ETV Bharat / jagte-raho

ಕಳ್ಳನೆಂದು ಮರಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿ ವ್ಯಕ್ತಿಯನ್ನು ಕೊಂದ ಜನ!

author img

By

Published : Sep 5, 2020, 1:29 PM IST

ಕಳ್ಳನೆಂದು ಭಾವಿಸಿ ಮದ್ಯಪಾನ ಮಾಡಿ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಮರಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದು, ಗಂಭೀರವಾಗಿ ಗಾಯಗೊಂಡ ಆತ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

Uttar Pradesh
ಕಳ್ಳನೆಂದು ಮರಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಜನ

ಬರೇಲಿ: ಕಳ್ಳನೆಂದು ಭಾವಿಸಿದ ಜನರು ವ್ಯಕ್ತಿಯೋರ್ವನಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಗಂಭೀರವಾಗಿ ಗಾಯಗೊಂಡ ಆತ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಕಳ್ಳನೆಂದು ಮರಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಜನ

ಮೃತ ವ್ಯಕ್ತಿಯನ್ನು ವಾಸಿತ್​ ಅಲಿ ಎಂದು ಗುರುತಿಸಲಾಗಿದೆ. ಮದ್ಯಪಾನ ಮಾಡಿ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಕಂಡ ಸೆಕ್ಯುರಿಟಿ ಗಾರ್ಡ್​ ಆತನನ್ನು ಹಿಡಿದು ಕಳ್ಳ ಕಳ್ಳ ಎಂದು ಕೂಗಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಹಿಂದು-ಮುಂದು ವಿಚಾರಿಸದೆ ವಾಸಿತ್​ ಅಲಿಯನ್ನು ಥಳಿಸಿದ್ದಾರೆ. ಬಳಿಕ ಮರಕ್ಕೆ ಕಟ್ಟಿ ಮತ್ತಷ್ಟು ಹೊಡೆದಿದ್ದಾರೆ.

ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಬಂದ ಪೊಲೀಸರು ಸ್ಥಳೀಯರನ್ನು ತಡೆದು ಗಾಯಗೊಂಡ ವಾಸಿತ್​ ಅಲಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಆತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಬರೇಲಿ: ಕಳ್ಳನೆಂದು ಭಾವಿಸಿದ ಜನರು ವ್ಯಕ್ತಿಯೋರ್ವನಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಗಂಭೀರವಾಗಿ ಗಾಯಗೊಂಡ ಆತ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಕಳ್ಳನೆಂದು ಮರಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಜನ

ಮೃತ ವ್ಯಕ್ತಿಯನ್ನು ವಾಸಿತ್​ ಅಲಿ ಎಂದು ಗುರುತಿಸಲಾಗಿದೆ. ಮದ್ಯಪಾನ ಮಾಡಿ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಕಂಡ ಸೆಕ್ಯುರಿಟಿ ಗಾರ್ಡ್​ ಆತನನ್ನು ಹಿಡಿದು ಕಳ್ಳ ಕಳ್ಳ ಎಂದು ಕೂಗಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಹಿಂದು-ಮುಂದು ವಿಚಾರಿಸದೆ ವಾಸಿತ್​ ಅಲಿಯನ್ನು ಥಳಿಸಿದ್ದಾರೆ. ಬಳಿಕ ಮರಕ್ಕೆ ಕಟ್ಟಿ ಮತ್ತಷ್ಟು ಹೊಡೆದಿದ್ದಾರೆ.

ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಬಂದ ಪೊಲೀಸರು ಸ್ಥಳೀಯರನ್ನು ತಡೆದು ಗಾಯಗೊಂಡ ವಾಸಿತ್​ ಅಲಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಆತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.