ETV Bharat / sitara

ನಟ ರಿಷಿ ಹುಟ್ಟುಹಬ್ಬದಂದು ಹೊಸ ಸಿನಿಮಾದ ಟೈಟಲ್ ರಿಲೀಸ್

ಸ್ಯಾಂಡಲ್‌ವುಡ್ ನಟ ರಿಷಿ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾದ ಶೀರ್ಷಿಕೆ ಬಿಡುಗಡೆಯಾಗಿದೆ.

author img

By

Published : Jun 22, 2021, 8:57 AM IST

Actor Rishi
ನಟ ರಿಷಿ ಹೊಸ ಸಿನಿಮಾದ ಟೈಟಲ್

ಶಂಕರ್ ನಾಗ್ ಅಭಿನಯದ 'ನೋಡಿ ಸ್ವಾಮಿ ನಾವಿರೋದು ಹೀಗೆ' ಕನ್ನಡದ ಕ್ಲಾಸಿಕ್ ಚಿತ್ರಗಳಲ್ಲೊಂದು. ಹೆಸರಿನಿಂದ ಮೇಕಿಂಗ್​​ವರೆಗೂ ಹಲವು ವಿಭಿನ್ನತೆ ಹೊಂದಿರುವ ಚಿತ್ರಕ್ಕೆ ಇಂದಿಗೂ ದೊಡ್ಡ ಅಭಿಮಾನಿ ಬಳಗವಿದೆ. ಇದೀಗ ಬಹುತೇಕ ಇದೇ ತರಹದ ಟೈಟಲ್ ಇರುವ ಇನ್ನೊಂದು ಸಿನಿಮಾ ಸುದ್ದಿಯಲ್ಲಿದೆ. ಆ ಸಿನಿಮಾದ ಹೆಸರೇ 'ನೋಡಿ ಸ್ವಾಮಿ ಇವನು ಇರೋದೇ ಹೀಗೆ'.

ಆಪರೇಷನ್ ಅಲಮೇಲಮ್ಮ, ಕವಲುದಾರಿ, ಸಾರ್ವಜನಿಕರಿಗೆ ಸುವರ್ಣಾವಕಾಶ ಚಿತ್ರಗಳ ಖ್ಯಾತಿಯ ರಿಷಿ, ಈ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಸೋಮವಾರ ರಿಷಿ ಅವರ ಹುಟ್ಟುಹಬ್ಬವಾದ ಕಾರಣ ಚಿತ್ರದ ಶೀರ್ಷಿಕೆಯನ್ನು ಘೋಷಿಸಲಾಗಿದೆ. ಲಾಕ್​ಡೌನ್​ಗೂ ಮುನ್ನವೇ ಈ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ಬಹುತೇಕ ಮುಗಿದಿದೆ. ಇದೀಗ ಬಾಕಿಯಿರುವ ಕೆಲಸಗಳನ್ನು ಸಾಧ್ಯವಾದಷ್ಟೂ ಬೇಗ ಮುಗಿಸಿ, ಸಿನಿಮಾ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಯೋಚಿಸುತ್ತಿದೆ.

ಈ ಚಿತ್ರ ಕನ್ನಡವಷ್ಟೇ ಅಲ್ಲ, ತೆಲುಗಿನಲ್ಲೂ ಬಿಡುಗಡೆಯಾಗುತ್ತಿದೆ. ಕನ್ನಡದಲ್ಲಿ ಚಿತ್ರಕ್ಕೆ 'ನೋಡಿ ಸ್ವಾಮಿ ಇವನು ಇರೋದೇ ಹೀಗೆ' ಎಂಬ ಹೆಸರಿದ್ದರೆ, ತೆಲುಗಿನಲ್ಲಿ ಚಿತ್ರಕ್ಕೆ 'ವದ್ದುರಾ ಸೋದರಾ' ಎಂಬ ಹೆಸರನ್ನು ಇಡಲಾಗಿದೆ.

ಈ ಹಿಂದೆ ಆಪರೇಷನ್ ಅಲಮೇಲಮ್ಮ ಚಿತ್ರವನ್ನು ನಿರ್ಮಿಸಿದ್ದ ಅಮ್ರೇಜ್ ಸೂರ್ಯವಂಶಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇದು ಎನ್.ಎಸ್ ಇಸ್ಲಾಹುದ್ದೀನ್ ನಿರ್ದೇಶನದ ಚೊಚ್ಚಲ ಸಿನಿಮಾ. ಸಾರ್ವಜನಿಕರಿಗೆ ಸುವರ್ಣಾವಕಾಶ ಎಂಬ ಚಿತ್ರದಲ್ಲಿ ರಿಷಿಗೆ ನಾಯಕಿಯಾಗಿದ್ದ ಧನ್ಯಾ ಬಾಲಕೃಷ್ಣ ಈ ಚಿತ್ರದಲ್ಲಿ ರಿಷಿಗೆ ನಾಯಕಿಯಾಗಿ ನಟಿಸುತ್ತಿದ್ದು, ಮಿಕ್ಕಂತೆ ಗ್ರೀಷ್ಮಾ ಶ್ರೀಧರ್, ನಾಗಭೂಷಣ್ ಮುಂತಾದವರು ನಟಿಸಿದ್ದಾರೆ.

