ETV Bharat / jagte-raho

ನಿರ್ಭಯಾ ಸೇಫ್ ಸಿಟಿ ಟೆಂಡರ್ ವಿವಾದ : ನಿಂಬಾಳ್ಕರ್ ವಿರುದ್ಧ ಡಿ.ರೂಪಾ ಆಕ್ರೋಶ

ಇಂದಿನಿಂದ ನಾನು ಹೊಸ ಹುದ್ದೆ ನಿಭಾಯಿಸಲಿದ್ದೇನೆ. ವರ್ಗಾವಣೆ ಆಗಿರುವುದು ನನಗೆ ಬೇಸರವಿಲ್ಲ, ಮುಂದೆಯೂ ನಾನು ಭ್ರಷ್ಟಾಚಾರದ ವಿರುದ್ಧ ಕೆಲಸ ನಿರ್ವಹಿಸುತ್ತೇನೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು. ನನ್ನ ವರ್ಗಾವಣೆಯಿಂದ ತಪ್ಪಿತಸ್ಥರಿಗೆ ಶಿಕ್ಷೆಯಾದ್ರೆ ಖುಷಿಯ ವಿಚಾರ..

author img

By

Published : Jan 1, 2021, 1:16 PM IST

ನಿಂಬಾಳ್ಕರ್ ವಿರುದ್ಧ ಡಿ ರೂಪಾ ಆಕ್ರೋಶ
ನಿಂಬಾಳ್ಕರ್ ವಿರುದ್ಧ ಡಿ ರೂಪಾ ಆಕ್ರೋಶ

ಬೆಂಗಳೂರು : ನಿರ್ಭಯಾ ಯೋಜನೆಯಡಿ ಮಹಿಳೆಯರ ಸುರಕ್ಷತೆಗೆಂದು ಅನುಮೋದನೆಗೊಂಡ ಟೆಂಡರ್​ನಲ್ಲಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪವನ್ನು ಐಪಿಎಸ್ ಅಧಿಕಾರಿ ಡಿ.ರೂಪಾ ಮಾಡಿದ್ದರು. ಹೀಗಾಗಿ ನಿನ್ನೆ ಇಬ್ಬರು ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.

ಗೃಹ ಇಲಾಖೆಯ ಮೊದಲ ಮಹಿಳಾ ಕಾರ್ಯದರ್ಶಿಯಾಗಿ ಡಿ ರೂಪಾ ಆಯ್ಕೆಯಾಗಿದ್ದರು. ಆದರೆ, ಟೆಂಡರ್ ಅಕ್ರಮ ಆರೋಪ ಹಿನ್ನೆಲೆ ವರ್ಗಾವಣೆಯಾಗಿದ್ದು, ಇದೀಗ ವರ್ಗಾವಣೆ ಬೆನ್ನಲ್ಲೇ ಡಿ ರೂಪಾ, ನಿಂಬಾಳ್ಕರ್ ವಿರುದ್ಧ ಟ್ವಿಟರ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ರೂಪಾ ಪರವಾಗಿ ಕಮೆಂಟ್ಸ್​ ಮಾಡುತ್ತಿದ್ದಾರೆ.

ಡಿ.ರೂಪಾ ಟ್ವೀಟ್​
ಡಿ.ರೂಪಾ ಟ್ವೀಟ್​

ಇಂದಿನಿಂದ ನಾನು ಹೊಸ ಹುದ್ದೆ ನಿಭಾಯಿಸಲಿದ್ದೇನೆ. ವರ್ಗಾವಣೆ ಆಗಿರುವುದು ನನಗೆ ಬೇಸರವಿಲ್ಲ, ಮುಂದೆಯೂ ನಾನು ಭ್ರಷ್ಟಾಚಾರದ ವಿರುದ್ಧ ಕೆಲಸ ನಿರ್ವಹಿಸುತ್ತೇನೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು. ನನ್ನ ವರ್ಗಾವಣೆಯಿಂದ ತಪ್ಪಿತಸ್ಥರಿಗೆ ಶಿಕ್ಷೆಯಾದ್ರೆ ಖುಷಿಯ ವಿಚಾರ ಎಂದು ಟ್ವೀಟ್​ ಮಾಡಿದ್ದಾರೆ.

ಡಿ.ರೂಪಾ ಟ್ವೀಟ್​
ಡಿ.ರೂಪಾ ಟ್ವೀಟ್​

ಕರಕುಶಲ ಅಭಿವೃದ್ಧಿ ನಿಗಮದ ಎಂಡಿಯಾಗಿ ಡಿ. ರೂಪಾ ಅವರನ್ನು ವರ್ಗಾವಣೆ‌ ಮಾಡಲಾಗಿದೆ. ವರ್ಗಾವಣೆಯಾದ ತಕ್ಷಣ ಸಾಮಾಜಿಕ ಜಾಲತಾಣದಲ್ಲಿ ರೂಪಾ, ನಿಂಬಾಳ್ಕರ್ ವಿರುದ್ಧ ಗುಡುಗಿದ್ದಾರೆ. ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಬಾಳ್ಕರ್ ವಿರುದ್ಧ ಕ್ರಮಕೈಗೊಳ್ಳಲು ಸಿಬಿಐ, ಸರ್ಕಾರಕ್ಕೆ ಅನುಮತಿ ಕೇಳಿತ್ತು.

