ETV Bharat / international

ಕುಲಭೂಷಣ್‌ ಜಾಧವ್‌ ಸಂಬಂಧ ಮಸೂದೆಯಲ್ಲಿನ ನ್ಯೂನತೆ ಸರಿಪಡಿಸಿ; ಪಾಕ್‌ಗೆ ಭಾರತ ತಾಕೀತು - ಭಾರತ

ಕುಲ್‌ಭೂಷಣ್‌ ಜಾಧವ್‌ ಸಂಬಂಧ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಂಡಿಸಲಾಗಿರುವ ಮಸೂದೆಯಲ್ಲಿ ಇರುವ ನ್ಯೂನತೆಗಳನ್ನು ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಭಾರತ ಒತ್ತಾಯಿಸಿದೆ.

India asks Pak to address shortcomings in bill relating to Kulbhushan Jadhav's right to appeal
ಕುಲ್‌ಭೂಷಣ್‌ ಜಾಧವ್‌ ಸಂಬಂಧ ಮಸೂದೆಯಲ್ಲಿನ ನ್ಯೂನತೆಗಳನ್ನ ಸರಿಪಡಿಸಿ; ಪಾಕ್‌ಗೆ ಭಾರತ ತಾಕೀತು
author img

By

Published : Jun 17, 2021, 8:43 PM IST

ನವದಹೆಲಿ: ಪಾಕ್‌ ಸೇನಾ ಕೋರ್ಟ್‌ನಿಂದ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್‌ ಜಾಧವ್‌ ಸಂಬಂಧ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಸೂದೆ ಮಂಡಿಸಲಾಗಿದೆ. ಈ ಬಿಲ್‌ನಲ್ಲಿರುವ ನ್ಯೂನತೆಗಳನ್ನು ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಭಾರತ ಒತ್ತಾಯಿಸಿದೆ.

ಭಾರತೀಯ ನೌಕಾ ಪಡೆಯ ಮಾಜಿ ಸೇನಾಧಿಕಾರಿ ಕುಲ್‌ಭೂಷಣ್‌ ಅವರಿಗೆ ವಿಧಿಸಿರುವ ಗಲ್ಲು ಶಿಕ್ಷೆಯ ಬಗ್ಗೆ ಮೇಲ್ಮನವಿ ಸಲ್ಲಿಸುವ ಹಕ್ಕು ಇದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.

ಅಂತಾರಾಷ್ಟ್ರೀಯ ತೀರ್ಪಿನಂತೆ ರಾಯಭಾರಿ ಭೇಟಿಗೆ ವಿಫಲವಾದ ಕಾರಣ ಜಾಧವ್‌ಗೆ ಯಾವುದೋ ಪೂರ್ವಾಗ್ರಹ ಉಂಟಾಗಿದೆ ಎಂದು ನಿರ್ಧರಿಸಲು ಮುನ್ಸಿಪಲ್‌ ಕೋರ್ಟ್‌ ಅನ್ನು ಆಹ್ವಾನಿಸಲು ಮಸೂದೆಯಲ್ಲಿ ಅವಕಾಶವಿದೆ ಎಂದು ಅಂತಾರಾಷ್ಟ್ರೀಯ ಕೋರ್ಟ್‌ ಆಫ್‌ ಜಸ್ಟೀಸ್‌ (ಐಸಿಜೆ) ಹೇಳಿದೆ.

ಹೀಗಾಗಿ ಪಾಕ್‌ನ ಮಸೂದೆಯಲ್ಲಿನ ನ್ಯೂನತೆಗಳನ್ನು ಪರಿಹರಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ಪಾಕಿಸ್ತಾನಕ್ಕೆ ಕರೆ ನೀಡುತ್ತೇವೆ ಎಂದು ಬಾಗ್ಚಿ ತಿಳಿಸಿದ್ದಾರೆ. ಅಂತಾರಾಷ್ಟ್ರೀಯ ಕಾನೂನಿನಡಿ ತನ್ನ ಜವಾಬ್ದಾರಿಯನ್ನು ಪೂರೈಸಿದೆಯೇ ಎಂದು ಮುನ್ಸಿಪಲ್‌ ಕೋರ್ಟ್‌ ಮಧ್ಯಸ್ಥಿಕೆಯಾಗಲು ಸಾಧ್ಯವಿಲ್ಲ ಎಂದಿದ್ದಾರೆ.

ಜಾಧವ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಐಸಿಜೆ ತೀರ್ಪನ್ನು ಪಾಲಿಸಬೇಕೆಂದು ಬಾಗ್ಚಿ ನೆರೆಯ ಶತ್ರು ದೇಶಕ್ಕೆ ಕರೆ ನೀಡಿದರು. ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಜಾಧವ್ (50) ಗೆ 2017 ರ ಏಪ್ರಿಲ್‌ನಲ್ಲಿ ಬೇಹುಗಾರಿಕೆ ಮತ್ತು ಭಯೋತ್ಪಾದನೆ ಆರೋಪದ ಮೇಲೆ ಪಾಕಿಸ್ತಾನದ ಸೇನಾ ನ್ಯಾಯಾಲಯ ಮರಣದಂಡನೆ ವಿಧಿಸಿತ್ತು.
ಬಳಿಕ ಜಾಧವ್‌ಗೆ ರಾಯಭಾರಿ ಪ್ರವೇಶವನ್ನು ನಿರಾಕರಿಸಿದ್ದಕ್ಕಾಗಿ ಮತ್ತು ಮರಣದಂಡನೆಯನ್ನು ಪ್ರಶ್ನಿಸಿ ಭಾರತ ಪಾಕಿಸ್ತಾನದ ವಿರುದ್ಧ ಅಂತಾರಾಷ್ಟ್ರೀಯ ನ್ಯಾಯಮಂಡಳಿ ಮೊರೆ ಹೋಗಿತ್ತು.

