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುತ್ತಿರುವ, ‘ಭಾಗ್ಯಲಕ್ಷ್ಮಿ’ಯ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ಸುಷ್ಮಾ ಕೆ ರಾವ್ ಬಿಗ್‌ಬಾಸ್ ಮನೆಯೊಳಗೆ ಪ್ರವೇಶಿಸಿದ್ದಾರೆ.

ಹಾಗಾದರೆ ಈ ಎಂಟ್ರಿ ದೀಪಾವಳಿ ಸಂಭ್ರಮದ ಭಾಗವೇ? ಸುಷ್ಮಾ ದಿರಿಸೇನೋ ಹಬ್ಬದ ಸಂಭ್ರಮವನ್ನು ಪ್ರತಿನಿಧಿಸುವ ಹಾಗೆಯೇ ಇದೆ. ಆದರೆ ಅವರು ಮನೆಯೊಳಗೆ ತೆರಳಿ ಹೋಗಿದ್ದು ನೇರವಾಗಿ ವರ್ತೂರು ಸಂತೋಷ್ ಬಳಿಗೆ. ‘ನಾನು ನಿಮ್ಮ ಅಕ್ಕ ಆಗಿ ಹೇಳ್ತಿದೀನಿ. ನನ್ನಿಂದ ಆಗಲ್ಲ ಅನ್ನೋದನ್ನು ಮನಸಿಂದ ತೆಗೆದುಬಿಡಿ’ ಎಂದು ಪಕ್ಕಕೂತು ಕನ್ವಿನ್ಸ್ ಮಾಡುತ್ತಿದ್ದಾರೆ.

ಹಾಗಾದ್ರೆ ಸುಷ್ಮಾ ವಿವೇಕದ ಮಾತುಗಳಿಗೆ ವರ್ತೂರು ತಲೆಬಾಗುತ್ತಾರಾ? ಮನೆಯೊಳಗೇ ಉಳಿದುಕೊಳ್ಳಲು ನಿರ್ಧರಿಸುತ್ತಾರಾ? ತಮಗೆ ವೋಟ್ ಮಾಡಿದ 34 ಲಕ್ಷಕ್ಕಿಂತ ಅಧಿಕ ಜನರ ಮನಸ್ಸಿಗೆ ನೆಮ್ಮದಿ ತರುತ್ತಾರಾ? ಎಂಬ ಈ ಎಲ್ಲಾ ಯಕ್ಷ ಪ್ರಶ್ನೆಗಳಿಗೆ ಇವತ್ತಿನ ಸಂಚಿಕೆಯಲ್ಲಿ ಪ್ರೇಕ್ಷಕರಿಗೆ ಉತ್ತರ ಸಿಗಬಹುದು.

ಇದನ್ನೂ ಓದಿ : 34 ಲಕ್ಷ ಮತ ಪಡೆದು ಸೇಫ್​ ಆದ್ರೂ ಹೊರಹೋಗುತ್ತೇನೆಂದ ವರ್ತೂರು ಸಂತೋಷ್: ಕುತೂಹಲ ಮೂಡಿಸಿದ ಕಿಚ್ಚನ ವಾರದ ಕಥೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.