ETV Bharat / opinion

Political and Crime: ’’ಪ್ರಜಾಪ್ರಭುತ್ವ ಅಸ್ಥಿರಗೊಳಿಸುವ ಕಳಂಕಿತ ರಾಜಕೀಯ ಹತ್ತಿಕ್ಕಬೇಕು’’

author img

By ETV Bharat Karnataka Team

Published : Oct 7, 2023, 12:29 PM IST

ಚುನಾವಣಾ ಆಯೋಗವು ಐದು ರಾಜ್ಯಗಳ ಚುನಾವಣಾ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಿದೆ. ಇದೇ ವೇಳೆ ಚುನಾವಣೆಯಲ್ಲಿ ಹಣಬಲ ನಿಯಂತ್ರಿಸಿ, ಹಿಂಸಾಚಾರ ಮುಕ್ತ ಚುನಾವಣೆ ನಡೆಸುವಂತೆ ವೀಕ್ಷಕರಿಗೆ ಆಯೋಗ ಮನವಿ ಮಾಡಿದೆ. ಕಳಂಕಿತ ರಾಜಕಾರಣಕ್ಕೆ ಕಡಿವಾಣ ಹಾಕಲು ಚುನಾವಣಾ ಆಯೋಗ ಕೂಡಾ ಒತ್ತು ನೀಡಿದೆ. ಅದೇ ಸಮಯದಲ್ಲಿ, ರಾಜಕಾರಣಿಗಳು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಸಹ ಕಳವಳಕಾರಿ ವಿಷಯವಾಗಿದೆ. ಈ ಬಗ್ಗೆ ಈ ನಾಡು ಸಂಪಾದಕೀಯದಲ್ಲಿ ಈ ಬಗ್ಗೆ ವಿವರವಾಗಿ ಚರ್ಚಿಸಲಾಗಿದೆ.

Political and Crime
ಪ್ರಜಾಪ್ರಭುತ್ವವನ್ನು ಟೊಳ್ಳು ಮಾಡುವ ಕಳಂಕಿತ ರಾಜಕೀಯವನ್ನು ಹತ್ತಿಕ್ಕಬೇಕು...

ನವದೆಹಲಿ: ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಿಜೋರಾಂ ಎಂಬ ಐದು ರಾಜ್ಯಗಳಲ್ಲಿ ನ್ಯಾಯಸಮ್ಮತ ಮತ್ತು ಪಾರದರ್ಶಕ ವಿಧಾನಸಭಾ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು (EC) ಬದ್ಧವಾಗಿದೆ. ಆದ್ದರಿಂದ, ಚುನಾವಣಾ ವೇಳಾಪಟ್ಟಿ ಪ್ರಕಟಿಸುವ ಮೊದಲು ಕೇಂದ್ರ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಶುಕ್ರವಾರ ಮಹತ್ವದ ಸಭೆ ನಡೆಸಿದರು. ಇದರಲ್ಲಿ ಅವರು ಅಭ್ಯರ್ಥಿಗಳು ತಮ್ಮ ಅಪರಾಧ ದಾಖಲೆಗಳನ್ನು ಬಹಿರಂಗಪಡಿಸುವ ಅಗತ್ಯವನ್ನು ಒತ್ತಿ ಹೇಳಿದರು.

ಮುಂಬರುವ ಚುನಾವಣೆಯಲ್ಲಿ ಹಣದ ಬಲವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಮತ್ತು ಹಿಂಸಾಚಾರ ಮುಕ್ತ ಚುನಾವಣೆ ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ವೀಕ್ಷಕರಿಗೆ ಮನವಿ ಮಾಡಿದೆ. ಇದರ ಹೊರತಾಗಿ ಕ್ರಿಮಿನಲ್ ಅಪರಾಧಿಗಳನ್ನು ಅಭ್ಯರ್ಥಿಗಳಾಗಿ ಕಣಕ್ಕಿಳಿಸುವ ಬಗ್ಗೆ ರಾಜಕೀಯ ಪಕ್ಷಗಳು ಸ್ಪಷ್ಟೀಕರಣವನ್ನು ನೀಡಬೇಕಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ. ಭಾರತೀಯ ರಾಜಕೀಯದಲ್ಲಿ ಇದು ಅತ್ಯಂತ ನಿರಾಶಾದಾಯಕ ಸಂಗತಿಯಾಗಿದ್ದು, ರಾಜಕಾರಣಿಗಳ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ ಎಂದು ತಿಳಿದುಬಂದಿದೆ.

