ETV Bharat / jagte-raho

ಭೀಕರ ರಸ್ತೆ ಅಪಘಾತ: ಮೂವರ ಸಜೀವ ದಹನ

ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಹರಿಯಾಣ ಪೊಲೀಸರು, ಪರಾರಿಯಾಗಿರುವ ಟ್ರ್ಯಾಕ್ಟರ್ ಚಾಲಕನನ್ನು ಹುಡುಕುತ್ತಿದ್ದಾರೆ.

author img

By

Published : Oct 9, 2020, 10:50 AM IST

Haryana
ಮೂವರ ಸಜೀವ ದಹನ

ಹರಿಯಾಣ: ಕಾರೊಂದು ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು ಮೂವರು ಸಜೀವ ದಹನವಾಗಿರುವ ಘಟನೆ ಹರಿಯಾಣದ ಸೋನಿಪತ್ ಜಿಲ್ಲೆಯಲ್ಲಿ ನಡೆದಿದೆ.

ಸೋನಿಪತ್​ನ ಖಾನ್ಪುರ್ ಕಲಾನ್-ಕನನಾ ರಸ್ತೆಯಲ್ಲಿ ನಿನ್ನೆ ಸಂಜೆ ಅವಘಡ ನಡೆದಿದೆ. ಮೃತಪಟ್ಟವರಲ್ಲಿ ಕಾರು ಚಾಲಕನನ್ನು ಬಜಾನಾ ಖುರ್ದ್ ಗ್ರಾಮದ ನಿವಾಸಿ ಸುರೇಂದ್ರ ಎಂದು ಗುರುತಿಸಲಾಗಿದೆ. ಉಳಿದ ಇಬ್ಬರ ಬಗ್ಗೆ ಮಾಹಿತಿ ದೊರೆತಿಲ್ಲ.

ಘಟನಾ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪರಾರಿಯಾಗಿರುವ ಟ್ರ್ಯಾಕ್ಟರ್ ಚಾಲಕನನ್ನು ಹುಡುಕುತ್ತಿದ್ದಾರೆ.

ಹರಿಯಾಣ: ಕಾರೊಂದು ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು ಮೂವರು ಸಜೀವ ದಹನವಾಗಿರುವ ಘಟನೆ ಹರಿಯಾಣದ ಸೋನಿಪತ್ ಜಿಲ್ಲೆಯಲ್ಲಿ ನಡೆದಿದೆ.

ಸೋನಿಪತ್​ನ ಖಾನ್ಪುರ್ ಕಲಾನ್-ಕನನಾ ರಸ್ತೆಯಲ್ಲಿ ನಿನ್ನೆ ಸಂಜೆ ಅವಘಡ ನಡೆದಿದೆ. ಮೃತಪಟ್ಟವರಲ್ಲಿ ಕಾರು ಚಾಲಕನನ್ನು ಬಜಾನಾ ಖುರ್ದ್ ಗ್ರಾಮದ ನಿವಾಸಿ ಸುರೇಂದ್ರ ಎಂದು ಗುರುತಿಸಲಾಗಿದೆ. ಉಳಿದ ಇಬ್ಬರ ಬಗ್ಗೆ ಮಾಹಿತಿ ದೊರೆತಿಲ್ಲ.

ಘಟನಾ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪರಾರಿಯಾಗಿರುವ ಟ್ರ್ಯಾಕ್ಟರ್ ಚಾಲಕನನ್ನು ಹುಡುಕುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.