ETV Bharat / sitara

ಅನೀಶ್ ತೇಜೇಶ್ವರ್ ಬರ್ತ್‌ಡೇಗೆ 'ಬೆಂಕಿ' ಫಸ್ಟ್ ಲುಕ್​​ ರಿಲೀಸ್​​​

author img

By

Published : Jan 12, 2022, 3:39 PM IST

ನಟ ಅನೀಶ್ ಈಗ 'ಬೆಂಕಿ' ಸಿನಿಮಾ ಮೂಲಕ ಪ್ರತ್ಯಕ್ಷರಾಗಿದ್ದಾರೆ. ಸಿನಿಮಾದ ಫಸ್ಟ್‌ ಲುಕ್‌ನಲ್ಲಿ ಅವರು ಗಡ್ಡ, ಮೀಸೆ ಬಿಟ್ಟು ಖಡಕ್ ಲುಕ್‌ನಲ್ಲಿ ಮಿಂಚಿದ್ದಾರೆ.

ಅನೀಶ್ ತೇಜೇಶ್ವರ್
ಅನೀಶ್ ತೇಜೇಶ್ವರ್

'ನಮ್‌ ಏರಿಯಾಲಿ ಒಂದ್ ದಿನ', 'ಪೊಲೀಸ್‌ ಕ್ವಾಟ್ರಸ್‌', 'ಅಕಿರ', 'ವಾಸು ನಾನ್ ಪಕ್ಕಾ ಕಮರ್ಷಿಯಲ್', 'ರಾಮಾರ್ಜುನ' ಹೀಗೆ ಪ್ರತಿ ಸಿನಿಮಾದಲ್ಲೂ ವಿಭಿನ್ನ ಕಥಾಹಂದರದ‌ ಮೂಲಕ ಕನ್ನಡ ಚಿತ್ರರಂಗದಲ್ಲಿ ತನ್ನದೇ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡಿರುವ ನಟ ಅನೀಶ್ ತೇಜೇಶ್ವರ್.

​​​

ರಾಮಾರ್ಜುನ ಸಿನಿಮಾ ನಂತರ ಅನೀಶ್ ತೇಜೇಶ್ವರ್ ಮತ್ತೊಂದು ಮಾಸ್ ಸಿನಿಮಾದೊಂದಿಗೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈ ಚಿತ್ರದಲ್ಲಿ ನಟನೆಯ ಜೊತೆ ನಿರ್ಮಾಣಕ್ಕೂ ಕೈ ಹಾಕಿರುವ ಅನೀಶ್​​ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಇದೇ ದಿನ ತಾವು ನಟಿಸಿ, ನಿರ್ಮಾಣ ಮಾಡಿರುವ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಆಗಿದೆ.

​​​

ಫಸ್ಟ್‌ ಲುಕ್‌ನಲ್ಲಿ ಗಡ್ಡ, ಮೀಸೆ ಬಿಟ್ಟು ಖಡಕ್ ಲುಕ್‌ನಲ್ಲಿ ಅನೀಶ್ ಕಾಣುತ್ತಾರೆ. ಬೆಂಕಿ ಎಂಬ ಕ್ಯಾಚಿ ಟೈಟಲ್ ಇಟ್ಟು ಬೆಂಕಿಯಂತಹ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಇವರ ಸಿನಿ ಜರ್ನಿಯಲ್ಲಿ ಇದು 10ನೇ ಸಿನಿಮಾ. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎ.ಆರ್‌.ಬಾಬು ಅವರ ಪುತ್ರ ಶಾನ್‌ ಎಂಬವರು ಸಿನಿಮಾಗೆ ನಿರ್ದೇಶಕರಾಗಿದ್ದು, ಇದು ಇವರ ಚೊಚ್ಚಲ ಸಿನಿಮಾ ಕೂಡಾ.

​​​

ಈಗಾಗಲೇ ಚಿತ್ರತಂಡ ಈ ಸಿನಿಮಾದ ಶೇ. 80ರಷ್ಟು ಶೂಟಿಂಗ್ ಕಂಪ್ಲೀಟ್ ಮಾಡಿದೆ. ಹಾಡು ಮತ್ತು ಒಂದಷ್ಟು ಟಾಕಿ ಭಾಗದ ಶೂಟಿಂಗ್‌ ಮಾತ್ರ ನಡೆಯುತ್ತಿದೆ. ಅನೀಶ್​​ಗೆ ಜೋಡಿಯಾಗಿ ರೈಡರ್ ಸಿನಿಮಾ ಖ್ಯಾತಿಯ ಸಂಪದ ನಟಿಸಿದ್ದಾರೆ. ಉಳಿದಂತೆ ಶೃತಿ ಪಾಟೀಲ್, ಅಚ್ಯುತ್‌ ಕುಮಾರ್‌, ಸಂಪತ್‌, ಉಗ್ರಂ ಮಂಜು, ಹರಿಣಿ ಸೇರಿದಂತೆ ಅನುಭವಿ ಕಲಾ ಬಳಗ ಸಿನಿಮಾದಲ್ಲಿದೆ. ಕೌಶಿಕ್‌ ಹರ್ಷ ಸಂಗೀತ ಸಂಯೋಜನೆ, ವೀನಸ್‌ ನಾಗರಾಜ್‌ ಮೂರ್ತಿ ಕ್ಯಾಮರಾ ಕೆಲಸ ಮಾಡಿದ್ದಾರೆ.

