ETV Bharat / sitara

ಮೇ 11 ರಿಂದ ಕಿರುತೆರೆ ಮೇಲೆ ಮೂಡಿಬರಲಿದೆ ಶಂಕರ್​ ನಾಗ್​​ ಕನಸಿನ 'ಮಾಲ್ಗುಡಿ ಡೇಸ್' - Will Telecast in Zee Kannada

ದೂರದರ್ಶನದಲ್ಲಿ ಆಗ ಮಾಲ್ಗುಡಿ ಡೇಸ್ ಭಾರಿ ಜನಮನ್ನಣೆ ಪಡೆದಿತ್ತು. ಅಂತಹ ಮಾಲ್ಗುಡಿ ಡೇಸ್​ ಮರುಪ್ರಸಾರವಾಗಲಿದೆ. ಮಾಲ್ಗುಡಿ ಎಂಬ ಕಲ್ಪಿತ ಊರಿನಲ್ಲಿ ನಡೆಯುವ ಈ ಕಥೆಯನ್ನು ಆರ್​​ ಕೆ ನಾರಾಯಣ್ ಅವರ ಕಲ್ಪನೆಯಂತೆಯೇ ರೂಪಿಸಿದ್ದಕ್ಕೆ ಶಂಕರ್ ನಾಗ್ ಲೇಖಕರಿಂದ ಅಪಾರ ಪ್ರಶಂಸೆ ಪಡೆದಿದ್ದರು ಸಹ.

'Malgudi Days' Will Telecast in Zee Kannada From May 11
'ಮಾಲ್ಗುಡಿ ಡೇಸ್'
author img

By

Published : May 5, 2020, 2:31 PM IST

">ಧಾರಾವಾಹಿ ಮತ್ತೆ ಪ್ರಸಾರ ವಾಗಲಿದೆ. ಈ ಬಾರಿ ಅದು ಜೀ ಕನ್ನಡ ವಾಹಿನಿಯಲ್ಲಿ ಮೇ 11ರಿಂದ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ.

ಕನ್ನಡ ಕಿರುತೆರೆಯಲ್ಲಿಯೇ ಪ್ರಪ್ರಥಮ ಪ್ರಯತ್ನ ವಾಗಿದ್ದ ಕಥಾ ಸರಣಿ ಇದು. ಖ್ಯಾತ ಲೇಖಕ ಆರ್.ಕೆ.ನಾರಾಯಣ್ ಅವರ ಜನಪ್ರಿಯ ಕಥಾಗುಚ್ಛವಾಗಿತ್ತು. ಮಾಲ್ಗುಡಿ ಎಂಬ ಕಲ್ಪಿತ ಊರಿನಲ್ಲಿ ನಡೆಯುವ ಈ ಕಥೆಯನ್ನು ಅವರ ಕಲ್ಪನೆಯಂತೆಯೇ ರೂಪಿಸಿದ್ದಕ್ಕೆ ಶಂಕರ್ ನಾಗ್ ಲೇಖಕರಿಂದ ಅಪಾರ ಪ್ರಶಂಸೆ ಸಹ ಪಡೆದಿದ್ದರು. ವಿಷ್ಣುವರ್ಧನ್, ಅನಂತ್ ನಾಗ್, ಗಿರೀಶ್ ಕಾರ್ನಾಡ್, ಮಾಸ್ಟರ್ ಮಂಜುನಾಥ್, ವೈಶಾಲಿ ಕಾಸರವಳ್ಳಿ, ಬಿ.ಜಯಶ್ರೀ, ಶಂಕರ್ ನಾಗ್, ಅರುಂಧತಿ ನಾಗ್ ಮುಂತಾದವರು ಈ ಸರಣಿಯಲ್ಲಿ ನಟಿಸಿದ್ದಾರೆ.

ಮಾಲ್ಗುಡಿ ಡೇಸ್ 39 ಕಂತುಗಳಲ್ಲಿ 1986ರಲ್ಲಿ ದೂರದರ್ಶನದಲ್ಲಿ ಪ್ರಸಾರವಾಗಿತ್ತು. ಈ ಧಾರಾವಾಹಿಯ ಮಾಲ್ಗುಡಿಯನ್ನು ಶಂಕರ್ ನಾಗ್ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ರೂಪಿಸಿದ್ದರು. ಎಲ್.ವೈದ್ಯನಾಥನ್ ಸಂಗೀತ, ಆರ್.ಕೆ.ನಾರಾಯಣ್ ಅವರ ಸೋದರ ಆರ್.ಕೆ.ಲಕ್ಷ್ಮಣ್ ಅವರ ಚಿತ್ರಗಳು ಈ ಧಾರಾವಾಹಿಯ ಮಹತ್ವ ಹೆಚ್ಚಿಸಿದ್ದವು. ಈ ಸರಣಿಯನ್ನು ಟಿ.ಎಸ್.ನರಸಿಂಹನ್ ನಿರ್ಮಾಣ ಮಾಡಿದ್ದರು.

