ETV Bharat / entertainment

ಬಿಗ್​ ಬಾಸ್​ ಮನೆಗೆ ವರ್ತೂರು ಸಂತೋಷ್​ ರೀ ಎಂಟ್ರಿ

Kannada Big Boss: ಬಿಗ್​ಬಾಸ್​ ಮನೆಯಿಂದ ಅನಿರೀಕ್ಷಿತವಾಗಿ ಎಕ್ಸಿಟ್​ ಆಗಿದ್ದ ಸೀಸನ್​ 10ರ ಸ್ಪರ್ಧಿ ​ವರ್ತೂರು ಸಂತೋಷ್ ಮತ್ತೆ ರೀ ಎಂಟ್ರಿ ಕೊಟ್ಟಿದ್ದಾರೆ.

author img

By ETV Bharat Karnataka Team

Published : Oct 31, 2023, 6:45 AM IST

Updated : Oct 31, 2023, 7:30 AM IST

ಬಿಗ್​ ಬಾಸ್​ ಮನೆಗೆ ವರ್ತೂರು ಸಂತೋಷ್​ ರೀ ಎಂಟ್ರಿ
ಬಿಗ್​ ಬಾಸ್​ ಮನೆಗೆ ವರ್ತೂರು ಸಂತೋಷ್​ ರೀ ಎಂಟ್ರಿ

ಬೆಂಗಳೂರು: ಹುಲಿ ಉಗುರಿನ ಡಾಲರ್​ ಧರಿಸಿದ ಆರೋಪದ ಮೇಲೆ ಬಂಧಿತರಾಗಿದ್ದ ಕನ್ನಡ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​ 10ರ ಸ್ಪರ್ಧಿ ಹಳ್ಳಿಕಾರ್​ ಖ್ಯಾತಿಯ ವರ್ತೂರು​ ಸಂತೋಷ್​ ಮತ್ತೆ ಬಿಗ್​ ಬಾಸ್​ ಮನೆಗೆ ರೀ ಎಂಟ್ರಿ ಕೊಟ್ಟು ಸ್ಪರ್ಧಾರ್ತಿಗಳಿಗೆ ಸರ್​ಪ್ರೈಸ್​ ಕೊಟ್ಟಿದ್ದಾರೆ. ಹುಲಿ ಉಗುರಿನ ಡಾಲರ್​ ಧಾರಣೆ ಪ್ರಕರಣದಲ್ಲಿ ಅ.22ರಂದು ಬಿಗ್​ ಬಾಸ್​ ಮನೆಯಿಂದಲೇ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಇದರಿಂದ ಅನಿರೀಕ್ಷಿತವಾಗಿ ಮನೆಯಿಂದ ಎಕ್ಸಿಟ್​​ ಆಗಿದ್ದ ಅವರು ಮತ್ತೆ ಬಿಗ್​ ಬಾಸ್​ ಮನೆ ಸೇರಿಕೊಂಡಿದ್ದಾರೆ.

ಅರಣ್ಯಾಧಿಕಾರಿಗಳಿಂದ ಬಂಧನ: ಸಂತೋಷ್ ಹುಲಿಯ ಉಗುರಿನ ಡಾಲರ್​ಅನ್ನು ಧರಿಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಮಾಡಿದ್ದಾರೆ ಎಂದು ಅವರ ವಿರುದ್ಧ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವರ್ತೂರು ಸಂತೋಷ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ, ಅವರ ಬಳಿಯಿದ್ದ ಡಾಲರ್ ಜಪ್ತಿ ಮಾಡಿಕೊಂಡಿದ್ದರು.

ಷರತ್ತುಬದ್ದ ಜಾಮೀನು: ಸಂತೋಷ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಂಧನ ಆಗುತ್ತಿದ್ದಂತೆ ಸಂತೋಷ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಿಚಾರಣೆ ನಡೆಸಿದ 2ನೇ ಎಸಿಜೆಎಂ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ನಾಲ್ಕು ಸಾವಿರ ನಗದು ಭದ್ರತೆ ಹಾಗೂ ಒಬ್ಬರ ಶ್ಯೂರಿಟಿ ಒದಗಿಸುವಂತೆ ತಿಳಿಸಿ ಜಾಮೀನು ನೀಡಿತ್ತು. ಸಂತೋಷ್ ಪರ ವಕೀಲ ನಟರಾಜ್ ಹಾಗೂ ಸರ್ಕಾರಿ ಅಭಿಯೋಜಕರು ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದರು. ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು‌ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ್ದರು.

