ETV Bharat / international

ಕರಾಚಿ ಷೇರು ವಿನಿಮಯ ಕೇಂದ್ರದ ಮೇಲಿನ ಉಗ್ರರ ದಾಳಿ ಹಿಂದೆ ಭಾರತದ ಕೈವಾಡ: ಪಾಕ್​ ಪ್ರಧಾನಿ​!

ಮುಂಬೈನಲ್ಲಿ ಈ ಹಿಂದೆ ಉಗ್ರರು ದಾಳಿ ನಡೆಸಿರುವ ರೀತಿಯಲ್ಲೇ ಕರಾಚಿ ಷೇರು ವಿನಿಮಯ ಕೇಂದ್ರದ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸಲಾಗಿತ್ತು ಎಂದು ಪಾಕ್​ ಪ್ರಧಾನಿ ಹೇಳಿದ್ದಾರೆ.

author img

By

Published : Jun 30, 2020, 10:21 PM IST

Prime Minister Imran Khan
Prime Minister Imran Khan

ಹೈದರಾಬಾದ್​: ಕಳೆದ ಸೋಮವಾರ ಪಾಕಿಸ್ತಾನದ ಕರಾಚಿಯಲ್ಲಿರುವ ಷೇರು ವಿನಿಮಯ ಕಚೇರಿ ಮೇಲೆ ನಡೆದ ಭಯೋತ್ಪಾದಕ ದಾಳಿ ಹಿಂದೆ ಭಾರತದ ಕೈವಾಡವಿದೆ. ಅದರಲ್ಲಿ ಯಾವುದೇ ರೀತಿಯ ಸಂದೇಹವಿಲ್ಲ ಎಂದು ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಹೇಳಿಕೆ ನೀಡಿದ್ದಾರೆ.

ಈ ಹಿಂದೆ ಮುಂಬೈನಲ್ಲಿ ನಡೆದ ದಾಳಿಯ ರೀತಿಯಲ್ಲಿ ಕರಾಚಿ ಷೇರು ವಿನಿಮಯ ಕೇಂದ್ರದ ಮೇಲೆ ದಾಳಿ ನಡೆಸಲು ನಿರ್ಧಾರ ಮಾಡಲಾಗಿತ್ತು. ಇದರ ಹಿಂದೆ ಭಾರತದ ಕೈವಾಡವಿದೆ ಎಂಬುದು ನನಗೆ ಗೊತ್ತಿದೆ ಎಂದು ಅವರು ಹೇಳಿದ್ದಾಗಿ ಡಾನ್​ ಪತ್ರಿಕೆ ವರದಿ ಮಾಡಿದೆ.

ಇದೀಗ ನನ್ನ ಸಚಿವ ಸಂಪುಟ ಅಲರ್ಟ್​​ ಆಗಿದೆ. ಪಾಕ್​ನಲ್ಲಿ ನಾಲ್ಕು ಭಯೋತ್ಪಾದಕ ದಾಳಿ ನಡೆಸಲು ನಿರ್ಧರಿಸಲಾಗಿದ್ದು, ಅದರಲ್ಲಿ ಎರಡು ಇಸ್ಲಾಮಾಬಾದ್​ನಲ್ಲಿ ಎಂದು ತಿಳಿದು ಬಂದಿದೆ ಎಂದಿದ್ದಾರೆ.

ಭಯೋತ್ಪಾದಕರಿಂದ ಕರಾಚಿ ಷೇರು ವಿನಿಮಯ ಕೇಂದ್ರದ ಮೇಲೆ ದಾಳಿ: 9 ಸಾವು

ಪಾಕ್​ ಸಂಸತ್​ನಲ್ಲಿ ಮಾತನಾಡುತ್ತಿದ್ದ ವೇಳೆ ಈ ರೀತಿಯಾಗಿ ಹೇಳಿಕೊಂಡಿರುವ ಅವರು, ಇದಕ್ಕೆ ಸಂಬಂಧಿಸಿದಂತೆ ಮಂತ್ರಿಗಳು ಮಾಹಿತಿ ನೀಡಿದ್ದರು ಎಂದಿದ್ದಾರೆ. ಈ ದಾಳಿಯಲ್ಲಿ ನಾಲ್ವರು ಉಗ್ರರು ಸೇರಿದಂತೆ ಒಟ್ಟು 11 ಮಂದಿ ಸಾವನ್ನಪ್ಪಿದ್ದರು. ದಾಳಿ ಮಾಡಿದ ಉಗ್ರರು ಆರ್ಮಿ ವೇಷದಲ್ಲಿದ್ದರು. ಕಳೆದ ಕೆಲ ದಿನಗಳ ಹಿಂದೆ ಪಾಕ್​​ ಸಂಸತ್ತಿನಲ್ಲಿ ಮಾತನಾಡಿದ್ದ ಇಮ್ರಾನ್​​ ಖಾನ್​, ಅಲ್ ಖೈದಾ ಮಾಜಿ ಮುಖ್ಯಸ್ಥ ಒಸಾಮಾ ಬಿನ್‌ ಲಾಡೆನ್​ ಹುತಾತ್ಮ ಎಂದು ಕರೆದಿದ್ದರು.