ಈ ಧಾರಾವಾಹಿ ಸ್ವಾಮಿ ಅಂಡ್ ಫ್ರೆಂಡ್ಸ್, ಎ ಹಾರ್ಸ್ ಅಂಡ್ ಟು ಗೋಟ್ಸ್, ಅನ್ ಅಸ್ಟ್ರಾಲಜರ್ಸ್ ಡೇ ಮತ್ತಿತರೆ ಸಣ್ಣ ಕಥೆಗಳು ಹಾಗೂ ಸ್ವಾಮಿ ಅಂಡ್ ಫ್ರೆಂಡ್ಸ್ ಮತ್ತು ದಿ ವೆಂಡರ್ ಆಫ್ ಸ್ವೀಟ್ಸ್ ಕಾದಂಬರಿಯನ್ನು ಆಧರಿಸಿದೆ.

ಮಾಲ್ಗುಡಿಯ ಕರ್ತೃ ಆರ್.ಕೆ.ನಾರಾಯಣ್ ಚೆನ್ನೈನಲ್ಲಿ ಜನಿಸಿದರೂ ತಮ್ಮ ಬಹುತೇಕ ಜೀವನವನ್ನು ಮೈಸೂರಿನಲ್ಲಿ ಕಳೆದರು. ಅವರು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮ ವಿಭೂಷಣ ಮತ್ತು ಪದ್ಮ ಭೂಷಣ ಪುರಸ್ಕಾರಗಳನ್ನು ಪಡೆದಿದ್ದರು. ರಾಯಲ್ ಸೊಸೈಟಿ ಆಫ್ ಲಿಟರೇಚರ್ ನೀಡುವ ಎಸಿ ಬೆನ್ಸನ್ ಮೆಡಲ್ ಗೌರವಕ್ಕೂ ಅವರು ಭಾಜನರಾಗಿದ್ದರು.

ವಿಶ್ವ ಸಾಹಿತ್ಯದಲ್ಲಿ ಪ್ರಮುಖ ಭಾರತೀಯ ಲೇಖಕರಲ್ಲಿ ಒಬ್ಬರೆನಿಸಿದ್ದಾರೆ. ಅವರ ಮಾಲ್ಗುಡಿ ಸಾಹಿತ್ಯಾಸಕ್ತರಿಗೆ ಕುತೂಹಲ ಕೆರಳಿಸುವ ತಾಣವಾಗಿದೆ. ಅವರು ಬರೆದಿದ್ದು ಶ್ರೀಸಾಮಾನ್ಯರ ಕಥೆಗಳಾದರೂ ಅವು ಓದುಗರನ್ನು ಅಪಾರವಾಗಿ ಸೆಳೆದಿದ್ದವು. ಈಗ ಅಂತಹ ಜನ ಮನ್ನಣೆ ಗಳಿಸಿದ್ದ ಮಾಲ್ಗುಡಿ ಡೇಸ್​​​​​ ಮರುಪ್ರಸಾರ ಆಗಲಿದೆ. ಮೇ11 2020 ರ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9.30ಕ್ಕೆ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ.

ನಟ ಹಾಗೂ ನಿರ್ದೇಶಕ ದಿವಂಗತ ಶಂಕರ್ ನಾಗ್ ನಿರ್ದೇಶನದ 'ಮಾಲ್ಗುಡಿ ಡೇಸ್'

">ಧಾರಾವಾಹಿ ಮತ್ತೆ ಪ್ರಸಾರ ವಾಗಲಿದೆ. ಈ ಬಾರಿ ಅದು ಜೀ ಕನ್ನಡ ವಾಹಿನಿಯಲ್ಲಿ ಮೇ 11ರಿಂದ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ.

ಕನ್ನಡ ಕಿರುತೆರೆಯಲ್ಲಿಯೇ ಪ್ರಪ್ರಥಮ ಪ್ರಯತ್ನ ವಾಗಿದ್ದ ಕಥಾ ಸರಣಿ ಇದು. ಖ್ಯಾತ ಲೇಖಕ ಆರ್.ಕೆ.ನಾರಾಯಣ್ ಅವರ ಜನಪ್ರಿಯ ಕಥಾಗುಚ್ಛವಾಗಿತ್ತು. ಮಾಲ್ಗುಡಿ ಎಂಬ ಕಲ್ಪಿತ ಊರಿನಲ್ಲಿ ನಡೆಯುವ ಈ ಕಥೆಯನ್ನು ಅವರ ಕಲ್ಪನೆಯಂತೆಯೇ ರೂಪಿಸಿದ್ದಕ್ಕೆ ಶಂಕರ್ ನಾಗ್ ಲೇಖಕರಿಂದ ಅಪಾರ ಪ್ರಶಂಸೆ ಸಹ ಪಡೆದಿದ್ದರು. ವಿಷ್ಣುವರ್ಧನ್, ಅನಂತ್ ನಾಗ್, ಗಿರೀಶ್ ಕಾರ್ನಾಡ್, ಮಾಸ್ಟರ್ ಮಂಜುನಾಥ್, ವೈಶಾಲಿ ಕಾಸರವಳ್ಳಿ, ಬಿ.ಜಯಶ್ರೀ, ಶಂಕರ್ ನಾಗ್, ಅರುಂಧತಿ ನಾಗ್ ಮುಂತಾದವರು ಈ ಸರಣಿಯಲ್ಲಿ ನಟಿಸಿದ್ದಾರೆ.