ಕಳೆದ ವಾರ ಬಿಡುಗಡೆ: ಬಂಧನಕ್ಕೊಳಗಾಗಿ 5 ದಿನಗಳ ನಂತರ ಅಂದರೆ ಅ.27ರಂದು ಅವರನ್ನು ಬಿಡುಗಡೆ ಮಾಡಲಾಗಿತ್ತು. ಅವರ ಅಭಿಮಾನಿಗಳು ಹಾಗೂ ಕುಟುಂಬಸ್ಥರು ಸಂಭ್ರಮದಿಂದ ಸಂತೋಷ್ ಅವರನ್ನು ಬರಮಾಡಿಕೊಂಡಿದ್ದರು.

ಸಂತೋಷ್​ ಪರ ವಕೀಲ್​ ಹೇಳಿಕೆ: ಇದೊಂದು ಷಡ್ಯಂತ್ರ ಎಂದು ತೋರುತ್ತದೆ. ಸಮನ್ಸ್ ಪ್ರಕರಣ. ಕನಿಷ್ಟ ಏಳು ವರ್ಷಗಳ ಸಜಾ ಒಳಪಟ್ಟ ಪ್ರಕರಣದಲ್ಲಿ ಮೊದಲು ಸೂಚನೆ ನೀಡಿ, ನಂತರ ಬಂಧಿಸಬೇಕಿತ್ತು. ಏಕಾಏಕಿ ಬಂಧಿಸಿ ಹತ್ತು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕೃಷಿ ಕುಟುಂಬದ ಹಿನ್ನೆಲೆ ಹೊಂದಿರುವ ಸಂತೋಷ್‌ ವಿರುದ್ಧ ಯಾವುದೇ ಅಪರಾಧ ಪ್ರಕರಣಗಳಿಲ್ಲ. ಹುಲಿ‌ ಉಗುರಿನ‌‌ ಡಾಲರ್ ಧರಿಸಿರುವ ಆರೋಪದಡಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ನನ್ನ‌ ಕಕ್ಷಿದಾರರನ್ನು ವೀರಪ್ಪನ್ ರೀತಿಯಲ್ಲಿ ನಡೆಸಿಕೊಂಡಿದ್ದಾರೆ. ಹುಲಿ ಉಗುರು ಪೆಂಡೆಂಟ್ ಹೊಂದಿರುವ ನಟ, ನಿರ್ಮಾಪಕರಿಗೆ ನೋಟಿಸ್ ಜಾರಿ ಮಾಡಿರುವ ಅಧಿಕಾರಿಗಳು ಸಂತೋಷ್ ಬಂಧನಕ್ಕೂ ಮುನ್ನ ಯಾಕೆ ನೋಟಿಸ್ ಜಾರಿ ಮಾಡಿಲ್ಲ ಎಂದು ಸಂತೋಷ್ ಪರ ವಕೀಲ ನಟರಾಜ್ ಎಂಬುವವರು ಘಟನೆಗೆ ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿ: ಕಾಫಿ ವಿತ್​​ ಕರಣ್ ಪ್ರೋಮೋ ರಿಲೀಸ್​.. ಡಿಯೋಲ್ ಬ್ರದರ್ಸ್ ಮುಂದಿನ ಅತಿಥಿಗಳು

ಬೆಂಗಳೂರು: ಹುಲಿ ಉಗುರಿನ ಡಾಲರ್​ ಧರಿಸಿದ ಆರೋಪದ ಮೇಲೆ ಬಂಧಿತರಾಗಿದ್ದ ಕನ್ನಡ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​ 10ರ ಸ್ಪರ್ಧಿ ಹಳ್ಳಿಕಾರ್​ ಖ್ಯಾತಿಯ ವರ್ತೂರು​ ಸಂತೋಷ್​ ಮತ್ತೆ ಬಿಗ್​ ಬಾಸ್​ ಮನೆಗೆ ರೀ ಎಂಟ್ರಿ ಕೊಟ್ಟು ಸ್ಪರ್ಧಾರ್ತಿಗಳಿಗೆ ಸರ್​ಪ್ರೈಸ್​ ಕೊಟ್ಟಿದ್ದಾರೆ. ಹುಲಿ ಉಗುರಿನ ಡಾಲರ್​ ಧಾರಣೆ ಪ್ರಕರಣದಲ್ಲಿ ಅ.22ರಂದು ಬಿಗ್​ ಬಾಸ್​ ಮನೆಯಿಂದಲೇ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಇದರಿಂದ ಅನಿರೀಕ್ಷಿತವಾಗಿ ಮನೆಯಿಂದ ಎಕ್ಸಿಟ್​​ ಆಗಿದ್ದ ಅವರು ಮತ್ತೆ ಬಿಗ್​ ಬಾಸ್​ ಮನೆ ಸೇರಿಕೊಂಡಿದ್ದಾರೆ.

