ETV Bharat / international

ಮಲ್ಯ ತಪ್ಪಿತಸ್ಥರೆಂದು ಸಾಬೀತುಪಡಿಸಲು ಸಾಕಷ್ಟು ಪುರಾವೆಗಳಿವೆ: ಭಾರತ ಸರ್ಕಾರ

author img

By

Published : Feb 13, 2020, 10:11 AM IST

ಸುಮಾರು 9 ಸಾವಿರ ಕೋಟಿ ರೂಪಾಯಿ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣ ಎದುರಿಸುತ್ತಿರುವ ಮದ್ಯದ ದೊರೆ ವಿಜಯ್​ ಮಲ್ಯ ವಿರುದ್ಧ ಸಾಕ್ಷಿ ಸಾಬೀತಿಗೆ ಎಲ್ಲ ಪುರಾವೆಗಳಿವೆ. ಹಾಗಾಗಿ ಅವರನ್ನು ಭಾರತಕ್ಕೆ ಹಸ್ತಾಂತರಿಸಬೇಕು ಎಂದು ಲಂಡನ್​ ಕೋರ್ಟ್​ನಲ್ಲಿ ಭಾರತ ಸರ್ಕಾರದ ಪರ ವಕೀಲರು ವಾದ ಮಂಡಿಸಿದ್ದಾರೆ.

Vijay Mallya
Vijay Mallya

ಲಂಡನ್​: ಭಾರತದ ವಿವಿಧ ಬ್ಯಾಂಕ್​ಗಳಲ್ಲಿ 9 ಸಾವಿರಕ್ಕೂ ಅಧಿಕ ಕೋಟಿ ರೂಪಾಯಿ ವಂಚಿಸಿರುವ ಆರೋಪ ಎದುರಿಸುತ್ತಿರುವ ವಿಜಯ್​ ಮಲ್ಯ ವಿದೇಶಕ್ಕೆ ಪರಾರಿಯಾಗಿದ್ದಾರೆ. ಮಧ್ಯದ ದೊರೆಯನ್ನು ಭಾರತಕ್ಕೆ ಕರೆತರಲು ಮುಂದಾಗಿರುವ ಕೇಂದ್ರ ಸರ್ಕಾರ ವಿಜಯ್​ ಮಲ್ಯ ಭಾರತಕ್ಕೆ ಹಸ್ತಾಂತರಿಸುವಂತೆ ಒತ್ತಾಯಿಸಲಾಗಿದೆ. ಸದ್ಯ ಮಲ್ಯ ಲಂಡನ್​​ ರಾಯಲ್​ ಕೋರ್ಟ್​​ ಆಫ್​ ಜಸ್ಟೀಸ್​​ನಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.

64 ವರ್ಷದ ಕಿಂಗ್ ಫಿಶರ್​ ಏರ್​ ಲೈನ್ಸ್​​ನ ಮಾಜಿ ಮಾಲೀಕ ವಿಜಯ್ ಮಲ್ಯ ವಿರುದ್ಧ 2017ರ ಏಪ್ರಿಲ್​​ನಲ್ಲಿ ಭಾರತಕ್ಕೆ ಗಡಿಪಾರು ಮಾಡುವ ಕುರಿತು ಬಂಧನ ವಾರೆಂಟ್ ಜಾರಿಯಾಗಿತ್ತು. ಇದೀಗ ಕಿಂಗ್​ಫಿಶರ್​​ ಏರ್​ಲೈನ್ಸ್​​ನ ಆರ್ಥಿಕತೆ ಕುರಿತು ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಭಾರತ ಸರ್ಕಾರ ಯುಕೆ ನ್ಯಾಯಾಲಯದಲ್ಲಿ ಪುನರುಚ್ಚರಿಸಿದೆ. ವಿಜಯ್​ ಮಲ್ಯ ವಂಚನೆ ಮಾಡಿದ್ದು, ಅವರು ತಪ್ಪಿತಸ್ಥರೆಂದು ಸಾಬೀತುಪಡಿಸಲು ಅನೇಕರ ಪುರಾವೆಗಳಿವೆ ಎಂದು ತಿಳಿಸಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಮಲ್ಯ ಪರ ವಕೀಲರು ಕೋರ್ಟ್​​ನಲ್ಲಿ ವಾದ ಮಂಡಿಸಿದ್ದು, ವ್ಯಾಪಾರದಲ್ಲಿ ಕುಸಿಯುತ್ತಿದ್ದ ಕಿಂಗ್ ಫಿಶರ್​ ಏರ್​​ಲೈನ್ಸ್​​ ಮೇಲೆತ್ತಲು ಮಲ್ಯ ಬ್ಯಾಂಕ್ ಸಾಲ ಪಡೆದಿದ್ದರೇ ಹೊರತು ಬ್ಯಾಂಕ್​​ ಸಾಲ ತೆಗೆದುಕೊಳ್ಳುವ ಸಮಯದಲ್ಲಿ ಅವರ ಮನಸ್ಸಿನಲ್ಲಿ ಯಾವುದೇ ದುರುದ್ದೇಶವೂ ಇರಲಿಲ್ಲ. ಆ ಸಮಯದಲ್ಲಿ ಅವರು ಶ್ರೀಮಂತ ಉದ್ಯಮಿಯಾಗಿದ್ದರು. ಯಾವುದೇ ವಂಚನೆಯ ಯೋಜನೆಗಳಲ್ಲಿ ಹೂಡಿಕೆ ಮಾಡುವುದು, ಅವ್ಯವಹಾರ ನಡೆಸುವ ಕೆಲಸವನ್ನು ಅವರು ಮಾಡಲಿಲ್ಲ, ಭಾರತದ ಇತರ ವಿಮಾನಯಾನ ಸಂಸ್ಥೆಗಳಂತೆ ಪ್ರತಿಷ್ಠಿತ ಏರ್​ಲೈನ್​​ ಆಗಿದ್ದ ಕಿಂಗ್ ಫಿಶರ್ ಆರ್ಥಿಕವಾಗಿ ಕುಸಿಯಿತು ಎಂದು ಸಮರ್ಥಿಸಿಕೊಂಡಿದ್ದಾರೆ. ಮಲ್ಯ ತಪ್ಪಿತಸ್ಥರಲ್ಲ, ವ್ಯವಹಾರದಲ್ಲಿ ದುರುದ್ದೇಶ ಇರಲಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.

