ETV Bharat / sitara

ಗಲ್ಲು ಶಿಕ್ಷೆಗೊಳಗಾದ ಉಗ್ರನ ಜೀವನ ಆಧಾರಿತ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದ ಸುಶಾಂತ್

author img

By

Published : Nov 20, 2020, 10:50 AM IST

ಗಲ್ಲುಶಿಕ್ಷೆಗೆ ಒಳಗಾದ ಉಗ್ರ ಅಜ್ಮಲ್ ಕಸಬ್ ಜೀವನ ಆಧಾರಿತ ಚಿತ್ರದಲ್ಲಿ ನಟಿಸಲು ಸುಶಾಂತ್ ಸಿಂಗ್ ರಜಪೂತ್ ಒಪ್ಪಿಕೊಂಡಿದ್ದರು ಎನ್ನಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಹಿಂದಿನ ದಿನ ಚಿತ್ರದ ನಿರ್ಮಾಪಕರೊಂದಿಗೆ ಸುಶಾಂತ್ ವಿಡಿಯೋ ಕಾಲ್ ಮೂಲಕ ಚರ್ಚಿಸಿದ್ದರು ಎನ್ನಲಾಗಿದೆ.

Sushant sing Rajput
ಸುಶಾಂತ್ ಸಿಂಗ್ ರಜಪೂತ್

ಜೂನ್ 14 ರಂದು ಆತ್ಮಹತ್ಯೆಗೆ ಶರಣಾದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್​​ ಕೊನೆಯ ಸಿನಿಮಾ 'ದಿಲ್ ಬೇಚಾರ'. ಸುಶಾಂತ್​​​ ಒಪ್ಪಿಕೊಂಡಿದ್ದ ಚಿತ್ರಗಳ ಲಿಸ್ಟ್ ಕೂಡಾ ದೊಡ್ಡದಿದೆ. ಅದರಲ್ಲಿ 26 ನವೆಂಬರ್​ ಮುಂಬೈ ದಾಳಿಯಲ್ಲಿ ಪಾಲ್ಗೊಂಡು ಭಾರತ ಸರ್ಕಾರದಿಂದ ನೇಣು ಶಿಕ್ಷೆಗೆ ಒಳಗಾದ ಉಗ್ರ ಅಜ್ಮಲ್ ಕಸಬ್ ಜೀವನ ಆಧಾರಿತ ಸಿನಿಮಾ ಕೂಡಾ ಒಂದು ಎನ್ನಲಾಗಿದೆ.

Azmal kasab
'ದಿಲ್ ಬೇಚಾರ'

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಳ್ಳುವ ಹಿಂದಿನ ದಿನ ಅಂದರೆ, ಜೂನ್ 13 ರಂದು ಈ ಸಿನಿಮಾಗೆ ಸಂಬಂಧಿಸಿದಂತೆ ನಿರ್ಮಾಪಕರೊಂದಿಗೆ ಚರ್ಚೆ ಮಾಡಿದ್ದರು ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ಕಾರ್ನ್​​​​ರ್​​ ಸ್ಟೋನ್​​ ಎಲ್​​ಎಲ್​ಪಿಗೆ ಸೇರಿದ ಉದಯ್​​ಸಿಂಗ್ ಗೌರಿ ಕೆಲವೊಂದು ಆಸಕ್ತಿಕರ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಹಿಂದಿನ ದಿನ ಉದಯ್ ಸಿಂಗ್ ಸುಶಾಂತ್​​​​ಗೆ ಫೋನ್ ಮಾಡಿದ್ದಾರೆ. ಈ ವೇಳೆ ಸಿನಿಮಾ ನಿರ್ದೇಶಕ ನಿಖಿಲ್ ಅಡ್ವಾಣಿ, ನಿರ್ಮಾಪಕ ರಮೇಶ್ ತೌರಾಣಿ ಅವರನ್ನು ಕೂಡಾ ಕಾನ್ಫರೆನ್ಸ್ ಕಾಲ್ ಮೂಲಕ ಮಾತನಾಡಿಸಿದ್ದಾರೆ. ಸುಮಾರು 7-10 ನಿಮಿಷಗಳ ಕಾಲ ಇವರೆಲ್ಲರ ಜೊತೆ ಸುಶಾಂತ್, ಸಿನಿಮಾ ಬಗ್ಗೆ ಚರ್ಚಿಸಿದ್ದಾರೆ.

