ETV Bharat / sitara

ರಾಬರ್ಟ್​ ನಂತರ ಮತ್ತೊಂದು ಐತಿಹಾಸಿಕ ಚಿತ್ರದಲ್ಲಿ ಬ್ಯುಸಿಯಾಗಲಿರುವ ಡಿ ಬಾಸ್​ - ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಮದಕರಿ ನಾಯಕ ಚಿತ್ರಕ್ಕೆ ಸಿದ್ಧತೆ

ಎಸ್​​.ವಿ. ರಾಜೇಂದ್ರ ಸಿಂಗ್ ಬಾಬು ಬಹಳ ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಇಳಿದಿದ್ದು ದರ್ಶನ್ ಅಭಿನಯದಲ್ಲಿ ಚಿತ್ರದುರ್ಗ ಮದಕರಿ ನಾಯಕನ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ರಾಬರ್ಟ್, ಒಡೆಯ ಚಿತ್ರದ ಕೆಲಸಗಳು ಮುಗಿದ ನಂತರ ಚಾಲೆಂಜಿಂಗ್ ಸ್ಟಾರ್ ಈ ಐತಿಹಾಸಿಕ ಚಿತ್ರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಚಾಲೆಂಜಿಂಗ್ ಸ್ಟಾರ್​
author img

By

Published : Oct 12, 2019, 12:32 PM IST

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯಕ್ಕೆ ತರುಣ್ ಸುಧೀರ್ ನಿರ್ದೇಶನದ ರಾಬರ್ಟ್ ಹಾಗೂ ಎಂ.ಡಿ. ಶ್ರೀಧರ್ ನಿರ್ದೇಶನದ ಒಡೆಯ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಇವರೆಡು ಕಮರ್ಷಿಯಲ್ ಸಿನಿಮಾಗಳ ನಂತರ ದರ್ಶನ್ ಐತಿಹಾಸಿಕ ಸಿನಿಮಾ ಮಾಡಲಿದ್ದಾರೆ.

ಐತಿಹಾಸಿಕ ಚಿತ್ರ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ'ನಂತರ ಪೌರಾಣಿಕ ಚಿತ್ರವಾದ 'ಕುರುಕ್ಷೇತ್ರ'ದಲ್ಲಿ ದರ್ಶನ್ ಮಿಂಚಿದ್ದು ಇದೀಗ ಮತ್ತೊಮ್ಮೆ ಐತಿಹಾಸಿಕ ಚಿತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ. ಚಿತ್ರದುರ್ಗದ ಗಂಡುಗಲಿ ಮದಕರಿ ನಾಯಕನ ಜೀವನ ಚರಿತ್ರೆ ಆಧಾರಿತ ಸಿನಿಮಾ ಇದಾಗಿದ್ದು ಖ್ಯಾತ ನಿರ್ದೇಶಕ ಎಸ್​.ವಿ. ರಾಜೇಂದ್ರ ಸಿಂಗ್ ಬಾಬು ಈ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ. ಚಿತ್ರದ ಶೀರ್ಷಿಕೆ ಇನ್ನೂ ಅಂತಿಮವಾಗಿಲ್ಲ. ರಾಕ್ಲೈನ್ ವೆಂಕಟೇಶ್ ಈ ಸಿನಿಮಾವನ್ನು ನಿರ್ಮಿಸಲಿದ್ದಾರೆ. ರಾಬರ್ಟ್ ಬಿಡುಗಡೆಗೂ ಮುನ್ನ ಈ ಸಿನಿಮಾ ಸೆಟ್ಟೇರಲಿದೆ. ಚೆನ್ನೈ ಹಾಗೂ ಹೈದರಾಬಾದ್​​​​ನ ಕೆಲವು ಬರಹಗಾರರು ಈ ಐತಿಹಾಸಿಕ ಸಿನಿಮಾದ ಚಿತ್ರಕಥೆಯನ್ನು ಮತ್ತಷ್ಟು ಗಟ್ಟಿಗೊಳಿಸಿದ್ದಾರೆ. ನಾದಬ್ರಹ್ಮ ಹಂಸಲೇಖ ಚಿತ್ರದ ಹಾಡುಗಳಿಗೆ ಸಂಗೀತ ನೀಡಲಿದ್ದಾರೆ. ಚಿತ್ರಕ್ಕೆ ಅಶೋಕ್ ಕಶ್ಯಪ್ ಛಾಯಾಗ್ರಹಣವಿದ್ದು ದೊಡ್ಡಣ್ಣ, ಶ್ರೀನಿವಾಸಮೂರ್ತಿ ಹಾಗೂ ಇನ್ನಿತರರು ಈ ಚಿತ್ರದಲ್ಲಿ ನಟಿಸಲಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯಕ್ಕೆ ತರುಣ್ ಸುಧೀರ್ ನಿರ್ದೇಶನದ ರಾಬರ್ಟ್ ಹಾಗೂ ಎಂ.ಡಿ. ಶ್ರೀಧರ್ ನಿರ್ದೇಶನದ ಒಡೆಯ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಇವರೆಡು ಕಮರ್ಷಿಯಲ್ ಸಿನಿಮಾಗಳ ನಂತರ ದರ್ಶನ್ ಐತಿಹಾಸಿಕ ಸಿನಿಮಾ ಮಾಡಲಿದ್ದಾರೆ.