ಮಾಲ್ಗುಡಿ ಡೇಸ್ 39 ಕಂತುಗಳಲ್ಲಿ 1986ರಲ್ಲಿ ದೂರದರ್ಶನದಲ್ಲಿ ಪ್ರಸಾರವಾಗಿತ್ತು. ಈ ಧಾರಾವಾಹಿಯ ಮಾಲ್ಗುಡಿಯನ್ನು ಶಂಕರ್ ನಾಗ್ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ರೂಪಿಸಿದ್ದರು. ಎಲ್.ವೈದ್ಯನಾಥನ್ ಸಂಗೀತ, ಆರ್.ಕೆ.ನಾರಾಯಣ್ ಅವರ ಸೋದರ ಆರ್.ಕೆ.ಲಕ್ಷ್ಮಣ್ ಅವರ ಚಿತ್ರಗಳು ಈ ಧಾರಾವಾಹಿಯ ಮಹತ್ವ ಹೆಚ್ಚಿಸಿದ್ದವು. ಈ ಸರಣಿಯನ್ನು ಟಿ.ಎಸ್.ನರಸಿಂಹನ್ ನಿರ್ಮಾಣ ಮಾಡಿದ್ದರು.

ಈ ಧಾರಾವಾಹಿ ಸ್ವಾಮಿ ಅಂಡ್ ಫ್ರೆಂಡ್ಸ್, ಎ ಹಾರ್ಸ್ ಅಂಡ್ ಟು ಗೋಟ್ಸ್, ಅನ್ ಅಸ್ಟ್ರಾಲಜರ್ಸ್ ಡೇ ಮತ್ತಿತರೆ ಸಣ್ಣ ಕಥೆಗಳು ಹಾಗೂ ಸ್ವಾಮಿ ಅಂಡ್ ಫ್ರೆಂಡ್ಸ್ ಮತ್ತು ದಿ ವೆಂಡರ್ ಆಫ್ ಸ್ವೀಟ್ಸ್ ಕಾದಂಬರಿಯನ್ನು ಆಧರಿಸಿದೆ.

ಮಾಲ್ಗುಡಿಯ ಕರ್ತೃ ಆರ್.ಕೆ.ನಾರಾಯಣ್ ಚೆನ್ನೈನಲ್ಲಿ ಜನಿಸಿದರೂ ತಮ್ಮ ಬಹುತೇಕ ಜೀವನವನ್ನು ಮೈಸೂರಿನಲ್ಲಿ ಕಳೆದರು. ಅವರು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮ ವಿಭೂಷಣ ಮತ್ತು ಪದ್ಮ ಭೂಷಣ ಪುರಸ್ಕಾರಗಳನ್ನು ಪಡೆದಿದ್ದರು. ರಾಯಲ್ ಸೊಸೈಟಿ ಆಫ್ ಲಿಟರೇಚರ್ ನೀಡುವ ಎಸಿ ಬೆನ್ಸನ್ ಮೆಡಲ್ ಗೌರವಕ್ಕೂ ಅವರು ಭಾಜನರಾಗಿದ್ದರು.

ವಿಶ್ವ ಸಾಹಿತ್ಯದಲ್ಲಿ ಪ್ರಮುಖ ಭಾರತೀಯ ಲೇಖಕರಲ್ಲಿ ಒಬ್ಬರೆನಿಸಿದ್ದಾರೆ. ಅವರ ಮಾಲ್ಗುಡಿ ಸಾಹಿತ್ಯಾಸಕ್ತರಿಗೆ ಕುತೂಹಲ ಕೆರಳಿಸುವ ತಾಣವಾಗಿದೆ. ಅವರು ಬರೆದಿದ್ದು ಶ್ರೀಸಾಮಾನ್ಯರ ಕಥೆಗಳಾದರೂ ಅವು ಓದುಗರನ್ನು ಅಪಾರವಾಗಿ ಸೆಳೆದಿದ್ದವು. ಈಗ ಅಂತಹ ಜನ ಮನ್ನಣೆ ಗಳಿಸಿದ್ದ ಮಾಲ್ಗುಡಿ ಡೇಸ್​​​​​ ಮರುಪ್ರಸಾರ ಆಗಲಿದೆ. ಮೇ11 2020 ರ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9.30ಕ್ಕೆ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.