ETV Bharat / sitara

ಪ್ರಶ್ನಿಸುವ ಹಕ್ಕಿಗಾದರೂ ಮತದಾನ ಮಾಡಿ...ನಟ ಯಶ್ ಕರೆ

author img

By

Published : Apr 18, 2019, 4:50 PM IST

ಹೊಸಕೆರೆ ಹಳ್ಳಿಯ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಯಶ್​ ಮತಚಲಾಯಿಸಿದರು. ಬೇರೆಯವರನ್ನು ಪ್ರಶ್ನಿಸುವ ಮುನ್ನ ನಾವು ನಮ್ಮ ಕರ್ತವ್ಯ ನಿಭಾಯಿಸಬೇಕು ಎಂದು ಇದೇ ವೇಳೆ ಕರೆ ನೀಡಿದ್ರು.

ನಟ ಯಶ್

ಬೆಂಗಳೂರು: ಮತದಾನ ಮಾಡದೇ ನಮ್ಮ ಕರ್ತವ್ಯ ಮರೆತು, ಪರರು ಸರಿಯಾಗಿ ಕಾರ್ಯ ನಿರ್ವಹಿಸಿಲ್ಲ ಎಂದು ಪ್ರಶ್ನೆ ಮಾಡುವುದು ಸರಿಯಲ್ಲ. ಹಾಗಾಗಿ‌ ಮೊದಲು ನಾವು ನಮ್ಮ ಕರ್ತವ್ಯ ನಿರ್ವಹಿಸೋಣ, ನಂತರ ಧೈರ್ಯವಾಗಿ ಪ್ರಶ್ನಿಸೋಣ ಎಂದು ನಟ ಯಶ್ ಮತದಾರರಿಗೆ ಕರೆ ನೀಡಿದ್ರು.

ಹೊಸಕೆರೆ ಹಳ್ಳಿಯ ಸರ್ಕಾರಿ ಶಾಲೆಯ ಮತಗಟ್ಟೆ1 ರಲ್ಲಿ ವೋಟು ಹಾಕಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕರ್ತವ್ಯ ಮರೆತು ಮತ್ತೊಬ್ಬರ ಬಗ್ಗೆ ಬೆರಳು ತೋರಿಸುವುದು ಸರಿಯಲ್ಲ. ಹಾಗಾಗಿ ಮೊದಲು ಮತ ಹಾಕಬೇಕು. ನಂತರ ಅವರಿಂದ ಕೆಲಸ ಮಾಡಿಸಬೇಕು ಎಂದರು.

ನಟ ಯಶ್

ಈ ಬಾರಿ ಮತದಾನದ ಪ್ರಮಾಣ ಉತ್ತಮವಾಗಿದೆ. ಬಿಸಿಲು ಏರುವ ಮುನ್ನ ಸಾಕಷ್ಟು ಸಂಖ್ಯೆಯಲ್ಲಿ ಜನರು ಮತ ಚಲಾಯಿಸಿದ್ದಾರೆ. ಸಂಜೆ ಮತ್ತಷ್ಟು‌ ಹೆಚ್ಚುವ ಸಾಧ್ಯತೆ ಇದೆ ಯಾರೂ ಕೂಡ ಮತದಾನದಿಂದ‌ ದೂರ ಉಳಿಯದೇ ಹಕ್ಕು ಚಲಾಯಿಸಿ ಎಂದು ಜಾಗೃತಿ ಮೂಡಿಸಿದರು.

ಮೊದಲ ಹಂತದಲ್ಲಿ ಮಂಡ್ಯದಲ್ಲಿ ಸುಮಲತಾ ಪರ ಪ್ರಚಾರ ಮಾಡಿದ್ದು, ಎರಡನೇ ಹಂತದಲ್ಲಿ ಎಲ್ಲಿಯೂ ಪ್ರಚಾರ ಮಾಡುತ್ತಿಲ್ಲ ಎಂದು ಯಶ್ ಸ್ಪಷ್ಟಪಡಿಸಿದರು.

ಸೆಲ್ಫಿಗೆ ಮುಗಿಬಿದ್ದ ಮತದಾರರು:

ವೋಟು ಹಾಕಲು ಬಂದ ನಟ ಯಶ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಯುವ ಮತದಾರರು ಮುಗಿಬಿದ್ದರು. ಮತ ಚಲಾಯಿಸಲು ಸರದಿ ಸಾಲಿನಲ್ಲಿ ನಿಂತಿದ್ದ ಯಶ್ ಅಭಿಮಾನಿಗಳು‌ ಹಾಗೂ ಯುವಕರು ಸಾಲು ತೊರೆದು ಸೆಲ್ಫಿಗಾಗಿ ಯಶ್ ಹಿಂದೆ ಓಡಿದರು. ನಾ ಮುಂದು ತಾ ಮುಂದು ಎಂದು ಸೆಲ್ಫಿಗಳನ್ನು ತೆಗೆದುಕೊಂಡರು.