306 ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) 763 ರಾಜ್ಯಸಭಾ ಮತ್ತು ಲೋಕಸಭೆ ಸಂಸದರ ಚುನಾವಣಾ ಪ್ರಮಾಣಪತ್ರಗಳ ಇತ್ತೀಚಿಗೆ ಪರಿಶೀಲನೆ ಮಾಡಿದೆ. ಅವರಲ್ಲಿ 40 ಪ್ರತಿಶತ ಅಥವಾ 306 ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದಾರೆ ಎಂಬ ವಿಚಾರವನ್ನು ಬಹಿರಂಗಪಡಿಸಿದೆ. ಇವರಲ್ಲಿ 194 ಮಂದಿ ಗಂಭೀರ ಕ್ರಿಮಿನಲ್ ಆರೋಪ ಎದುರಿಸುತ್ತಿದ್ದಾರೆ. ಭಾರತೀಯ ಪ್ರಜಾಪ್ರಭುತ್ವದಲ್ಲಿ ಇಂತಹ ಅಂಶವು ಬೆಳಕಿಗೆ ಬಂದಿದ್ದು, ಇದು ಖಂಡಿತವಾಗಿಯೂ ಆತಂಕಕಾರಿ ಸಂಗತಿಯಾಗಿದೆ.

ಕಳೆದ ಕೆಲವು ವರ್ಷಗಳಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ ಸಂಸದರ ಸಂಖ್ಯೆ ಹೆಚ್ಚಾಗಿದೆ. 2004 ರಲ್ಲಿ 128 ಸಂಸದರ ಮೇಲೆ ಅಪರಾಧ ಪ್ರಕರಣಗಳು ಹಾಗೂ 2019 ರಲ್ಲಿ ಚುನಾಯಿತರಾದ 233 ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಇವೆ. ಅಚ್ಚರಿಯ ಸಂಗತಿ ಎಂದರೆ ದೇಶದ ಸುಮಾರು 4,000 ಜನಪ್ರತಿನಿಧಿಗಳ ಪೈಕಿ ಶೇ.44ರಷ್ಟು ನಾಯಕರ ಮೇಲೆ ಅಪರಾಧ ಪ್ರಕರಣಗಳ ಆರೋಪವಿದೆ. ಇದು ನಮ್ಮ ಜನಪ್ರತಿನಿಧಿಗಳಲ್ಲಿ ಪ್ರಾತಿನಿಧ್ಯದ ಗುಣಮಟ್ಟದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಏಕೆಂದರೆ ಕೊಲೆಯಿಂದ ಹಿಡಿದು ಭ್ರಷ್ಟಾಚಾರದವರೆಗಿನ ಅಪರಾಧಗಳ ಆರೋಪ ಎದುರಿಸುತ್ತಿರುವವರಿಗೆ ಭಾರತದ ಭವಿಷ್ಯವನ್ನು ರೂಪಿಸುವ ಜವಾಬ್ದಾರಿಯನ್ನು ನೀಡಲಾಗುತ್ತಿದೆ.

ಪ್ರಸ್ತುತ ಭಾರತವು ಅದೇ ಅಪಾಯವನ್ನು ಎದುರಿಸುತ್ತಿದೆ. ಏಕೆಂದರೆ ಕಳಂಕಿತರು ರಾಜಕೀಯ ಅಧಿಕಾರವನ್ನು ಮುಂದುವರೆಸುತ್ತಿದ್ದಾರೆ. ಕೇವಲ ಅವರ ಅಪರಾಧದ ಆಧಾರದ ಮೇಲೆ ರಾಜಕಾರಣಿಗಳನ್ನು ಅನರ್ಹಗೊಳಿಸುವ ಪ್ರಸ್ತುತ ವ್ಯವಸ್ಥೆಯು ನಮ್ಮ ಪ್ರಜಾಸತ್ತಾತ್ಮಕ ಸಂಸ್ಥೆಗಳ ಪಾವಿತ್ರ್ಯತೆಯನ್ನು ಹಾಳುಮಾಡುವವರನ್ನು ಹೊರಗಿಡುವಲ್ಲಿ ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆಯನ್ನು ಪರಿಹರಿಸಲು, ಕಾನೂನು ಆಯೋಗವು ಕಠಿಣ ಕ್ರಮಗಳನ್ನು ಶಿಫಾರಸು ಮಾಡಿದೆ.

