ETV Bharat / sitara

"ದಿ ಕಾಶ್ಮೀರ್ ಫೈಲ್ಸ್" ಚಿತ್ರತಂಡಕ್ಕೆ ಅಭಿನಂದನೆ ತಿಳಿಸಿದ ​ಅಮಿರ್ ಖಾನ್​​

author img

By

Published : Mar 15, 2022, 8:48 AM IST

ನಾನು ಈ ಚಿತ್ರವನ್ನು ಇನ್ನೂ ವೀಕ್ಷಿಸಿಲ್ಲ. ಆದ್ರೆ ಚಿತ್ರ ಯಶಸ್ಸಿನ ಮಾರ್ಗದಲ್ಲಿ ಮುಂದೆ ಹೋಗುತ್ತಿದೆ ಎನ್ನುವ ಅಭಿಪ್ರಾಯಗಳನ್ನು ಕೇಳಿದ್ದೇನೆ. ಚಿತ್ರತಂಡಕ್ಕೆ ನನ್ನ ಅಭಿನಂದನೆಗಳು ಎಂದು ಬಾಲಿವುಡ್​ ಸ್ಟಾರ್​ ಅಮಿರ್ ಖಾನ್​​ ತಿಳಿಸಿದರು..

actor Aamir Khan
ಬಾಲಿವುಡ್​ ಸ್ಟಾರ್​ ಅಮಿರ್ ಖಾನ್​​

ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ ಚಿತ್ರ 'ದಿ ಕಾಶ್ಮೀರ್ ಫೈಲ್ಸ್' ಭಾರಿ ಯಶಸ್ಸು ಕಾಣುತ್ತಿದೆ. ಈ ಚಿತ್ರವು ಕಣಿವೆಯಿಂದ ಕಾಶ್ಮೀರಿ ಹಿಂದೂಗಳ ಬಲವಂತದ ವಲಸೆ ಮತ್ತು ಸಮುದಾಯ ಎದುರಿಸಿದ ಅನ್ಯಾಯವನ್ನು ಆಧರಿಸಿದೆ.

"ದಿ ಕಾಶ್ಮೀರ್ ಫೈಲ್ಸ್" ಚಿತ್ರತಂಡಕ್ಕೆ ಅಭಿನಂದನೆ ತಿಳಿಸಿದ ​ಅಮಿರ್ ಖಾನ್​​

ಸೋಮವಾರದಂದು ಹುಟ್ಟುಹಬ್ಬ ಆಚರಿಸಿಕೊಂಡ ಬಾಲಿವುಡ್​ ಸ್ಟಾರ್​ ಅಮಿರ್ ಖಾನ್​​ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ನಾನು ಈ ಚಿತ್ರವನ್ನು ಇನ್ನೂ ವೀಕ್ಷಿಸಿಲ್ಲ. ಆದರೆ ಚಿತ್ರ ಯಶಸ್ಸಿನ ಮಾರ್ಗದಲ್ಲಿ ಮುಂದೆ ಹೋಗುತ್ತಿದೆ ಎನ್ನುವ ಅಭಿಪ್ರಾಯಗಳನ್ನು ಕೇಳಿದ್ದೇನೆ. ಚಿತ್ರತಂಡಕ್ಕೆ ನನ್ನ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನಾಳೆ ಸಂಜೆ 'ದಿ‌ ಕಾಶ್ಮೀರ್ ಫೈಲ್ಸ್' ವೀಕ್ಷಣೆಗೆ ಶಾಸಕರನ್ನು ಆಹ್ವಾನಿಸಿದ ಸ್ಪೀಕರ್ ಕಾಗೇರಿ

