ETV Bharat / sitara

ತಮ್ಮ ಹೊಸ ಚಿತ್ರಕ್ಕೆ ತಾವೇ ಬಂಡವಾಳ ಹಾಕುತ್ತಿರುವ ರಾಜವರ್ಧನ್​

author img

By

Published : Jan 18, 2021, 12:31 PM IST

'ಬಿಚ್ಚುಗತ್ತಿ' ಚಿತ್ರದ ಮೂಲಕ ಗಮನ ಸೆಳೆದ ನಟ ರಾಜವರ್ಧನ್ ಹೊಸ ಚಿತ್ರವೊಂದರಲ್ಲಿ ನಟಿಸುತ್ತಿದ್ದು ಈ ಚಿತ್ರವನ್ನು ಅವರೇ ನಿರ್ಮಾಣ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಹೊಸ ಚಿತ್ರವನ್ನು ಕುಮರೇಶ್​​​ ನಿರ್ದೇಶಿಸುತ್ತಿದ್ದು ಹರಿಸಂತೋಷ್ ಕಥೆ, ಚಿತ್ರಕಥೆ ರಚಿಸಿದ್ದಾರೆ.

Rajavardhan
ರಾಜವರ್ಧನ್​​​​​​​​​​​​​

ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಸ್ಫುರದ್ರೂಪಿ ನಟ, ಒಳ್ಳೆ ಹೈಟು ಕೂಡಾ ಇದ್ದಾರೆ. ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 4-5 ವರ್ಷಗಳೇ ಆಗಿವೆ. ಆದರೆ ರಾಜವರ್ಧನ್ ಇನ್ನೂ ಬ್ರೇಕ್​​​​ಗಾಗಿ ಕಾಯುತ್ತಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ 'ಬಿಚ್ಚುಗತ್ತಿ' ಚಿತ್ರದ ಬಗ್ಗೆ ನಿರೀಕ್ಷೆಗಳಿದ್ದರೂ ಚಿತ್ರ ಅಂದುಕೊಂಡಷ್ಟು ಯಶಸ್ಸು ಸಾಧಿಸಲಿಲ್ಲ.

ಈ ಮಧ್ಯೆ, ರಾಜವರ್ಧನ್ ಒಂದೆರೆಡು ಚಿತ್ರಗಳಲ್ಲಿ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು. ಮಾಹಿತಿಗಳ ಪ್ರಕಾರ ರಾಜವರ್ಧನ್​​​​​​ ತಮ್ಮ ಹೊಸ ಚಿತ್ರಕ್ಕೆ ತಾವೇ ಬಂಡವಾಳ ಹೂಡುತ್ತಿದ್ದಾರೆ. ಕೆಲವು ದಿನಗಳ ಹಿಂದೆಯೇ, ರೆಡ್ ಡೈಮಂಡ್ ಪ್ರೊಡಕ್ಷನ್ಸ್ ಎಂಬ ನಿರ್ಮಾಣ ಸಂಸ್ಥೆಯನ್ನು ಅವರು ಹುಟ್ಟುಹಾಕಿದ್ದಾರೆ ಎಂಬ ಸುದ್ದಿ ಬಂದಿತ್ತು. ಇದೀಗ ಆ ಸಂಸ್ಥೆಯಡಿ ಅವರು 'ಚಕ್ರಿ' ಎಂಬ ಚಿತ್ರವನ್ನು ಘೋಷಿಸಿದ್ದಾರೆ. ಸದ್ಯ ಪ್ರೀಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರ ಮಾರ್ಚ್ ಕೊನೆಯ ವೇಳೆಗೆ ಆರಂಭವಾಗುವ ಸಾಧ್ಯತೆ ಇದೆ.

ಈ ಹಿಂದೆ ರಾಜವರ್ಧನ್ ಅಭಿನಯದ 'ನೂರೊಂದು ನೆನಪು' ಚಿತ್ರವನ್ನು ನಿರ್ದೇಶಿಸಿದ್ದ ಕುಮರೇಶ್, ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಹರಿಸಂತೋಷ್ ಈ ಚಿತ್ರಕ್ಕೆ ಕಥೆ-ಚಿತ್ರಕಥೆ ರಚಿಸಿದ್ದಾರೆ. ಕೆಲವು ವರ್ಷಗಳ ಹಿಂದೆ ನಡೆದ ದೊಡ್ಡ ಹಗರಣವೊಂದನ್ನು ಆಧರಿಸಿ ಈ ಚಿತ್ರ ಮಾಡಲಾಗುತ್ತಿದೆಯಂತೆ. ಆ ಹಗರಣ ಏನು ಎಂಬುದನ್ನು ಚಿತ್ರತಂಡ ಇನ್ನೂ ಬಹಿರಂಗಪಡಿಸಿಲ್ಲ. ಈ ಹಗರಣದ ಸುತ್ತ ಇಡೀ ಕಥೆ ಸುತ್ತಲಿದ್ದು, ಅದೇ ಚಿತ್ರದ ಹೈಲೈಟ್ ಎಂದು ಹೇಳಲಾಗುತ್ತಿದೆ. ಚಿತ್ರಕ್ಕೆ ನಕುಲ್ ಅಭಯಂಕರ್ ಸಂಗೀತ ಸಂಯೋಜಿಸುತ್ತಿದ್ದಾರೆ ಎನ್ನಲಾಗಿದೆ.

ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಸ್ಫುರದ್ರೂಪಿ ನಟ, ಒಳ್ಳೆ ಹೈಟು ಕೂಡಾ ಇದ್ದಾರೆ. ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 4-5 ವರ್ಷಗಳೇ ಆಗಿವೆ. ಆದರೆ ರಾಜವರ್ಧನ್ ಇನ್ನೂ ಬ್ರೇಕ್​​​​ಗಾಗಿ ಕಾಯುತ್ತಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ 'ಬಿಚ್ಚುಗತ್ತಿ' ಚಿತ್ರದ ಬಗ್ಗೆ ನಿರೀಕ್ಷೆಗಳಿದ್ದರೂ ಚಿತ್ರ ಅಂದುಕೊಂಡಷ್ಟು ಯಶಸ್ಸು ಸಾಧಿಸಲಿಲ್ಲ.

ಈ ಮಧ್ಯೆ, ರಾಜವರ್ಧನ್ ಒಂದೆರೆಡು ಚಿತ್ರಗಳಲ್ಲಿ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು. ಮಾಹಿತಿಗಳ ಪ್ರಕಾರ ರಾಜವರ್ಧನ್​​​​​​ ತಮ್ಮ ಹೊಸ ಚಿತ್ರಕ್ಕೆ ತಾವೇ ಬಂಡವಾಳ ಹೂಡುತ್ತಿದ್ದಾರೆ. ಕೆಲವು ದಿನಗಳ ಹಿಂದೆಯೇ, ರೆಡ್ ಡೈಮಂಡ್ ಪ್ರೊಡಕ್ಷನ್ಸ್ ಎಂಬ ನಿರ್ಮಾಣ ಸಂಸ್ಥೆಯನ್ನು ಅವರು ಹುಟ್ಟುಹಾಕಿದ್ದಾರೆ ಎಂಬ ಸುದ್ದಿ ಬಂದಿತ್ತು. ಇದೀಗ ಆ ಸಂಸ್ಥೆಯಡಿ ಅವರು 'ಚಕ್ರಿ' ಎಂಬ ಚಿತ್ರವನ್ನು ಘೋಷಿಸಿದ್ದಾರೆ. ಸದ್ಯ ಪ್ರೀಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರ ಮಾರ್ಚ್ ಕೊನೆಯ ವೇಳೆಗೆ ಆರಂಭವಾಗುವ ಸಾಧ್ಯತೆ ಇದೆ.

ಈ ಹಿಂದೆ ರಾಜವರ್ಧನ್ ಅಭಿನಯದ 'ನೂರೊಂದು ನೆನಪು' ಚಿತ್ರವನ್ನು ನಿರ್ದೇಶಿಸಿದ್ದ ಕುಮರೇಶ್, ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಹರಿಸಂತೋಷ್ ಈ ಚಿತ್ರಕ್ಕೆ ಕಥೆ-ಚಿತ್ರಕಥೆ ರಚಿಸಿದ್ದಾರೆ. ಕೆಲವು ವರ್ಷಗಳ ಹಿಂದೆ ನಡೆದ ದೊಡ್ಡ ಹಗರಣವೊಂದನ್ನು ಆಧರಿಸಿ ಈ ಚಿತ್ರ ಮಾಡಲಾಗುತ್ತಿದೆಯಂತೆ. ಆ ಹಗರಣ ಏನು ಎಂಬುದನ್ನು ಚಿತ್ರತಂಡ ಇನ್ನೂ ಬಹಿರಂಗಪಡಿಸಿಲ್ಲ. ಈ ಹಗರಣದ ಸುತ್ತ ಇಡೀ ಕಥೆ ಸುತ್ತಲಿದ್ದು, ಅದೇ ಚಿತ್ರದ ಹೈಲೈಟ್ ಎಂದು ಹೇಳಲಾಗುತ್ತಿದೆ. ಚಿತ್ರಕ್ಕೆ ನಕುಲ್ ಅಭಯಂಕರ್ ಸಂಗೀತ ಸಂಯೋಜಿಸುತ್ತಿದ್ದಾರೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.