ETV Bharat / jagte-raho

ಬಂಟ್ವಾಳ ರೌಡಿಶೀಟರ್ ಕೊಲೆ ಪ್ರಕರಣ: ಕಾಲಿಗೆ ಗುಂಡಿಕ್ಕಿ ಕೊಲೆ ಆರೋಪಿ ಸೆರೆ

author img

By

Published : Oct 25, 2020, 4:42 AM IST

ಬಂಟ್ವಾಳ ರೌಡಿಶೀಟರ್ ಕೊಲೆ ಪ್ರಕರಣದ ಆರೋಪಿ ಖಲೀಲ್​ ಎಂಬಾತ ಮಂಗಳೂರು- ಬೆಂಗಳೂರು ಹೆದ್ದಾರಿ ಮೂಲಕ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದ. ನಿನ್ನೆ ಬೆಳಗ್ಗೆ ಓರ್ವ ಪೊಲೀಸರ ಕಾರ್ಯಾಚರಣೆಯಿಂದ ಬಂಧಿತನಾಗಿದ್ದ. ನಂತರದಲ್ಲಿ ಕಾಡಿನಲ್ಲಿ ತಪ್ಪಿಸಿಕೊಂಡು ಹೋಗುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

bantwal
ಬಂಟ್ವಾಳ

ನೆಲ್ಯಾಡಿ(ದ.ಕ): ರೌಡಿಶೀಟರ್ ಹತ್ಯೆ ಪ್ರಕರಣದ ಆರೋಪಿಯೊಬ್ಬನ ಕಾಲಿಗೆ ಬಂಟ್ವಾಳ ಪೊಲೀಸರು ಗುಂಡಿನ ದಾಳಿಗೈದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ಖಲೀಲ್​ ಎಂಬಾತ ಮಂಗಳೂರು- ಬೆಂಗಳೂರು ಹೆದ್ದಾರಿ ಮೂಲಕ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದ. ನಿನ್ನೆ ಬೆಳಗ್ಗೆ ಓರ್ವ ಪೊಲೀಸರ ಕಾರ್ಯಾಚರಣೆಯಿಂದ ಬಂಧಿತನಾಗಿದ್ದ. ನಂತರದಲ್ಲಿ ಕಾಡಿನಲ್ಲಿ ತಪ್ಪಿಸಿಕೊಂಡು ಹೋಗುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶನಿವಾರರ ಮುಂಜಾನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಿಯಶಾಂತಿ ಸಮೀಪದ ರೆಖ್ಯಾದಲ್ಲಿ ಈ ಘಟನೆ ನಡೆದಿದ್ದು, ಮೂವರು ಆರೋಪಿಗಳು ಕಾರಿನಲ್ಲಿ ಬೆಂಗಳೂರು ಕಡೆಗೆ ಪರಾರಿಯಾಗಲು ತೆರಳುತ್ತಿದ್ದರು. ಈ ವೇಳೆ ಕಾರನ್ನು ಪೊಲೀಸರು ಬೆನ್ನಟ್ಟಿ ಅಡ್ಡಗಟ್ಟಿದ್ದು, ಆರೋಪಿಗಳು ಕಾಡು ದಾರಿ ಹಿಡಿದು ತಪ್ಪಿಸಲು ಯತ್ನಿಸಿದ್ದರು.

ಈ ವೇಳೆ ಬಂಟ್ವಾಳ ಠಾಣಾ ಪಿಎಸ್​ಐ ಅವಿನಾಶ್ ಅವರು ಫೈರಿಂಗ್ ನಡೆಸಿದರು. ಆರೋಪಿ ಇಬ್ರಾಹಿಂ ಖಲೀಲ್ ಕಾಲಿಗೆ ಗುಂಡು ತಗಲಿದು. ಬಳಿಕ ಆತನನ್ನು ಪೊಲೀಸರು ವಶಕ್ಕೆ ಪಡೆದು ಚಿಕಿತ್ಸೆ ಕೊಡಿಸಿದರು. ಮತ್ತಿಬ್ಬರು ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಂಡರು. ನಂತರದಲ್ಲಿ ಉಪ್ಪಿನಂಗಡಿ, ಧರ್ಮಸ್ಥಳ, ನೆಲ್ಯಾಡಿ, ಬಂಟ್ವಾಳ ಪೊಲೀಸರು ಕಾರ್ಯಚರಣೆ ನಡೆಸಿ ಈ ಇಬ್ಬರನ್ನೂ ಬಂಧಿಸಿದ್ದಾರೆ.