ಅರಣ್ಯಾಧಿಕಾರಿಗಳಿಂದ ಬಂಧನ: ಸಂತೋಷ್ ಹುಲಿಯ ಉಗುರಿನ ಡಾಲರ್​ಅನ್ನು ಧರಿಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಮಾಡಿದ್ದಾರೆ ಎಂದು ಅವರ ವಿರುದ್ಧ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವರ್ತೂರು ಸಂತೋಷ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ, ಅವರ ಬಳಿಯಿದ್ದ ಡಾಲರ್ ಜಪ್ತಿ ಮಾಡಿಕೊಂಡಿದ್ದರು.

ಷರತ್ತುಬದ್ದ ಜಾಮೀನು: ಸಂತೋಷ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಂಧನ ಆಗುತ್ತಿದ್ದಂತೆ ಸಂತೋಷ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಿಚಾರಣೆ ನಡೆಸಿದ 2ನೇ ಎಸಿಜೆಎಂ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ನಾಲ್ಕು ಸಾವಿರ ನಗದು ಭದ್ರತೆ ಹಾಗೂ ಒಬ್ಬರ ಶ್ಯೂರಿಟಿ ಒದಗಿಸುವಂತೆ ತಿಳಿಸಿ ಜಾಮೀನು ನೀಡಿತ್ತು. ಸಂತೋಷ್ ಪರ ವಕೀಲ ನಟರಾಜ್ ಹಾಗೂ ಸರ್ಕಾರಿ ಅಭಿಯೋಜಕರು ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದರು. ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು‌ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ್ದರು.

ಕಳೆದ ವಾರ ಬಿಡುಗಡೆ: ಬಂಧನಕ್ಕೊಳಗಾಗಿ 5 ದಿನಗಳ ನಂತರ ಅಂದರೆ ಅ.27ರಂದು ಅವರನ್ನು ಬಿಡುಗಡೆ ಮಾಡಲಾಗಿತ್ತು. ಅವರ ಅಭಿಮಾನಿಗಳು ಹಾಗೂ ಕುಟುಂಬಸ್ಥರು ಸಂಭ್ರಮದಿಂದ ಸಂತೋಷ್ ಅವರನ್ನು ಬರಮಾಡಿಕೊಂಡಿದ್ದರು.

ಸಂತೋಷ್​ ಪರ ವಕೀಲ್​ ಹೇಳಿಕೆ: ಇದೊಂದು ಷಡ್ಯಂತ್ರ ಎಂದು ತೋರುತ್ತದೆ. ಸಮನ್ಸ್ ಪ್ರಕರಣ. ಕನಿಷ್ಟ ಏಳು ವರ್ಷಗಳ ಸಜಾ ಒಳಪಟ್ಟ ಪ್ರಕರಣದಲ್ಲಿ ಮೊದಲು ಸೂಚನೆ ನೀಡಿ, ನಂತರ ಬಂಧಿಸಬೇಕಿತ್ತು. ಏಕಾಏಕಿ ಬಂಧಿಸಿ ಹತ್ತು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕೃಷಿ ಕುಟುಂಬದ ಹಿನ್ನೆಲೆ ಹೊಂದಿರುವ ಸಂತೋಷ್‌ ವಿರುದ್ಧ ಯಾವುದೇ ಅಪರಾಧ ಪ್ರಕರಣಗಳಿಲ್ಲ. ಹುಲಿ‌ ಉಗುರಿನ‌‌ ಡಾಲರ್ ಧರಿಸಿರುವ ಆರೋಪದಡಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ನನ್ನ‌ ಕಕ್ಷಿದಾರರನ್ನು ವೀರಪ್ಪನ್ ರೀತಿಯಲ್ಲಿ ನಡೆಸಿಕೊಂಡಿದ್ದಾರೆ. ಹುಲಿ ಉಗುರು ಪೆಂಡೆಂಟ್ ಹೊಂದಿರುವ ನಟ, ನಿರ್ಮಾಪಕರಿಗೆ ನೋಟಿಸ್ ಜಾರಿ ಮಾಡಿರುವ ಅಧಿಕಾರಿಗಳು ಸಂತೋಷ್ ಬಂಧನಕ್ಕೂ ಮುನ್ನ ಯಾಕೆ ನೋಟಿಸ್ ಜಾರಿ ಮಾಡಿಲ್ಲ ಎಂದು ಸಂತೋಷ್ ಪರ ವಕೀಲ ನಟರಾಜ್ ಎಂಬುವವರು ಘಟನೆಗೆ ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿ: ಕಾಫಿ ವಿತ್​​ ಕರಣ್ ಪ್ರೋಮೋ ರಿಲೀಸ್​.. ಡಿಯೋಲ್ ಬ್ರದರ್ಸ್ ಮುಂದಿನ ಅತಿಥಿಗಳು

Last Updated : Oct 31, 2023, 7:30 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.