ಬೆಂಗಳೂರು: 29 ಅಂತಸ್ತಿನ ಬಹುಮಹಡಿ ಕಟ್ಟಡದಿಂದ ಯುವಕನೋರ್ವ ಬಿದ್ದು ಮೃತಪಟ್ಟಿರುವ ಘಟನೆ ನಗರದ ಕೋಣನಕುಂಟೆ ಯಲ್ಲಿ ನಡೆದಿದೆ.
ಬೆಂಗಳೂರು ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತನನ್ನು ಸುನಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಬೆಂಗಳೂರಿಗೆ ಎಂಟು ವರ್ಷದ ಹಿಂದೆ ಬಂದಿದ್ದ ಸುನಿಲ್ ಗ್ಲಾಸ್ ಕಟ್ಟಿಂಗ್ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ನಿನ್ನೆ ಸಂಜೆ 5.30ರ ಸುಮಾರಿಗೆ ಕಟ್ಟಡದಿಂದ ಬಿದ್ದು ಸಾವಿಗೀಡಾಗಿದ್ದು, ಇಂದು ತಡವಾಗಿ ಗೊತ್ತಾಗಿದೆ. ಸಂಬಂಧಿಕರು ಇಂದು ಬಹು ಮಹಡಿ ಕಟ್ಟಡದ ಮುಂದೆ ಶವವನ್ನಿಟ್ಟು ನ್ಯಾಯ ಸಿಗಬೇಕೆಂದು ಹೋರಾಟ ನಡೆಸುತ್ತಿದ್ದಾರೆ. ಸಾವಿಗೆ ನಿಖರ ಕಾರಣಗಳನ್ನು ಪರಿಶೀಲಿಸುತ್ತಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.