ETV Bharat / sitara

ರಾತ್ರೋ ರಾತ್ರಿ ಡಾ. ವಿಷ್ಣುವರ್ಧನ್ ಪ್ರತಿಮೆ ಧ್ವಂಸಗೊಳಿಸಿದ‌ ಕಿಡಿಗೇಡಿಗಳು

author img

By

Published : Dec 26, 2020, 10:11 AM IST

ಮಾಗಡಿ ರಸ್ತೆಯ ಟೋಲ್​​​ಗೇಟ್ ಬಳಿ ಪ್ರತಿಷ್ಠಾಪನೆ ಮಾಡಲಾಗಿದ್ದ ಡಾ. ವಿಷ್ಣುವರ್ಧನ್ ಪ್ರತಿಮೆಯನ್ನು ರಾತ್ರೋ ರಾತ್ರಿ ಕಿಡಿಗೇಡಿಗಳು ಧ್ವಂಸ ಮಾಡಿದ್ದು ಘಟನೆ ಕುರಿತಂತೆ ಡಾ. ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅಭಿಮಾನಿಗಳು ಒತ್ತಾಯಿಸಿದ್ದಾರೆ.

Dr Vishnuvardhan statue destroyed
ಡಾ. ವಿಷ್ಣುವರ್ಧನ್ ಪ್ರತಿಮೆ ಧ್ವಂಸಗೊಳಿಸಿದ‌ ಕಿಡಿಗೇಡಿಗಳು

ಬೆಂಗಳೂರು: ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವ, ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ‌ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ್ದಾರೆ. ಮಾಗಡಿ ರೋಡ್​​ನ ಟೋಲ್ ಗೇಟ್ ಬಳಿ‌ ಪ್ರತಿಷ್ಠಾಪನೆ ಮಾಡಲಾಗಿದ್ದ ಡಾ.ವಿಷ್ಣುವರ್ಧನ್ ಪ್ರತಿಮೆಯನ್ನು ರಾತ್ರೋ ರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿ ವಿಕೃತಿ ಮೆರೆದಿದ್ದಾರೆ.

ಇದನ್ನೂ ಓದಿ: ಮಂಡಿಯೂರಿ ವಿಷ್ಣುವರ್ಧನ್‌ ಕ್ಷಮೆ ಕೇಳಿದ ವಿಜಯ್‌ ರಂಗರಾಜು: ಅನಿರುದ್ಧ್‌ ಹೇಳಿದ್ದೇನು?

ವಿಷಯ ತಿಳಿಯುತ್ತಿದ್ದಂತೆ ಅಭಿಮಾನಿಗಳು ಸ್ಥಳದಲ್ಲಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ‌. ಕಳೆದ ಒಂದು ವರ್ಷದ ಹಿಂದೆ ಇಲ್ಲಿ ಪ್ರತಿಮೆ ನಿರ್ಮಿಸಲಾಗಿತ್ತು. ಕಳೆದ ವರ್ಷ ಕೂಡಾ ಇದೇ ರೀತಿ ವಿಷ್ಣು ಸ್ಮಾರಕಕ್ಕೆ ಹಾನಿಯಾಗಿತ್ತು. ಡಾ. ವಿಷ್ಣುವರ್ಧನ್ ಅವರಂತ ಮಹಾನ್ ನಟರಿಗೆ ಈ ರೀತಿ ಅಪಮಾನ ಮಾಡುವುದನ್ನು ನಾವು ಸಹಿಸುವುದಿಲ್ಲ. ಇದರಿಂದ ಡಾ. ವಿಷ್ಣು ಅಭಿಮಾನಿಗಳ ಭಾವನೆಗೆ ಧಕ್ಕೆಯುಂಟಾಗಿದೆ. ಇದು ಸಚಿವ ಸೋಮಣ್ಣ ಅವರ ಕ್ಷೇತ್ರದಲ್ಲಿ ನಡೆದಿರುವ ಘಟನೆ. ಆದ್ದರಿಂದ ಕೂಡಲೇ ಸೋಮಣ್ಣ ಅವರು ಈ ಬಗ್ಗೆ ಕ್ರಮ ಕೈಗೊಂಡು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಾಡಬೇಕು ಎಂದು ಡಾ. ವಿಷ್ಣುವರ್ಧನ್ ಅಭಿಮಾನಿಗಳು ಒತ್ತಾಯಿಸಿದ್ದಾರೆ.

ಬೆಂಗಳೂರು: ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವ, ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ‌ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ್ದಾರೆ. ಮಾಗಡಿ ರೋಡ್​​ನ ಟೋಲ್ ಗೇಟ್ ಬಳಿ‌ ಪ್ರತಿಷ್ಠಾಪನೆ ಮಾಡಲಾಗಿದ್ದ ಡಾ.ವಿಷ್ಣುವರ್ಧನ್ ಪ್ರತಿಮೆಯನ್ನು ರಾತ್ರೋ ರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿ ವಿಕೃತಿ ಮೆರೆದಿದ್ದಾರೆ.

ಇದನ್ನೂ ಓದಿ: ಮಂಡಿಯೂರಿ ವಿಷ್ಣುವರ್ಧನ್‌ ಕ್ಷಮೆ ಕೇಳಿದ ವಿಜಯ್‌ ರಂಗರಾಜು: ಅನಿರುದ್ಧ್‌ ಹೇಳಿದ್ದೇನು?

ವಿಷಯ ತಿಳಿಯುತ್ತಿದ್ದಂತೆ ಅಭಿಮಾನಿಗಳು ಸ್ಥಳದಲ್ಲಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ‌. ಕಳೆದ ಒಂದು ವರ್ಷದ ಹಿಂದೆ ಇಲ್ಲಿ ಪ್ರತಿಮೆ ನಿರ್ಮಿಸಲಾಗಿತ್ತು. ಕಳೆದ ವರ್ಷ ಕೂಡಾ ಇದೇ ರೀತಿ ವಿಷ್ಣು ಸ್ಮಾರಕಕ್ಕೆ ಹಾನಿಯಾಗಿತ್ತು. ಡಾ. ವಿಷ್ಣುವರ್ಧನ್ ಅವರಂತ ಮಹಾನ್ ನಟರಿಗೆ ಈ ರೀತಿ ಅಪಮಾನ ಮಾಡುವುದನ್ನು ನಾವು ಸಹಿಸುವುದಿಲ್ಲ. ಇದರಿಂದ ಡಾ. ವಿಷ್ಣು ಅಭಿಮಾನಿಗಳ ಭಾವನೆಗೆ ಧಕ್ಕೆಯುಂಟಾಗಿದೆ. ಇದು ಸಚಿವ ಸೋಮಣ್ಣ ಅವರ ಕ್ಷೇತ್ರದಲ್ಲಿ ನಡೆದಿರುವ ಘಟನೆ. ಆದ್ದರಿಂದ ಕೂಡಲೇ ಸೋಮಣ್ಣ ಅವರು ಈ ಬಗ್ಗೆ ಕ್ರಮ ಕೈಗೊಂಡು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಾಡಬೇಕು ಎಂದು ಡಾ. ವಿಷ್ಣುವರ್ಧನ್ ಅಭಿಮಾನಿಗಳು ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.