ETV Bharat / international

ಮುಂಬೈ ದಾಳಿಕೋರರ ವಿರುದ್ಧ ಕ್ರಮಕೈಗೊಳ್ಳಲು ಹಿಂಜರಿಯುತ್ತಿರುವುದು ಪಾಕ್​ನ ಅಪ್ರಾಮಾಣಿಕತೆಯನ್ನು ಬಿಂಬಿಸುತ್ತದೆ

author img

By

Published : Nov 24, 2020, 7:29 PM IST

ತನ್ನ ಮಣ್ಣಿನಿಂದ ಹೊರಹೊಮ್ಮುತ್ತಿರುವ ಭಯೋತ್ಪಾದನೆಯನ್ನು ಮಟ್ಟ ಹಾಕುವಲ್ಲಿ ಪಾಕಿಸ್ತಾನಕ್ಕೆ ಗಂಭೀರತೆಯ ಕೊರತೆಯಿದೆ ಎಂದು ಪೆಂಟಗಾನ್‌ನ ಮಾಜಿ ಅಧಿಕಾರಿ ಮೈಕೆಲ್ ರುಬಿನ್ ಹೇಳಿದ್ದಾರೆ.

Pakistan's insincere approach on Mumbai attacks
ಪಾಕ್ ವಿರುದ್ಧ ಪೆಂಟಗಾನ್ ಅಧಿಕಾರಿ ಕಿಡಿ

ಇಸ್ಲಾಮಾಬಾದ್ : ಆರು ಅಮೆರಿಕನ್ನರು ಸೇರಿದಂತೆ 160 ಜನರನ್ನು ಬಲಿ ಪಡೆದ 26/11 ರ ಮುಂಬೈ ಭಯೋತ್ಪಾದಕ ದಾಳಿ ನಡೆಸಿದವರ ವಿರುದ್ಧ ಕ್ರಮಕೈಗೊಳ್ಳಲು ಪಾಕಿಸ್ತಾನ ಹಿಂಜರಿಯುತ್ತಿದೆ. ತನ್ನ ಮಣ್ಣಿನಿಂದ ಹೊರಹೊಮ್ಮುತ್ತಿರುವ ಭಯೋತ್ಪಾದನೆಯನ್ನು ಮಟ್ಟ ಹಾಕುವಲ್ಲಿ ಪಾಕಿಸ್ತಾನಕ್ಕೆ ಗಂಭೀರತೆಯ ಕೊರತೆಯಿದೆ ಎಂದು ಪೆಂಟಗನ್‌ನ ಮಾಜಿ ಅಧಿಕಾರಿ ಮೈಕೆಲ್ ರುಬಿನ್ ಹೇಳಿದ್ದಾರೆ.

ವಾಷಿಂಗ್ಟನ್ ಎಕ್ಸಾಮೈನರ್​ನಲ್ಲಿ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಅಮೆರಿಕನ್ ಎಂಟರ್​ಪ್ರೈಸಸ್​ ಇನ್​ಸ್ಟಿಟ್ಯೂಟ್​ನ ವಿದ್ವಾಂಸ ರುಬಿನ್​, ಡಝನ್​ಗಟ್ಟಲೆ ರಾಷ್ಟ್ರಗಳ ನಾಗರಿಕರು ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಗೆ ಬಲಿಯಾಗಿದ್ದಾರೆ. ಮುಂಬೈ ದಾಳಿಯಲ್ಲಿ ಯುಎಸ್, ಭಾರತ ಮಾತ್ರವಲ್ಲದೆ ಆಸ್ಟ್ರೇಲಿಯಾ, ಕೆನಡಾ, ಫ್ರಾನ್ಸ್, ಇಟಲಿ, ಯುನೈಟೆಡ್ ಕಿಂಗ್‌ಡಂ, ಜಪಾನ್, ಇಸ್ರೇಲ್, ನೆದರ್‌ಲ್ಯಾಂಡ್ಸ್, ಜೋರ್ಡಾನ್, ಮಲೇಷ್ಯಾ, ಮೆಕ್ಸಿಕೊ, ಸಿಂಗಾಪುರ್ ಮತ್ತು ಮಾರಿಷಸ್​ನ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದಿದ್ದಾರೆ. ಮುಂಬೈನ ದಾಳಿಯಲ್ಲಿ ಕೇವಲ ಆರು ಅಮೆರಿಕನ್ನರು ಮೃತಪಟ್ಟಿದ್ದಾರೆ. ಆದರೆ, ಪಾಕ್​ ಪ್ರಾಯೋಜಿತ ತಾಲಿಬಾನ್ ದಾಳಿಯಲ್ಲಿ ಬಲಿಯಾದವರ ಸಂಖ್ಯೆ ಹೆಚ್ಚಿದೆ ಎಂದು ರುಬಿನ್ ಹೇಳಿದ್ದಾರೆ.

