ETV Bharat / jagte-raho

ಕರೌಲಿ ಅರ್ಚಕನ ಹತ್ಯೆ ಕೇಸ್​: ಆರೋಪಿಯ ಕುಟುಂಬಕ್ಕೆ ಗ್ರಾಮದಿಂದ ಬಹಿಷ್ಕಾರ - ಆರೋಪಿಯ ಕುಟುಂಬಕ್ಕೆ ಗ್ರಾಮದಿಂದ ಬಹಿಷ್ಕಾರ

ರಾಜಸ್ಥಾನದ ಕರೌಲಿಯ ಅರ್ಚಕನ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೈಲಾಶ್ ಮೀನಾನ ಕುಟುಂಬವನ್ನು ಗ್ರಾಮದಿಂದ ಬಹಿಷ್ಕಾರ ಹಾಕಲು ಗ್ರಾಮದ ಮುಖಂಡರು ಮುಂದಾಗಿದ್ದಾರೆ.

Rajasthan Priest Murder
ಕರೌಲಿ ಅರ್ಚಕನ ಹತ್ಯೆ ಕೇಸ್
author img

By

Published : Oct 19, 2020, 4:54 PM IST

ಕರೌಲಿ (ರಾಜಸ್ಥಾನ) : ಭೂವಿವಾದ ಹಿನ್ನೆಲೆ ದೇವಾಲಯದ ಅರ್ಚಕನನ್ನು ಬೆಂಕಿ ಹಚ್ಚಿ ಕೊಲೆಗೈದಿದ್ದ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯ ಬುಕ್ನಾ ಗ್ರಾಮದಲ್ಲಿ ವಾರದ ಹಿಂದೆ ನಡೆದಿತ್ತು. ಈ ಸಂಬಂಧ ಇದೀಗ ಗ್ರಾಮದ ಮುಖಂಡರು ಪಂಚಾಯಿತಿ ನಡೆಸಿ ಆರೋಪಿಯ ಕುಟುಂಬವನ್ನು ಗ್ರಾಮದಿಂದ ಬಹಿಷ್ಕಾರ ಹಾಕಲು ನಿರ್ಧರಿಸಿದ್ದಾರೆ.

ಅಕ್ಟೋಬರ್​ 7 ರಂದು ಘಟನೆ ನಡೆದಿದ್ದು, 24 ಗಂಟೆಗಳ ಒಳಗೇ ಪ್ರಮುಖ ಆರೋಪಿ ಕೈಲಾಶ್ ಮೀನಾ ಎಂಬವನನ್ನು ಬಂಧಿಸುವಲ್ಲಿ ಕರೌಲಿ ಪೊಲೀಸರು ಯಶಸ್ವಿಯಾಗಿದ್ದರು. ಇನ್ನೂ ನಾಲ್ವರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

55 ವರ್ಷದ ಅರ್ಚಕ ಗ್ರಾಮದಲ್ಲಿರುವ ದೇವಸ್ಥಾನವೊಂದರ ಆವರಣದಲ್ಲಿದ್ದ ಕೃಷಿ ಜಮೀನನ್ನು ನೋಡಿಕೊಳ್ಳುತ್ತಿದ್ದರು. ಈ ಜಮೀನನ್ನು ಕೈಲಾಶ್ ಮೀನಾ ಪಡೆದುಕೊಳ್ಳಲು ಯತ್ನಿಸುತ್ತಿದ್ದನು. ಜಮೀನಿನ ಸ್ಥಳದಲ್ಲಿ ಟೆಂಟ್​ ನಿರ್ಮಿಸಲು ಕೈಲಾಶ್ ಹಾಗೂ ಇತರರು ಮುಂದಾಗಿದ್ದಾರೆ. ಇದನ್ನು ತಡೆಯಲು ಬಂದ ಅರ್ಚಕನನ್ನು ಟೆಂಟ್​ಗೆ ಬೆಂಕಿ ಹಚ್ಚಿ ಅದರಲ್ಲಿ ದೂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಅರ್ಚಕ ಸ್ಥಳದಲ್ಲೇ ಮೃತಪಟ್ಟಿದ್ದರು.

ಕರೌಲಿ (ರಾಜಸ್ಥಾನ) : ಭೂವಿವಾದ ಹಿನ್ನೆಲೆ ದೇವಾಲಯದ ಅರ್ಚಕನನ್ನು ಬೆಂಕಿ ಹಚ್ಚಿ ಕೊಲೆಗೈದಿದ್ದ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯ ಬುಕ್ನಾ ಗ್ರಾಮದಲ್ಲಿ ವಾರದ ಹಿಂದೆ ನಡೆದಿತ್ತು. ಈ ಸಂಬಂಧ ಇದೀಗ ಗ್ರಾಮದ ಮುಖಂಡರು ಪಂಚಾಯಿತಿ ನಡೆಸಿ ಆರೋಪಿಯ ಕುಟುಂಬವನ್ನು ಗ್ರಾಮದಿಂದ ಬಹಿಷ್ಕಾರ ಹಾಕಲು ನಿರ್ಧರಿಸಿದ್ದಾರೆ.

ಅಕ್ಟೋಬರ್​ 7 ರಂದು ಘಟನೆ ನಡೆದಿದ್ದು, 24 ಗಂಟೆಗಳ ಒಳಗೇ ಪ್ರಮುಖ ಆರೋಪಿ ಕೈಲಾಶ್ ಮೀನಾ ಎಂಬವನನ್ನು ಬಂಧಿಸುವಲ್ಲಿ ಕರೌಲಿ ಪೊಲೀಸರು ಯಶಸ್ವಿಯಾಗಿದ್ದರು. ಇನ್ನೂ ನಾಲ್ವರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

55 ವರ್ಷದ ಅರ್ಚಕ ಗ್ರಾಮದಲ್ಲಿರುವ ದೇವಸ್ಥಾನವೊಂದರ ಆವರಣದಲ್ಲಿದ್ದ ಕೃಷಿ ಜಮೀನನ್ನು ನೋಡಿಕೊಳ್ಳುತ್ತಿದ್ದರು. ಈ ಜಮೀನನ್ನು ಕೈಲಾಶ್ ಮೀನಾ ಪಡೆದುಕೊಳ್ಳಲು ಯತ್ನಿಸುತ್ತಿದ್ದನು. ಜಮೀನಿನ ಸ್ಥಳದಲ್ಲಿ ಟೆಂಟ್​ ನಿರ್ಮಿಸಲು ಕೈಲಾಶ್ ಹಾಗೂ ಇತರರು ಮುಂದಾಗಿದ್ದಾರೆ. ಇದನ್ನು ತಡೆಯಲು ಬಂದ ಅರ್ಚಕನನ್ನು ಟೆಂಟ್​ಗೆ ಬೆಂಕಿ ಹಚ್ಚಿ ಅದರಲ್ಲಿ ದೂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಅರ್ಚಕ ಸ್ಥಳದಲ್ಲೇ ಮೃತಪಟ್ಟಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.