ETV Bharat / international

ಸುಡಾನ್ ಸಂಘರ್ಷ: 413 ಸಾವು, 3,551ಕ್ಕೂ ಹೆಚ್ಚು ಜನರಿಗೆ ಗಾಯ

author img

By

Published : Apr 24, 2023, 10:10 AM IST

ಸುಡಾನ್ ಸಂಘರ್ಷದಲ್ಲಿ ಈವರೆಗೆ 413 ಜನ ಮೃತಪಟ್ಟಿದ್ದು 3,551 ಜನ ಗಾಯಗೊಂಡಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

sudan
ಸುಡಾನ್ ಸಂಘರ್ಷ

ಜಿನೀವಾ: ಸುಡಾನ್​ನ ಮಿಲಿಟರಿ ಮತ್ತು ಅರೆಸೇನಾ ಕ್ಷಿಪ್ರ ಬೆಂಬಲ ಪಡೆಗಳ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ ಇದುವರೆಗೆ 413 ಮಂದಿ ಮೃತಪಟ್ಟಿದ್ದಾರೆ. 3,551 ಜನ ಗಾಯಗೊಂಡಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಹೇಳಿದೆ. ಅಷ್ಟೇ ಅಲ್ಲದೆ, ಮಕ್ಕಳನ್ನು ಸಹ ಬಲಿ ಪಡೆಯಲಾಗುತ್ತಿದ್ದು, ಇದುವರೆಗೆ ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಟರ್ಕಿಶ್ ನ್ಯೂಸ್ ಏಜೆನ್ಸಿಯೊಂದು ವರದಿ ಮಾಡಿದೆ.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಡಬ್ಲ್ಯೂಹೆಚ್​ಒ ವಕ್ತಾರ ಮಾರ್ಗರೆಟ್ ಹ್ಯಾರಿಸ್, "ಸುಡಾನ್ ಸರ್ಕಾರ ನೀಡಿದ ಅಂಕಿ-ಅಂಶಗಳ ಪ್ರಕಾರ, ಸಂಘರ್ಷದಲ್ಲಿ ಈವರೆಗೆ 413 ಜನರು ಮೃತಪಟ್ಟಿದ್ದು 3,551 ಜನರು ಗಾಯಗೊಂಡಿದ್ದಾರೆ. ಈ ಹೋರಾಟವು ದೇಶದ ಸೇನೆ ಮತ್ತು ಅರೆಸೇನಾ ಕ್ಷಿಪ್ರ ಬೆಂಬಲ ಪಡೆಗಳ (RSF) ನಡುವೆ ನಡೆಯುತ್ತಿರುವ ಘರ್ಷಣೆಯ ಭಾಗವಾಗಿದೆ. ಏಪ್ರಿಲ್ 15 ರಿಂದ ಆರೋಗ್ಯ ಸೌಲಭ್ಯಗಳ ಮೇಲೆ 11 ಬಾರಿ ದಾಳಿ ಮಾಡಲಾಗಿದೆ. ಪರಿಣಾಮ ಜನರಿಗೆ ತುರ್ತು ಆರೋಗ್ಯ ಸೌಲಭ್ಯಗಳು ದೊರಕುತ್ತಿಲ್ಲ. ಕೆಲವು ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆ, ತುರ್ತು ಔಷಧಿಗಳು ಕೂಡ ನಾಗರಿಕರಿಗೆ ಸಿಗದ ಪರಿಸ್ಥಿತಿ ಉಂಟಾಗಿದೆ" ಎಂದು ಅವರು ಹೇಳಿದರು.

ಇದನ್ನೂ ಓದಿ : ಸುಡಾನ್​​ ಸೇನಾ ಸಂಘರ್ಷ.. ಸಂಕಷ್ಟದಲ್ಲಿ 31 ಕನ್ನಡಿಗರು, ನೆರವಿಗೆ ಮನವಿ

"ಸುಡಾನ್‌ನ ಆರೋಗ್ಯ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, 20 ಆರೋಗ್ಯ ಕೇಂದ್ರಗಳಲ್ಲಿ ಕೆಲಸ ಮಾಡುವುದನ್ನು ನಿಲ್ಲಿಸಲಾಗಿದೆ. ಜೊತೆಗೆ, ಈ ಭಾಗದಲ್ಲಿ 12ಕ್ಕೂ ಹೆಚ್ಚು ಆಸ್ಪತ್ರೆಗಳು ಮುಚ್ಚಿವೆ. ಪರಿಣಾಮ ಸಂಘರ್ಷದಲ್ಲಿ ಗಾಯಗೊಂಡ ಜನರು ಚಿಕಿತ್ಸೆ ಪಡೆಯಲು ಪರದಾಡುವಂತಾಗಿದೆ" ಎಂದಿದ್ದಾರೆ.