ಆದರೆ, ಒಂದು ವರ್ಷದಿಂದ ಹೇಮಂತ್ ನಿಂಬಾಳ್ಕರ್ ವಿರುದ್ಧ ಸರ್ಕಾರ ತನಿಖೆಗೆ ಅನುಮತಿ ನೀಡಿಲ್ಲ. ನಾನು‌ ಗೃಹ ಇಲಾಖೆ ಕಾರ್ಯದರ್ಶಿಯಾದ ನಂತರ ತನಿಖೆಗೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ನೀಡಲಾಗಿತ್ತು. ಆದರೂ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ನಿರ್ಭಯಾ ಸೇಫ್ ಸಿಟಿ ಟೆಂಡರ್ ವಿವಾದ: ನಿಂಬಾಳ್ಕರ್ ಪಾತ್ರದ ತನಿಖೆ ನಡೆಸಲು ಡಿ. ರೂಪಾ ಆಗ್ರಹ

ಬೆಂಗಳೂರು : ನಿರ್ಭಯಾ ಯೋಜನೆಯಡಿ ಮಹಿಳೆಯರ ಸುರಕ್ಷತೆಗೆಂದು ಅನುಮೋದನೆಗೊಂಡ ಟೆಂಡರ್​ನಲ್ಲಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪವನ್ನು ಐಪಿಎಸ್ ಅಧಿಕಾರಿ ಡಿ.ರೂಪಾ ಮಾಡಿದ್ದರು. ಹೀಗಾಗಿ ನಿನ್ನೆ ಇಬ್ಬರು ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.

ಗೃಹ ಇಲಾಖೆಯ ಮೊದಲ ಮಹಿಳಾ ಕಾರ್ಯದರ್ಶಿಯಾಗಿ ಡಿ ರೂಪಾ ಆಯ್ಕೆಯಾಗಿದ್ದರು. ಆದರೆ, ಟೆಂಡರ್ ಅಕ್ರಮ ಆರೋಪ ಹಿನ್ನೆಲೆ ವರ್ಗಾವಣೆಯಾಗಿದ್ದು, ಇದೀಗ ವರ್ಗಾವಣೆ ಬೆನ್ನಲ್ಲೇ ಡಿ ರೂಪಾ, ನಿಂಬಾಳ್ಕರ್ ವಿರುದ್ಧ ಟ್ವಿಟರ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ರೂಪಾ ಪರವಾಗಿ ಕಮೆಂಟ್ಸ್​ ಮಾಡುತ್ತಿದ್ದಾರೆ.

ಡಿ.ರೂಪಾ ಟ್ವೀಟ್​
ಡಿ.ರೂಪಾ ಟ್ವೀಟ್​

ಇಂದಿನಿಂದ ನಾನು ಹೊಸ ಹುದ್ದೆ ನಿಭಾಯಿಸಲಿದ್ದೇನೆ. ವರ್ಗಾವಣೆ ಆಗಿರುವುದು ನನಗೆ ಬೇಸರವಿಲ್ಲ, ಮುಂದೆಯೂ ನಾನು ಭ್ರಷ್ಟಾಚಾರದ ವಿರುದ್ಧ ಕೆಲಸ ನಿರ್ವಹಿಸುತ್ತೇನೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು. ನನ್ನ ವರ್ಗಾವಣೆಯಿಂದ ತಪ್ಪಿತಸ್ಥರಿಗೆ ಶಿಕ್ಷೆಯಾದ್ರೆ ಖುಷಿಯ ವಿಚಾರ ಎಂದು ಟ್ವೀಟ್​ ಮಾಡಿದ್ದಾರೆ.

ಡಿ.ರೂಪಾ ಟ್ವೀಟ್​
ಡಿ.ರೂಪಾ ಟ್ವೀಟ್​

ಕರಕುಶಲ ಅಭಿವೃದ್ಧಿ ನಿಗಮದ ಎಂಡಿಯಾಗಿ ಡಿ. ರೂಪಾ ಅವರನ್ನು ವರ್ಗಾವಣೆ‌ ಮಾಡಲಾಗಿದೆ. ವರ್ಗಾವಣೆಯಾದ ತಕ್ಷಣ ಸಾಮಾಜಿಕ ಜಾಲತಾಣದಲ್ಲಿ ರೂಪಾ, ನಿಂಬಾಳ್ಕರ್ ವಿರುದ್ಧ ಗುಡುಗಿದ್ದಾರೆ. ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಬಾಳ್ಕರ್ ವಿರುದ್ಧ ಕ್ರಮಕೈಗೊಳ್ಳಲು ಸಿಬಿಐ, ಸರ್ಕಾರಕ್ಕೆ ಅನುಮತಿ ಕೇಳಿತ್ತು.

ಆದರೆ, ಒಂದು ವರ್ಷದಿಂದ ಹೇಮಂತ್ ನಿಂಬಾಳ್ಕರ್ ವಿರುದ್ಧ ಸರ್ಕಾರ ತನಿಖೆಗೆ ಅನುಮತಿ ನೀಡಿಲ್ಲ. ನಾನು‌ ಗೃಹ ಇಲಾಖೆ ಕಾರ್ಯದರ್ಶಿಯಾದ ನಂತರ ತನಿಖೆಗೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ನೀಡಲಾಗಿತ್ತು. ಆದರೂ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ನಿರ್ಭಯಾ ಸೇಫ್ ಸಿಟಿ ಟೆಂಡರ್ ವಿವಾದ: ನಿಂಬಾಳ್ಕರ್ ಪಾತ್ರದ ತನಿಖೆ ನಡೆಸಲು ಡಿ. ರೂಪಾ ಆಗ್ರಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.