ETV Bharat / jagte-raho

ಕುಸಿದು ಬಿದ್ದ ಶಾಲೆಯ ಚಾವಣಿ: ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು

author img

By

Published : Dec 5, 2019, 12:52 PM IST

ಸರ್ಕಾರಿ ಶಾಲಾ ಚಾವಣಿ ಹಾಗೂ ಕಟ್ಟಡದ ಕಂಬ ಕುಸಿದು ಬಿದ್ದಿದ್ದು ಅದೃಷ್ಟವಶಾತ್ ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ದೊಡ್ಡ ಪಾಳ್ಯದಲ್ಲಿ ನಡೆದಿದೆ.

ಕುಸಿದು ಬಿದ್ದ ಶಾಲಾ ಕಟ್ಟಡದ ಚಾವಣಿ
ಕುಸಿದು ಬಿದ್ದ ಶಾಲಾ ಕಟ್ಟಡದ ಚಾವಣಿ

ತುಮಕೂರು: ಸರ್ಕಾರಿ ಶಾಲಾ ಚಾವಣಿ ಹಾಗೂ ಕಟ್ಟಡದ ಕಂಬ ಕುಸಿದು ಬಿದ್ದಿದ್ದು ಅದೃಷ್ಟವಶಾತ್ ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ದೊಡ್ಡ ಪಾಳ್ಯದಲ್ಲಿ ನಡೆದಿದೆ.

ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿಗಳು
ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿಗಳು

ದೊಡ್ಡಪಾಳ್ಯ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಈ ಘಟನೆ ನಡೆದಿದ್ದು, ಶಾಲೆಗೆ ಬಂದಂತಹ ಮಕ್ಕಳು ಶಾಲಾ ಆವರಣವನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಛಾವಣಿ ಕುಸಿದು ಬಿದ್ದಿದೆ. ಸಮೀಪದಲ್ಲೇ ಇದ್ದ ಮಕ್ಕಳು ಗಾಬರಿಗೊಂಡು ದೂರ ಓಡಿ ಹೋಗಿದ್ದಾರೆ. ಶಾಲೆಯಲ್ಲಿ 20 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, 2 ಶಾಲಾ ಕೊಠಡಿಗಳಿವೆ.

ಈಗಾಗಲೇ ಹಲವಾರು ಬಾರಿ ಶಾಲಾಕಟ್ಟಡ ಶಿಥಿಲಗೊಂಡಿದ್ದು, ದುರಸ್ತಿ ಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದರು. ಶಿಕ್ಷಣ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದು ಘಟನೆಗೆ ಕಾರಣವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತುಮಕೂರು: ಸರ್ಕಾರಿ ಶಾಲಾ ಚಾವಣಿ ಹಾಗೂ ಕಟ್ಟಡದ ಕಂಬ ಕುಸಿದು ಬಿದ್ದಿದ್ದು ಅದೃಷ್ಟವಶಾತ್ ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ದೊಡ್ಡ ಪಾಳ್ಯದಲ್ಲಿ ನಡೆದಿದೆ.

ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿಗಳು
ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿಗಳು

ದೊಡ್ಡಪಾಳ್ಯ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಈ ಘಟನೆ ನಡೆದಿದ್ದು, ಶಾಲೆಗೆ ಬಂದಂತಹ ಮಕ್ಕಳು ಶಾಲಾ ಆವರಣವನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಛಾವಣಿ ಕುಸಿದು ಬಿದ್ದಿದೆ. ಸಮೀಪದಲ್ಲೇ ಇದ್ದ ಮಕ್ಕಳು ಗಾಬರಿಗೊಂಡು ದೂರ ಓಡಿ ಹೋಗಿದ್ದಾರೆ. ಶಾಲೆಯಲ್ಲಿ 20 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, 2 ಶಾಲಾ ಕೊಠಡಿಗಳಿವೆ.

ಈಗಾಗಲೇ ಹಲವಾರು ಬಾರಿ ಶಾಲಾಕಟ್ಟಡ ಶಿಥಿಲಗೊಂಡಿದ್ದು, ದುರಸ್ತಿ ಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದರು. ಶಿಕ್ಷಣ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದು ಘಟನೆಗೆ ಕಾರಣವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Intro:Body:ಕುಸಿದುಬಿದ್ದ ಶಾಲಾಕಟ್ಟಡದ ಚಾವಣಿ ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿಗಳು

ತುಮಕೂರು
ಸರ್ಕಾರಿ ಶಾಲಾ ಛಾವಣಿ ಹಾಗೂ ಕಟ್ಟಡದ ಕಂಬ ಕುಸಿದುಬಿದ್ದಿದ್ದು ಅದೃಷ್ಟವಶಾತ್ ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ದೊಡ್ಡ ಪಾಳ್ಯದಲ್ಲಿ ನಡೆದಿದೆ. ದೊಡ್ಡಪಾಳ್ಯ ಗ್ರಾಮದ ಪ್ರಾರ್ಥಮಿಕ ಶಾಲೆಯಲ್ಲಿ ಇಂದು ಬೆಳಗ್ಗೆ 10 ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಶಾಲೆಗೆ ಬಂದಂತಹ ಮಕ್ಕಳು ಶಾಲಾ ಆವರಣವನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಛಾವಣಿ ಕುಸಿದು ಬಿದ್ದಿದೆ. ಸಮೀಪದಲ್ಲೇ ಇದ್ದ ಮಕ್ಕಳು ಗಾಬರಿಗೊಂಡು ದೂರ ಓಡಿ ಹೋಗಿದ್ದಾರೆ. ಶಾಲೆಯಲ್ಲಿ 20 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು 2 ಶಾಲಾ ಕೊಠಡಿಗಳಿವೆ. ಈಗಾಗಲೇ ಹಲವಾರು ಬಾರಿ ಶಾಲಾಕಟ್ಟಡ ಶಿಥಿಲಗೊಂಡಿದ್ದು ದುರಸ್ತಿಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದರು. ಶಿಕ್ಷಣ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದು ಘಟನೆಗೆ ಕಾರಣವಾಗಿದೆ ಎಂದು ದೂರಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.