ಬಳಿಕ ಮಾತನಾಡಿದ ಯುನಿಸೆಫ್ ವಕ್ತಾರ ಜೇಮ್ಸ್ ಎಲ್ಡರ್, "ಹೀಗೆ ಸಂಘರ್ಷ ಮುಂದುವರೆದರೆ ಮಕ್ಕಳ ಮೇಲೆ ವಿನಾಶಕಾರಿ ಪರಿಣಾಮ ಬೀರಲಿದೆ. ಈಗಾಗಲೇ ಒಂಬತ್ತು ಮಕ್ಕಳು ಮೃತಪಟ್ಟಿದ್ದು, 50 ಮಂದಿ ಗಾಯಗೊಂಡಿರುವ ವರದಿ ಲಭ್ಯವಾಗಿದೆ. ಹೀಗೆ ಹೋರಾಟ ಮುಂದುವರಿದರೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಜೊತೆಗೆ, ಸುಡಾನ್ ದೇಶವು ಮಕ್ಕಳ ವಿಚಾರದಲ್ಲಿ ವಿಶ್ವದ ಅತಿ ಹೆಚ್ಚು ಅಪೌಷ್ಟಿಕತೆಯ ಪ್ರಮಾಣವನ್ನು ಹೊಂದಿದೆ" ಎಂದರು.

ಇದನ್ನೂ ಓದಿ : ಸುಡಾನ್​ನಲ್ಲಿ ಸಿಲುಕಿರುವ ಮೈಸೂರು ಜನ: ರಕ್ಷಣೆ ಮಾಡುವಂತೆ ವಿಡಿಯೋ ಮೂಲಕ ಮನವಿ

ರಾಜಧಾನಿ ಖಾರ್ಟೌಮ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಡಾನ್ ಸೇನೆ ಮತ್ತು ಅರೆ ಸೇನಾ ಕ್ಷಿಪ್ರ ಬೆಂಬಲ ಪಡೆಗಳ (ಆರ್‌ಎಸ್‌ಎಫ್) ನಡುವೆ ಕಳೆದ ಶನಿವಾರದಿಂದ ಕಾದಾಟ ಪ್ರಾರಮಭವಾಗಿದೆ. ಪರಿಣಾಮ, ಹೆಚ್ಚಿನ ಸಂಖ್ಯೆಯ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ, ಕೆಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಜೊತೆಗೆ, ಸ್ಥಳೀಯರು ಆಹಾರ, ನೀರು ಮತ್ತು ಔಷಧಿಗಳ ಕೊರತೆಯಿಂದ ಭಯ ಭೀತರಾಗಿದ್ದಾರೆ.

ಇದನ್ನೂ ಓದಿ : ಪಿಎಂ ಮೋದಿ, ಜೈಶಂಕರ್​ ಮನವಿ: ಸುಡಾನ್​ನಿಂದ ಭಾರತೀಯರ ಸ್ಥಳಾಂತರಿಸಿದ ಸೌದಿ ಅರೇಬಿಯಾ

ಜಿನೀವಾ: ಸುಡಾನ್​ನ ಮಿಲಿಟರಿ ಮತ್ತು ಅರೆಸೇನಾ ಕ್ಷಿಪ್ರ ಬೆಂಬಲ ಪಡೆಗಳ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ ಇದುವರೆಗೆ 413 ಮಂದಿ ಮೃತಪಟ್ಟಿದ್ದಾರೆ. 3,551 ಜನ ಗಾಯಗೊಂಡಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಹೇಳಿದೆ. ಅಷ್ಟೇ ಅಲ್ಲದೆ, ಮಕ್ಕಳನ್ನು ಸಹ ಬಲಿ ಪಡೆಯಲಾಗುತ್ತಿದ್ದು, ಇದುವರೆಗೆ ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಟರ್ಕಿಶ್ ನ್ಯೂಸ್ ಏಜೆನ್ಸಿಯೊಂದು ವರದಿ ಮಾಡಿದೆ.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಡಬ್ಲ್ಯೂಹೆಚ್​ಒ ವಕ್ತಾರ ಮಾರ್ಗರೆಟ್ ಹ್ಯಾರಿಸ್, "ಸುಡಾನ್ ಸರ್ಕಾರ ನೀಡಿದ ಅಂಕಿ-ಅಂಶಗಳ ಪ್ರಕಾರ, ಸಂಘರ್ಷದಲ್ಲಿ ಈವರೆಗೆ 413 ಜನರು ಮೃತಪಟ್ಟಿದ್ದು 3,551 ಜನರು ಗಾಯಗೊಂಡಿದ್ದಾರೆ. ಈ ಹೋರಾಟವು ದೇಶದ ಸೇನೆ ಮತ್ತು ಅರೆಸೇನಾ ಕ್ಷಿಪ್ರ ಬೆಂಬಲ ಪಡೆಗಳ (RSF) ನಡುವೆ ನಡೆಯುತ್ತಿರುವ ಘರ್ಷಣೆಯ ಭಾಗವಾಗಿದೆ. ಏಪ್ರಿಲ್ 15 ರಿಂದ ಆರೋಗ್ಯ ಸೌಲಭ್ಯಗಳ ಮೇಲೆ 11 ಬಾರಿ ದಾಳಿ ಮಾಡಲಾಗಿದೆ. ಪರಿಣಾಮ ಜನರಿಗೆ ತುರ್ತು ಆರೋಗ್ಯ ಸೌಲಭ್ಯಗಳು ದೊರಕುತ್ತಿಲ್ಲ. ಕೆಲವು ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆ, ತುರ್ತು ಔಷಧಿಗಳು ಕೂಡ ನಾಗರಿಕರಿಗೆ ಸಿಗದ ಪರಿಸ್ಥಿತಿ ಉಂಟಾಗಿದೆ" ಎಂದು ಅವರು ಹೇಳಿದರು.

