ETV Bharat / jagte-raho

ಗಣಿನಾಡಿನಲ್ಲಿ 15 ಬಾಲಕಾರ್ಮಿಕರ ರಕ್ಷಣೆ; ನಾಪತ್ತೆಯಾದ ಕೈಗಾರಿಕೆ ಮಾಲೀಕರು

author img

By

Published : Aug 9, 2019, 2:36 PM IST

ನಗರ ಹೊರವಲಯದ ಮುಂಡರಗಿ ಪ್ರದೇಶದಲ್ಲಿರುವ ವಿಜಯ್ ಹನುಮಾನ್ ಕೋಲ್ಡ್ ಸ್ಟೋರೇಜ್ ಕೈಗಾರಿಕೆಯಲ್ಲಿ 7 ಮಕ್ಕಳು ಹಾಗೂ ಖಾಜಾ ಗರೀಬ್‍ನ ಮೆಣಸಿನಕಾಯಿ ಘಟಕದಲ್ಲಿ ಐವರು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.

ದಿಢೀರ್ ಕಾರ್ಯಾಚರಣೆ

ಬಳ್ಳಾರಿ: ಪೊಲೀಸ್ ಅಧಿಕಾರಿಗಳು ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳ ನೇತೃತ್ವದ ತಂಡ ಜಂಟಿ ಕಾರ್ಯಾಚರಣೆ ನಡೆಸಿ 15 ಬಾಲಕಾರ್ಮಿಕರನ್ನು ರಕ್ಷಿಸಿದೆ.

ನಗರದ ಮುಂಡರಗಿ ಪ್ರದೇಶದ ವಿಜಯ ಹನುಮಾನ್ ಕೋಲ್ಡ್ ಸ್ಟೋರೇಜ್ ಹಾಗೂ ಖಾಜಾ ಗರೀಬ್ ಜಿನ್ನಿಂಗ್‍ನಲ್ಲಿ ದುಡಿಯುತ್ತಿದ್ದ 15 ಬಾಲಕಾರ್ಮಿಕರನ್ನು ತಹಶೀಲ್ದಾರ ಯು.ನಾಗರಾಜ ಹಾಗೂ ಜಿಲ್ಲಾ ಕಾರ್ಮಿಕ ಇಲಾಖೆ ಚಂದ್ರಶೇಖರ ಐಲಿ ಹಾಗೂ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ಡಿವೈಎಸ್ಪಿ ಜಾವೀದ ಇನಾಂದರ್ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ವಿಜಯ್ ಹನುಮಾನ್ ಕೋಲ್ಡ್ ಸ್ಟೋರೇಜ್ ಕೈಗಾರಿಕೆಯಲ್ಲಿ 7 ಮಕ್ಕಳು ಹಾಗೂ ಖಾಜಾ ಗರೀಬ್‍ನ ಮೆಣಸಿನಕಾಯಿ ಘಟಕದಲ್ಲಿ 5 ಮಕ್ಕಳು ಕೆಲಸ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸ್ ಅಧಿಕಾರಿಗಳು ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳ ನೇತೃತ್ವದ ತಂಡ ಜಂಟಿ ಕಾರ್ಯಾಚರಣೆ ನಡೆಸಿದೆ.

ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆಯೇ ಕೈಗಾರಿಕಾ ಘಟಕದ ಮಾಲೀಕರು ನಾಪತ್ತೆಯಾಗಿದ್ದಾರೆ. ಸದ್ಯ ಮಾಲೀಕರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ರಕ್ಷಣೆ ಮಾಡಿದ ಬಾಲಕಾರ್ಮಿಕರಿಗೆ ಕಡ್ಡಾಯವಾಗಿ ಶಿಕ್ಷಣ ಒದಗಿಸುವಂತೆ ಬಳ್ಳಾರಿ ತಹಶೀಲ್ದಾರ್ ಯು.ನಾಗರಾಜ ಪೋಷಕರಿಗೆ ಸೂಚಿಸಿದ್ದಾರೆ.

ಬಳ್ಳಾರಿ: ಪೊಲೀಸ್ ಅಧಿಕಾರಿಗಳು ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳ ನೇತೃತ್ವದ ತಂಡ ಜಂಟಿ ಕಾರ್ಯಾಚರಣೆ ನಡೆಸಿ 15 ಬಾಲಕಾರ್ಮಿಕರನ್ನು ರಕ್ಷಿಸಿದೆ.

ನಗರದ ಮುಂಡರಗಿ ಪ್ರದೇಶದ ವಿಜಯ ಹನುಮಾನ್ ಕೋಲ್ಡ್ ಸ್ಟೋರೇಜ್ ಹಾಗೂ ಖಾಜಾ ಗರೀಬ್ ಜಿನ್ನಿಂಗ್‍ನಲ್ಲಿ ದುಡಿಯುತ್ತಿದ್ದ 15 ಬಾಲಕಾರ್ಮಿಕರನ್ನು ತಹಶೀಲ್ದಾರ ಯು.ನಾಗರಾಜ ಹಾಗೂ ಜಿಲ್ಲಾ ಕಾರ್ಮಿಕ ಇಲಾಖೆ ಚಂದ್ರಶೇಖರ ಐಲಿ ಹಾಗೂ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ಡಿವೈಎಸ್ಪಿ ಜಾವೀದ ಇನಾಂದರ್ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ವಿಜಯ್ ಹನುಮಾನ್ ಕೋಲ್ಡ್ ಸ್ಟೋರೇಜ್ ಕೈಗಾರಿಕೆಯಲ್ಲಿ 7 ಮಕ್ಕಳು ಹಾಗೂ ಖಾಜಾ ಗರೀಬ್‍ನ ಮೆಣಸಿನಕಾಯಿ ಘಟಕದಲ್ಲಿ 5 ಮಕ್ಕಳು ಕೆಲಸ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸ್ ಅಧಿಕಾರಿಗಳು ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳ ನೇತೃತ್ವದ ತಂಡ ಜಂಟಿ ಕಾರ್ಯಾಚರಣೆ ನಡೆಸಿದೆ.

ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆಯೇ ಕೈಗಾರಿಕಾ ಘಟಕದ ಮಾಲೀಕರು ನಾಪತ್ತೆಯಾಗಿದ್ದಾರೆ. ಸದ್ಯ ಮಾಲೀಕರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ರಕ್ಷಣೆ ಮಾಡಿದ ಬಾಲಕಾರ್ಮಿಕರಿಗೆ ಕಡ್ಡಾಯವಾಗಿ ಶಿಕ್ಷಣ ಒದಗಿಸುವಂತೆ ಬಳ್ಳಾರಿ ತಹಶೀಲ್ದಾರ್ ಯು.ನಾಗರಾಜ ಪೋಷಕರಿಗೆ ಸೂಚಿಸಿದ್ದಾರೆ.

Intro:ದಿಢೀರ್ ಕಾರ್ಯಾಚರಣೆ: 15 ಬಾಲಕಾರ್ಮಿಕ ಮಕ್ಕಳ ರಕ್ಷಣೆ
ಬಳ್ಳಾರಿ: ನಗರದ ಮುಂಡರಗಿ ಪ್ರದೇಶದ ವಿಜಯ ಹನುಮಾನ್ ಕೋಲ್ಡ್ ಸ್ಟೋರೆಜ್ ಹಾಗೂ ಖಾಜಾ ಗರೀಬ್ ಜಿನ್ನಿಂಗ್‍ನಲ್ಲಿ ದುಡಿಯುತ್ತಿದ್ದ 15 ಬಾಲಕಾರ್ಮಿಕ ಮಕ್ಕಳನ್ನು ತಹಸೀಲ್ದಾರ ಯು.ನಾಗರಾಜ ಹಾಗೂ ಜಿಲ್ಲಾ ಕಾರ್ಮಿಕ ಇಲಾಖೆ ಚಂದ್ರಶೇಖರ ಐಲಿ ಹಾಗೂ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ಡಿವೈಎಸ್ಪಿ ಜಾವೀದ ಇನಾಂದರ್ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.
ನಗರ ಹೊರವಲಯದ ಮುಂಡ್ರಿಗಿ ಪ್ರದೇಶದಲ್ಲಿರುವ ವಿಜಯ್ ಹನುಮಾನ್ ಕೋಲ್ಡ್ ಸ್ಟೋರೇಜ್ ಕೈಗಾರಿಕೆಯಲ್ಲಿ 7 ಮಕ್ಕಳು ಹಾಗೂ ಖಾಜಾ ಗರೀಬ್‍ನ ಮೇಣಸಿನಕಾಯಿ ಘಟಕದಲ್ಲಿ ಐದು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪೊಲೀಸ್ ಅಧಿಕಾರಿಗಳು ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳ ನೇತೃತ್ವದ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಬಾಲಕಾರ್ಮಿಕರನ್ನು ರಕ್ಷಿಸಿದ್ದಾರೆ.
Body:ಕಾರ್ಮಿಕರನ್ನು ದುಡಿಮೆಗೆ ಬಳಸಿಕೊಳ್ಳುತ್ತಿದ್ದ ಕೈಗಾರಿಕಾ ಘಟಕದ ಮಾಲೀಕರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದು, ದುಡಿಮೆಗೆ ಒಳಗಾಗಿದ್ದ ಮಕ್ಕಳಿಗೆ ಶಾಲೆಗೆ ತೆರಳುವುದಕ್ಕೆ ಸಂಬಂಧಿಸಿದಂತೆ ಹಾಗೂ ಕಡ್ಡಾಯವಾಗಿ ಶಿಕ್ಷಣ ಒದಗಿಸುವಂತೆ ಬಳ್ಳಾರಿ ತಹಸೀಲ್ದಾರ್ ಯು.ನಾಗರಾಜ ಅವರು ಪೋಷಕರಿಗೆ ಸೂಚಿಸಿದ್ದಾರೆ.
ಈ ಕಾರ್ಯಚರಣೆ ತಂಡದಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ಡಿವೈಎಸ್ಪಿ ಜಾವೀದ್ ಇನಾಂದರ್, ಬಾಲಕಾರ್ಮಿಕ ಯೋಜನಾ ನಿರ್ದೇಶಕ ಎ.ಮೌನೇಶ, ಕಾರ್ಮಿಕ ನಿರೀಕ್ಷಕರಾದ ರವಿದಾಸ, ರಾಜೇಶ, ಕ್ಷೇತ್ರಾಧಿಕಾರಿ ಈಶ್ವರಯ್ಯ, ದುರುಗೇಶ ಮಾಚನೂರು, ಭೋಜರಾಜು ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು ಸೇರಿದಂತೆ ಇತರರು ಇದ್ದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_2_CHILD_LABOUR_CHILDREN_RESCUE_7203310
ETV Bharat Logo

Copyright © 2024 Ushodaya Enterprises Pvt. Ltd., All Rights Reserved.