ಚುನಾವಣಾ ಆಯೋಗವು ಈ ಹಿಂದೆ ಕಠಿಣ ಅನರ್ಹಗೊಳಿಸುವ ಪ್ರಕ್ರಿಯೆಯನ್ನು ಶಿಫಾರಸು ಮಾಡಿದ್ದು, ಅದರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಂತಹ ನಾಯಕರ ವಿರುದ್ಧ ತಕ್ಷಣದ ಕ್ರಮವನ್ನು ಪ್ರಾರಂಭಿಸಲಾಗುವುದು. ಈ ಶಿಫಾರಸನ್ನು ಜಾರಿಗೆ ತರಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರುವುದು ಅಗತ್ಯ ಕ್ರಮವಾಗಿದೆ. ಜೊತೆಗೆ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಂತೆ ನೋಡಿಕೊಳ್ಳುವುದು ಆಡಳಿತ ಪಕ್ಷಗಳ ಜವಾಬ್ದಾರಿಯಾಗಿದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಅಧಿಕಾರಕ್ಕಾಗಿ ದೊಡ್ಡ ದೊಡ್ಡ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ನಂತರ ಭರವಸೆಗಳನ್ನು ಮರೆತು ಸಾರ್ವಜನಿಕರ ನಂಬಿಕೆಗೆ ಧಕ್ಕೆಯಾಗುತ್ತಿರುವುದು ಕಂಡು ಬರುತ್ತಿದೆ.

ಈ ಸಮಸ್ಯೆಯನ್ನು ಪರಿಹರಿಸಲು ನಿರ್ದಿಷ್ಟ ಕಾನೂನು ಚೌಕಟ್ಟನ್ನು ರಚಿಸುವುದು ಅಗತ್ಯವಿದೆ. ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದ ನಂತರ ಅವರಿಗೆ ಸಂಪೂರ್ಣ ಅಧಿಕಾರ ಸಿಗುತ್ತದೆ ಎಂಬ ರಾಜಕೀಯ ಪಕ್ಷಗಳಲ್ಲಿರುವ ಈ ಗ್ರಹಿಕೆಯನ್ನು ಹೋಗಲಾಡಿಸುವುದು ಬಹುಮುಖ್ಯವಾಗಿದ್ದು, ಈ ಮನಸ್ಥಿತಿಯನ್ನು ಕೊನೆಗೊಳಿಸಬೇಕು. ತಾವು ಸೇವೆ ಮಾಡಲು ಉದ್ದೇಶಿಸಿರುವ ಜನರಿಗೆ ಹಾನಿ ಮಾಡುವ ವಿಷಕಾರಿ ರಾಜಕೀಯವನ್ನು ಕೊನೆಗೊಳ್ಳಬೇಕಿದೆ.

ಇದನ್ನೂ ಓದಿ: ನಟಿ ಜಯಪ್ರದಾ ESI ಪ್ರಕರಣ: ಮದ್ರಾಸ್​ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ ನಟಿ.. ಇಎಸ್​​ಐಗೆ ಉತ್ತರಿಸುವಂತೆ ಆದೇಶ​

ನವದೆಹಲಿ: ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಿಜೋರಾಂ ಎಂಬ ಐದು ರಾಜ್ಯಗಳಲ್ಲಿ ನ್ಯಾಯಸಮ್ಮತ ಮತ್ತು ಪಾರದರ್ಶಕ ವಿಧಾನಸಭಾ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು (EC) ಬದ್ಧವಾಗಿದೆ. ಆದ್ದರಿಂದ, ಚುನಾವಣಾ ವೇಳಾಪಟ್ಟಿ ಪ್ರಕಟಿಸುವ ಮೊದಲು ಕೇಂದ್ರ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಶುಕ್ರವಾರ ಮಹತ್ವದ ಸಭೆ ನಡೆಸಿದರು. ಇದರಲ್ಲಿ ಅವರು ಅಭ್ಯರ್ಥಿಗಳು ತಮ್ಮ ಅಪರಾಧ ದಾಖಲೆಗಳನ್ನು ಬಹಿರಂಗಪಡಿಸುವ ಅಗತ್ಯವನ್ನು ಒತ್ತಿ ಹೇಳಿದರು.