ನವದಹೆಲಿ: ಪಾಕ್‌ ಸೇನಾ ಕೋರ್ಟ್‌ನಿಂದ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್‌ ಜಾಧವ್‌ ಸಂಬಂಧ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಸೂದೆ ಮಂಡಿಸಲಾಗಿದೆ. ಈ ಬಿಲ್‌ನಲ್ಲಿರುವ ನ್ಯೂನತೆಗಳನ್ನು ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಭಾರತ ಒತ್ತಾಯಿಸಿದೆ.

ಭಾರತೀಯ ನೌಕಾ ಪಡೆಯ ಮಾಜಿ ಸೇನಾಧಿಕಾರಿ ಕುಲ್‌ಭೂಷಣ್‌ ಅವರಿಗೆ ವಿಧಿಸಿರುವ ಗಲ್ಲು ಶಿಕ್ಷೆಯ ಬಗ್ಗೆ ಮೇಲ್ಮನವಿ ಸಲ್ಲಿಸುವ ಹಕ್ಕು ಇದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.

ಅಂತಾರಾಷ್ಟ್ರೀಯ ತೀರ್ಪಿನಂತೆ ರಾಯಭಾರಿ ಭೇಟಿಗೆ ವಿಫಲವಾದ ಕಾರಣ ಜಾಧವ್‌ಗೆ ಯಾವುದೋ ಪೂರ್ವಾಗ್ರಹ ಉಂಟಾಗಿದೆ ಎಂದು ನಿರ್ಧರಿಸಲು ಮುನ್ಸಿಪಲ್‌ ಕೋರ್ಟ್‌ ಅನ್ನು ಆಹ್ವಾನಿಸಲು ಮಸೂದೆಯಲ್ಲಿ ಅವಕಾಶವಿದೆ ಎಂದು ಅಂತಾರಾಷ್ಟ್ರೀಯ ಕೋರ್ಟ್‌ ಆಫ್‌ ಜಸ್ಟೀಸ್‌ (ಐಸಿಜೆ) ಹೇಳಿದೆ.

ಹೀಗಾಗಿ ಪಾಕ್‌ನ ಮಸೂದೆಯಲ್ಲಿನ ನ್ಯೂನತೆಗಳನ್ನು ಪರಿಹರಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ಪಾಕಿಸ್ತಾನಕ್ಕೆ ಕರೆ ನೀಡುತ್ತೇವೆ ಎಂದು ಬಾಗ್ಚಿ ತಿಳಿಸಿದ್ದಾರೆ. ಅಂತಾರಾಷ್ಟ್ರೀಯ ಕಾನೂನಿನಡಿ ತನ್ನ ಜವಾಬ್ದಾರಿಯನ್ನು ಪೂರೈಸಿದೆಯೇ ಎಂದು ಮುನ್ಸಿಪಲ್‌ ಕೋರ್ಟ್‌ ಮಧ್ಯಸ್ಥಿಕೆಯಾಗಲು ಸಾಧ್ಯವಿಲ್ಲ ಎಂದಿದ್ದಾರೆ.

ಜಾಧವ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಐಸಿಜೆ ತೀರ್ಪನ್ನು ಪಾಲಿಸಬೇಕೆಂದು ಬಾಗ್ಚಿ ನೆರೆಯ ಶತ್ರು ದೇಶಕ್ಕೆ ಕರೆ ನೀಡಿದರು. ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಜಾಧವ್ (50) ಗೆ 2017 ರ ಏಪ್ರಿಲ್‌ನಲ್ಲಿ ಬೇಹುಗಾರಿಕೆ ಮತ್ತು ಭಯೋತ್ಪಾದನೆ ಆರೋಪದ ಮೇಲೆ ಪಾಕಿಸ್ತಾನದ ಸೇನಾ ನ್ಯಾಯಾಲಯ ಮರಣದಂಡನೆ ವಿಧಿಸಿತ್ತು.
ಬಳಿಕ ಜಾಧವ್‌ಗೆ ರಾಯಭಾರಿ ಪ್ರವೇಶವನ್ನು ನಿರಾಕರಿಸಿದ್ದಕ್ಕಾಗಿ ಮತ್ತು ಮರಣದಂಡನೆಯನ್ನು ಪ್ರಶ್ನಿಸಿ ಭಾರತ ಪಾಕಿಸ್ತಾನದ ವಿರುದ್ಧ ಅಂತಾರಾಷ್ಟ್ರೀಯ ನ್ಯಾಯಮಂಡಳಿ ಮೊರೆ ಹೋಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.