ಐತಿಹಾಸಿಕ ಚಿತ್ರ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ'ನಂತರ ಪೌರಾಣಿಕ ಚಿತ್ರವಾದ 'ಕುರುಕ್ಷೇತ್ರ'ದಲ್ಲಿ ದರ್ಶನ್ ಮಿಂಚಿದ್ದು ಇದೀಗ ಮತ್ತೊಮ್ಮೆ ಐತಿಹಾಸಿಕ ಚಿತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ. ಚಿತ್ರದುರ್ಗದ ಗಂಡುಗಲಿ ಮದಕರಿ ನಾಯಕನ ಜೀವನ ಚರಿತ್ರೆ ಆಧಾರಿತ ಸಿನಿಮಾ ಇದಾಗಿದ್ದು ಖ್ಯಾತ ನಿರ್ದೇಶಕ ಎಸ್​.ವಿ. ರಾಜೇಂದ್ರ ಸಿಂಗ್ ಬಾಬು ಈ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ. ಚಿತ್ರದ ಶೀರ್ಷಿಕೆ ಇನ್ನೂ ಅಂತಿಮವಾಗಿಲ್ಲ. ರಾಕ್ಲೈನ್ ವೆಂಕಟೇಶ್ ಈ ಸಿನಿಮಾವನ್ನು ನಿರ್ಮಿಸಲಿದ್ದಾರೆ. ರಾಬರ್ಟ್ ಬಿಡುಗಡೆಗೂ ಮುನ್ನ ಈ ಸಿನಿಮಾ ಸೆಟ್ಟೇರಲಿದೆ. ಚೆನ್ನೈ ಹಾಗೂ ಹೈದರಾಬಾದ್​​​​ನ ಕೆಲವು ಬರಹಗಾರರು ಈ ಐತಿಹಾಸಿಕ ಸಿನಿಮಾದ ಚಿತ್ರಕಥೆಯನ್ನು ಮತ್ತಷ್ಟು ಗಟ್ಟಿಗೊಳಿಸಿದ್ದಾರೆ. ನಾದಬ್ರಹ್ಮ ಹಂಸಲೇಖ ಚಿತ್ರದ ಹಾಡುಗಳಿಗೆ ಸಂಗೀತ ನೀಡಲಿದ್ದಾರೆ. ಚಿತ್ರಕ್ಕೆ ಅಶೋಕ್ ಕಶ್ಯಪ್ ಛಾಯಾಗ್ರಹಣವಿದ್ದು ದೊಡ್ಡಣ್ಣ, ಶ್ರೀನಿವಾಸಮೂರ್ತಿ ಹಾಗೂ ಇನ್ನಿತರರು ಈ ಚಿತ್ರದಲ್ಲಿ ನಟಿಸಲಿದ್ದಾರೆ.