ಅಣ್ಣ-ತಂಗಿ ಸೆಂಟಿಮೆಂಟ್‌ ಕಥೆಯ ಜೊತೆಗೆ, ಹಳ್ಳಿ ಸೊಡಗಿನ ಕಂಪು ಚೆಲ್ಲುವ ಈ ಸಿನಿಮಾ ಸಿನಿಮಾ ಪ್ರಿಯರಲ್ಲಿ ಕುತೂಹಲ ಕೆರಳಿಸಿದೆ.

'ನಮ್‌ ಏರಿಯಾಲಿ ಒಂದ್ ದಿನ', 'ಪೊಲೀಸ್‌ ಕ್ವಾಟ್ರಸ್‌', 'ಅಕಿರ', 'ವಾಸು ನಾನ್ ಪಕ್ಕಾ ಕಮರ್ಷಿಯಲ್', 'ರಾಮಾರ್ಜುನ' ಹೀಗೆ ಪ್ರತಿ ಸಿನಿಮಾದಲ್ಲೂ ವಿಭಿನ್ನ ಕಥಾಹಂದರದ‌ ಮೂಲಕ ಕನ್ನಡ ಚಿತ್ರರಂಗದಲ್ಲಿ ತನ್ನದೇ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡಿರುವ ನಟ ಅನೀಶ್ ತೇಜೇಶ್ವರ್.

​​​

ರಾಮಾರ್ಜುನ ಸಿನಿಮಾ ನಂತರ ಅನೀಶ್ ತೇಜೇಶ್ವರ್ ಮತ್ತೊಂದು ಮಾಸ್ ಸಿನಿಮಾದೊಂದಿಗೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈ ಚಿತ್ರದಲ್ಲಿ ನಟನೆಯ ಜೊತೆ ನಿರ್ಮಾಣಕ್ಕೂ ಕೈ ಹಾಕಿರುವ ಅನೀಶ್​​ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಇದೇ ದಿನ ತಾವು ನಟಿಸಿ, ನಿರ್ಮಾಣ ಮಾಡಿರುವ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಆಗಿದೆ.

​​​

ಫಸ್ಟ್‌ ಲುಕ್‌ನಲ್ಲಿ ಗಡ್ಡ, ಮೀಸೆ ಬಿಟ್ಟು ಖಡಕ್ ಲುಕ್‌ನಲ್ಲಿ ಅನೀಶ್ ಕಾಣುತ್ತಾರೆ. ಬೆಂಕಿ ಎಂಬ ಕ್ಯಾಚಿ ಟೈಟಲ್ ಇಟ್ಟು ಬೆಂಕಿಯಂತಹ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಇವರ ಸಿನಿ ಜರ್ನಿಯಲ್ಲಿ ಇದು 10ನೇ ಸಿನಿಮಾ. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎ.ಆರ್‌.ಬಾಬು ಅವರ ಪುತ್ರ ಶಾನ್‌ ಎಂಬವರು ಸಿನಿಮಾಗೆ ನಿರ್ದೇಶಕರಾಗಿದ್ದು, ಇದು ಇವರ ಚೊಚ್ಚಲ ಸಿನಿಮಾ ಕೂಡಾ.

​​​

ಈಗಾಗಲೇ ಚಿತ್ರತಂಡ ಈ ಸಿನಿಮಾದ ಶೇ. 80ರಷ್ಟು ಶೂಟಿಂಗ್ ಕಂಪ್ಲೀಟ್ ಮಾಡಿದೆ. ಹಾಡು ಮತ್ತು ಒಂದಷ್ಟು ಟಾಕಿ ಭಾಗದ ಶೂಟಿಂಗ್‌ ಮಾತ್ರ ನಡೆಯುತ್ತಿದೆ. ಅನೀಶ್​​ಗೆ ಜೋಡಿಯಾಗಿ ರೈಡರ್ ಸಿನಿಮಾ ಖ್ಯಾತಿಯ ಸಂಪದ ನಟಿಸಿದ್ದಾರೆ. ಉಳಿದಂತೆ ಶೃತಿ ಪಾಟೀಲ್, ಅಚ್ಯುತ್‌ ಕುಮಾರ್‌, ಸಂಪತ್‌, ಉಗ್ರಂ ಮಂಜು, ಹರಿಣಿ ಸೇರಿದಂತೆ ಅನುಭವಿ ಕಲಾ ಬಳಗ ಸಿನಿಮಾದಲ್ಲಿದೆ. ಕೌಶಿಕ್‌ ಹರ್ಷ ಸಂಗೀತ ಸಂಯೋಜನೆ, ವೀನಸ್‌ ನಾಗರಾಜ್‌ ಮೂರ್ತಿ ಕ್ಯಾಮರಾ ಕೆಲಸ ಮಾಡಿದ್ದಾರೆ.

ಅಣ್ಣ-ತಂಗಿ ಸೆಂಟಿಮೆಂಟ್‌ ಕಥೆಯ ಜೊತೆಗೆ, ಹಳ್ಳಿ ಸೊಡಗಿನ ಕಂಪು ಚೆಲ್ಲುವ ಈ ಸಿನಿಮಾ ಸಿನಿಮಾ ಪ್ರಿಯರಲ್ಲಿ ಕುತೂಹಲ ಕೆರಳಿಸಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.