ಕೊಪ್ಪಳ: ಇಲ್ಲಿನ ಕುಷ್ಟಗಿ ರಸ್ತೆಯ ಬಿ.ಟಿ. ಪಾಟೀಲ್ ನಗರದಲ್ಲಿ ತಡರಾತ್ರಿ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸೋಮು ಹಾಗೂ ಕಾರ್ತಿಕ್ ಗಾಯಗೊಂಡವರು. ಈ ಪೈಕಿ ಸೋಮು ತಲೆಗೆ ತೀವ್ರ ಪೆಟ್ಟು ಬಿದ್ದಿದೆ. ಬೈಕ್ಗೆ ಡಿಕ್ಕಿ ಹೊಡೆದು ಬಳಿಕ ಕಾರು ರಸ್ತೆ ವಿಭಜಕದ ಮೇಲೆ ಹತ್ತಿದೆ.
ಕೊಪ್ಪಳದಿಂದ ಬೇವೂರು ಗ್ರಾಮಕ್ಕೆ ಹೊರಟಿದ್ದ ಕಾರು ಏಕಾಏಕಿ ಬೈಕ್ ಸೈಡ್ ತೆಗೆದುಕೊಂಡ ಹಿನ್ನೆಲೆಯಲ್ಲಿ ಅಪಘಾತ ನಡೆದಿದೆ ಎನ್ನಲಾಗಿದೆ. ಕಾರು ಚಾಲಕ ಪರಾರಿಯಾಗಿದ್ದಾನೆ. ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.