ETV Bharat / international

ಗೊಂದಲದಲ್ಲಿದೆಯಾ ಪಾಕಿಸ್ತಾನ?: ವಾಯುಮಾರ್ಗ ಮುಚ್ಚುವ ನಿರ್ಧಾರ ಇಮ್ರಾನ್ ಖಾನ್​​ಗೆ ಬಿಟ್ಟಿದ್ದು ಎಂದ ಖುರೇಶಿ

ಕಾಶ್ಮೀರಕ್ಕೆ ಸಂಬಂಧಿಸಿದ ಆರ್ಟಿಕಲ್​ 370ರ ರದ್ದತಿ ಬಳಿಕ ಭಾರತದ ವಿಚಾರದಲ್ಲಿ ತಲೆಕೆಡಿಸಿಕೊಂಡಿರುವ ಪಾಕಿಸ್ತಾನ, ಸದ್ಯ ಭಾರತಕ್ಕೆ ತನ್ನ ವಾಯುಮಾರ್ಗವನ್ನ ಮುಚ್ಚುವ ನಿರ್ಧಾರದತ್ತ ಮುಖ ಮಾಡಿದೆ. ಆದರೆ, ಈ ಬಗ್ಗೆ ಇನ್ನೂ ಗೊಂದಲದಲ್ಲಿರುವ ಪಾಕಿಸ್ತಾನ ದಿಟ್ಟ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ.

author img

By

Published : Aug 29, 2019, 12:12 PM IST

ಪ್ರಧಾನಿ ಇಮ್ರಾನ್​ ಖಾನ್​

ಇಸ್ಲಮಾಬಾದ್​(ಪಾಕಿಸ್ತಾನ) : ಭಾರತಕ್ಕೆ ಪಾಕಿಸ್ತಾನದ ವಾಯು ಮಾರ್ಗವನ್ನು ಮುಚ್ಚುವ ವಿಚಾರದಲ್ಲಿ ಪ್ರಧಾನಿ ಇಮ್ರಾನ್​ ಖಾನ್​ ಸೂಕ್ತ ಮತ್ತು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಪಾಕ್​ ವಿದೇಶಾಂಗ ಸಚಿವ ಷಾ ಮಹಮ್ಮದ್​ ಖುರೇಶಿ ಸ್ಪಷ್ಟಪಡಿಸಿದ್ದಾರೆ.

ಈ ವಿಚಾರವನ್ನು ಸೂಕ್ಷ್ಮವಾಗಿ ಪರಿಗಣಿಸಿ, ಪ್ರಧಾನಿ ಇಮ್ರಾನ್​ ಖಾನ್​ ಜೊತೆಗೆ ಸಮಾಲೋಚನೆ ನಡೆಸಿದ ಬಳಿಕ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಅಂತಿಮ ನಿರ್ಧಾರ ಏನೇ ಇದ್ದರೂ ಅದು ಪ್ರಧಾನಿಗೆ ಬಿಟ್ಟಿದ್ದು ಎಂದು ಖುರೇಶಿ ತಿಳಿಸಿದ್ದಾರೆ.

ಆಗಸ್ಟ್ 28 ರಿಂದ ಆಗಸ್ಟ್ 31 ರವರೆಗೆ ಕರಾಚಿ ವಾಯುಪ್ರದೇಶದ ಮೂರು ಮಾರ್ಗಗಳನ್ನು ಮುಚ್ಚುವುದಾಗಿ ಪಾಕಿಸ್ತಾನ ನಾಗರಿಕ ವಿಮಾನಯಾನ ಪ್ರಾಧಿಕಾರ (ಸಿಎಎ) ವಾಯುಪಡೆಗೆ ನೋಟಿಸ್ ನೀಡಿತ್ತು. ಇದಾದ ಕೆಲವೇ ಗಂಟೆಗಳ ನಂತರ ಅವರು ಖುರೇಶಿ ಈ ಹೇಳಿಕೆ ನೀಡಿದ್ದಾರೆ.

