ETV Bharat / sitara

ಯುವ ಜನತೆ ವಿಭಜನೆ ಆಗ್ತಾ ಇರೋದು ನೋವಿನ ಸಂಗತಿ: ನಟಿ ರಮ್ಯಾ

author img

By

Published : Feb 9, 2022, 4:38 PM IST

ಕರ್ನಾಟಕದಲ್ಲಿ ಉಂಟಾಗಿರುವ ಹಿಜಾಬ್-ಕೇಸರಿ ಶಾಲು ಸಂಘರ್ಷ ವಿಚಾರವಾಗಿ ನಟಿ ರಮ್ಯಾ ಪ್ರತಿಕ್ರಿಯಿಸಿದ್ದು, ಬೇಸರ ವ್ಯಕ್ತಪಡಿಸಿದ್ದಾರೆ..

Actress Ramya reaction about hijab controversy
ಹಿಜಾಬ್ ವಿವಾದ ಬಗ್ಗೆ ನಟಿ ರಮ್ಯಾಅಸಮಾಧಾನ

ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ಸಂಘರ್ಷ ಭುಗಿಲೆದ್ದಿದೆ. ಪರ-ವಿರೋಧಗಳು ಕೇಳಿ ಬರುತ್ತಿವೆ. ಈ ಕುರಿತಂತೆ ಸ್ಯಾಂಡಲ್​ವುಡ್​ ನಟಿ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ. ಚಿತ್ರರಂಗ ಹಾಗೂ ರಾಜಕೀಯದಿಂದ ದೂರು ಉಳದಿರುವ ಮೋಹಕ ತಾರೆ ರಮ್ಯಾ, ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿದ್ದಾರೆ. ಆಗಾಗ ಸಮಾಜದ ಅಂಕುಡೊಂಕುಗಳ ಬಗ್ಗೆ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಧ್ವನಿ ಎತ್ತುತ್ತಿರುತ್ತಾರೆ.

ಕರ್ನಾಟಕದಲ್ಲಿ ಉಂಟಾಗಿರುವ ಹಿಜಾಬ್​ ಸಂಘರ್ಷ ಕುರಿತಂತೆ ಪ್ರತಿಕ್ರಿಯಿಸಿದ್ದು, ಭಾರತದ ಯುವಕರು ವಿಭಜನೆ ಆಗ್ತಾ ಇರೋದು ನೋಡುತ್ತಿದ್ದರೆ ತುಂಬಾ ಬೇಸರವಾಗುತ್ತದೆ ಎಂದು ರಮ್ಯಾ ಟ್ಟಿಟರ್​​​​ನಲ್ಲಿ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

ಇನ್ನು ಕೆಲ ದಿನಗಳ ಹಿಂದೆಯಷ್ಟೇ ಬೀದಿನಾಯಿ ಲಾರಾ ಮೇಲೆ ಕಾರು ಹತ್ತಿಸಿದ ಕಿಡಿಗೇಡಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಇದರ ಜೊತೆಗೆ ಶ್ವಾನದ ಅಂತ್ಯಕ್ರಿಯೆಯಲ್ಲಿ ಭಾಗಿಯಾಗುವ ಮೂಲಕ ಮಾನವೀಯತೆ ಮೆರೆದಿದ್ದರು.

ಇದನ್ನೂ ಓದಿ: ಹಿಜಾಬ್​ ಧರಿಸುವ ಬಗ್ಗೆ ಮಧ್ಯಂತರ ಆದೇಶಕ್ಕೆ ಹೈಕೋರ್ಟ್​ ನಕಾರ..ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗ

ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ಸಂಘರ್ಷ ಭುಗಿಲೆದ್ದಿದೆ. ಪರ-ವಿರೋಧಗಳು ಕೇಳಿ ಬರುತ್ತಿವೆ. ಈ ಕುರಿತಂತೆ ಸ್ಯಾಂಡಲ್​ವುಡ್​ ನಟಿ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ. ಚಿತ್ರರಂಗ ಹಾಗೂ ರಾಜಕೀಯದಿಂದ ದೂರು ಉಳದಿರುವ ಮೋಹಕ ತಾರೆ ರಮ್ಯಾ, ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿದ್ದಾರೆ. ಆಗಾಗ ಸಮಾಜದ ಅಂಕುಡೊಂಕುಗಳ ಬಗ್ಗೆ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಧ್ವನಿ ಎತ್ತುತ್ತಿರುತ್ತಾರೆ.

ಕರ್ನಾಟಕದಲ್ಲಿ ಉಂಟಾಗಿರುವ ಹಿಜಾಬ್​ ಸಂಘರ್ಷ ಕುರಿತಂತೆ ಪ್ರತಿಕ್ರಿಯಿಸಿದ್ದು, ಭಾರತದ ಯುವಕರು ವಿಭಜನೆ ಆಗ್ತಾ ಇರೋದು ನೋಡುತ್ತಿದ್ದರೆ ತುಂಬಾ ಬೇಸರವಾಗುತ್ತದೆ ಎಂದು ರಮ್ಯಾ ಟ್ಟಿಟರ್​​​​ನಲ್ಲಿ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

ಇನ್ನು ಕೆಲ ದಿನಗಳ ಹಿಂದೆಯಷ್ಟೇ ಬೀದಿನಾಯಿ ಲಾರಾ ಮೇಲೆ ಕಾರು ಹತ್ತಿಸಿದ ಕಿಡಿಗೇಡಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಇದರ ಜೊತೆಗೆ ಶ್ವಾನದ ಅಂತ್ಯಕ್ರಿಯೆಯಲ್ಲಿ ಭಾಗಿಯಾಗುವ ಮೂಲಕ ಮಾನವೀಯತೆ ಮೆರೆದಿದ್ದರು.

ಇದನ್ನೂ ಓದಿ: ಹಿಜಾಬ್​ ಧರಿಸುವ ಬಗ್ಗೆ ಮಧ್ಯಂತರ ಆದೇಶಕ್ಕೆ ಹೈಕೋರ್ಟ್​ ನಕಾರ..ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.