ETV Bharat / international

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ; ಮಾಲ್ಡೀವ್ಸ್​ ಬಿಟ್ಟು ಸಿಂಗಾಪುರಕ್ಕೆ ತೆರಳಲು ಸಜ್ಜಾದ ರಾಜಪಕ್ಸ

ದ್ವೀಪರಾಷ್ಟ್ರ ಶ್ರೀಲಂಕಾ ಆರ್ಥಿಕವಾಗಿ ದಿವಾಳಿಯಾಗಿದೆ. ದೇಶದಲ್ಲಿ ಅರಾಜಕತೆಯೇ ನಿರ್ಮಾಣವಾಗಿದೆ. ಹಂಗಾಮಿ ಅಧ್ಯಕ್ಷ ರಾನಿಲ್‌ ವಿಕ್ರಮಸಿಂಘೆ ನಿನ್ನೆ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಇನ್ನೊಂದೆಡೆ, ದೇಶ ಬಿಟ್ಟು ಪರಾರಿಯಾಗಿ ಮಾಲ್ಡೀವ್ಸ್‌ನಲ್ಲಿರುವ ಗೊಟಬಯ ರಾಜಪಕ್ಸ ಸಿಂಗಾಪುರದತ್ತ ಪ್ರಯಾಣಿಸಲು ಸಿದ್ಧರಾಗಿದ್ದಾರೆ.

author img

By

Published : Jul 14, 2022, 9:54 AM IST

Gotabaya Rajapaksa awaits for private jet  Rajapaksa awaits for private jet for Singapore  Gotabaya Rajapaksa news  Sri Lanka economy crisis  ಸಿಂಗಾಪುರಕ್ಕೆ ಪ್ರಯಾಣ ಬೆಳಸಲಿರುವ ರಾಜಪಕ್ಸ  ಖಾಸಗಿ ಜೆಟ್​ಗಾಗಿ ಕಾಯುತ್ತಿರುವ ಗೋತಬಯ ರಾಜಪಕ್ಸ  ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸ ಸುದ್ದಿ  ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು
ಮಾಲ್ಡೀವ್ಸ್​ ಬಿಟ್ಟು ಸಿಂಗಾಪುರಕ್ಕೆ ರಾಜಪಕ್ಸ ಪ್ರಯಾಣ

ಕೊಲಂಬೊ: ಶ್ರೀಲಂಕಾದ ತೀವ್ರ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಮಾಲ್ಡೀವ್ಸ್‌ಗೆ ಹಾರಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ ಇದೀಗ ಸಿಂಗಾಪುರಕ್ಕೆ ತೆರಳಲು ತಯಾರಿ ನಡೆಸುತ್ತಿದ್ದಾರೆ. ದೇಶಾದ್ಯಂತ ನಿನ್ನೆಯಿಂದ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಪಶ್ಚಿಮ ಪ್ರಾಂತ್ಯದಲ್ಲಿ ಕರ್ಫ್ಯೂ ವಿಧಿಸಲಾಗಿದೆ.

ಇನ್ನೊಂದೆಡೆ, ಮಾಲ್ಡೀವ್ಸ್‌ನ ಮಾಲೆಯಿಂದ ಈಗಾಗಲೇ ಗೊಟಬಯ ರಾಜಪಕ್ಸ ಕುಟುಂಬ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಬೇಕಿತ್ತು. ಪತ್ನಿ ಐಯೋಮಾ ರಾಜಪಕ್ಸ ಮತ್ತು ಇಬ್ಬರು ಭದ್ರತಾ ಅಧಿಕಾರಿಗಳು ನಿನ್ನೆ ರಾತ್ರಿ ಸಿಂಗಾಪುರಕ್ಕೆ SQ437 ವಿಮಾನದಲ್ಲಿ ತೆರಳುವ ನಿರೀಕ್ಷೆಯಿತ್ತು. ಆದರೆ ಭದ್ರತಾ ಸಮಸ್ಯೆಗಳಿಂದಾಗಿ ವಿಮಾನವೇರಲು ಅವರಿಗೆ ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಶ್ರೀಲಂಕಾದಲ್ಲಿ ಮತ್ತೆ ಭುಗಿಲೆದ್ದ ಪ್ರತಿಭಟನೆ: ತುರ್ತು ಪರಿಸ್ಥಿತಿ ಘೋಷಿಸಿದ ಹಂಗಾಮಿ ಅಧ್ಯಕ್ಷ ವಿಕ್ರಮಸಿಂಘೆ