ಲಂಡನ್​: ಭಾರತದ ವಿವಿಧ ಬ್ಯಾಂಕ್​ಗಳಲ್ಲಿ 9 ಸಾವಿರಕ್ಕೂ ಅಧಿಕ ಕೋಟಿ ರೂಪಾಯಿ ವಂಚಿಸಿರುವ ಆರೋಪ ಎದುರಿಸುತ್ತಿರುವ ವಿಜಯ್​ ಮಲ್ಯ ವಿದೇಶಕ್ಕೆ ಪರಾರಿಯಾಗಿದ್ದಾರೆ. ಮಧ್ಯದ ದೊರೆಯನ್ನು ಭಾರತಕ್ಕೆ ಕರೆತರಲು ಮುಂದಾಗಿರುವ ಕೇಂದ್ರ ಸರ್ಕಾರ ವಿಜಯ್​ ಮಲ್ಯ ಭಾರತಕ್ಕೆ ಹಸ್ತಾಂತರಿಸುವಂತೆ ಒತ್ತಾಯಿಸಲಾಗಿದೆ. ಸದ್ಯ ಮಲ್ಯ ಲಂಡನ್​​ ರಾಯಲ್​ ಕೋರ್ಟ್​​ ಆಫ್​ ಜಸ್ಟೀಸ್​​ನಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.

64 ವರ್ಷದ ಕಿಂಗ್ ಫಿಶರ್​ ಏರ್​ ಲೈನ್ಸ್​​ನ ಮಾಜಿ ಮಾಲೀಕ ವಿಜಯ್ ಮಲ್ಯ ವಿರುದ್ಧ 2017ರ ಏಪ್ರಿಲ್​​ನಲ್ಲಿ ಭಾರತಕ್ಕೆ ಗಡಿಪಾರು ಮಾಡುವ ಕುರಿತು ಬಂಧನ ವಾರೆಂಟ್ ಜಾರಿಯಾಗಿತ್ತು. ಇದೀಗ ಕಿಂಗ್​ಫಿಶರ್​​ ಏರ್​ಲೈನ್ಸ್​​ನ ಆರ್ಥಿಕತೆ ಕುರಿತು ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಭಾರತ ಸರ್ಕಾರ ಯುಕೆ ನ್ಯಾಯಾಲಯದಲ್ಲಿ ಪುನರುಚ್ಚರಿಸಿದೆ. ವಿಜಯ್​ ಮಲ್ಯ ವಂಚನೆ ಮಾಡಿದ್ದು, ಅವರು ತಪ್ಪಿತಸ್ಥರೆಂದು ಸಾಬೀತುಪಡಿಸಲು ಅನೇಕರ ಪುರಾವೆಗಳಿವೆ ಎಂದು ತಿಳಿಸಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಮಲ್ಯ ಪರ ವಕೀಲರು ಕೋರ್ಟ್​​ನಲ್ಲಿ ವಾದ ಮಂಡಿಸಿದ್ದು, ವ್ಯಾಪಾರದಲ್ಲಿ ಕುಸಿಯುತ್ತಿದ್ದ ಕಿಂಗ್ ಫಿಶರ್​ ಏರ್​​ಲೈನ್ಸ್​​ ಮೇಲೆತ್ತಲು ಮಲ್ಯ ಬ್ಯಾಂಕ್ ಸಾಲ ಪಡೆದಿದ್ದರೇ ಹೊರತು ಬ್ಯಾಂಕ್​​ ಸಾಲ ತೆಗೆದುಕೊಳ್ಳುವ ಸಮಯದಲ್ಲಿ ಅವರ ಮನಸ್ಸಿನಲ್ಲಿ ಯಾವುದೇ ದುರುದ್ದೇಶವೂ ಇರಲಿಲ್ಲ. ಆ ಸಮಯದಲ್ಲಿ ಅವರು ಶ್ರೀಮಂತ ಉದ್ಯಮಿಯಾಗಿದ್ದರು. ಯಾವುದೇ ವಂಚನೆಯ ಯೋಜನೆಗಳಲ್ಲಿ ಹೂಡಿಕೆ ಮಾಡುವುದು, ಅವ್ಯವಹಾರ ನಡೆಸುವ ಕೆಲಸವನ್ನು ಅವರು ಮಾಡಲಿಲ್ಲ, ಭಾರತದ ಇತರ ವಿಮಾನಯಾನ ಸಂಸ್ಥೆಗಳಂತೆ ಪ್ರತಿಷ್ಠಿತ ಏರ್​ಲೈನ್​​ ಆಗಿದ್ದ ಕಿಂಗ್ ಫಿಶರ್ ಆರ್ಥಿಕವಾಗಿ ಕುಸಿಯಿತು ಎಂದು ಸಮರ್ಥಿಸಿಕೊಂಡಿದ್ದಾರೆ. ಮಲ್ಯ ತಪ್ಪಿತಸ್ಥರಲ್ಲ, ವ್ಯವಹಾರದಲ್ಲಿ ದುರುದ್ದೇಶ ಇರಲಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.