ETV Bharat / sitara

'ಕೋಲುಮಂಡೆ' ಹಾಡು ವಿವಾದ: ರ್‍ಯಾಪರ್ ಚಂದನ್ ಶೆಟ್ಟಿ ವಿರುದ್ದ ದೂರು

author img

By

Published : Aug 26, 2020, 10:18 AM IST

ಆಗಸ್ಟ್ 22 ರಂದು ಚಂದನ್ ಶೆಟ್ಟಿ ಬಿಡುಗಡೆ ಮಾಡಿದ್ದ ಕೋಲುಮಂಡೆ ಹಾಡು ವಿವಾದ ಸೃಷ್ಟಿಸಿದ್ದು ಈ ಬಗ್ಗೆ ಬೆಂಗಳೂರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜನರು ಆಕ್ರೋಶ ಹೊರಹಾಕುತ್ತಿದ್ದಂತೆ ಚಂದನ್ ಶೆಟ್ಟಿ ಯೂಟ್ಯೂಬ್​​​​​ನಿಂದ ಹಾಡನ್ನು ಡಿಲೀಟ್ ಮಾಡಿದ್ದಾರೆ.

Complaint on Rapper chandan shetty
ಚಂದನ್ ಶೆಟ್ಟಿ ವಿರುದ್ದ ದೂರು

ಬೆಂಗಳೂರು: ಕೋಲುಮಂಡೆ ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡ ರ್‍ಯಾಪರ್, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ವಿರುದ್ಧ ಮಲೆ ಮಹಾದೇಶ್ವರ ಭಕ್ತರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು ಎನ್​​​ಸಿಆರ್ ದಾಖಲಿಸಿಕೊಂಡು ಕಾನೂನು ತಜ್ಞರ ಸಲಹೆ ಪಡೆದು ಎಫ್​​​ಐಆರ್​ ದಾಖಲಿಸಲು ನಿರ್ಧರಿಸಿದ್ದಾರೆ. ಕೇಂದ್ರ ವಿಭಾಗ ಡಿಸಿಪಿ ಅನುಚೇತ್ ಈ ಬಗ್ಗೆ ಪರಿಶೀಲನೆ ನಡೆಸಿದ್ದಾರೆ‌.

ಗಣೇಶ ಹಬ್ಬದಂದು ಚಂದನ್ ಶೆಟ್ಟಿ ಬಿಡುಗಡೆ ಮಾಡಿದ್ದ ಕೋಲುಮಂಡೆ ಹಾಡಿಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಹಾಡಿನಲ್ಲಿ ಶರಣೆ ಸಂಕಮ್ಮ ಅವರನ್ನು ಕೆಟ್ಟದಾಗಿ ಚಿತ್ರೀಕರಿಸಲಾಗಿದೆ. ಹಾಗೂ ಚಂದನ್ ತಮ್ಮ ಲಾಭಕ್ಕಾಗಿ ಮಲೆ ಮಹದೇಶ್ವರನ ಈ ಸುಂದರ ಹಾಡನ್ನು ಹಾಳು ಮಾಡಿ ಭಕ್ತರ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ. ಎಂದು ಮೈಸೂರು ಹಾಗೂ ಚಾಮರಾಜನಗರ ಭಾಗದ ಜನರು ಆಕ್ರೋಶ ವ್ಯಕ್ತಪಡಿಸಿದ್ದರು.

ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಪೋಸ್ಟ್​​​​ಗಳನ್ನು ನೋಡುತ್ತಿದ್ದಂತೆ ಚಂದನ್ ಶೆಟ್ಟಿ ಯೂಟ್ಯೂಬ್​​​​ನಿಂದ ಹಾಡನ್ನು ಡಿಲೀಟ್ ಮಾಡಿ ಜನರಿಗೆ ಕ್ಷಮೆ ಕೋರಿದ್ದಾರೆ. ಆನಂದ್ ಆಡಿಯೋ ಸಂಸ್ಥೆ ಹೊರ ತಂದಿದ್ದ ಈ ಹಾಡನ್ನು ಸುಮಾರು 30 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದರು.

ಚಂದನ್ ಶೆಟ್ಟಿ ಈಗ ಹಾಡನ್ನು ಡಿಲೀಟ್ ಮಾಡಿರುವುದರಿಂದ ಪೊಲೀಸರು ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ಬೆಂಗಳೂರು: ಕೋಲುಮಂಡೆ ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡ ರ್‍ಯಾಪರ್, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ವಿರುದ್ಧ ಮಲೆ ಮಹಾದೇಶ್ವರ ಭಕ್ತರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು ಎನ್​​​ಸಿಆರ್ ದಾಖಲಿಸಿಕೊಂಡು ಕಾನೂನು ತಜ್ಞರ ಸಲಹೆ ಪಡೆದು ಎಫ್​​​ಐಆರ್​ ದಾಖಲಿಸಲು ನಿರ್ಧರಿಸಿದ್ದಾರೆ. ಕೇಂದ್ರ ವಿಭಾಗ ಡಿಸಿಪಿ ಅನುಚೇತ್ ಈ ಬಗ್ಗೆ ಪರಿಶೀಲನೆ ನಡೆಸಿದ್ದಾರೆ‌.

ಗಣೇಶ ಹಬ್ಬದಂದು ಚಂದನ್ ಶೆಟ್ಟಿ ಬಿಡುಗಡೆ ಮಾಡಿದ್ದ ಕೋಲುಮಂಡೆ ಹಾಡಿಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಹಾಡಿನಲ್ಲಿ ಶರಣೆ ಸಂಕಮ್ಮ ಅವರನ್ನು ಕೆಟ್ಟದಾಗಿ ಚಿತ್ರೀಕರಿಸಲಾಗಿದೆ. ಹಾಗೂ ಚಂದನ್ ತಮ್ಮ ಲಾಭಕ್ಕಾಗಿ ಮಲೆ ಮಹದೇಶ್ವರನ ಈ ಸುಂದರ ಹಾಡನ್ನು ಹಾಳು ಮಾಡಿ ಭಕ್ತರ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ. ಎಂದು ಮೈಸೂರು ಹಾಗೂ ಚಾಮರಾಜನಗರ ಭಾಗದ ಜನರು ಆಕ್ರೋಶ ವ್ಯಕ್ತಪಡಿಸಿದ್ದರು.

ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಪೋಸ್ಟ್​​​​ಗಳನ್ನು ನೋಡುತ್ತಿದ್ದಂತೆ ಚಂದನ್ ಶೆಟ್ಟಿ ಯೂಟ್ಯೂಬ್​​​​ನಿಂದ ಹಾಡನ್ನು ಡಿಲೀಟ್ ಮಾಡಿ ಜನರಿಗೆ ಕ್ಷಮೆ ಕೋರಿದ್ದಾರೆ. ಆನಂದ್ ಆಡಿಯೋ ಸಂಸ್ಥೆ ಹೊರ ತಂದಿದ್ದ ಈ ಹಾಡನ್ನು ಸುಮಾರು 30 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದರು.

ಚಂದನ್ ಶೆಟ್ಟಿ ಈಗ ಹಾಡನ್ನು ಡಿಲೀಟ್ ಮಾಡಿರುವುದರಿಂದ ಪೊಲೀಸರು ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.