ಬಾಲಾಕೋಟ್ ವಾಯುದಾಳಿ ನಡೆದ ಬಳಿಕ ಭಾರತದ ವಿಮಾನಗಳಿಗೆ ತನ್ನ ವಾಯುಮಾರ್ಗವನ್ನು ಮುಚ್ಚಿದ್ದ ಪಾಕಿಸ್ತಾನ ಕೆಲ ತಿಂಗಳ ಹಿಂದೆಯಷ್ಟೇ ಹಿಂಪಡೆದಿತ್ತು. ಆದರೆ, ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿ ಪಾಕಿಸ್ತಾನ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ಯಾವ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂಬ ಗೊಂದಲದಲ್ಲಿದೆ.

ಇಸ್ಲಮಾಬಾದ್​(ಪಾಕಿಸ್ತಾನ) : ಭಾರತಕ್ಕೆ ಪಾಕಿಸ್ತಾನದ ವಾಯು ಮಾರ್ಗವನ್ನು ಮುಚ್ಚುವ ವಿಚಾರದಲ್ಲಿ ಪ್ರಧಾನಿ ಇಮ್ರಾನ್​ ಖಾನ್​ ಸೂಕ್ತ ಮತ್ತು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಪಾಕ್​ ವಿದೇಶಾಂಗ ಸಚಿವ ಷಾ ಮಹಮ್ಮದ್​ ಖುರೇಶಿ ಸ್ಪಷ್ಟಪಡಿಸಿದ್ದಾರೆ.

ಈ ವಿಚಾರವನ್ನು ಸೂಕ್ಷ್ಮವಾಗಿ ಪರಿಗಣಿಸಿ, ಪ್ರಧಾನಿ ಇಮ್ರಾನ್​ ಖಾನ್​ ಜೊತೆಗೆ ಸಮಾಲೋಚನೆ ನಡೆಸಿದ ಬಳಿಕ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಅಂತಿಮ ನಿರ್ಧಾರ ಏನೇ ಇದ್ದರೂ ಅದು ಪ್ರಧಾನಿಗೆ ಬಿಟ್ಟಿದ್ದು ಎಂದು ಖುರೇಶಿ ತಿಳಿಸಿದ್ದಾರೆ.

ಆಗಸ್ಟ್ 28 ರಿಂದ ಆಗಸ್ಟ್ 31 ರವರೆಗೆ ಕರಾಚಿ ವಾಯುಪ್ರದೇಶದ ಮೂರು ಮಾರ್ಗಗಳನ್ನು ಮುಚ್ಚುವುದಾಗಿ ಪಾಕಿಸ್ತಾನ ನಾಗರಿಕ ವಿಮಾನಯಾನ ಪ್ರಾಧಿಕಾರ (ಸಿಎಎ) ವಾಯುಪಡೆಗೆ ನೋಟಿಸ್ ನೀಡಿತ್ತು. ಇದಾದ ಕೆಲವೇ ಗಂಟೆಗಳ ನಂತರ ಅವರು ಖುರೇಶಿ ಈ ಹೇಳಿಕೆ ನೀಡಿದ್ದಾರೆ.

ಬಾಲಾಕೋಟ್ ವಾಯುದಾಳಿ ನಡೆದ ಬಳಿಕ ಭಾರತದ ವಿಮಾನಗಳಿಗೆ ತನ್ನ ವಾಯುಮಾರ್ಗವನ್ನು ಮುಚ್ಚಿದ್ದ ಪಾಕಿಸ್ತಾನ ಕೆಲ ತಿಂಗಳ ಹಿಂದೆಯಷ್ಟೇ ಹಿಂಪಡೆದಿತ್ತು. ಆದರೆ, ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿ ಪಾಕಿಸ್ತಾನ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ಯಾವ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂಬ ಗೊಂದಲದಲ್ಲಿದೆ.

Intro:Body:

qureshi


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.