ETV Bharat / sitara

'ದಂಡಿ' ಎಂಬ ಚಿತ್ರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತೆ ತಾರಾ ನಟನೆ - 'Dandi' movie news

ತಾರಾ ಅನುರಾದ ಮತ್ತು ಸುಚೀಂದ್ರ ಪ್ರಸಾದ್ ಅಲ್ಲದೇ, ನೂತನ‌ ಪ್ರತಿಭೆಗಳಾದ ಯುವಾನ್ ದೇವ್(ನಿರ್ಮಾಪಕರ ಪುತ್ರ) ಹಾಗೂ ಶಾಲಿನಿ ಭಟ್ ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ದಾಮೋದರ್ ನಾಯ್ಡು ಕೂ‌ಡ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ..

'ದಂಡಿ' ಎಂಬ ಚಿತ್ರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತೆ ತಾರಾ ನಟನೆ
'ದಂಡಿ' ಎಂಬ ಚಿತ್ರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತೆ ತಾರಾ ನಟನೆ
author img

By

Published : Mar 23, 2021, 7:51 PM IST

ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಉಪ್ಪಿನ ಸತ್ಯಾಗ್ರಹದ ಬಗ್ಗೆ 'ದಂಡಿ' ಎಂಬ ಟೈಟಲ್​ನಲ್ಲಿ ಸ್ಯಾಂಡಲ್​ವುಡ್​ನಲ್ಲಿ ಸಿನಿಮಾವೊಂದು ಬರುತ್ತಿದೆ‌. ಈ ಚಿತ್ರದಲ್ಲಿ ತಾರಾ ಅನುರಾಧ ಹಾಗೂ ಸುಚೇಂದ್ರ ಪ್ರಸಾದ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

'ದಂಡಿ' ಎಂಬ ಚಿತ್ರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತೆ ತಾರಾ ನಟನೆ
'ದಂಡಿ' ಎಂಬ ಚಿತ್ರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತೆ ತಾರಾ ನಟನೆ

ಇತ್ತೀಚೆಗಷ್ಟೇ ಹೊನ್ನಾವರದ ಮೂಡ ಗಣಪತಿ ದೇವಸ್ಥಾನದಲ್ಲಿ ಈ‌ ಸಿನಿಮಾ ಸೆಟ್ಟೇರಿ ಚಿತ್ರೀಕರಣ ಕೂಡ ಶುರು ಮಾಡಿದೆ. ಪದ್ಮಶ್ರೀ ಪುರಸ್ಕೃತ ಸುಕ್ರಿ ಗೌಡ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ. ಡಾ.ರಾಜಶೇಖರ್ ಮಠಪತಿ‌ ಅವರ ಕಾದಂಬರಿ ಆಧರಿಸಿ ನಿರ್ಮಾಣವಾಗುತ್ತಿರುವ ದಂಡಿ ಚಿತ್ರಕ್ಕೆ ವಿಶಾಲ್ ರಾಜ್ ನಿರ್ದೇಶನ ಮಾಡುತ್ತಿದ್ದಾರೆ.

ದಂಡಿ ಸಿನಿಮಾದ ಚಿತ್ರೀಕರಣ ಆರಂಭ
ದಂಡಿ ಸಿನಿಮಾದ ಚಿತ್ರೀಕರಣ ಆರಂಭ

ಹೊನ್ನಾವರ, ಸಿದ್ದಾಪುರ, ಅಂಕೋಲ ಸುತ್ತಮುತ್ತ ಮೂವತ್ತು ದಿನಗಳ‌‌ ಕಾಲ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ.‌ ಕಲ್ಯಾಣಿ ‌ಪ್ರೊಡಕ್ಷನ್ಸ್ ಲಾಂಛನದಲ್ಲಿ ಉಷಾರಾಣಿ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ವಿಶಾಲ್ ರಾಜ್ ನಿರ್ದೇಶಿಸುತ್ತಿದ್ದಾರೆ.‌

ವಿಶಾಲ್ ರಾಜ್ ಅವರೇ ಚಿತ್ರಕಥೆ ಬರೆದಿದ್ದು, ವೆಂಕಟೇಶ್ ಅವರ ಛಾಯಾಗ್ರಹಣವಿದೆ. ಸಾಹಿತ್ಯ ಹಾಗೂ ಸಂಭಾಷಣೆಯನ್ನು ರಾಗಂ ಅವರು ಬರೆದಿದ್ದು, ರಾಮ್ ಕ್ರಿಶ್ ಸಂಗೀತ ನೀಡುತ್ತಿದ್ದಾರೆ.

ದಂಡಿ ಸಿನಿಮಾದ ಚಿತ್ರೀಕರಣ ಆರಂಭ
ದಂಡಿ ಸಿನಿಮಾದ ಚಿತ್ರೀಕರಣ ಆರಂಭ

ತಾರಾ ಅನುರಾದ ಮತ್ತು ಸುಚೀಂದ್ರ ಪ್ರಸಾದ್ ಅಲ್ಲದೇ, ನೂತನ‌ ಪ್ರತಿಭೆಗಳಾದ ಯುವಾನ್ ದೇವ್(ನಿರ್ಮಾಪಕರ ಪುತ್ರ) ಹಾಗೂ ಶಾಲಿನಿ ಭಟ್ ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ದಾಮೋದರ್ ನಾಯ್ಡು ಕೂ‌ಡ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಉತ್ತರ ಕನ್ನಡ‌ದ ಸ್ವಾತಂತ್ರ್ಯ ಹೋರಾಟಗಾರರಿಗೆ ಈ ಚಿತ್ರ ಸಮರ್ಪಣೆಯಾಗಲಿದೆ.‌ ಸ್ವತಂತ್ರ ಬಂದು 75 ವರ್ಷ‌ಗಳಾಗುತ್ತಿರುವ ಈ ಶುಭ ಸಂದರ್ಭದಲ್ಲಿ ಈ‌ ಚಿತ್ರವನ್ನು ತೆರೆಗೆ ತರಲು‌ ನಿರ್ದೇಶಕರು ಮುಂದಾಗಿದ್ದಾರೆ.

ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಉಪ್ಪಿನ ಸತ್ಯಾಗ್ರಹದ ಬಗ್ಗೆ 'ದಂಡಿ' ಎಂಬ ಟೈಟಲ್​ನಲ್ಲಿ ಸ್ಯಾಂಡಲ್​ವುಡ್​ನಲ್ಲಿ ಸಿನಿಮಾವೊಂದು ಬರುತ್ತಿದೆ‌. ಈ ಚಿತ್ರದಲ್ಲಿ ತಾರಾ ಅನುರಾಧ ಹಾಗೂ ಸುಚೇಂದ್ರ ಪ್ರಸಾದ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

'ದಂಡಿ' ಎಂಬ ಚಿತ್ರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತೆ ತಾರಾ ನಟನೆ
'ದಂಡಿ' ಎಂಬ ಚಿತ್ರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತೆ ತಾರಾ ನಟನೆ

ಇತ್ತೀಚೆಗಷ್ಟೇ ಹೊನ್ನಾವರದ ಮೂಡ ಗಣಪತಿ ದೇವಸ್ಥಾನದಲ್ಲಿ ಈ‌ ಸಿನಿಮಾ ಸೆಟ್ಟೇರಿ ಚಿತ್ರೀಕರಣ ಕೂಡ ಶುರು ಮಾಡಿದೆ. ಪದ್ಮಶ್ರೀ ಪುರಸ್ಕೃತ ಸುಕ್ರಿ ಗೌಡ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ. ಡಾ.ರಾಜಶೇಖರ್ ಮಠಪತಿ‌ ಅವರ ಕಾದಂಬರಿ ಆಧರಿಸಿ ನಿರ್ಮಾಣವಾಗುತ್ತಿರುವ ದಂಡಿ ಚಿತ್ರಕ್ಕೆ ವಿಶಾಲ್ ರಾಜ್ ನಿರ್ದೇಶನ ಮಾಡುತ್ತಿದ್ದಾರೆ.

ದಂಡಿ ಸಿನಿಮಾದ ಚಿತ್ರೀಕರಣ ಆರಂಭ
ದಂಡಿ ಸಿನಿಮಾದ ಚಿತ್ರೀಕರಣ ಆರಂಭ

ಹೊನ್ನಾವರ, ಸಿದ್ದಾಪುರ, ಅಂಕೋಲ ಸುತ್ತಮುತ್ತ ಮೂವತ್ತು ದಿನಗಳ‌‌ ಕಾಲ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ.‌ ಕಲ್ಯಾಣಿ ‌ಪ್ರೊಡಕ್ಷನ್ಸ್ ಲಾಂಛನದಲ್ಲಿ ಉಷಾರಾಣಿ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ವಿಶಾಲ್ ರಾಜ್ ನಿರ್ದೇಶಿಸುತ್ತಿದ್ದಾರೆ.‌

ವಿಶಾಲ್ ರಾಜ್ ಅವರೇ ಚಿತ್ರಕಥೆ ಬರೆದಿದ್ದು, ವೆಂಕಟೇಶ್ ಅವರ ಛಾಯಾಗ್ರಹಣವಿದೆ. ಸಾಹಿತ್ಯ ಹಾಗೂ ಸಂಭಾಷಣೆಯನ್ನು ರಾಗಂ ಅವರು ಬರೆದಿದ್ದು, ರಾಮ್ ಕ್ರಿಶ್ ಸಂಗೀತ ನೀಡುತ್ತಿದ್ದಾರೆ.

ದಂಡಿ ಸಿನಿಮಾದ ಚಿತ್ರೀಕರಣ ಆರಂಭ
ದಂಡಿ ಸಿನಿಮಾದ ಚಿತ್ರೀಕರಣ ಆರಂಭ

ತಾರಾ ಅನುರಾದ ಮತ್ತು ಸುಚೀಂದ್ರ ಪ್ರಸಾದ್ ಅಲ್ಲದೇ, ನೂತನ‌ ಪ್ರತಿಭೆಗಳಾದ ಯುವಾನ್ ದೇವ್(ನಿರ್ಮಾಪಕರ ಪುತ್ರ) ಹಾಗೂ ಶಾಲಿನಿ ಭಟ್ ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ದಾಮೋದರ್ ನಾಯ್ಡು ಕೂ‌ಡ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಉತ್ತರ ಕನ್ನಡ‌ದ ಸ್ವಾತಂತ್ರ್ಯ ಹೋರಾಟಗಾರರಿಗೆ ಈ ಚಿತ್ರ ಸಮರ್ಪಣೆಯಾಗಲಿದೆ.‌ ಸ್ವತಂತ್ರ ಬಂದು 75 ವರ್ಷ‌ಗಳಾಗುತ್ತಿರುವ ಈ ಶುಭ ಸಂದರ್ಭದಲ್ಲಿ ಈ‌ ಚಿತ್ರವನ್ನು ತೆರೆಗೆ ತರಲು‌ ನಿರ್ದೇಶಕರು ಮುಂದಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.