ETV Bharat / headlines

ರಾಜಧಾನಿಯ ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ 100 ಬೆಡ್‌ಗಳ ಹೈಟೆಕ್‌ ಆಸ್ಪತ್ರೆ: ಡಿಸಿಎಂ

author img

By

Published : May 15, 2021, 8:27 PM IST

ಮಧ್ಯಮ ವರ್ಗ ಹಾಗೂ ಬಡವರಿಗೆ ಚಿಕಿತ್ಸೆ ಬಹಳ ದುಬಾರಿಯಾಗಿದೆ. ಇರುವ ಬೌರಿಂಗ್‌, ವಿಕ್ಟೋರಿಯಾ, ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಒತ್ತಡ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಈ ಆಸ್ಪತ್ರೆಗಳಲ್ಲಿ ನಗರದಲ್ಲಿ ವಾಸ ಮಾಡುವ ಕಟ್ಟಕಡೆಯ ವ್ಯಕ್ತಿಗೂ ಅತ್ಯುತ್ತಮ ಚಿಕಿತ್ಸೆ ಕೊಡಬೇಕಿದೆ.

State Covid Task Force Meeting
State Covid Task Force Meeting

ಬೆಂಗಳೂರು: ಸುಮಾರು ಒಂದೂವರೆ ಕೋಟಿಗೂ ಹೆಚ್ಚು ಜನಸಂಖ್ಯೆ ಇರುವ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಇರುವ ವ್ಯವಸ್ಥೆಯನ್ನೇ ಅಮೂಲಾಗ್ರವಾಗಿ ಸುಧಾರಿಸಲು ರಾಜ್ಯ ಕೋವಿಡ್‌ ಕಾರ್ಯಪಡೆಯು ತಜ್ಞರ ವರದಿ ಪಡೆಯಲು ನಿರ್ಧರಿಸಿದೆ. ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ಇಂದು ನಡೆದ ಕಾರ್ಯಪಡೆ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ. ಸಭೆಯ ನಂತರ ಡಿಸಿಎಂ ಮಾಹಿತಿ ನೀಡಿದರು.

ಡಿಸಿಎಂ ಇಟ್ಟ ಪ್ರಸ್ತಾಪನೆ ಏನು?
ಬೆಂಗಳೂರು ನಗರ ಆರೋಗ್ಯ ವ್ಯವಸ್ಥೆಯನ್ನು ಬಿಬಿಎಂಪಿ ವ್ಯಾಪ್ತಿಯಿಂದ ತೆಗೆದು ಆರೋಗ್ಯ ಇಲಾಖೆಗೆ ವಹಿಸುವುದು. ನಗರದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ 100 ಹಾಸಿಗೆಗಳ ಸುಸಜ್ಜಿತ, ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳುಳ್ಳ ಸೆಕೆಂಡರಿ ಆಸ್ಪತ್ರೆ ಸ್ಥಾಪನೆ, ನಾಲ್ಕು ವಿಧಾನಸಭೆ ಕ್ಷೇತ್ರಗಳಿಗೊಂದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುವುದು.

