ರಾಜಗಢ (ಮಧ್ಯಪ್ರದೇಶ): ಅಂತ್ಯಸಂಸ್ಕಾರ ಕಾರ್ಯವನ್ನು ನಿಲ್ಲಿಸಿದ ಪೊಲೀಸರು ಅರ್ಧ ಸುಟ್ಟ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಹೊತ್ತೊಯ್ದಿರುವ ವಿಲಕ್ಷಣ ಘಟನೆ ಮಧ್ಯಪ್ರದೇಶದ ರಾಜಗಢದಲ್ಲಿ ನಡೆದಿದೆ.
ಪ್ರೇಮ್ ಸಿಂಗ್ ಎಂಬವರು ಅನಾರೋಗ್ಯದಿಂದಾಗಿ ಶನಿವಾರ ಮೃತಪಟ್ಟಿದ್ದು, ಆತನ ಸಂಬಂಧಿಕರು ಭಾನುವಾರ ಅಂತ್ಯಕ್ರಿಯೆ ನೆರವೇರಿಸುತ್ತಿದ್ದರು. ಆದರೆ ಪತಿ ಸಾಯುವ ವೇಳೆಯಲ್ಲಿ ತವರು ಮನೆಯಲ್ಲಿದ್ದ ಪ್ರೇಮ್ ಸಿಂಗ್ರ ಪತ್ನಿ ರೇಖಾ ಬಾಯಿ, ಇದು ಸಹಜ ಸಾವಲ್ಲ, ಕೊಲೆ. ನನ್ನ ಗಂಡ ಸತ್ತಿರುವ ವಿಚಾರವನ್ನು ನನಗೆ ಯಾರೂ ಹೇಳಿಲ್ಲ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾಳೆ.
ಹೀಗಾಗಿ ತಕ್ಷಣವೇ ಪೊಲೀಸರು ಕ್ರಮ ಕೈಗೊಂಡಿದ್ದು, ಅಂತ್ಯಕ್ರಿಯೆಯನ್ನು ನಿಲ್ಲಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ರಾಜಗಢ ಪೊಲೀಸರು ತನಿಖೆ ನಡಸುತ್ತಿದ್ದಾರೆ.