ಬೆಂಗಳೂರು: ಮತದಾನ ಮಾಡದೇ ನಮ್ಮ ಕರ್ತವ್ಯ ಮರೆತು, ಪರರು ಸರಿಯಾಗಿ ಕಾರ್ಯ ನಿರ್ವಹಿಸಿಲ್ಲ ಎಂದು ಪ್ರಶ್ನೆ ಮಾಡುವುದು ಸರಿಯಲ್ಲ. ಹಾಗಾಗಿ‌ ಮೊದಲು ನಾವು ನಮ್ಮ ಕರ್ತವ್ಯ ನಿರ್ವಹಿಸೋಣ, ನಂತರ ಧೈರ್ಯವಾಗಿ ಪ್ರಶ್ನಿಸೋಣ ಎಂದು ನಟ ಯಶ್ ಮತದಾರರಿಗೆ ಕರೆ ನೀಡಿದ್ರು.

ಹೊಸಕೆರೆ ಹಳ್ಳಿಯ ಸರ್ಕಾರಿ ಶಾಲೆಯ ಮತಗಟ್ಟೆ1 ರಲ್ಲಿ ವೋಟು ಹಾಕಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕರ್ತವ್ಯ ಮರೆತು ಮತ್ತೊಬ್ಬರ ಬಗ್ಗೆ ಬೆರಳು ತೋರಿಸುವುದು ಸರಿಯಲ್ಲ. ಹಾಗಾಗಿ ಮೊದಲು ಮತ ಹಾಕಬೇಕು. ನಂತರ ಅವರಿಂದ ಕೆಲಸ ಮಾಡಿಸಬೇಕು ಎಂದರು.

ನಟ ಯಶ್

ಈ ಬಾರಿ ಮತದಾನದ ಪ್ರಮಾಣ ಉತ್ತಮವಾಗಿದೆ. ಬಿಸಿಲು ಏರುವ ಮುನ್ನ ಸಾಕಷ್ಟು ಸಂಖ್ಯೆಯಲ್ಲಿ ಜನರು ಮತ ಚಲಾಯಿಸಿದ್ದಾರೆ. ಸಂಜೆ ಮತ್ತಷ್ಟು‌ ಹೆಚ್ಚುವ ಸಾಧ್ಯತೆ ಇದೆ ಯಾರೂ ಕೂಡ ಮತದಾನದಿಂದ‌ ದೂರ ಉಳಿಯದೇ ಹಕ್ಕು ಚಲಾಯಿಸಿ ಎಂದು ಜಾಗೃತಿ ಮೂಡಿಸಿದರು.

ಮೊದಲ ಹಂತದಲ್ಲಿ ಮಂಡ್ಯದಲ್ಲಿ ಸುಮಲತಾ ಪರ ಪ್ರಚಾರ ಮಾಡಿದ್ದು, ಎರಡನೇ ಹಂತದಲ್ಲಿ ಎಲ್ಲಿಯೂ ಪ್ರಚಾರ ಮಾಡುತ್ತಿಲ್ಲ ಎಂದು ಯಶ್ ಸ್ಪಷ್ಟಪಡಿಸಿದರು.

ಸೆಲ್ಫಿಗೆ ಮುಗಿಬಿದ್ದ ಮತದಾರರು:

ವೋಟು ಹಾಕಲು ಬಂದ ನಟ ಯಶ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಯುವ ಮತದಾರರು ಮುಗಿಬಿದ್ದರು. ಮತ ಚಲಾಯಿಸಲು ಸರದಿ ಸಾಲಿನಲ್ಲಿ ನಿಂತಿದ್ದ ಯಶ್ ಅಭಿಮಾನಿಗಳು‌ ಹಾಗೂ ಯುವಕರು ಸಾಲು ತೊರೆದು ಸೆಲ್ಫಿಗಾಗಿ ಯಶ್ ಹಿಂದೆ ಓಡಿದರು. ನಾ ಮುಂದು ತಾ ಮುಂದು ಎಂದು ಸೆಲ್ಫಿಗಳನ್ನು ತೆಗೆದುಕೊಂಡರು.

Intro:-ಪ್ರಶಾಂತ್ ಕುಮಾರ್

ಪ್ರಶ್ನಿಸುವ ಹಕ್ಕಿಗಾದರೂ ಮತದಾನ ಮಾಡಿ: ಯಶ್!

ಬೆಂಗಳೂರು: ಮತದಾನ ಮಾಡದೇ ನಮ್ಮ ಕರ್ತವ್ಯ ಮರೆತು ಬೇರೆಯವರು ಸರಿಯಾಗಿ ಕರ್ತವ್ಯ ನಿರ್ವಹಣೆ ಮಾಡಿಲ್ಲ ಎಂದು ಪ್ರಶ್ನೆ ಮಾಡುವುದು ಸರಿಯಲ್ಲ ಹಾಗಾಗಿ‌ ಮೊದಲು ನಾವು ನಮ್ಮ ಮತದಾನ ಮಾಡುವ ಕರ್ತವ್ಯ ನಿರ್ವಹಿಸೋಣ ನಂತರ ಪ್ರಶ್ನಿಸೋಣ ಎಂದು ನಟ ಯಶ್ ಮತದಾರರಿಗೆ ಕರೆ ನೀಡಿದ್ದಾರೆ.