ಇನ್ನೂ "ದಿ ಕಾಶ್ಮೀರ್ ಫೈಲ್ಸ್" ಚಲನಚಿತ್ರ ಪ್ರದರ್ಶನಕ್ಕೆ ರಾಜ್ಯ ಸರ್ಕಾರವು ತನ್ನ ಪಾಲಿನ ರಾಜ್ಯ ಜಿಎಸ್‌ಟಿಯನ್ನು ವೀಕ್ಷಕರಿಗೆ ವಿಧಿಸದಿರಲು ಸಿನಿಮಾ ಪ್ರದರ್ಶಕರಿಗೆ ಸೂಚಿಸಿದೆ. ಈ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಜಮ್ಮು - ಕಾಶ್ಮೀರದಲ್ಲಿ ಕಾಶ್ಮೀರಿ ಹಿಂದೂಗಳ ಹತ್ಯೆ ಮತ್ತು ಅವರ ವಲಸೆ ಕುರಿತಾದ ಈ ಚಿತ್ರದಲ್ಲಿ ಅನುಪಮ್ ಖೇರ್, ದರ್ಶನ್ ಕುಮಾರ್, ಮಿಥುನ್ ಚಕ್ರವರ್ತಿ ಮತ್ತು ಪಲ್ಲವಿ ಜೋಶಿ ಸೇರಿ ಹಲವರು ಅಭಿನಯಿಸಿದ್ದಾರೆ.

ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ ಚಿತ್ರ 'ದಿ ಕಾಶ್ಮೀರ್ ಫೈಲ್ಸ್' ಭಾರಿ ಯಶಸ್ಸು ಕಾಣುತ್ತಿದೆ. ಈ ಚಿತ್ರವು ಕಣಿವೆಯಿಂದ ಕಾಶ್ಮೀರಿ ಹಿಂದೂಗಳ ಬಲವಂತದ ವಲಸೆ ಮತ್ತು ಸಮುದಾಯ ಎದುರಿಸಿದ ಅನ್ಯಾಯವನ್ನು ಆಧರಿಸಿದೆ.

"ದಿ ಕಾಶ್ಮೀರ್ ಫೈಲ್ಸ್" ಚಿತ್ರತಂಡಕ್ಕೆ ಅಭಿನಂದನೆ ತಿಳಿಸಿದ ​ಅಮಿರ್ ಖಾನ್​​

ಸೋಮವಾರದಂದು ಹುಟ್ಟುಹಬ್ಬ ಆಚರಿಸಿಕೊಂಡ ಬಾಲಿವುಡ್​ ಸ್ಟಾರ್​ ಅಮಿರ್ ಖಾನ್​​ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ನಾನು ಈ ಚಿತ್ರವನ್ನು ಇನ್ನೂ ವೀಕ್ಷಿಸಿಲ್ಲ. ಆದರೆ ಚಿತ್ರ ಯಶಸ್ಸಿನ ಮಾರ್ಗದಲ್ಲಿ ಮುಂದೆ ಹೋಗುತ್ತಿದೆ ಎನ್ನುವ ಅಭಿಪ್ರಾಯಗಳನ್ನು ಕೇಳಿದ್ದೇನೆ. ಚಿತ್ರತಂಡಕ್ಕೆ ನನ್ನ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನಾಳೆ ಸಂಜೆ 'ದಿ‌ ಕಾಶ್ಮೀರ್ ಫೈಲ್ಸ್' ವೀಕ್ಷಣೆಗೆ ಶಾಸಕರನ್ನು ಆಹ್ವಾನಿಸಿದ ಸ್ಪೀಕರ್ ಕಾಗೇರಿ

ಇನ್ನೂ "ದಿ ಕಾಶ್ಮೀರ್ ಫೈಲ್ಸ್" ಚಲನಚಿತ್ರ ಪ್ರದರ್ಶನಕ್ಕೆ ರಾಜ್ಯ ಸರ್ಕಾರವು ತನ್ನ ಪಾಲಿನ ರಾಜ್ಯ ಜಿಎಸ್‌ಟಿಯನ್ನು ವೀಕ್ಷಕರಿಗೆ ವಿಧಿಸದಿರಲು ಸಿನಿಮಾ ಪ್ರದರ್ಶಕರಿಗೆ ಸೂಚಿಸಿದೆ. ಈ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಜಮ್ಮು - ಕಾಶ್ಮೀರದಲ್ಲಿ ಕಾಶ್ಮೀರಿ ಹಿಂದೂಗಳ ಹತ್ಯೆ ಮತ್ತು ಅವರ ವಲಸೆ ಕುರಿತಾದ ಈ ಚಿತ್ರದಲ್ಲಿ ಅನುಪಮ್ ಖೇರ್, ದರ್ಶನ್ ಕುಮಾರ್, ಮಿಥುನ್ ಚಕ್ರವರ್ತಿ ಮತ್ತು ಪಲ್ಲವಿ ಜೋಶಿ ಸೇರಿ ಹಲವರು ಅಭಿನಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.