ETV Bharat / jagte-raho

ಯಾದಗಿರಿ: ಸಾಲಬಾಧೆ ತಾಳದೆ ವಿಷ ಕುಡಿದು ರೈತ ಆತ್ಮಹತ್ಯೆ

author img

By

Published : Sep 22, 2020, 4:48 AM IST

ವಡಗೇರಾ ತಾಲೂಕಿನ ಕೋಡಾಲ ಗ್ರಾಮದ ಖಾಸಿಂಸಾಬ್ (52) ಎಂಬುವವರು ಆತ್ಮಹತ್ಯೆ ಮಾಡಿಕೊಂಡ ರೈತ. ಕಳೆದ ಎರಡು ವರ್ಷಗಳಿಂದ ತನ್ನ 6 ಎಕರೆ ಜಮೀನಿನಲ್ಲಿ ಸಾಲ ಮಾಡಿ ಬೆಳೆದ ಬೆಳೆ ಸರಿಯಾದ ಸಮಯಕ್ಕೆ ಮಳೆ ಬಾರದೆ ನಷ್ಟ ಅನುಭವಿಸಿದ್ದ ಎನ್ನಲಾಗುತ್ತಿದೆ.

suicide
ಆತ್ಮಹತ್ಯೆ

ಯಾದಗಿರಿ: ಸಾಲಬಾದೆ ತಾಳದೆ ರೈತನೊರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ವಡಗೇರಾ ತಾಲೂಕಿನ ಕೋಡಾಲ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಖಾಸಿಂಸಾಬ್ (52) ಎಂಬುವವರು ಆತ್ಮಹತ್ಯೆ ಮಾಡಿಕೊಂಡ ರೈತ. ಕಳೆದ ಎರಡು ವರ್ಷಗಳಿಂದ ತನ್ನ 6 ಎಕರೆ ಜಮೀನಿನಲ್ಲಿ ಸಾಲ ಮಾಡಿ ಬೆಳೆದ ಬೆಳೆ ಸರಿಯಾದ ಸಮಯಕ್ಕೆ ಮಳೆ ಬಾರದೆ ನಷ್ಟ ಅನುಭವಿಸಿದ್ದ ಎನ್ನಲಾಗುತ್ತಿದೆ.

ಬ್ಯಾಂಕ್, ಕೈ ಸಾಲ ಸೇರಿ ಖಾಸಿಂಸಾಬ್ 7 ಲಕ್ಷ ರೂ.ಯಷ್ಟು ಸಾಲ ಮಾಡಿಕೊಂಡಿದ್ದ. ಮಾಡಿದ ಸಾಲ ತಿರಿಸಲಾಗಾದೆ ತೀವ್ರ ಮನನೊಂದು ನಿನ್ನೆ ಮನೆಯಲ್ಲಿ ವಿಷ ಸೇವಿಸಿದ್ದ. ಖಾಸಿಂಸಾಬ್ ನನ್ನು ಚಿಕಿತ್ಸೆಗಾಗಿ ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ವಡಗೇರಾ ಠಾಣೆ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

ಯಾದಗಿರಿ: ಸಾಲಬಾದೆ ತಾಳದೆ ರೈತನೊರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ವಡಗೇರಾ ತಾಲೂಕಿನ ಕೋಡಾಲ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಖಾಸಿಂಸಾಬ್ (52) ಎಂಬುವವರು ಆತ್ಮಹತ್ಯೆ ಮಾಡಿಕೊಂಡ ರೈತ. ಕಳೆದ ಎರಡು ವರ್ಷಗಳಿಂದ ತನ್ನ 6 ಎಕರೆ ಜಮೀನಿನಲ್ಲಿ ಸಾಲ ಮಾಡಿ ಬೆಳೆದ ಬೆಳೆ ಸರಿಯಾದ ಸಮಯಕ್ಕೆ ಮಳೆ ಬಾರದೆ ನಷ್ಟ ಅನುಭವಿಸಿದ್ದ ಎನ್ನಲಾಗುತ್ತಿದೆ.

ಬ್ಯಾಂಕ್, ಕೈ ಸಾಲ ಸೇರಿ ಖಾಸಿಂಸಾಬ್ 7 ಲಕ್ಷ ರೂ.ಯಷ್ಟು ಸಾಲ ಮಾಡಿಕೊಂಡಿದ್ದ. ಮಾಡಿದ ಸಾಲ ತಿರಿಸಲಾಗಾದೆ ತೀವ್ರ ಮನನೊಂದು ನಿನ್ನೆ ಮನೆಯಲ್ಲಿ ವಿಷ ಸೇವಿಸಿದ್ದ. ಖಾಸಿಂಸಾಬ್ ನನ್ನು ಚಿಕಿತ್ಸೆಗಾಗಿ ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ವಡಗೇರಾ ಠಾಣೆ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.