ಮಧ್ಯಮ ವರ್ಗ ಹಾಗೂ ಬಡವರಿಗೆ ಚಿಕಿತ್ಸೆ ಬಹಳ ದುಬಾರಿಯಾಗಿದೆ. ಇರುವ ಬೌರಿಂಗ್‌, ವಿಕ್ಟೋರಿಯಾ, ಕೆ.ಸಿ.ಜನರಲ್‌ ನಂತಹ ಆಸ್ಪತ್ರೆಯಲ್ಲಿ ಒತ್ತಡ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಈ ಆಸ್ಪತ್ರೆಗಳಲ್ಲಿ ನಗರದಲ್ಲಿ ವಾಸ ಮಾಡುವ ಕಟ್ಟಕಡೆಯ ವ್ಯಕ್ತಿಗೂ ಅತ್ಯುತ್ತಮ ಚಿಕಿತ್ಸೆ ಕೊಡಬೇಕಿದೆ. ನಗರದಲ್ಲಿ ಸರ್ಕಾರದ ಉಸ್ತುವಾರಿಯಲ್ಲಿ ಅನೇಕ ಆಸ್ಪತ್ರೆಗಳಿವೆ. ಈ ಪೈಕಿ ಕೆಲವು ವೈದ್ಯ ಶಿಕ್ಷಣ ಇಲಾಖೆ, ಇನ್ನು ಕೆಲವು ಆರೋಗ್ಯ ಇಲಾಖೆ, ಮತ್ತೆ ಇನ್ನು ಕೆಲವು ಬಿಬಿಎಂಪಿ ಅಧೀನದಲ್ಲಿವೆ. ಹೀಗಾಗಿ ಸರಿಯಾದ ಸಮನ್ವಯತೆ ಇಲ್ಲ, ಹೊಂದಾಣಿಕೆ ಕಾಣುತ್ತಿಲ್ಲ. ಪರಿಣಾಮ ಜನರು ಸಂಕಷ್ಟಕ್ಕೆ ಗುರಿಯಾಗುತ್ತಿದ್ದಾರೆ. ಹೀಗಾಗಿ ಈ ಎಲ್ಲ ಆಸ್ಪತ್ರೆಗಳನ್ನು ಒಟ್ಟಾರೆಯಾಗಿ ಆರೋಗ್ಯ ಇಲಾಖೆಯ ಅಧೀನಕ್ಕೆ ತಂದು ಅದಕ್ಕೊಂದು ಪ್ರತ್ಯೇಕ ವ್ಯವಸ್ಥೆ ಮಾಡುವುದು ಒಳ್ಳೆಯದು ಎಂದು ಡಿಸಿಎಂ ಪ್ರಸ್ತಾಪಿಸಿದರು. ಇಡೀ ಬೆಂಗಳೂರಿನ ಆರೋಗ್ಯ ವ್ಯವಸ್ಥೆಯ ಉಸ್ತುವಾರಿ ನೋಡಿಕೊಳ್ಳಲು ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸಬೇಕು.

ಚರ್ಚೆ ಮತ್ತು ಉತ್ತಮ ಪ್ರತಿಕ್ರಿಯೆ :

ಡಿಸಿಎಂ ಅವರ ಪ್ರಸ್ತಾವನೆ ಬಗ್ಗೆ ಸಭೆಯಲ್ಲಿ ವ್ಯಾಪಕ ಚರ್ಚೆ ನಡೆಯಿತು. ಸಚಿವರಾದ ಡಾ.ಸುಧಾಕರ್‌, ಸುರೇಶ್‌ ಕುಮಾರ್‌ ಹಾಗೂ ಉನ್ನತ ಅಧಿಕಾರಿಗಳಿಂದ ಈ ಪ್ರಸ್ತಾವನೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. ಬೆಂಗಳೂರು ನಗರದಲ್ಲಿ ಇಂಥ ವ್ಯವಸ್ಥೆ ಆಗಲೇಬೇಕು ಎಂದು ಇಬ್ಬರು ಸಚಿವರು ಪ್ರತಿಪಾದಿಸಿದರಲ್ಲದೇ, ಶೀಘ್ರದಲ್ಲಿಯೇ ಈ ಬಗ್ಗೆ ತಜ್ಞರ ವರದಿ ಸ್ವೀಕರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಉತ್ತಮ ಎಂದು ಸಲಹೆ ಮಾಡಿದರು.