ಹೀಗಾಗಿ, ಇಕ್ಕಟ್ಟಿಗೆ ಸಿಲುಕಿರುವ ಅಧ್ಯಕ್ಷರಿಗೆ ಖಾಸಗಿ ವಿಮಾನ ವ್ಯವಸ್ಥೆ ಮಾಡುವ ಕುರಿತು ಪ್ರಸ್ತುತ ಮಾತುಕತೆಗಳು ನಡೆಯುತ್ತಿವೆ. ಬುಧವಾರ ಶ್ರೀಲಂಕಾ ರಕ್ಷಣಾ ಸಚಿವಾಲಯದ ಸಂಪೂರ್ಣ ಅನುಮೋದನೆಯ ನಂತರ ಜುಲೈ 13 ರಂದು ಬೆಳಗ್ಗೆ ವಾಯುಪಡೆಯ ವಿಮಾನದ ಮೂಲಕ ಗೊಟಬಯ ಕುಟುಂಬಸಮೇತ ಮಾಲ್ಡೀವ್ಸ್‌ಗೆ ಬಂದಿಳಿದಿದ್ದರು.

ಕೊಲಂಬೊ: ಶ್ರೀಲಂಕಾದ ತೀವ್ರ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಮಾಲ್ಡೀವ್ಸ್‌ಗೆ ಹಾರಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ ಇದೀಗ ಸಿಂಗಾಪುರಕ್ಕೆ ತೆರಳಲು ತಯಾರಿ ನಡೆಸುತ್ತಿದ್ದಾರೆ. ದೇಶಾದ್ಯಂತ ನಿನ್ನೆಯಿಂದ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಪಶ್ಚಿಮ ಪ್ರಾಂತ್ಯದಲ್ಲಿ ಕರ್ಫ್ಯೂ ವಿಧಿಸಲಾಗಿದೆ.

ಇನ್ನೊಂದೆಡೆ, ಮಾಲ್ಡೀವ್ಸ್‌ನ ಮಾಲೆಯಿಂದ ಈಗಾಗಲೇ ಗೊಟಬಯ ರಾಜಪಕ್ಸ ಕುಟುಂಬ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಬೇಕಿತ್ತು. ಪತ್ನಿ ಐಯೋಮಾ ರಾಜಪಕ್ಸ ಮತ್ತು ಇಬ್ಬರು ಭದ್ರತಾ ಅಧಿಕಾರಿಗಳು ನಿನ್ನೆ ರಾತ್ರಿ ಸಿಂಗಾಪುರಕ್ಕೆ SQ437 ವಿಮಾನದಲ್ಲಿ ತೆರಳುವ ನಿರೀಕ್ಷೆಯಿತ್ತು. ಆದರೆ ಭದ್ರತಾ ಸಮಸ್ಯೆಗಳಿಂದಾಗಿ ವಿಮಾನವೇರಲು ಅವರಿಗೆ ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಶ್ರೀಲಂಕಾದಲ್ಲಿ ಮತ್ತೆ ಭುಗಿಲೆದ್ದ ಪ್ರತಿಭಟನೆ: ತುರ್ತು ಪರಿಸ್ಥಿತಿ ಘೋಷಿಸಿದ ಹಂಗಾಮಿ ಅಧ್ಯಕ್ಷ ವಿಕ್ರಮಸಿಂಘೆ

ಹೀಗಾಗಿ, ಇಕ್ಕಟ್ಟಿಗೆ ಸಿಲುಕಿರುವ ಅಧ್ಯಕ್ಷರಿಗೆ ಖಾಸಗಿ ವಿಮಾನ ವ್ಯವಸ್ಥೆ ಮಾಡುವ ಕುರಿತು ಪ್ರಸ್ತುತ ಮಾತುಕತೆಗಳು ನಡೆಯುತ್ತಿವೆ. ಬುಧವಾರ ಶ್ರೀಲಂಕಾ ರಕ್ಷಣಾ ಸಚಿವಾಲಯದ ಸಂಪೂರ್ಣ ಅನುಮೋದನೆಯ ನಂತರ ಜುಲೈ 13 ರಂದು ಬೆಳಗ್ಗೆ ವಾಯುಪಡೆಯ ವಿಮಾನದ ಮೂಲಕ ಗೊಟಬಯ ಕುಟುಂಬಸಮೇತ ಮಾಲ್ಡೀವ್ಸ್‌ಗೆ ಬಂದಿಳಿದಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.