ಹೊಸಕೆರೆ ಹಳ್ಳಿಯ ಸರ್ಕಾರಿ ಶಾಲೆಯ ಮತಗಟ್ಟೆ 1 ರಲ್ಲಿ ನಟ ಯಶ್ ಮತದಾನ ಮಾಡಿದರು. ಮಧ್ಯಾಹ್ನ 1.30 ರ ಸಮಯಕ್ಕೆ ಆಗಮಿಸಿದ ಯಶ್ ತಮ್ಮ ಹಕ್ಕು ಚಲಾಯಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಶ್,ಮತದಾನ ಬಹಳ ಮುಖ್ಯ, ನಾವು ಯಾರನ್ನೇ ಪ್ರಶ್ನೆ ಮಾಡಬೇಕು ಎಂದರೆ ಮೊದಲು ಮತದಾನ ಮಾಡುವ ನಮ್ಮ‌ ಕರ್ತವ್ಯವನ್ನು ಸರಿಯಾಗಿ ಮಾಡಬೇಕು, ನಾವೇ ಸರಿಯಾಗಿ ನಮ್ಮ‌ಕರ್ತವ್ಯ ಮಾಡದೇ ಮತ್ತೊಬ್ಬರ ಬಗ್ಗೆ ಬೆರಳು ತೋರಿಸುವುದು ಸರಿಯಲ್ಲ ಹಾಗಾಗಿ ಮತ ಹಾಕಬೇಕು, ನಂತರ ಅವರಿಂದ ಕೆಲಸ ಮಾಡಿಸಬೇಕು,ಮತದಾನ ಮಾಡಿ ಮೊದಲು ನಾವು ಜವಾಬ್ದಾರಿ ತಗೊಳೋಣ, ನಂತರ ಕೆಲಸ ಮಾಡಿಸೋಣ ಎಂದರು.

ಈ ಬಾರಿ ಮತದಾನದ ಪ್ರಮಾಣ ಉತ್ತಮವಾಗಿದೆ ಬಿಸಿಲು ಏರುವ ಮುನ್ನ ಸಾಕಷ್ಟು ಸಂಖ್ಯೆಯಲ್ಲಿ ಜನರು ಮತ ಚಲಾಯಿಸಿದ್ದಾರೆ ಸಂಜೆ ಮತ್ತಷ್ಟು‌ ಹೆಚ್ಚುವ ಸಾಧ್ಯತೆ ಇದೆ ಯಾರೂ ಕೂಡ ಮತದಾನದಿಂದ‌ ದೂರ ಉಳಿಯದೇ ಹಕ್ಕು ಚಲಾಯಿಸಿ ಎಂದು ಕರೆ ನೀಡಿದರು.

ಮೊದಲ ಹಂತದ ಚುನಾವಣೆಯಲ್ಲಿ ಮಂಡ್ಯದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ಮಾಡಿದ್ದು ಎರಡನೇ ಹಂತದಲ್ಲಿ ಎಲ್ಲಿಯೂ ಪ್ರಚಾರ ಮಾಡುತ್ತಿಲ್ಲ ಎಂದು ಯಶ್ ಸ್ಪಷ್ಟಪಡಿಸಿದರು.

ಸೆಲ್ಫಿಗೆ ಮುಗಿಬಿದ್ದ ಮತದಾರರು:

ಮತದಾನ ಮಾಡಲು ಮತಗಟ್ಟೆ ಪ್ರವೇಶ ಮಾಡುವ ವೇಳೆ ಹಾಗು ಮತದಾನ ಮಾಡಿ ಮತಗಟ್ಟೆಯಿಂದ ಹೊರ ಬರುವ ವೇಳೆ ನಟ ಯಶ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಯುವ ಮತದಾರರು ಮುಗಿಬಿದ್ದರು.ಮತ ಚಲಾಯಿಸಲು ಸರದಿ ಸಾಲಿನಲ್ಲಿ ನಿಂತಿದ್ದ ಯಶ್ ಅಭಿಮಾನಿಗಳು‌ ಹಾಗು ಯುವಕರು ಸಾಲು ತೊರೆದು ಸೆಲ್ಫಿಗಾಗಿ ಯಶ್ ಹಿಂದೆ ಹೋಡಿದರು,ನಾ ಮುಂದು ತಾ ಮುಂದು ಎಂದು ಸೆಲ್ಫಿಗಳನ್ನು ತೆಗೆದುಕೊಂಡರು.
Body:...Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.