ಬೆಂಗಳೂರು ನಗರದಲ್ಲಿ ಬಿಬಿಎಂಪಿಗೆ ಇತರ ಕ್ಷೇತ್ರಗಳಲ್ಲಿ ಮಾಡಲು ಸಾಕಷ್ಟು ಕೆಲಸವಿದೆ. ಆರೋಗ್ಯ ಕ್ಷೇತ್ರಕ್ಕೆ ವಿಶೇಷ ಗಮನ ಕೊಡುವುದು ಅದಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ತಾಂತ್ರಿಕ, ಆಡಳಿತಾತ್ಮಕ ಸೇರಿದಂತೆ ಎಲ್ಲ ಅಂಶಗಳ ಬಗ್ಗೆ ಅಧ್ಯಯನ ಮಾಡಿ ವರದಿ ಕೊಡುವಂತೆ ತಜ್ಞರನ್ನು ಕೋರಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದರು.

ಬೆಂಗಳೂರು: ಸುಮಾರು ಒಂದೂವರೆ ಕೋಟಿಗೂ ಹೆಚ್ಚು ಜನಸಂಖ್ಯೆ ಇರುವ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಇರುವ ವ್ಯವಸ್ಥೆಯನ್ನೇ ಅಮೂಲಾಗ್ರವಾಗಿ ಸುಧಾರಿಸಲು ರಾಜ್ಯ ಕೋವಿಡ್‌ ಕಾರ್ಯಪಡೆಯು ತಜ್ಞರ ವರದಿ ಪಡೆಯಲು ನಿರ್ಧರಿಸಿದೆ. ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ಇಂದು ನಡೆದ ಕಾರ್ಯಪಡೆ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ. ಸಭೆಯ ನಂತರ ಡಿಸಿಎಂ ಮಾಹಿತಿ ನೀಡಿದರು.

ಡಿಸಿಎಂ ಇಟ್ಟ ಪ್ರಸ್ತಾಪನೆ ಏನು?
ಬೆಂಗಳೂರು ನಗರ ಆರೋಗ್ಯ ವ್ಯವಸ್ಥೆಯನ್ನು ಬಿಬಿಎಂಪಿ ವ್ಯಾಪ್ತಿಯಿಂದ ತೆಗೆದು ಆರೋಗ್ಯ ಇಲಾಖೆಗೆ ವಹಿಸುವುದು. ನಗರದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ 100 ಹಾಸಿಗೆಗಳ ಸುಸಜ್ಜಿತ, ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳುಳ್ಳ ಸೆಕೆಂಡರಿ ಆಸ್ಪತ್ರೆ ಸ್ಥಾಪನೆ, ನಾಲ್ಕು ವಿಧಾನಸಭೆ ಕ್ಷೇತ್ರಗಳಿಗೊಂದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುವುದು.