ದರ್ಶನ್ ದುರ್ಗದ ಹುಲಿ ಮದಕರಿನಾಯಕ ಚಿತ್ರಕ್ಕೆ ಸಿದ್ದತೆ

 

ಛಾಲೆಂಜಿಂಗ್ ಸ್ಟಾರ್ ಡಿ ಬಾಸ್ ದರ್ಶನ್ ಈಗ ಎರಡು ಕಮರ್ಷಿಯಲ್ ಚಿತ್ರಗಳಾದ = ಒಡೆಯ ಹಾಗೂ ರಾಬರ್ಟ್ ಬಿಡುಗಡೆಗೂ ಮುಂಚೆಯೇ ಅವರ ಮತ್ತೊಂದು ಐತಿಹಾಸಿಕ ಸಿನಿಮಾ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಸೆಟ್ಟೇರಲಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಐತಿಹಾಸಿಕ, ಆಮೇಲೆ ಕುರುಕ್ಷೇತ್ರ ಪೌರಾಣಿಕ ಮತ್ತೆ ಈಗ ಐತಿಹಾಸಿಕ ಸಿನಿಮಾದಲ್ಲಿ ದರ್ಶನ್ ಅಭಿನಯಿಸಲಿದ್ದಾರೆ.

 

ಈ ಐತಿಹಾಸಿಕ ಚಿತ್ರ ದುರ್ಗದ ಹುಲಿ ಮದಕರಿ ನಾಯಕ ಅಥವಾ ಗಂಡುಗಲಿ ಮದಕರಿ ನಾಯಕ ಶೀರ್ಷಿಕೆಯ ಎಂಬುದು ಸಧ್ಯಕ್ಕೆ ತೀರ್ಮಾನಿಸಲಾಗುತ್ತಿದೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಸಿನಿಮಾ ಇದು. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕುರುಕ್ಷೇತ್ರ ವಿತರಣೆ ಮಾಡಿದವರು. ಆ ಸಿನಿಮಾದ ಸುಯೋಧನ....ಹಾಡಿನ ಕೆಲವು ಪದಗಳನ್ನು ಇಷ್ಟಪಟ್ಟು ಅವುಗಳನ್ನು ಶೀರ್ಷಿಕೆ ಆಗಿ ನೋಂದಾಯಿಸಿಕೊಂಡಿದ್ದಾರೆ. ಅದಕ್ಕೆ ಬರಹಗಾರ ಡಾ ವಿ ನಾಗೇಂದ್ರ ಪ್ರಸಾದ್ ಅವರ ಅನುಮತಿ ಸಹ ಪಡೆದುಕೊಡಿದ್ದಾರೆ.

 

ಸಧ್ಯಕ್ಕೆ ಈ ಐತಿಹಾಸಿಕ ಚಿತ್ರಕ್ಕೆ ಕೆಲವು ಬರಹಗಾರರು ಚೆನ್ನೈ ಹಾಗೂ ಹೈದರಾಬಾದಿನಿಂದ ಬಂದು ಚಿತ್ರಕಥೆಯನ್ನು ಮತ್ತಷ್ಟು ಬಿಗಿ ಮಾಡಿದ್ದಾರೆ. ಒಂದು ಮೂಲದ ಪ್ರಕಾರ 12 ಆವೃತ್ತಿ ಡಿ ಬಾಸ್ ಚಿತ್ರದ ಐತಿಹಾಸಿಕ ಚಿತ್ರಕಥೆ ಅಂತಿಮವಾಗಿದೆ. ಸಂಗೀತ ನಿರ್ದೇಶಕ ನಾದ ಬ್ರಹ್ಮ ಹಂಸಲೇಖ ಸಹ ಈ ಚಿತ್ರಕ್ಕೆ ಕೆಲವು ಸಲಹೆಗಳನ್ನು ನೀಡಿ ಹಾಡುಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

 

ಬಹಳ ವರ್ಷಗಳ ಬಳಿಕ ನಿರ್ದೇಶನಕ್ಕೆ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಮರಳಿದ್ದಾರೆ. ಅಶೋಕ್ ಕಶ್ಯಪ್ ಈ ಚಿತ್ರಕ್ಕೆ ಛಾಯಾಗ್ರಹಣ ಮಾಡಲಿದ್ದಾರೆ. ದೊಡ್ಡಣ್ಣ, ಶ್ರೀನಿವಾಸಮೂರ್ತಿ ಅಂತ ಹಿರಿಯ ನಟರುಗಳು ಈ ಡಿ ಬಾಸ್ ಐತಿಹಾಸಿಕ ಚಿತ್ರದಲ್ಲಿ ಪಾತ್ರ ನಿರ್ವಹಿಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.