ETV Bharat / international

ಜಮ್ಮು-ಕಾಶ್ಮೀರಕ್ಕೆ ಸ್ವಾಯತ್ತತೆ ಕೊಡೋವರೆಗೂ ಭಾರತದ ಜೊತೆ ಮಾತುಕತೆ ಇಲ್ಲ: ಇಮ್ರಾನ್ ಖಾನ್ - ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಸಂಘಟನೆ

ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳು 2016 ರಲ್ಲಿ ಪಠಾಣ್‌ಕೋಟ್ ವಾಯುಪಡೆಯ ನೆಲೆಯ ಮೇಲೆ ಭಯೋತ್ಪಾದಕ ದಾಳಿ ನಡೆಸಿದ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧಗಳು ಹದಗೆಟ್ಟಿತ್ತು ಎಂದು ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಅಭಿಪ್ರಾಯ ಪಟ್ಟಿದ್ದಾರೆ.

Pak PM
ಇಮ್ರಾನ್ ಖಾನ್
author img

By

Published : Jan 11, 2021, 6:47 AM IST

ಇಸ್ಲಾಮಾಬಾದ್: ನವದೆಹಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಸ್ವಾಯತ್ತ ಸ್ಥಾನಮಾನವನ್ನು ಪುನಃ ಸ್ಥಾಪಿಸುವವರೆಗೆ ಭಾರತದೊಂದಿಗೆ ಯಾವುದೇ ಮಾತುಕತೆ ಸಾಧ್ಯವಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ತಿಳಿಸಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ಮಾಧ್ಯಮದ ಪ್ರತಿನಿಧಿಗಳೊಂದಿಗಿನ ಸಂವಾದದ ಸಂದರ್ಭದಲ್ಲಿ ನವದೆಹಲಿಯೊಂದಿಗೆ ಸಂವಾದ ನಡೆಸುವ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ ಖಾನ್ ಈ ವಿಷಯ ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಸ್ವಾಯತ್ತ ಸ್ಥಾನಮಾನವನ್ನು ಪುನಃಸ್ಥಾಪಿಸುವವರೆಗೆ ಭಾರತದೊಂದಿಗೆ ಯಾವುದೇ ಮಾತುಕತೆ ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪಾಕಿಸ್ತಾನ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ಭಾರತವನ್ನು ಹೊರತುಪಡಿಸಿ ಬೇರೆ ಯಾವುದೇ ದೇಶಗಳೊಂದಿಗೆ ನಮಗೆ ವಿರೋಧಿ ಸಂಬಂಧಗಳಿಲ್ಲ ಎಂದು ಖಾನ್​ ಹೇಳಿದ್ದಾರೆ.

ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳು 2016 ರಲ್ಲಿ ಪಠಾಣ್‌ಕೋಟ್ ವಾಯುಪಡೆಯ ನೆಲೆಯ ಮೇಲೆ ಭಯೋತ್ಪಾದಕ ದಾಳಿ ನಡೆಸಿದ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧಗಳು ಹದಗೆಟ್ಟಿತ್ತು. ಉರಿಯ ಭಾರತೀಯ ಸೇನಾ ಶಿಬಿರದ ದಾಳಿ ಸೇರಿದಂತೆ ನಂತರದ ದಾಳಿಗಳು ಸಂಬಂಧವನ್ನು ಮತ್ತಷ್ಟು ಹದಗೆಡಿಸಿದವು.

ಪುಲ್ವಾಮಾ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ 2019 ರ ಫೆಬ್ರವರಿ 26 ರಂದು ಪಾಕಿಸ್ತಾನದ ಜೈಶ್ -ಎ- ಮೊಹಮ್ಮದ್ ಸಂಘಟನೆಯ ಭಯೋತ್ಪಾದಕ ತರಬೇತಿ ಶಿಬಿರವನ್ನು ಭಾರತದ ಯುದ್ಧ ವಿಮಾನಗಳು ಹೊಡೆದವು. ನಂತರ ಈ ಸಂಬಂಧ ಮತ್ತಷ್ಟು ಕುಸಿಯಿತು. ಇದರಲ್ಲಿ 40 ಸಿಆರ್​ಪಿಎಫ್ ಜವಾನರು ಕೊಲ್ಲಲ್ಪಟ್ಟರು

370 ನೇ ವಿಧಿಯನ್ನು ರದ್ದುಪಡಿಸುವುದು ತಮ್ಮ ಆಂತರಿಕ ವಿಷಯ ಎಂದು ಭಾರತವು ಅಂತಾರಾಷ್ಟ್ರೀಯ ಸಮುದಾಯಕ್ಕೆ ಸ್ಪಷ್ಟವಾಗಿ ಹೇಳಿತ್ತು. ವಾಸ್ತವ ಒಪ್ಪಿಕೊಂಡು ಎಲ್ಲ ಭಾರತ ವಿರೋಧಿ ಪ್ರಚಾರವನ್ನು ನಿಲ್ಲಿಸುವಂತೆ ಪಾಕಿಸ್ತಾನಕ್ಕೆ ಅದು ಸಲಹೆ ನೀಡಿತ್ತು.