ಇದನ್ನೂ ಓದಿ: ಮತ್ತೆ ಎಡವಟ್ಟು ಮಾಡ್ತಾ Google?.. ತಮಿಳು ಚಿತ್ರದಲ್ಲಿ ನಟಿಸಿದ್ದಾರಂತೆ ಅಣ್ಣಾವ್ರು..

ಶಂಕರ್ ನಾಗ್ ಅಭಿನಯದ 'ನೋಡಿ ಸ್ವಾಮಿ ನಾವಿರೋದು ಹೀಗೆ' ಕನ್ನಡದ ಕ್ಲಾಸಿಕ್ ಚಿತ್ರಗಳಲ್ಲೊಂದು. ಹೆಸರಿನಿಂದ ಮೇಕಿಂಗ್​​ವರೆಗೂ ಹಲವು ವಿಭಿನ್ನತೆ ಹೊಂದಿರುವ ಚಿತ್ರಕ್ಕೆ ಇಂದಿಗೂ ದೊಡ್ಡ ಅಭಿಮಾನಿ ಬಳಗವಿದೆ. ಇದೀಗ ಬಹುತೇಕ ಇದೇ ತರಹದ ಟೈಟಲ್ ಇರುವ ಇನ್ನೊಂದು ಸಿನಿಮಾ ಸುದ್ದಿಯಲ್ಲಿದೆ. ಆ ಸಿನಿಮಾದ ಹೆಸರೇ 'ನೋಡಿ ಸ್ವಾಮಿ ಇವನು ಇರೋದೇ ಹೀಗೆ'.

ಆಪರೇಷನ್ ಅಲಮೇಲಮ್ಮ, ಕವಲುದಾರಿ, ಸಾರ್ವಜನಿಕರಿಗೆ ಸುವರ್ಣಾವಕಾಶ ಚಿತ್ರಗಳ ಖ್ಯಾತಿಯ ರಿಷಿ, ಈ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಸೋಮವಾರ ರಿಷಿ ಅವರ ಹುಟ್ಟುಹಬ್ಬವಾದ ಕಾರಣ ಚಿತ್ರದ ಶೀರ್ಷಿಕೆಯನ್ನು ಘೋಷಿಸಲಾಗಿದೆ. ಲಾಕ್​ಡೌನ್​ಗೂ ಮುನ್ನವೇ ಈ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ಬಹುತೇಕ ಮುಗಿದಿದೆ. ಇದೀಗ ಬಾಕಿಯಿರುವ ಕೆಲಸಗಳನ್ನು ಸಾಧ್ಯವಾದಷ್ಟೂ ಬೇಗ ಮುಗಿಸಿ, ಸಿನಿಮಾ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಯೋಚಿಸುತ್ತಿದೆ.

ಈ ಚಿತ್ರ ಕನ್ನಡವಷ್ಟೇ ಅಲ್ಲ, ತೆಲುಗಿನಲ್ಲೂ ಬಿಡುಗಡೆಯಾಗುತ್ತಿದೆ. ಕನ್ನಡದಲ್ಲಿ ಚಿತ್ರಕ್ಕೆ 'ನೋಡಿ ಸ್ವಾಮಿ ಇವನು ಇರೋದೇ ಹೀಗೆ' ಎಂಬ ಹೆಸರಿದ್ದರೆ, ತೆಲುಗಿನಲ್ಲಿ ಚಿತ್ರಕ್ಕೆ 'ವದ್ದುರಾ ಸೋದರಾ' ಎಂಬ ಹೆಸರನ್ನು ಇಡಲಾಗಿದೆ.

ಈ ಹಿಂದೆ ಆಪರೇಷನ್ ಅಲಮೇಲಮ್ಮ ಚಿತ್ರವನ್ನು ನಿರ್ಮಿಸಿದ್ದ ಅಮ್ರೇಜ್ ಸೂರ್ಯವಂಶಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇದು ಎನ್.ಎಸ್ ಇಸ್ಲಾಹುದ್ದೀನ್ ನಿರ್ದೇಶನದ ಚೊಚ್ಚಲ ಸಿನಿಮಾ. ಸಾರ್ವಜನಿಕರಿಗೆ ಸುವರ್ಣಾವಕಾಶ ಎಂಬ ಚಿತ್ರದಲ್ಲಿ ರಿಷಿಗೆ ನಾಯಕಿಯಾಗಿದ್ದ ಧನ್ಯಾ ಬಾಲಕೃಷ್ಣ ಈ ಚಿತ್ರದಲ್ಲಿ ರಿಷಿಗೆ ನಾಯಕಿಯಾಗಿ ನಟಿಸುತ್ತಿದ್ದು, ಮಿಕ್ಕಂತೆ ಗ್ರೀಷ್ಮಾ ಶ್ರೀಧರ್, ನಾಗಭೂಷಣ್ ಮುಂತಾದವರು ನಟಿಸಿದ್ದಾರೆ.

ಇದನ್ನೂ ಓದಿ: ಮತ್ತೆ ಎಡವಟ್ಟು ಮಾಡ್ತಾ Google?.. ತಮಿಳು ಚಿತ್ರದಲ್ಲಿ ನಟಿಸಿದ್ದಾರಂತೆ ಅಣ್ಣಾವ್ರು..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.