ಮುಂಬರುವ ಚುನಾವಣೆಯಲ್ಲಿ ಹಣದ ಬಲವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಮತ್ತು ಹಿಂಸಾಚಾರ ಮುಕ್ತ ಚುನಾವಣೆ ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ವೀಕ್ಷಕರಿಗೆ ಮನವಿ ಮಾಡಿದೆ. ಇದರ ಹೊರತಾಗಿ ಕ್ರಿಮಿನಲ್ ಅಪರಾಧಿಗಳನ್ನು ಅಭ್ಯರ್ಥಿಗಳಾಗಿ ಕಣಕ್ಕಿಳಿಸುವ ಬಗ್ಗೆ ರಾಜಕೀಯ ಪಕ್ಷಗಳು ಸ್ಪಷ್ಟೀಕರಣವನ್ನು ನೀಡಬೇಕಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ. ಭಾರತೀಯ ರಾಜಕೀಯದಲ್ಲಿ ಇದು ಅತ್ಯಂತ ನಿರಾಶಾದಾಯಕ ಸಂಗತಿಯಾಗಿದ್ದು, ರಾಜಕಾರಣಿಗಳ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ ಎಂದು ತಿಳಿದುಬಂದಿದೆ.

306 ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) 763 ರಾಜ್ಯಸಭಾ ಮತ್ತು ಲೋಕಸಭೆ ಸಂಸದರ ಚುನಾವಣಾ ಪ್ರಮಾಣಪತ್ರಗಳ ಇತ್ತೀಚಿಗೆ ಪರಿಶೀಲನೆ ಮಾಡಿದೆ. ಅವರಲ್ಲಿ 40 ಪ್ರತಿಶತ ಅಥವಾ 306 ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದಾರೆ ಎಂಬ ವಿಚಾರವನ್ನು ಬಹಿರಂಗಪಡಿಸಿದೆ. ಇವರಲ್ಲಿ 194 ಮಂದಿ ಗಂಭೀರ ಕ್ರಿಮಿನಲ್ ಆರೋಪ ಎದುರಿಸುತ್ತಿದ್ದಾರೆ. ಭಾರತೀಯ ಪ್ರಜಾಪ್ರಭುತ್ವದಲ್ಲಿ ಇಂತಹ ಅಂಶವು ಬೆಳಕಿಗೆ ಬಂದಿದ್ದು, ಇದು ಖಂಡಿತವಾಗಿಯೂ ಆತಂಕಕಾರಿ ಸಂಗತಿಯಾಗಿದೆ.

ಕಳೆದ ಕೆಲವು ವರ್ಷಗಳಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ ಸಂಸದರ ಸಂಖ್ಯೆ ಹೆಚ್ಚಾಗಿದೆ. 2004 ರಲ್ಲಿ 128 ಸಂಸದರ ಮೇಲೆ ಅಪರಾಧ ಪ್ರಕರಣಗಳು ಹಾಗೂ 2019 ರಲ್ಲಿ ಚುನಾಯಿತರಾದ 233 ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಇವೆ. ಅಚ್ಚರಿಯ ಸಂಗತಿ ಎಂದರೆ ದೇಶದ ಸುಮಾರು 4,000 ಜನಪ್ರತಿನಿಧಿಗಳ ಪೈಕಿ ಶೇ.44ರಷ್ಟು ನಾಯಕರ ಮೇಲೆ ಅಪರಾಧ ಪ್ರಕರಣಗಳ ಆರೋಪವಿದೆ. ಇದು ನಮ್ಮ ಜನಪ್ರತಿನಿಧಿಗಳಲ್ಲಿ ಪ್ರಾತಿನಿಧ್ಯದ ಗುಣಮಟ್ಟದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಏಕೆಂದರೆ ಕೊಲೆಯಿಂದ ಹಿಡಿದು ಭ್ರಷ್ಟಾಚಾರದವರೆಗಿನ ಅಪರಾಧಗಳ ಆರೋಪ ಎದುರಿಸುತ್ತಿರುವವರಿಗೆ ಭಾರತದ ಭವಿಷ್ಯವನ್ನು ರೂಪಿಸುವ ಜವಾಬ್ದಾರಿಯನ್ನು ನೀಡಲಾಗುತ್ತಿದೆ.