ಮಧ್ಯಮ ವರ್ಗ ಹಾಗೂ ಬಡವರಿಗೆ ಚಿಕಿತ್ಸೆ ಬಹಳ ದುಬಾರಿಯಾಗಿದೆ. ಇರುವ ಬೌರಿಂಗ್‌, ವಿಕ್ಟೋರಿಯಾ, ಕೆ.ಸಿ.ಜನರಲ್‌ ನಂತಹ ಆಸ್ಪತ್ರೆಯಲ್ಲಿ ಒತ್ತಡ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಈ ಆಸ್ಪತ್ರೆಗಳಲ್ಲಿ ನಗರದಲ್ಲಿ ವಾಸ ಮಾಡುವ ಕಟ್ಟಕಡೆಯ ವ್ಯಕ್ತಿಗೂ ಅತ್ಯುತ್ತಮ ಚಿಕಿತ್ಸೆ ಕೊಡಬೇಕಿದೆ. ನಗರದಲ್ಲಿ ಸರ್ಕಾರದ ಉಸ್ತುವಾರಿಯಲ್ಲಿ ಅನೇಕ ಆಸ್ಪತ್ರೆಗಳಿವೆ. ಈ ಪೈಕಿ ಕೆಲವು ವೈದ್ಯ ಶಿಕ್ಷಣ ಇಲಾಖೆ, ಇನ್ನು ಕೆಲವು ಆರೋಗ್ಯ ಇಲಾಖೆ, ಮತ್ತೆ ಇನ್ನು ಕೆಲವು ಬಿಬಿಎಂಪಿ ಅಧೀನದಲ್ಲಿವೆ. ಹೀಗಾಗಿ ಸರಿಯಾದ ಸಮನ್ವಯತೆ ಇಲ್ಲ, ಹೊಂದಾಣಿಕೆ ಕಾಣುತ್ತಿಲ್ಲ. ಪರಿಣಾಮ ಜನರು ಸಂಕಷ್ಟಕ್ಕೆ ಗುರಿಯಾಗುತ್ತಿದ್ದಾರೆ. ಹೀಗಾಗಿ ಈ ಎಲ್ಲ ಆಸ್ಪತ್ರೆಗಳನ್ನು ಒಟ್ಟಾರೆಯಾಗಿ ಆರೋಗ್ಯ ಇಲಾಖೆಯ ಅಧೀನಕ್ಕೆ ತಂದು ಅದಕ್ಕೊಂದು ಪ್ರತ್ಯೇಕ ವ್ಯವಸ್ಥೆ ಮಾಡುವುದು ಒಳ್ಳೆಯದು ಎಂದು ಡಿಸಿಎಂ ಪ್ರಸ್ತಾಪಿಸಿದರು. ಇಡೀ ಬೆಂಗಳೂರಿನ ಆರೋಗ್ಯ ವ್ಯವಸ್ಥೆಯ ಉಸ್ತುವಾರಿ ನೋಡಿಕೊಳ್ಳಲು ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸಬೇಕು.

ಚರ್ಚೆ ಮತ್ತು ಉತ್ತಮ ಪ್ರತಿಕ್ರಿಯೆ :

ಡಿಸಿಎಂ ಅವರ ಪ್ರಸ್ತಾವನೆ ಬಗ್ಗೆ ಸಭೆಯಲ್ಲಿ ವ್ಯಾಪಕ ಚರ್ಚೆ ನಡೆಯಿತು. ಸಚಿವರಾದ ಡಾ.ಸುಧಾಕರ್‌, ಸುರೇಶ್‌ ಕುಮಾರ್‌ ಹಾಗೂ ಉನ್ನತ ಅಧಿಕಾರಿಗಳಿಂದ ಈ ಪ್ರಸ್ತಾವನೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. ಬೆಂಗಳೂರು ನಗರದಲ್ಲಿ ಇಂಥ ವ್ಯವಸ್ಥೆ ಆಗಲೇಬೇಕು ಎಂದು ಇಬ್ಬರು ಸಚಿವರು ಪ್ರತಿಪಾದಿಸಿದರಲ್ಲದೇ, ಶೀಘ್ರದಲ್ಲಿಯೇ ಈ ಬಗ್ಗೆ ತಜ್ಞರ ವರದಿ ಸ್ವೀಕರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಉತ್ತಮ ಎಂದು ಸಲಹೆ ಮಾಡಿದರು.

ಬೆಂಗಳೂರು ನಗರದಲ್ಲಿ ಬಿಬಿಎಂಪಿಗೆ ಇತರ ಕ್ಷೇತ್ರಗಳಲ್ಲಿ ಮಾಡಲು ಸಾಕಷ್ಟು ಕೆಲಸವಿದೆ. ಆರೋಗ್ಯ ಕ್ಷೇತ್ರಕ್ಕೆ ವಿಶೇಷ ಗಮನ ಕೊಡುವುದು ಅದಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ತಾಂತ್ರಿಕ, ಆಡಳಿತಾತ್ಮಕ ಸೇರಿದಂತೆ ಎಲ್ಲ ಅಂಶಗಳ ಬಗ್ಗೆ ಅಧ್ಯಯನ ಮಾಡಿ ವರದಿ ಕೊಡುವಂತೆ ತಜ್ಞರನ್ನು ಕೋರಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.