Azmal kasab
ಅಜ್ಮಲ್ ಕಸಬ್

ಕೊರೊನಾ ಲಾಕ್​ಡೌನ್​ ಕಾರಣದಿಂದ ಎಲ್ಲರೂ ಮುಖಾಮುಖಿ ಭೇಟಿ ಮಾಡಲು ಸಾಧ್ಯವಿಲ್ಲದ ಕಾರಣ ವಿಡಿಯೋ ಕಾಲ್ ಮೂಲಕ ಮಾತನಾಡಿದ್ದಾರೆ. ಆದರೆ ಮರುದಿನವೇ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ ಕಾರಣ ಈ ಪ್ರಾಜೆಕ್ಟ್ ಕೆಲಸ ಅರ್ಧಕ್ಕೆ ನಿಂತಿದೆ. ಸುಶಾಂತ್ ನಿಧನದ ನಂತರ ಸಿಬಿಐ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭಿಸಿದ ತನಿಖೆ ಈಗ ಡ್ರಗ್ಸ್ ಪ್ರಕರಣದವರೆಗೂ ಬಂದು ನಿಂತಿದೆ.

ಜೂನ್ 14 ರಂದು ಆತ್ಮಹತ್ಯೆಗೆ ಶರಣಾದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್​​ ಕೊನೆಯ ಸಿನಿಮಾ 'ದಿಲ್ ಬೇಚಾರ'. ಸುಶಾಂತ್​​​ ಒಪ್ಪಿಕೊಂಡಿದ್ದ ಚಿತ್ರಗಳ ಲಿಸ್ಟ್ ಕೂಡಾ ದೊಡ್ಡದಿದೆ. ಅದರಲ್ಲಿ 26 ನವೆಂಬರ್​ ಮುಂಬೈ ದಾಳಿಯಲ್ಲಿ ಪಾಲ್ಗೊಂಡು ಭಾರತ ಸರ್ಕಾರದಿಂದ ನೇಣು ಶಿಕ್ಷೆಗೆ ಒಳಗಾದ ಉಗ್ರ ಅಜ್ಮಲ್ ಕಸಬ್ ಜೀವನ ಆಧಾರಿತ ಸಿನಿಮಾ ಕೂಡಾ ಒಂದು ಎನ್ನಲಾಗಿದೆ.

Azmal kasab
'ದಿಲ್ ಬೇಚಾರ'

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಳ್ಳುವ ಹಿಂದಿನ ದಿನ ಅಂದರೆ, ಜೂನ್ 13 ರಂದು ಈ ಸಿನಿಮಾಗೆ ಸಂಬಂಧಿಸಿದಂತೆ ನಿರ್ಮಾಪಕರೊಂದಿಗೆ ಚರ್ಚೆ ಮಾಡಿದ್ದರು ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ಕಾರ್ನ್​​​​ರ್​​ ಸ್ಟೋನ್​​ ಎಲ್​​ಎಲ್​ಪಿಗೆ ಸೇರಿದ ಉದಯ್​​ಸಿಂಗ್ ಗೌರಿ ಕೆಲವೊಂದು ಆಸಕ್ತಿಕರ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಹಿಂದಿನ ದಿನ ಉದಯ್ ಸಿಂಗ್ ಸುಶಾಂತ್​​​​ಗೆ ಫೋನ್ ಮಾಡಿದ್ದಾರೆ. ಈ ವೇಳೆ ಸಿನಿಮಾ ನಿರ್ದೇಶಕ ನಿಖಿಲ್ ಅಡ್ವಾಣಿ, ನಿರ್ಮಾಪಕ ರಮೇಶ್ ತೌರಾಣಿ ಅವರನ್ನು ಕೂಡಾ ಕಾನ್ಫರೆನ್ಸ್ ಕಾಲ್ ಮೂಲಕ ಮಾತನಾಡಿಸಿದ್ದಾರೆ. ಸುಮಾರು 7-10 ನಿಮಿಷಗಳ ಕಾಲ ಇವರೆಲ್ಲರ ಜೊತೆ ಸುಶಾಂತ್, ಸಿನಿಮಾ ಬಗ್ಗೆ ಚರ್ಚಿಸಿದ್ದಾರೆ.

Azmal kasab
ಅಜ್ಮಲ್ ಕಸಬ್

ಕೊರೊನಾ ಲಾಕ್​ಡೌನ್​ ಕಾರಣದಿಂದ ಎಲ್ಲರೂ ಮುಖಾಮುಖಿ ಭೇಟಿ ಮಾಡಲು ಸಾಧ್ಯವಿಲ್ಲದ ಕಾರಣ ವಿಡಿಯೋ ಕಾಲ್ ಮೂಲಕ ಮಾತನಾಡಿದ್ದಾರೆ. ಆದರೆ ಮರುದಿನವೇ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ ಕಾರಣ ಈ ಪ್ರಾಜೆಕ್ಟ್ ಕೆಲಸ ಅರ್ಧಕ್ಕೆ ನಿಂತಿದೆ. ಸುಶಾಂತ್ ನಿಧನದ ನಂತರ ಸಿಬಿಐ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭಿಸಿದ ತನಿಖೆ ಈಗ ಡ್ರಗ್ಸ್ ಪ್ರಕರಣದವರೆಗೂ ಬಂದು ನಿಂತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.