ETV Bharat / sitara

ಸಂಕಷ್ಟದಲ್ಲಿರುವ ಕನ್ನಡ ಸಿನಿಮಾ ಕಾರ್ಮಿಕರ ನೆರವಿಗೆ ಧಾವಿಸಿದ ಹ್ಯಾಟ್ರಿಕ್ ಹೀರೋ

ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟಕ್ಕೆ ಶಿವಣ್ಣ 10 ಲಕ್ಷ ರೂಪಾಯಿಯ ಚೆಕ್ ತಲುಪಿಸಿದ್ದಾರೆ. ಶಿವರಾಜ್ ಕುಮಾರ್ ಆಪ್ತ ಹಾಗೂ ನಿರ್ಮಾಪಕ ಕೆಪಿ ಶ್ರೀಕಾಂತ್ ಆ ಚೆಕ್‌ನ್ನು ಸಾ ರಾ ಗೋವಿಂದು ಹಾಗೂ ಕನ್ನಡ ಸಿನಿಮಾ ಒಕ್ಕೂಟದ ಕಾರ್ಯದರ್ಶಿಗಳಾದ ರವೀಂದ್ರನಾಥ್​ಗೆ ನೀಡಿದ್ದಾರೆ..

author img

By

Published : Jun 22, 2021, 3:03 PM IST

Updated : Jun 22, 2021, 3:18 PM IST

kannada-film-industry
ಚೆಕ್ ಹಸ್ತಾಂತರ

ಕೊರೊನಾದಿಂದಾಗಿ ಕಳೆದ ಎರಡೂವರೆ ತಿಂಗಳಿನಿಂದ ಕನ್ನಡ ಚಿತ್ರರಂಗ ಸಂಪೂರ್ಣವಾಗಿ ಬಂದ್ ಆಗಿದೆ‌. ಸಿನಿಮಾವನ್ನೇ ನಂಬಿಕೊಂಡಿದ್ದ ಸಾವಿರಾರು ಕಾರ್ಮಿಕರು ಹಾಗೂ ಪೋಷಕ ಕಲಾವಿದರು ಕೆಲಸವಿಲ್ಲದೇ ಕಷ್ಟಪಡುತ್ತಿದ್ದಾರೆ. ಇಂತಹ ಸಮಯದಲ್ಲಿ ಉಪೇಂದ್ರ, ರಾಕಿಂಗ್ ಸ್ಟಾರ್ ಯಶ್, ಪುನೀತ್ ರಾಜ್‍ಕುಮಾರ್ ಹಾಗೂ ನಿರ್ಮಾಪಕ ವಿಜಯ್ ಕಿರಂಗದೂರ್ ತಮ್ಮ ಕೈಲಾದ ಸಹಾಯವನ್ನ ಮಾಡಿ ಅವರಿಗೆ ಸಹಾಯ ನೀಡಿದ್ದಾರೆ.

ಚೆಕ್ ಹಸ್ತಾಂತರ
ಚೆಕ್ ಹಸ್ತಾಂತರ

ಇದೀಗ ಸಿನಿಮಾ ಕಾರ್ಮಿಕರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನೆರವು ನೀಡಿದ್ದಾರೆ. ಪತ್ನಿ ಗೀತಾ ಅವರ ಹುಟ್ಟುಹಬ್ಬದ ಹಿನ್ನೆಲೆ ನಾಗವಾರದ ನಿವಾಸದಲ್ಲಿ ಕೇಕ್ ಕತ್ತರಿಸಿ ಗೀತಾ ಶಿವರಾಜ್ ಕುಮಾರ್ ಹುಟ್ಟು ಹಬ್ಬವನ್ನ ಆಚರಿಸಿದ್ದಾರೆ‌. ಬಳಿಕ ಈ ವಿಶೇಷ ಸಂದರ್ಭದಲ್ಲಿ ಚಿತ್ರರಂಗದ ಕಾರ್ಮಿಕರಿಗೆ ಸಹಾಯಹಸ್ತ ನೀಡಿದ್ದಾರೆ.

ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟಕ್ಕೆ ಶಿವಣ್ಣ 10 ಲಕ್ಷ ರೂಪಾಯಿಯ ಚೆಕ್ ತಲುಪಿಸಿದ್ದಾರೆ. ಶಿವರಾಜ್ ಕುಮಾರ್ ಆಪ್ತ ಹಾಗೂ ನಿರ್ಮಾಪಕ ಕೆಪಿ ಶ್ರೀಕಾಂತ್ ಆ ಚೆಕ್‌ನ್ನು ಸಾ ರಾ ಗೋವಿಂದು ಹಾಗೂ ಕನ್ನಡ ಸಿನಿಮಾ ಒಕ್ಕೂಟದ ಕಾರ್ಯದರ್ಶಿಗಳಾದ ರವೀಂದ್ರನಾಥ್​ಗೆ ನೀಡಿದ್ದಾರೆ.

ಕೊರೊನಾದಿಂದಾಗಿ ಕಳೆದ ಎರಡೂವರೆ ತಿಂಗಳಿನಿಂದ ಕನ್ನಡ ಚಿತ್ರರಂಗ ಸಂಪೂರ್ಣವಾಗಿ ಬಂದ್ ಆಗಿದೆ‌. ಸಿನಿಮಾವನ್ನೇ ನಂಬಿಕೊಂಡಿದ್ದ ಸಾವಿರಾರು ಕಾರ್ಮಿಕರು ಹಾಗೂ ಪೋಷಕ ಕಲಾವಿದರು ಕೆಲಸವಿಲ್ಲದೇ ಕಷ್ಟಪಡುತ್ತಿದ್ದಾರೆ. ಇಂತಹ ಸಮಯದಲ್ಲಿ ಉಪೇಂದ್ರ, ರಾಕಿಂಗ್ ಸ್ಟಾರ್ ಯಶ್, ಪುನೀತ್ ರಾಜ್‍ಕುಮಾರ್ ಹಾಗೂ ನಿರ್ಮಾಪಕ ವಿಜಯ್ ಕಿರಂಗದೂರ್ ತಮ್ಮ ಕೈಲಾದ ಸಹಾಯವನ್ನ ಮಾಡಿ ಅವರಿಗೆ ಸಹಾಯ ನೀಡಿದ್ದಾರೆ.

ಚೆಕ್ ಹಸ್ತಾಂತರ
ಚೆಕ್ ಹಸ್ತಾಂತರ

ಇದೀಗ ಸಿನಿಮಾ ಕಾರ್ಮಿಕರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನೆರವು ನೀಡಿದ್ದಾರೆ. ಪತ್ನಿ ಗೀತಾ ಅವರ ಹುಟ್ಟುಹಬ್ಬದ ಹಿನ್ನೆಲೆ ನಾಗವಾರದ ನಿವಾಸದಲ್ಲಿ ಕೇಕ್ ಕತ್ತರಿಸಿ ಗೀತಾ ಶಿವರಾಜ್ ಕುಮಾರ್ ಹುಟ್ಟು ಹಬ್ಬವನ್ನ ಆಚರಿಸಿದ್ದಾರೆ‌. ಬಳಿಕ ಈ ವಿಶೇಷ ಸಂದರ್ಭದಲ್ಲಿ ಚಿತ್ರರಂಗದ ಕಾರ್ಮಿಕರಿಗೆ ಸಹಾಯಹಸ್ತ ನೀಡಿದ್ದಾರೆ.

ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟಕ್ಕೆ ಶಿವಣ್ಣ 10 ಲಕ್ಷ ರೂಪಾಯಿಯ ಚೆಕ್ ತಲುಪಿಸಿದ್ದಾರೆ. ಶಿವರಾಜ್ ಕುಮಾರ್ ಆಪ್ತ ಹಾಗೂ ನಿರ್ಮಾಪಕ ಕೆಪಿ ಶ್ರೀಕಾಂತ್ ಆ ಚೆಕ್‌ನ್ನು ಸಾ ರಾ ಗೋವಿಂದು ಹಾಗೂ ಕನ್ನಡ ಸಿನಿಮಾ ಒಕ್ಕೂಟದ ಕಾರ್ಯದರ್ಶಿಗಳಾದ ರವೀಂದ್ರನಾಥ್​ಗೆ ನೀಡಿದ್ದಾರೆ.

Last Updated : Jun 22, 2021, 3:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.