ಹುಬ್ಬಳ್ಳಿ: ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಅಶೋಕ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಪರಶುರಾಮ ಬೊಳನ್ನವರ (24), ಬಸಯ್ಯ ಪೂಜಾರ (19), ಗಣೇಶ ಕಾಕಡೆ(24), ಭೀಮ ಜಾಡರ(21), ಶಿವಾನಂದ ಕಾಳೆ (24) ಬಂಧಿತರು. ಬಂಧಿತರಿಂದ 9,500 ರೂ. ಮೌಲ್ಯದ 190 ಗ್ರಾಂ ಗಾಂಜಾ, ಒಂದು ಬೈಕ್, ಐದು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಹುಬ್ಬಳ್ಳಿಯ ನೃಪತುಂಗ ಬೆಟ್ಟದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿ ಅಶೋಕ ನಗರ ಠಾಣೆ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.