ETV Bharat / sitara

ಪ್ಲಾಸ್ಮಾ ಬಳಿಕ ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿದ ನಟಿ ಕಾವ್ಯ ಶಾಸ್ತ್ರಿ!!

author img

By

Published : Jul 5, 2021, 7:17 PM IST

ಕ್ಯಾನ್ಸರ್​​ನಿಂದಾಗಿ ನಾನು ನನ್ನ ಚಿಕ್ಕಪ್ಪನನ್ನು ಕಳೆದುಕೊಂಡಿದ್ದೆ. ಆ ನೋವನ್ನು ಹತ್ತಿರದಿಂದ ಕಂಡಿದ್ದೇನೆ. ಹೀಗಾಗಿ, ಈ ನಿರ್ಧಾರಕ್ಕೆ ಬಂದಿದ್ದೇನೆ. ಕೂದಲು ದಾನ ಸಣ್ಣ ಕೆಲಸವೇ ಇರಬಹುದು. ಆದರೆ, ಒಳ್ಳೇ ಕೆಲಸಕ್ಕೆ ನೀವು ಸಹ ಕೈಜೋಡಿಸಿ..

actress Kavya Shastry donates hair
ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿದ ನಟಿ ಕಾವ್ಯ ಶಾಸ್ತ್ರಿ

ಕೊರೊನಾ ಸಮಯದಲ್ಲಿ ಪ್ಲಾಸ್ಮಾ ದಾನ ಮಾಡಿದ ನಟಿ ಕಾವ್ಯಶಾಸ್ತ್ರಿ ಇದೀಗ ಕ್ಯಾನ್ಸರ್ ರೋಗಿಗಳಿಗಾಗಿ ತಮ್ಮ ಕೂದಲನ್ನು ದಾನ ಮಾಡಿ ಮಾದರಿಯಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಾವು ಕೂದಲು ದಾನ ಮಾಡುತ್ತಿರುವುದಕ್ಕೆ ಕಾರಣ ನೀಡಿರುವ ಅವರು, "ಕ್ಯಾನ್ಸರ್ ರೋಗಿಗಳಿಗೆ ನಾನು ಕೂದಲು ದಾನ ಮಾಡಿದ್ದೇನೆ, ಕ್ಯಾನ್ಸರ್​​ನಿಂದಾಗಿ ನಾನು ನನ್ನ ಚಿಕ್ಕಪ್ಪನನ್ನು ಕಳೆದುಕೊಂಡಿದ್ದೆ.

ಆ ನೋವನ್ನು ಹತ್ತಿರದಿಂದ ಕಂಡಿದ್ದೇನೆ. ಹೀಗಾಗಿ, ಈ ನಿರ್ಧಾರಕ್ಕೆ ಬಂದಿದ್ದೇನೆ. ಕೂದಲು ದಾನ ಸಣ್ಣ ಕೆಲಸವೇ ಇರಬಹುದು. ಆದರೆ, ಒಳ್ಳೇ ಕೆಲಸಕ್ಕೆ ನೀವು ಸಹ ಕೈಜೋಡಿಸಿ" ಎಂದು ನಟಿ ಮನವಿ ಮಾಡಿದ್ದಾರೆ.

ಇದಕ್ಕೂ ಮುನ್ನ ನಟಿ ಶ್ವೇತಾ ಪ್ರಸಾದ್, ಕಾರುಣ್ಯ ರಾಮ್ ಸೇರಿದಂತೆ ಹಲವರು ಸಹ ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿದ್ದಾರೆ. ಅಲ್ಲದೆ ಕೊರೊನಾ ಸಮಯದಲ್ಲಿ ಆಹಾರದ ಪೊಟ್ಟಣಗಳನ್ನು ಹಾಗೂ ರೇಷನ್ ಕಿಟ್‌ಗಳನ್ನು ಸಹ ನೀಡಿದ್ದಾರೆ.

ಇದನ್ನೂ ಓದಿ: 'ನಂದಿನಿ' ಧಾರಾವಾಹಿ ಬಗ್ಗೆ ಭಾವುಕ ಪೋಸ್ಟ್​​ ಹಂಚಿಕೊಂಡ ಕಾವ್ಯ ಶಾಸ್ತ್ರಿ

ಕೊರೊನಾ ಸಮಯದಲ್ಲಿ ಪ್ಲಾಸ್ಮಾ ದಾನ ಮಾಡಿದ ನಟಿ ಕಾವ್ಯಶಾಸ್ತ್ರಿ ಇದೀಗ ಕ್ಯಾನ್ಸರ್ ರೋಗಿಗಳಿಗಾಗಿ ತಮ್ಮ ಕೂದಲನ್ನು ದಾನ ಮಾಡಿ ಮಾದರಿಯಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಾವು ಕೂದಲು ದಾನ ಮಾಡುತ್ತಿರುವುದಕ್ಕೆ ಕಾರಣ ನೀಡಿರುವ ಅವರು, "ಕ್ಯಾನ್ಸರ್ ರೋಗಿಗಳಿಗೆ ನಾನು ಕೂದಲು ದಾನ ಮಾಡಿದ್ದೇನೆ, ಕ್ಯಾನ್ಸರ್​​ನಿಂದಾಗಿ ನಾನು ನನ್ನ ಚಿಕ್ಕಪ್ಪನನ್ನು ಕಳೆದುಕೊಂಡಿದ್ದೆ.

ಆ ನೋವನ್ನು ಹತ್ತಿರದಿಂದ ಕಂಡಿದ್ದೇನೆ. ಹೀಗಾಗಿ, ಈ ನಿರ್ಧಾರಕ್ಕೆ ಬಂದಿದ್ದೇನೆ. ಕೂದಲು ದಾನ ಸಣ್ಣ ಕೆಲಸವೇ ಇರಬಹುದು. ಆದರೆ, ಒಳ್ಳೇ ಕೆಲಸಕ್ಕೆ ನೀವು ಸಹ ಕೈಜೋಡಿಸಿ" ಎಂದು ನಟಿ ಮನವಿ ಮಾಡಿದ್ದಾರೆ.

ಇದಕ್ಕೂ ಮುನ್ನ ನಟಿ ಶ್ವೇತಾ ಪ್ರಸಾದ್, ಕಾರುಣ್ಯ ರಾಮ್ ಸೇರಿದಂತೆ ಹಲವರು ಸಹ ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿದ್ದಾರೆ. ಅಲ್ಲದೆ ಕೊರೊನಾ ಸಮಯದಲ್ಲಿ ಆಹಾರದ ಪೊಟ್ಟಣಗಳನ್ನು ಹಾಗೂ ರೇಷನ್ ಕಿಟ್‌ಗಳನ್ನು ಸಹ ನೀಡಿದ್ದಾರೆ.

ಇದನ್ನೂ ಓದಿ: 'ನಂದಿನಿ' ಧಾರಾವಾಹಿ ಬಗ್ಗೆ ಭಾವುಕ ಪೋಸ್ಟ್​​ ಹಂಚಿಕೊಂಡ ಕಾವ್ಯ ಶಾಸ್ತ್ರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.