ಕನ್ನಡ ಚಿತ್ರರಂಗದಲ್ಲಿ ಗೋವಿಂದಾಯ ನಮಃ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮಾಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್ ನಿರ್ಮಾಣಕ್ಕೆ ಕೈ ಹಾಕಿರೋದು ಗೊತ್ತಿರುವ ವಿಚಾರ.
'ಒಡೆಯರ್ ಮೂವಿಸ್' ಎನ್ನುವ ನಿರ್ಮಾಣ ಸಂಸ್ಥೆಯಡಿ 'ಡೊಳ್ಳು' ಚಿತ್ರವನ್ನ ನಿರ್ಮಾಣ ಮಾಡಿದ್ದು, ಈ ಚಿತ್ರವನ್ನು ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಸಾಗರ್ ಪುರಾಣಿಕ್ ಕಥೆ ಹಾಗೂ ನಿರ್ದೇಶನ ಈ ಸಿನಿಮಾಕ್ಕಿದೆ. ಡೊಳ್ಳು 2020ರಲ್ಲಿ CBFC ಇಂದ U ಸರ್ಟಿಫಿಕೇಟ್ ಪಡೆದಿದ್ದು, ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುತ್ತಿದೆ.
![pawan wadeyar cenema dollu got award](https://etvbharatimages.akamaized.net/etvbharat/prod-images/13464617_thumbnail.jpg)
ಅಮೆರಿಕದ ಕಲೈಡೊಸ್ಕೋಪ್ ಇಂಡಿಯನ್ ಫಿಲಂ ಫೆಸ್ಟಿವಲ್ ಬಾಸ್ಟನ್ನಲ್ಲಿ ಡೊಳ್ಳು ಮೊದಲ ಪ್ರದರ್ಶನ ಕಂಡು, ಎಲ್ಲ ಪ್ರೇಕ್ಷಕರ ಗಮನ ಸೆಳೆದು ಎಲ್ಲರ ಪ್ರಶಂಸೆ ಪಡೆದಿದೆ. ಡೊಳ್ಳು, ಹೀಗೆ ಇನ್ನೂ ಹಲವಾರು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಾಣಲಿದೆ. ಢಾಕಾ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಹಾಗೂ ಡಾಲಸ್ ಸೌತ್ ಏಶಿಯನ್ ಫಿಲಂ ಫೆಸ್ಟಿವಲ್ಗಳಲ್ಲಿ ಈಗಾಗಲೇ ಆಯ್ಕೆಯಾಗಿದೆ. ಇನ್ನೋವೇಟಿವ್ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಎಂಬ ಒಂದು ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ, ಸರಸ್ವತಿ ಪಿಂಪ್ಳೆ ಫೌಂಡೇಶನ್ನಿಂದ ದಾದಾ ಸಾಹೇಬ್ ಫಾಲ್ಕೆ ಬೆಸ್ಟ್ ಕನ್ನಡ ಫಿಲ್ಮ್ ಎಂಬ ಪ್ರಶಸ್ತಿ ಡೊಳ್ಳುಗೆ ದೊರಕಿದೆ.
![pawan wadeyar cenema dollu got award](https://etvbharatimages.akamaized.net/etvbharat/prod-images/kn-bng-04-pawanwadeyar-produce-movie-dolluge-prashasthiya-gari-7204735_26102021180719_2610f_1635251839_556.jpg)
ಹಾಗೆಯೇ, ದಾದಾಸಾಹೇಬ್ ಫಾಲ್ಕೆ ಎಂ.ಎಸ್.ಕೆ ಟ್ರಸ್ಟ್ನಿಂದ 1 ಲಕ್ಷ ರೂ. ನಗದು ಬಹುಮಾನ ಸಿಕ್ಕಿದೆ. ಇದು ನಮಗೆ ಬಹಳ ಹೆಮ್ಮೆಯ ವಿಷಯ. ಇನ್ನೂ ಹಲವಾರು ಪ್ರಶಸ್ತಿಗಳು, ಬಹುಮಾನಗಳು ಹಾಗೂ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಳ್ಳುತ್ತೆ ಎಂಬ ವಿಶ್ವಾಸ ನಮಗಿದೆ ಅಂತಾರೆ ನಿರ್ಮಾಪಕ ಪವನ್ ಒಡೆಯರ್.
![pawan wadeyar cenema dollu got award](https://etvbharatimages.akamaized.net/etvbharat/prod-images/kn-bng-04-pawanwadeyar-produce-movie-dolluge-prashasthiya-gari-7204735_26102021180719_2610f_1635251839_60.jpg)
ಡೊಳ್ಳು ಹೆಸರೇ ಹೇಳುವಂತೆ ಇದೊಂದು ಜಾನಪದ ನೃತ್ಯವಾದ ಡೊಳ್ಳು ಕುಣಿತದ ಬಗ್ಗೆಗಿನ ಸಿನಿಮಾವಾಗಿದೆ. ಕಿರುತೆರೆ ನಟ ಕಾರ್ತಿಕ್ ಮಹೇಶ್, ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಿಧಿ ಹೆಗ್ಡೆ ನಾಯಕಿ ಪಾತ್ರ ನಿರ್ವಹಿಸಲಿದ್ದಾರೆ. ಉಳಿದಂತೆ ಬಾಬು ಹಿರಣ್ಣಯ್ಯ, ಶರಣ್ಯ ಸುರೇಶ್, ಡಾ ಪ್ರಭುದೇವ, ವರುಣ್ ಶ್ರೀನಿವಾಸ್, ಚಂದ್ರ ಮಯೂರ್ ಮತ್ತು ಶರಣ್ ಸುರೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಈ ಚಿತ್ರಕ್ಕೆ ಅಭಿಲಾಷ್ ಕಳತ್ತಿ ಛಾಯಾಗ್ರಹಣ, ಎಂ ಅನಂತ್ ಕಾಮತ್ ಸಂಗೀತ ಸಂಯೋಜನೆ, ಬಿ ಎಸ್ ಕೆಂಪರಾಜು ಸಂಕಲನ, ಶ್ರೀನಿಧಿ ಡಿ ಎಸ್ - ಚಿತ್ರಕಥೆ & ಸಂಭಾಷಣೆ, ದೇವಿ ಪ್ರಕಾಶ್- ಕಲೆ ನಿತಿನ್ ಲೂಕೋಸ್ ಶಬ್ದ ವಿನ್ಯಾಸ ಮಾಡಿದ್ದಾರೆ.