ಮುಂಬೈ: ಪ್ರಧಾನಿ ಮೋದಿ ಅವರು ಕರೆ ನೀಡಿರುವ ಜನತಾ ಕರ್ಫ್ಯೂಗೆ ಬಾಲಿವುಡ್ ತಾರೆಯರು ಬೆಂಬಲ ನೀಡಿದ್ದು, ತಮ್ಮ ಮನೆಯ ಬಾಲ್ಕನಿಗಳಲ್ಲಿ ನಿಂತು ಚಪ್ಪಾಳೆ ತಟ್ಟಿದ್ರು.
ಬಾಲಿವುಡ್ನ ಪ್ರಮುಖ ತಾರೆಗಳಾದ ಲತಾ ಮಂಗೇಶ್ಕರ್, ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್, ಕರಣ್ ಜೋಹರ್, ಕತ್ರಿನಾ ಕೈಫ್ ಇತರರು ಭಾನುವಾರ ತಮ್ಮ ಬಾಲ್ಕನಿಗಳಲ್ಲಿ ನಿಂತು ಪಿಎಂ ನರೇಂದ್ರ ಮೋದಿಯವರ ಜನತಾ ಕರ್ಫ್ಯೂ ಬೆಂಬಲ ನೀಡಿದ್ದಾರೆ.
ಕೊರೊನಾ ವೈರಸ್ ತಡೆಯಲು ಹಗಲು ರಾತ್ರಿ ಎನ್ನದೇ ಕಾರ್ಯನಿರ್ವಹಿಸುತ್ತಿರುವ ಎಲ್ಲರಿಗೂ ತಮ್ಮ ಮನೆಯ ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ಹಾಗೂ ಜಾಗಟೆ ಬಡಿಯುವ ಮೂಲಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.