ಪ್ರಸ್ತುತ ಭಾರತವು ಅದೇ ಅಪಾಯವನ್ನು ಎದುರಿಸುತ್ತಿದೆ. ಏಕೆಂದರೆ ಕಳಂಕಿತರು ರಾಜಕೀಯ ಅಧಿಕಾರವನ್ನು ಮುಂದುವರೆಸುತ್ತಿದ್ದಾರೆ. ಕೇವಲ ಅವರ ಅಪರಾಧದ ಆಧಾರದ ಮೇಲೆ ರಾಜಕಾರಣಿಗಳನ್ನು ಅನರ್ಹಗೊಳಿಸುವ ಪ್ರಸ್ತುತ ವ್ಯವಸ್ಥೆಯು ನಮ್ಮ ಪ್ರಜಾಸತ್ತಾತ್ಮಕ ಸಂಸ್ಥೆಗಳ ಪಾವಿತ್ರ್ಯತೆಯನ್ನು ಹಾಳುಮಾಡುವವರನ್ನು ಹೊರಗಿಡುವಲ್ಲಿ ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆಯನ್ನು ಪರಿಹರಿಸಲು, ಕಾನೂನು ಆಯೋಗವು ಕಠಿಣ ಕ್ರಮಗಳನ್ನು ಶಿಫಾರಸು ಮಾಡಿದೆ.

ಚುನಾವಣಾ ಆಯೋಗವು ಈ ಹಿಂದೆ ಕಠಿಣ ಅನರ್ಹಗೊಳಿಸುವ ಪ್ರಕ್ರಿಯೆಯನ್ನು ಶಿಫಾರಸು ಮಾಡಿದ್ದು, ಅದರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಂತಹ ನಾಯಕರ ವಿರುದ್ಧ ತಕ್ಷಣದ ಕ್ರಮವನ್ನು ಪ್ರಾರಂಭಿಸಲಾಗುವುದು. ಈ ಶಿಫಾರಸನ್ನು ಜಾರಿಗೆ ತರಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರುವುದು ಅಗತ್ಯ ಕ್ರಮವಾಗಿದೆ. ಜೊತೆಗೆ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಂತೆ ನೋಡಿಕೊಳ್ಳುವುದು ಆಡಳಿತ ಪಕ್ಷಗಳ ಜವಾಬ್ದಾರಿಯಾಗಿದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಅಧಿಕಾರಕ್ಕಾಗಿ ದೊಡ್ಡ ದೊಡ್ಡ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ನಂತರ ಭರವಸೆಗಳನ್ನು ಮರೆತು ಸಾರ್ವಜನಿಕರ ನಂಬಿಕೆಗೆ ಧಕ್ಕೆಯಾಗುತ್ತಿರುವುದು ಕಂಡು ಬರುತ್ತಿದೆ.

ಈ ಸಮಸ್ಯೆಯನ್ನು ಪರಿಹರಿಸಲು ನಿರ್ದಿಷ್ಟ ಕಾನೂನು ಚೌಕಟ್ಟನ್ನು ರಚಿಸುವುದು ಅಗತ್ಯವಿದೆ. ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದ ನಂತರ ಅವರಿಗೆ ಸಂಪೂರ್ಣ ಅಧಿಕಾರ ಸಿಗುತ್ತದೆ ಎಂಬ ರಾಜಕೀಯ ಪಕ್ಷಗಳಲ್ಲಿರುವ ಈ ಗ್ರಹಿಕೆಯನ್ನು ಹೋಗಲಾಡಿಸುವುದು ಬಹುಮುಖ್ಯವಾಗಿದ್ದು, ಈ ಮನಸ್ಥಿತಿಯನ್ನು ಕೊನೆಗೊಳಿಸಬೇಕು. ತಾವು ಸೇವೆ ಮಾಡಲು ಉದ್ದೇಶಿಸಿರುವ ಜನರಿಗೆ ಹಾನಿ ಮಾಡುವ ವಿಷಕಾರಿ ರಾಜಕೀಯವನ್ನು ಕೊನೆಗೊಳ್ಳಬೇಕಿದೆ.

ಇದನ್ನೂ ಓದಿ: ನಟಿ ಜಯಪ್ರದಾ ESI ಪ್ರಕರಣ: ಮದ್ರಾಸ್​ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ ನಟಿ.. ಇಎಸ್​​ಐಗೆ ಉತ್ತರಿಸುವಂತೆ ಆದೇಶ​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.