ಇದನ್ನೂ ಓದಿ : ಸುಡಾನ್​​ ಸೇನಾ ಸಂಘರ್ಷ.. ಸಂಕಷ್ಟದಲ್ಲಿ 31 ಕನ್ನಡಿಗರು, ನೆರವಿಗೆ ಮನವಿ

"ಸುಡಾನ್‌ನ ಆರೋಗ್ಯ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, 20 ಆರೋಗ್ಯ ಕೇಂದ್ರಗಳಲ್ಲಿ ಕೆಲಸ ಮಾಡುವುದನ್ನು ನಿಲ್ಲಿಸಲಾಗಿದೆ. ಜೊತೆಗೆ, ಈ ಭಾಗದಲ್ಲಿ 12ಕ್ಕೂ ಹೆಚ್ಚು ಆಸ್ಪತ್ರೆಗಳು ಮುಚ್ಚಿವೆ. ಪರಿಣಾಮ ಸಂಘರ್ಷದಲ್ಲಿ ಗಾಯಗೊಂಡ ಜನರು ಚಿಕಿತ್ಸೆ ಪಡೆಯಲು ಪರದಾಡುವಂತಾಗಿದೆ" ಎಂದಿದ್ದಾರೆ.

ಬಳಿಕ ಮಾತನಾಡಿದ ಯುನಿಸೆಫ್ ವಕ್ತಾರ ಜೇಮ್ಸ್ ಎಲ್ಡರ್, "ಹೀಗೆ ಸಂಘರ್ಷ ಮುಂದುವರೆದರೆ ಮಕ್ಕಳ ಮೇಲೆ ವಿನಾಶಕಾರಿ ಪರಿಣಾಮ ಬೀರಲಿದೆ. ಈಗಾಗಲೇ ಒಂಬತ್ತು ಮಕ್ಕಳು ಮೃತಪಟ್ಟಿದ್ದು, 50 ಮಂದಿ ಗಾಯಗೊಂಡಿರುವ ವರದಿ ಲಭ್ಯವಾಗಿದೆ. ಹೀಗೆ ಹೋರಾಟ ಮುಂದುವರಿದರೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಜೊತೆಗೆ, ಸುಡಾನ್ ದೇಶವು ಮಕ್ಕಳ ವಿಚಾರದಲ್ಲಿ ವಿಶ್ವದ ಅತಿ ಹೆಚ್ಚು ಅಪೌಷ್ಟಿಕತೆಯ ಪ್ರಮಾಣವನ್ನು ಹೊಂದಿದೆ" ಎಂದರು.

ಇದನ್ನೂ ಓದಿ : ಸುಡಾನ್​ನಲ್ಲಿ ಸಿಲುಕಿರುವ ಮೈಸೂರು ಜನ: ರಕ್ಷಣೆ ಮಾಡುವಂತೆ ವಿಡಿಯೋ ಮೂಲಕ ಮನವಿ

ರಾಜಧಾನಿ ಖಾರ್ಟೌಮ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಡಾನ್ ಸೇನೆ ಮತ್ತು ಅರೆ ಸೇನಾ ಕ್ಷಿಪ್ರ ಬೆಂಬಲ ಪಡೆಗಳ (ಆರ್‌ಎಸ್‌ಎಫ್) ನಡುವೆ ಕಳೆದ ಶನಿವಾರದಿಂದ ಕಾದಾಟ ಪ್ರಾರಮಭವಾಗಿದೆ. ಪರಿಣಾಮ, ಹೆಚ್ಚಿನ ಸಂಖ್ಯೆಯ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ, ಕೆಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಜೊತೆಗೆ, ಸ್ಥಳೀಯರು ಆಹಾರ, ನೀರು ಮತ್ತು ಔಷಧಿಗಳ ಕೊರತೆಯಿಂದ ಭಯ ಭೀತರಾಗಿದ್ದಾರೆ.

ಇದನ್ನೂ ಓದಿ : ಪಿಎಂ ಮೋದಿ, ಜೈಶಂಕರ್​ ಮನವಿ: ಸುಡಾನ್​ನಿಂದ ಭಾರತೀಯರ ಸ್ಥಳಾಂತರಿಸಿದ ಸೌದಿ ಅರೇಬಿಯಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.