ಹೈದರಾಬಾದ್​: ಕಳೆದ ಸೋಮವಾರ ಪಾಕಿಸ್ತಾನದ ಕರಾಚಿಯಲ್ಲಿರುವ ಷೇರು ವಿನಿಮಯ ಕಚೇರಿ ಮೇಲೆ ನಡೆದ ಭಯೋತ್ಪಾದಕ ದಾಳಿ ಹಿಂದೆ ಭಾರತದ ಕೈವಾಡವಿದೆ. ಅದರಲ್ಲಿ ಯಾವುದೇ ರೀತಿಯ ಸಂದೇಹವಿಲ್ಲ ಎಂದು ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಹೇಳಿಕೆ ನೀಡಿದ್ದಾರೆ.

ಈ ಹಿಂದೆ ಮುಂಬೈನಲ್ಲಿ ನಡೆದ ದಾಳಿಯ ರೀತಿಯಲ್ಲಿ ಕರಾಚಿ ಷೇರು ವಿನಿಮಯ ಕೇಂದ್ರದ ಮೇಲೆ ದಾಳಿ ನಡೆಸಲು ನಿರ್ಧಾರ ಮಾಡಲಾಗಿತ್ತು. ಇದರ ಹಿಂದೆ ಭಾರತದ ಕೈವಾಡವಿದೆ ಎಂಬುದು ನನಗೆ ಗೊತ್ತಿದೆ ಎಂದು ಅವರು ಹೇಳಿದ್ದಾಗಿ ಡಾನ್​ ಪತ್ರಿಕೆ ವರದಿ ಮಾಡಿದೆ.

ಇದೀಗ ನನ್ನ ಸಚಿವ ಸಂಪುಟ ಅಲರ್ಟ್​​ ಆಗಿದೆ. ಪಾಕ್​ನಲ್ಲಿ ನಾಲ್ಕು ಭಯೋತ್ಪಾದಕ ದಾಳಿ ನಡೆಸಲು ನಿರ್ಧರಿಸಲಾಗಿದ್ದು, ಅದರಲ್ಲಿ ಎರಡು ಇಸ್ಲಾಮಾಬಾದ್​ನಲ್ಲಿ ಎಂದು ತಿಳಿದು ಬಂದಿದೆ ಎಂದಿದ್ದಾರೆ.

ಭಯೋತ್ಪಾದಕರಿಂದ ಕರಾಚಿ ಷೇರು ವಿನಿಮಯ ಕೇಂದ್ರದ ಮೇಲೆ ದಾಳಿ: 9 ಸಾವು

ಪಾಕ್​ ಸಂಸತ್​ನಲ್ಲಿ ಮಾತನಾಡುತ್ತಿದ್ದ ವೇಳೆ ಈ ರೀತಿಯಾಗಿ ಹೇಳಿಕೊಂಡಿರುವ ಅವರು, ಇದಕ್ಕೆ ಸಂಬಂಧಿಸಿದಂತೆ ಮಂತ್ರಿಗಳು ಮಾಹಿತಿ ನೀಡಿದ್ದರು ಎಂದಿದ್ದಾರೆ. ಈ ದಾಳಿಯಲ್ಲಿ ನಾಲ್ವರು ಉಗ್ರರು ಸೇರಿದಂತೆ ಒಟ್ಟು 11 ಮಂದಿ ಸಾವನ್ನಪ್ಪಿದ್ದರು. ದಾಳಿ ಮಾಡಿದ ಉಗ್ರರು ಆರ್ಮಿ ವೇಷದಲ್ಲಿದ್ದರು. ಕಳೆದ ಕೆಲ ದಿನಗಳ ಹಿಂದೆ ಪಾಕ್​​ ಸಂಸತ್ತಿನಲ್ಲಿ ಮಾತನಾಡಿದ್ದ ಇಮ್ರಾನ್​​ ಖಾನ್​, ಅಲ್ ಖೈದಾ ಮಾಜಿ ಮುಖ್ಯಸ್ಥ ಒಸಾಮಾ ಬಿನ್‌ ಲಾಡೆನ್​ ಹುತಾತ್ಮ ಎಂದು ಕರೆದಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.