ನವೆಂಬರ್​ 26, 2008 ರಂದು ಮುಂಬೈ ತಾಜ್​ ಹೋಟೆಲ್​ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 166 ಜನ ಮೃತಪಟ್ಟಿದ್ದರು, 300 ಅಧಿಕ ಜನ ಗಾಯಗೊಂಡಿದ್ದರು. ಭೀಕರ ದಾಳಿಯಲ್ಲಿ ಭಾಗಿಯಾಗಿದ್ದ 9 ಭಯೋತ್ಪಾದಕರನ್ನು ಸೇನೆ ಹೊಡೆದಿರುಳಿಸಿತ್ತು, ಜೀವಂತವಾಗಿ ಸೆರೆ ಸಿಕ್ಕ ಅಜ್ಮಲ್​ ಅಮೀರ್​ ಕಸಬ್​ನನ್ನು ಯೆರವಾಡ ಕೇಂದ್ರ ಕಾರಾಗೃಹದಲ್ಲಿ 11 ನವೆಂಬರ್​ 2012 ರಂದು ಗಲ್ಲಿಗೇರಿಸಲಾಯಿತು.

ಇಸ್ಲಾಮಾಬಾದ್ : ಆರು ಅಮೆರಿಕನ್ನರು ಸೇರಿದಂತೆ 160 ಜನರನ್ನು ಬಲಿ ಪಡೆದ 26/11 ರ ಮುಂಬೈ ಭಯೋತ್ಪಾದಕ ದಾಳಿ ನಡೆಸಿದವರ ವಿರುದ್ಧ ಕ್ರಮಕೈಗೊಳ್ಳಲು ಪಾಕಿಸ್ತಾನ ಹಿಂಜರಿಯುತ್ತಿದೆ. ತನ್ನ ಮಣ್ಣಿನಿಂದ ಹೊರಹೊಮ್ಮುತ್ತಿರುವ ಭಯೋತ್ಪಾದನೆಯನ್ನು ಮಟ್ಟ ಹಾಕುವಲ್ಲಿ ಪಾಕಿಸ್ತಾನಕ್ಕೆ ಗಂಭೀರತೆಯ ಕೊರತೆಯಿದೆ ಎಂದು ಪೆಂಟಗನ್‌ನ ಮಾಜಿ ಅಧಿಕಾರಿ ಮೈಕೆಲ್ ರುಬಿನ್ ಹೇಳಿದ್ದಾರೆ.

ವಾಷಿಂಗ್ಟನ್ ಎಕ್ಸಾಮೈನರ್​ನಲ್ಲಿ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಅಮೆರಿಕನ್ ಎಂಟರ್​ಪ್ರೈಸಸ್​ ಇನ್​ಸ್ಟಿಟ್ಯೂಟ್​ನ ವಿದ್ವಾಂಸ ರುಬಿನ್​, ಡಝನ್​ಗಟ್ಟಲೆ ರಾಷ್ಟ್ರಗಳ ನಾಗರಿಕರು ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಗೆ ಬಲಿಯಾಗಿದ್ದಾರೆ. ಮುಂಬೈ ದಾಳಿಯಲ್ಲಿ ಯುಎಸ್, ಭಾರತ ಮಾತ್ರವಲ್ಲದೆ ಆಸ್ಟ್ರೇಲಿಯಾ, ಕೆನಡಾ, ಫ್ರಾನ್ಸ್, ಇಟಲಿ, ಯುನೈಟೆಡ್ ಕಿಂಗ್‌ಡಂ, ಜಪಾನ್, ಇಸ್ರೇಲ್, ನೆದರ್‌ಲ್ಯಾಂಡ್ಸ್, ಜೋರ್ಡಾನ್, ಮಲೇಷ್ಯಾ, ಮೆಕ್ಸಿಕೊ, ಸಿಂಗಾಪುರ್ ಮತ್ತು ಮಾರಿಷಸ್​ನ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದಿದ್ದಾರೆ. ಮುಂಬೈನ ದಾಳಿಯಲ್ಲಿ ಕೇವಲ ಆರು ಅಮೆರಿಕನ್ನರು ಮೃತಪಟ್ಟಿದ್ದಾರೆ. ಆದರೆ, ಪಾಕ್​ ಪ್ರಾಯೋಜಿತ ತಾಲಿಬಾನ್ ದಾಳಿಯಲ್ಲಿ ಬಲಿಯಾದವರ ಸಂಖ್ಯೆ ಹೆಚ್ಚಿದೆ ಎಂದು ರುಬಿನ್ ಹೇಳಿದ್ದಾರೆ.

ನವೆಂಬರ್​ 26, 2008 ರಂದು ಮುಂಬೈ ತಾಜ್​ ಹೋಟೆಲ್​ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 166 ಜನ ಮೃತಪಟ್ಟಿದ್ದರು, 300 ಅಧಿಕ ಜನ ಗಾಯಗೊಂಡಿದ್ದರು. ಭೀಕರ ದಾಳಿಯಲ್ಲಿ ಭಾಗಿಯಾಗಿದ್ದ 9 ಭಯೋತ್ಪಾದಕರನ್ನು ಸೇನೆ ಹೊಡೆದಿರುಳಿಸಿತ್ತು, ಜೀವಂತವಾಗಿ ಸೆರೆ ಸಿಕ್ಕ ಅಜ್ಮಲ್​ ಅಮೀರ್​ ಕಸಬ್​ನನ್ನು ಯೆರವಾಡ ಕೇಂದ್ರ ಕಾರಾಗೃಹದಲ್ಲಿ 11 ನವೆಂಬರ್​ 2012 ರಂದು ಗಲ್ಲಿಗೇರಿಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.