ಪಾಣೆಮಂಗಳೂರು ಸಮೀಪದ ನಂದಾವರ ಕೋಟೆ ನಿವಾಸಿ ಖಲೀಲ್ ಯಾನೆ ಇಬ್ರಾಹಿಂ ಖಲೀಲ್ (27 ) ಬೆಳಗ್ಗೆ ಬಂಧಿತನಾದ. ಹಫೀಜ್ ಯಾನೆ ಅಪ್ಪಿ (28) ಹಾಗೂ ತಪ್ಪಿಸಿಕೊಳ್ಳಲು ನೆರವಾಗಿದ್ದ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಎಸ್.ಪಿ. ಲಕ್ಷ್ಮೀಪ್ರಸಾದ್ ನೇತೃತ್ವದ ವಿಶೇಷ ತಂಡ ಕಾರ್ಯಾಚರಣೆ ನಡೆಸಿದೆ.

ನೆಲ್ಯಾಡಿ(ದ.ಕ): ರೌಡಿಶೀಟರ್ ಹತ್ಯೆ ಪ್ರಕರಣದ ಆರೋಪಿಯೊಬ್ಬನ ಕಾಲಿಗೆ ಬಂಟ್ವಾಳ ಪೊಲೀಸರು ಗುಂಡಿನ ದಾಳಿಗೈದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ಖಲೀಲ್​ ಎಂಬಾತ ಮಂಗಳೂರು- ಬೆಂಗಳೂರು ಹೆದ್ದಾರಿ ಮೂಲಕ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದ. ನಿನ್ನೆ ಬೆಳಗ್ಗೆ ಓರ್ವ ಪೊಲೀಸರ ಕಾರ್ಯಾಚರಣೆಯಿಂದ ಬಂಧಿತನಾಗಿದ್ದ. ನಂತರದಲ್ಲಿ ಕಾಡಿನಲ್ಲಿ ತಪ್ಪಿಸಿಕೊಂಡು ಹೋಗುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶನಿವಾರರ ಮುಂಜಾನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಿಯಶಾಂತಿ ಸಮೀಪದ ರೆಖ್ಯಾದಲ್ಲಿ ಈ ಘಟನೆ ನಡೆದಿದ್ದು, ಮೂವರು ಆರೋಪಿಗಳು ಕಾರಿನಲ್ಲಿ ಬೆಂಗಳೂರು ಕಡೆಗೆ ಪರಾರಿಯಾಗಲು ತೆರಳುತ್ತಿದ್ದರು. ಈ ವೇಳೆ ಕಾರನ್ನು ಪೊಲೀಸರು ಬೆನ್ನಟ್ಟಿ ಅಡ್ಡಗಟ್ಟಿದ್ದು, ಆರೋಪಿಗಳು ಕಾಡು ದಾರಿ ಹಿಡಿದು ತಪ್ಪಿಸಲು ಯತ್ನಿಸಿದ್ದರು.

ಈ ವೇಳೆ ಬಂಟ್ವಾಳ ಠಾಣಾ ಪಿಎಸ್​ಐ ಅವಿನಾಶ್ ಅವರು ಫೈರಿಂಗ್ ನಡೆಸಿದರು. ಆರೋಪಿ ಇಬ್ರಾಹಿಂ ಖಲೀಲ್ ಕಾಲಿಗೆ ಗುಂಡು ತಗಲಿದು. ಬಳಿಕ ಆತನನ್ನು ಪೊಲೀಸರು ವಶಕ್ಕೆ ಪಡೆದು ಚಿಕಿತ್ಸೆ ಕೊಡಿಸಿದರು. ಮತ್ತಿಬ್ಬರು ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಂಡರು. ನಂತರದಲ್ಲಿ ಉಪ್ಪಿನಂಗಡಿ, ಧರ್ಮಸ್ಥಳ, ನೆಲ್ಯಾಡಿ, ಬಂಟ್ವಾಳ ಪೊಲೀಸರು ಕಾರ್ಯಚರಣೆ ನಡೆಸಿ ಈ ಇಬ್ಬರನ್ನೂ ಬಂಧಿಸಿದ್ದಾರೆ.

ಪಾಣೆಮಂಗಳೂರು ಸಮೀಪದ ನಂದಾವರ ಕೋಟೆ ನಿವಾಸಿ ಖಲೀಲ್ ಯಾನೆ ಇಬ್ರಾಹಿಂ ಖಲೀಲ್ (27 ) ಬೆಳಗ್ಗೆ ಬಂಧಿತನಾದ. ಹಫೀಜ್ ಯಾನೆ ಅಪ್ಪಿ (28) ಹಾಗೂ ತಪ್ಪಿಸಿಕೊಳ್ಳಲು ನೆರವಾಗಿದ್ದ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಎಸ್.ಪಿ. ಲಕ್ಷ್ಮೀಪ್ರಸಾದ್ ನೇತೃತ್ವದ ವಿಶೇಷ ತಂಡ ಕಾರ್ಯಾಚರಣೆ ನಡೆಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.