ಇಸ್ಲಾಮಾಬಾದ್: ನವದೆಹಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಸ್ವಾಯತ್ತ ಸ್ಥಾನಮಾನವನ್ನು ಪುನಃ ಸ್ಥಾಪಿಸುವವರೆಗೆ ಭಾರತದೊಂದಿಗೆ ಯಾವುದೇ ಮಾತುಕತೆ ಸಾಧ್ಯವಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ತಿಳಿಸಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ಮಾಧ್ಯಮದ ಪ್ರತಿನಿಧಿಗಳೊಂದಿಗಿನ ಸಂವಾದದ ಸಂದರ್ಭದಲ್ಲಿ ನವದೆಹಲಿಯೊಂದಿಗೆ ಸಂವಾದ ನಡೆಸುವ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ ಖಾನ್ ಈ ವಿಷಯ ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಸ್ವಾಯತ್ತ ಸ್ಥಾನಮಾನವನ್ನು ಪುನಃಸ್ಥಾಪಿಸುವವರೆಗೆ ಭಾರತದೊಂದಿಗೆ ಯಾವುದೇ ಮಾತುಕತೆ ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪಾಕಿಸ್ತಾನ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ಭಾರತವನ್ನು ಹೊರತುಪಡಿಸಿ ಬೇರೆ ಯಾವುದೇ ದೇಶಗಳೊಂದಿಗೆ ನಮಗೆ ವಿರೋಧಿ ಸಂಬಂಧಗಳಿಲ್ಲ ಎಂದು ಖಾನ್​ ಹೇಳಿದ್ದಾರೆ.

ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳು 2016 ರಲ್ಲಿ ಪಠಾಣ್‌ಕೋಟ್ ವಾಯುಪಡೆಯ ನೆಲೆಯ ಮೇಲೆ ಭಯೋತ್ಪಾದಕ ದಾಳಿ ನಡೆಸಿದ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧಗಳು ಹದಗೆಟ್ಟಿತ್ತು. ಉರಿಯ ಭಾರತೀಯ ಸೇನಾ ಶಿಬಿರದ ದಾಳಿ ಸೇರಿದಂತೆ ನಂತರದ ದಾಳಿಗಳು ಸಂಬಂಧವನ್ನು ಮತ್ತಷ್ಟು ಹದಗೆಡಿಸಿದವು.

ಪುಲ್ವಾಮಾ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ 2019 ರ ಫೆಬ್ರವರಿ 26 ರಂದು ಪಾಕಿಸ್ತಾನದ ಜೈಶ್ -ಎ- ಮೊಹಮ್ಮದ್ ಸಂಘಟನೆಯ ಭಯೋತ್ಪಾದಕ ತರಬೇತಿ ಶಿಬಿರವನ್ನು ಭಾರತದ ಯುದ್ಧ ವಿಮಾನಗಳು ಹೊಡೆದವು. ನಂತರ ಈ ಸಂಬಂಧ ಮತ್ತಷ್ಟು ಕುಸಿಯಿತು. ಇದರಲ್ಲಿ 40 ಸಿಆರ್​ಪಿಎಫ್ ಜವಾನರು ಕೊಲ್ಲಲ್ಪಟ್ಟರು

370 ನೇ ವಿಧಿಯನ್ನು ರದ್ದುಪಡಿಸುವುದು ತಮ್ಮ ಆಂತರಿಕ ವಿಷಯ ಎಂದು ಭಾರತವು ಅಂತಾರಾಷ್ಟ್ರೀಯ ಸಮುದಾಯಕ್ಕೆ ಸ್ಪಷ್ಟವಾಗಿ ಹೇಳಿತ್ತು. ವಾಸ್ತವ ಒಪ್ಪಿಕೊಂಡು ಎಲ್ಲ ಭಾರತ ವಿರೋಧಿ ಪ್ರಚಾರವನ್ನು ನಿಲ್ಲಿಸುವಂತೆ ಪಾಕಿಸ್ತಾನಕ್ಕೆ ಅದು ಸಲಹೆ ನೀಡಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.