ಚೆನ್ನೈ(ತಮಿಳುನಾಡು): ಕಾಲಿವುಡ್ ಹಿರಿಯ ನಟ ಸತ್ಯರಾಜ್ಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಅವರನ್ನು ಚೆನ್ನೈ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಈ ಮೊದಲು ಅವರಲ್ಲಿ ಸೋಂಕು ದೃಢಪಟ್ಟಿರುವುದು ಗೊತ್ತಾದಾಗ ಮನೆಯಲ್ಲಿ ಐಸೋಲೇಷನ್ನಲ್ಲಿದ್ದರು. ಆರೋಗ್ಯ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಹದಗೆಟ್ಟ ಕಾರಣದಿಂದಾಗಿ ಅವರನ್ನು ಚೆನ್ನೈ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ.
ರಾಜಮೌಳಿ ನಿರ್ದೇಶನದ ಬಾಹುಬಲಿ ಸಿನಿಮಾದಲ್ಲಿ ಕಟ್ಟಪ್ಪನ ಪಾತ್ರದಲ್ಲಿ ಸತ್ಯರಾಜ್ ಸಿನಿಪ್ರಿಯರನ್ನು ಬೆರಗುಗೊಳಿಸಿದ್ದರು.
ಬಹುಭಾಷಾ ನಟಿ ತ್ರಿಶಾಗೂ ಈ ಮೊದಲು ಕೋವಿಡ್ ಪಾಸಿಟಿವ್ ಕಂಡು ಬಂದಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಎಲ್ಲರೂ ಮಾಸ್ಕ್ ಧರಿಸಿ, ಕೊರೊನಾ ಗುಣವಾಗಿ ಆದಷ್ಟು ಬೇಗ ಮನೆಗೆ ಹಿಂದಿರುಗಲು ನಾನು ಬಯಸಿದ್ದೇನೆ ಎಂದಿದ್ದರು.
ಇದನ್ನೂ ಓದಿ: ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ: ನೆಟ್ಟಿಗರಿಗೆ ನಟಿ ಸ್ವರಾ ಭಾಸ್ಕರ್ ತಿರುಗೇಟು